Homeಕರ್ನಾಟಕಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

ಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

“ಕೋಮು ವಿಷಜಂತುಗಳು ಹೆಣ್ಣು ಮಕ್ಕಳ ಮೇಲಿನ ಗಂಭೀರ ಅತ್ಯಾಚಾರ ಪ್ರಕರಣಕ್ಕೂ ಧರ್ಮದ ಲೇಪನ ಹಚ್ಚಿರುವುದು ಈ ಸುದ್ದಿಯ ವಿಪರ್ಯಾಸ ಮತ್ತು ಅತ್ಯಂತ ಬೇಸರದ ಸಂಗತಿ”.

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನ ಮೇಲೆ ಹಲ್ಲೆ ನಡೆಸಿ, ಕಾಲುವೆಗೆ ನೂಕಿ ಕೊಲೆಗೈದಿರುವ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ.

ಈ ಆಘಾತಕಾರಿ ಘಟನೆ ಹೆಣ್ಣು ಮಕ್ಕಳಿನ ಮೇಲಿನ ದೌರ್ಜನ್ಯ, ಪ್ರವಾಸಿಗರ ಸುರಕ್ಷತೆ, ಯುವಕರು ಮಾದಕ ದ್ರವ್ಯಗಳಿಗೆ ಬಲಿಯಾಗುತ್ತಿರುವುದು ಇತ್ಯಾದಿ ವಿಚಾರಗಳ ಕುರಿತು ಗಂಭೀರ ಚರ್ಚೆಯನ್ನು ಹುಟ್ಟು ಹಾಕಿದೆ.

ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಭಾನುವಾರ (ಮಾ.9) ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಆದರೆ, ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಇಸ್ರೇಲಿ ಯುವತಿ ಮೇಲೆ ನಡೆದ ಅತ್ಯಾಚಾರ ಘಟನೆಯನ್ನು ಉಲ್ಲೇಖಿಸಿ, ಇಸ್ರೇಲ್-ಹಮಾಸ್ ಯುದ್ಧ, ಪ್ಯಾಲೆಸ್ತೀನಿಯರು, ಭಾರತೀಯ ಮುಸ್ಲಿಮರು, ಹೀಗೆ ಎಲ್ಲೆಲ್ಲಿಗೂ ಸಂಬಂಧ ಕಲ್ಪಿಸಿ ಪ್ರಕರಣಕ್ಕೆ ಕೋಮು ಬಣ್ಣ ಬಳಿದಿದ್ದಾರೆ.

ಪ್ರತಿಯೊಂದು ವಿಷಯಗಳನ್ನು ಕೋಮು ಆಯಾಮದಿಂದ ಮಾತ್ರ ನೋಡುತ್ತಾ, ಮುಸ್ಲಿಮರನ್ನು ಅಪರಾಧಿ, ದೇಶದ್ರೋಹಿ ಸ್ಥಾನಗಳಲ್ಲಿ ನಿಲ್ಲಿಸುವ ಚಾಳಿ ಹೊಂದಿರುವ ಬಲಪಂಥೀಯ ಸಾಮಾಜಿಕಜಾಲತಾಣ ಬಳಕೆದಾರ ಮಿ. ಸಿನ್ಹಾ (@MrSinha_)ಕೊಪ್ಪಳದ ಘಟನೆ ಸಂಬಂಧ ಮಾರ್ಚ್ 8ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿ “ಕರ್ನಾಟಕ: ಇಸ್ರೇಲಿ ಪ್ರವಾಸಿ ಮತ್ತು ಒಡಿಶಾದ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಇತರ ಮೂವರು ಪುರುಷ ಜೊತೆಗಾರರ ಮೇಲೆ ಹಲ್ಲೆ ನಡೆಸಲಾಗಿದೆ. ಅವರಲ್ಲಿ ಒಬ್ಬನ ಮೃತದೇಹ ಕಾಲುವೆಯಲ್ಲಿ ಪತ್ತೆಯಾಗಿದೆ. ಇಸ್ರೇಲಿ ಪ್ರಜೆಯೊಬ್ಬರು ಇದರಲ್ಲಿ ಬಲಿಪಶು ಆಗಿರುವುದರಿಂದ ಪ್ಯಾಲೆಸ್ತೀನ್ ಪರ ವ್ಯಕ್ತಿಗಳು ಈ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ನಿರಾಕರಿಸುವಂತಿಲ್ಲ.ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು. ಈ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕದಂತೆ ನೋಡಿಕೊಳ್ಳಬೇಕು” ಎಂದು ಬರೆದುಕೊಂಡಿದ್ದ. ತನ್ನ ಪೋಸ್ಟ್ ಅನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಟ್ಯಾಗ್ ಮಾಡಿದ್ದ.

ಪ್ಯಾಲೆಸ್ತೀನ್ ಪರ ವ್ಯಕ್ತಿಗಳು ಈ ಪ್ರಕರಣದ ಹಿಂದೆ ಇರುವುದನ್ನು ಅಲ್ಲಗಳೆಯುವಂತಿಲ್ಲ” ಎಂದು ಉಲ್ಲೇಖಿಸುವ ಮೂಲಕ ಮಿ.ಸಿನ್ಹಾ ಅತ್ಯಾಚಾರ ಪ್ರಕರಣವನ್ನು ಇಲ್ಲಿನ ಮುಸ್ಲಿಮರ ತಲೆಗೆ ಕಟ್ಟುವಂತಹ ನೀಚ ಪ್ರಯತ್ನ ಮಾಡಿದ್ದಾನೆ.

ಈತನ ಪೋಸ್ಟ್‌ಗೆ ಕಾಮೆಂಟ್ ಹಾಕಿರುವ ಅನೇಕ ಜನರಲ್ಲಿ ಕೆಲವರು ನೇರವಾಗಿ, ಇನ್ನೂ ಕೆಲವರು ಪರೋಕ್ಷವಾಗಿ ಅತ್ಯಾಚಾರ ಪ್ರಕರಣಕ್ಕೆ ಮುಸ್ಲಿಮರೊಂದಿಗೆ ಸಂಬಂಧ ಕಲ್ಪಿಸುವ ಪ್ರಯತ್ನ ಮಾಡಿದ್ದಾರೆ. ಅವುಗಳಲ್ಲಿ ಕೆಲವನ್ನು ಕೆಳಗೆ ಸ್ಕ್ರೀನ್ ಶಾಟ್ ಹಾಕಲಾಗಿದೆ.

ಮೇಲೆ ಕಾಮೆಂಟ್ ಹಾಕಿರುವ ವ್ಯಕ್ತಿಗಳಿಗೆ ಕೊಪ್ಪಳದ ಘಟನೆಯ ಬಗ್ಗೆ ಮಾಹಿತಿ ಇದೆಯೋ ಇಲ್ಲವೋ ಅಥವಾ ಗೊತ್ತಿದ್ದರೂ ಒಂದು ಸಮುದಾಯದವರನ್ನು ಎಳೆದು ತರುತ್ತಿದ್ದಾರೋ ಗೊತ್ತಿಲ್ಲ. ಆದರೆ, ಪೋಸ್ಟ್ ಹಾಕಿರುವ ಮಿ.ಸಿನ್ಹಾಗೆ ಪ್ರಕರಣದ ಬಗ್ಗೆ ಖಂಡಿತವಾಗಿಯೂ ಮಾಹಿತಿ ಇರುತ್ತದೆ. ಆದರೆ, ಆತನಿಗೆ ಸುಳ್ಳು, ಕೋಮು ದ್ವೇಷದ ಸುದ್ದಿಗಳನ್ನು ಹರಡುವುದೇ ಕಾಯಕ.

ಕೊಪ್ಪಳದ ಘಟನೆಯ ಸತ್ಯಾಂಶವೇನು?

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ತುಂಗಾಭದ್ರಾ ನದಿಯ ಕಾಲುವೆಯ ಪಕ್ಕದ ರಸ್ತೆಯಲ್ಲಿ ಪ್ರವಾಸಿಗರು ರಾತ್ರಿ ಹೊತ್ತು ಕುಳಿತು ನಕ್ಷತ್ರಗಳನ್ನು ನೋಡುತ್ತಾ ಪ್ರಕೃತಿ ಆಸ್ವಾದಿಸುವುದು ಸಾಮಾನ್ಯ ಚಟುವಟಿಕೆ.

ಹಂಪಿ ಪ್ರವಾಸಕ್ಕೆ ಬರುವ ವಿದೇಶಿ ಪ್ರಜೆಗಳು ಹೆಚ್ಚಾಗಿ ಸ್ಥಳೀಯ ಹೋಮ್‌ ಸ್ಟೇಗಳಲ್ಲಿ ಉಳಿದುಕೊಂಡು ರಾತ್ರಿ ಹೊತ್ತು ನಕ್ಷತ್ರ ನೋಡಲು ತೆರಳುತ್ತಾರೆ. ಹೀಗೆ ಕಳೆದ ಗುರುವಾರ (ಮಾ.6) ರಂದು ಇಸ್ರೇಲ್‌ ಯುವತಿ ಮತ್ತು ಒಡಿಶಾದ ಯುವಕ ಸ್ಥಳೀಯ ಹೋಂ ಸ್ಟೇಯೊಂದರ ಒಡತಿ ಜೊತೆ ರಾತ್ರಿ ಕುಳಿತು ಗಿಟಾರ್‌ ಬಾರಿಸುತ್ತಿದ್ದರು.

ಈ ವೇಳೆ ಅಲ್ಲಿಗೆ ಬೈಕ್‌ ಮೇಲೆ ಬಂದ ಮೂವರು ದುಷ್ಕರ್ಮಿಗಳು ಮೊದಲು ಹಣದ ಬೇಡಿಕೆಯಿಟ್ಟಿದ್ದರು. ಹಣ ನೀಡದ ಕಾರಣಕ್ಕೆ ಜಗಳವಾಗಿದ್ದು ಒಡಿಶಾದ 27ವರ್ಷದ ಯುವಕ ಬಿಬಾಶ್‌ ಮೇಲೆ ಹಲ್ಲೆ ನಡೆಸಿ, ಕಾಲುವೆಗೆ ನೂಕಿದ್ದಾರೆ. ಇಬ್ಬರು ಯವತಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣ ಸಂಬಂಧ ಪೊಲೀಸರು ಗಂಗಾವತಿಯ ಮಲ್ಲೇಶ ದಾಸರ ಮತ್ತು ಚೇತನಸಾಯಿ ಕಾಮೇಶ್ವರ ರಾವ್ ಎಂಬ ಆರೋಪಿಗಳನ್ನು ಆರಂಭದಲ್ಲಿ ಬಂಧಿಸಿದ್ದರು. ಭಾನುವಾರ ಮೂರನೇ ಆರೋಪಿ ಗಂಗಾವತಿಯ ಸಾಯಿ ನಗರದ ನಿವಾಸಿ ಶರಣಬಸವ ಎಂಬಾತನನ್ನು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಂಧಿತ ಮೂವರೂ ಆರೋಪಿಗಳು ಗಾರೆ ಕೆಲಸ ಮಾಡುತ್ತಿದ್ದರು. “ಮೂರನೇ ಆರೋಪಿ ಕೃತ್ಯ ನಡೆಸಿದ್ದನ್ನು ಒಪ್ಪಿಕೊಂಡಿದ್ದಾನೆ. ಕೃತ್ಯಕ್ಕೆ ಬಳಸಿದ ಬೈಕ್ ಜಪ್ತಿ ಮಾಡಲಾಗಿದೆ. ಘಟನೆ ನಡೆದಾಗ ಆರೋಪಿಗಳು ಮದ್ಯ ಸೇವನೆ ಮಾಡಿದ್ದರು ಎನ್ನುವುದು ಸಾಬೀತಾಗಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಂಗಳೂರು | ವಿದ್ಯಾರ್ಥಿ ನಾಪತ್ತೆ ಪ್ರಕರಣ ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರು, ದುಷ್ಕರ್ಮಿಗಳ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...