Homeಅಂತರಾಷ್ಟ್ರೀಯರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ರಿಹಾನ್ನಾ ರೈತ ಪ್ರತಿಭಟನೆ ಬೆಂಬಲಿಸಿ ನಿನ್ನೆ ಟ್ವೀಟ್ ಮಾಡಿದ ಬಳಿಕ ಭಾರತದ ರೈತ ಹೋರಾಟಕ್ಕೆ ಜಗತ್ತಿನ ವಿವಿಧ ಭಾಗಗಳಿಂದ ಬೆಂಬಲ ಹರಿದು ಬರುತ್ತಿದೆ.

- Advertisement -
- Advertisement -

ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಭಾರತದ ರೈತ ಹೋರಾಟ ಬೆಂಬಲಿಸಿ ಮಾಡಿದ ಟ್ವೀಟ್ ನಂತರ, ಕೇಂದ್ರದ ಮೂರು ವಿವಾದಾತ್ಮಕ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಈಗ ಜಾಗತಿಕ ಮನ್ನಣೆ ಸಿಗತೊಡಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಿರಿಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಮತ್ತು ಜಗತ್ತನ ವಿವಿಧ ಭಾಗಗಳ ಜನಪ್ರತಿನಿಧಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ರೈತ ಹೋರಾಟಕ್ಕೆ ಅಪಾರ ಬೆಂಬಲವನ್ನು ನೀಡಿದ್ದಾರೆ. ಕಳೆದ ನವೆಂಬರ್ ಅಂತ್ಯದಲ್ಲಿ ದೆಹಲಿಯ ಗಡಿಯ ಬಳಿ ಪ್ರಾರಂಭವಾದ ಆಂದೋಲನದ ಬಗ್ಗೆ ಅಮೆರಿಕ ಮತ್ತು ಬ್ರಿಟನ್‌ಗಳ ಕೆಲವು ಜನಪ್ರತಿನಿಧಿಗಳು ಪ್ರತಿಕ್ರಿಯೆ ನೀಡಿದ್ದು ಬೆಂಬಲ ಸೂಚಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಟ್ರಾಕ್ಟರ್ ರ್‍ಯಾಲಿ ಮತ್ತು ಗಣರಾಜ್ಯೋತ್ಸವದ ನಂತರದ ಅಹಿತಕರ ಘಟನೆಗಳಿಗೆ ದೆಹಲಿಯು ಸಾಕ್ಷಿಯಾದ ಸುಮಾರು ಒಂದು ವಾರದ ನಂತರ, ದೆಹಲಿ ಹೊರವಲಯದಲ್ಲಿ ಅನೇಕ ಬ್ಯಾರಿಕೇಡ್‌ಗಳು ಮತ್ತು ಮುಳ್ಳುತಂತಿ ಬೇಲಿಗಳನ್ನು ಹಾಕಲಾಗಿದೆ. ಇದನ್ನು ಪ್ರತಿಭಟನಾಕಾರರು “ತೀವ್ರ ದ್ವೇಷದ ಕ್ರಮಗಳು” ಎಂದು ವ್ಯಾಖ್ಯಾನಿಸಿದ್ದಾರೆ. ಇಂಟರ್‌ನೆಟ್ ಸ್ಥಗಿತಗೊಳಿಸಿದ್ದು, ಹಲವು ಸಂಘಟನೆಗಳ ಟ್ವಿಟರ್ ಖಾಯೆಗಳನ್ನೂ ಸ್ಥಗಿತಗೊಳಿಸಲಾಗಿತ್ತು.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ನಿನ್ನೆ ಸಂಜೆ, ಪಾಪ್ ಐಕಾನ್ ರಿಹಾನ್ನಾ ತನ್ನ 100 ಮಿಲಿಯನ್ ಅನುಯಾಯಿಗಳನ್ನು ಉದ್ದೇಶಿಸಿ, “ನಾವು ಈ ರೈತರ ಪ್ರತಿಭಟನೆ ಬಗ್ಗೆ ಏಕೆ ಮಾತನಾಡುತ್ತಿಲ್ಲ?” ಎಂದು ಟ್ವೀಟ್ ಮಾಡಿ, ಇಂಟರ್‌ನೆಟ್ ಸ್ಥಗಿತ ಕುರಿತಾದ ಸಿಎನ್‌ಎನ್ ವರದಿ ಹಂಚಿಕೊಂಡಿದ್ದರು. ಇದು ಈಗ ಜಾಗತಿಕ ಮಟ್ಟದಲ್ಲಿ ಬೆಂಬಲವನ್ನು ಪಡೆಯುತ್ತಿದೆ.

ಯುಕೆ ಸಂಸದೆ ಕ್ಲೌಡಿಯಾ ವೆಬ್ಬೆ ಅವರು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ: “ಭಾರತೀಯ ರೈತರಿಗೆ ನನ್ನ ಬೆಂಬಲ. ಧನ್ಯವಾದಗಳು ರಿಹಾನ್ನಾ. ರಾಜಕೀಯ ನಾಯಕತ್ವದ ಕೊರತೆಯಿರುವ ಈ ಸಂದರ್ಭದಲ್ಲಿ ನೀವು ಮುಂದೆ ಹೆಜ್ಜೆ ಹಾಕಿದ್ದಕ್ಕಾಗಿ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ರಿಹಾನ್ನ ಟ್ವೀಟ್ ನಂತರ ಅನೇಕರು ಪ್ರತಿಭಟನಾಕಾರರಿಗೆ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದಾರೆ. ಪಂಜಾಬಿ ಪಾಪ್ ಗಾಯಕ ದಿಲ್‌ಜಿತ್‌ , “ಆಂದೋಲನವನ್ನು ಬೆಂಬಲಿಸುವ ಧ್ವನಿಗಳಿಗೆ ಸ್ಪೂರ್ತಿ ನೀಡಿದ ಅಂತರರಾಷ್ಟ್ರೀಯ ಐಕಾನ್‌ಗೆ ಧನ್ಯವಾದಗಳು” ಎಂದಿದ್ದಾರೆ.

ಅಮೆರಿಕಾ ಡೆಮಾಕ್ರಟ್ ಸಂಸದ ಜಿಮ್ ಕೋಸ್ಟಾ, ರಿಹಾನ್ನಾ ಪೋಸ್ಟ್ ಮಾಡಿದ ಹ್ಯಾಶ್‌ಟ್ಯಾಗ್ -#FarmersProtest ಅನ್ನು ಬಳಸಿ, ’ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವೆ’ ಎಂದು ಅವರು ಒತ್ತಿ ಹೇಳಿದ್ದಾರೆ. “ಭಾರತದಲ್ಲಿ ನಡೆಯುತ್ತಿರುವ ಘಟನೆಗಳು ಕಿರಿಕಿರಿ ಉಂಟು ಮಾಡುತ್ತಿವೆ. ವಿದೇಶಾಂಗ ವ್ಯವಹಾರಗಳ ಸಮಿತಿಯ ಸದಸ್ಯನಾಗಿ ನಾನು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಯಾವಾಗಲೂ ಗೌರವಿಸಬೇಕು’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸರ್ಕಾರ ನೀಡುತ್ತಿರುವ ಕಿರುಕುಳ ನಿಲ್ಲಿಸುವವರೆಗೆ ಯಾವುದೇ ಮಾತುಕತೆಯಿಲ್ಲ: ರೈತ ಒಕ್ಕೂಟ

ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸೋದರಿಯ ಮಗಳು ಮೀನಾ ಹ್ಯಾರಿಸ್ ಕೂಡ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. “ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆದಿರುವುದು ಕಾಕತಾಳೀಯವಲ್ಲ, ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಜಾಪ್ರಭುತ್ವವು ಆಕ್ರಮಣಕ್ಕೊಳಗಾಗಿದೆ. ಭಾರತದ ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ರೈತ ಪ್ರತಿಭಟನಾಕಾರರ ವಿರುದ್ಧ ಅರೆಸೈನಿಕ ಪಡೆಗಳ ದೌರ್ಜನ್ಯದ ವಿರುದ್ಧ ನಾವೆಲ್ಲರೂ ಆಕ್ರೋಶಗೊಳ್ಳಬೇಕು”ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಹೋರಾಟ ಮಾಡುತ್ತಿರುವ ಪ್ರತಿಭಟನಾಕಾರರು, ಬ್ಯಾರಿಕೇಡ್‌ಗಳು ಮತ್ತು ಮುಳ್ಳುತಂತಿ ಬೇಲಿಗಳನ್ನು ಅಳವಡಿಸಿದ್ದರಿಂದ ನೀರು ಮತ್ತು ವಿದ್ಯುತ್ ಸರಬರಾಜಿನಲ್ಲಿ ಅಡ್ಡಿ ಉಂಟಾಗಿದೆ. ರಸ್ತೆಗಳಲ್ಲಿ ಕಂದಕ ಅಗೆಯುವುದು, ಮೊಳೆ ನೆಡುವುದು ಮತ್ತು ತಾತ್ಕಾಲಿಕ ಇಂಟರ್ನೆಟ್ ಅಮಾನತುಗೊಳಿಸುವಿಕೆಯು ಸರ್ಕಾರವು ಆಯೋಜಿಸುತ್ತಿರುವ “ದಾಳಿಯ” ಭಾಗವಾಗಿದೆ ಎಂದು ರೈತ ಒಕ್ಕೂಟ ಸಂಯುಕ್ತ್ ಕಿಸಾನ್ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸೇತುವೆಗಳನ್ನು ಕಟ್ಟಿ, ಗೋಡೆಗಳನ್ನಲ್ಲ: ರೈತ ಹೋರಾಟ ಹಣಿಯುವ ಕೇಂದ್ರದ ಕ್ರಮಕ್ಕೆ ರಾಹುಲ್ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...