Homeಅಂತರಾಷ್ಟ್ರೀಯರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ರಿಹಾನ್ನಾ ರೈತ ಪ್ರತಿಭಟನೆ ಬೆಂಬಲಿಸಿ ನಿನ್ನೆ ಟ್ವೀಟ್ ಮಾಡಿದ ಬಳಿಕ ಭಾರತದ ರೈತ ಹೋರಾಟಕ್ಕೆ ಜಗತ್ತಿನ ವಿವಿಧ ಭಾಗಗಳಿಂದ ಬೆಂಬಲ ಹರಿದು ಬರುತ್ತಿದೆ.

- Advertisement -
- Advertisement -

ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಭಾರತದ ರೈತ ಹೋರಾಟ ಬೆಂಬಲಿಸಿ ಮಾಡಿದ ಟ್ವೀಟ್ ನಂತರ, ಕೇಂದ್ರದ ಮೂರು ವಿವಾದಾತ್ಮಕ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಈಗ ಜಾಗತಿಕ ಮನ್ನಣೆ ಸಿಗತೊಡಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಿರಿಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಮತ್ತು ಜಗತ್ತನ ವಿವಿಧ ಭಾಗಗಳ ಜನಪ್ರತಿನಿಧಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ರೈತ ಹೋರಾಟಕ್ಕೆ ಅಪಾರ ಬೆಂಬಲವನ್ನು ನೀಡಿದ್ದಾರೆ. ಕಳೆದ ನವೆಂಬರ್ ಅಂತ್ಯದಲ್ಲಿ ದೆಹಲಿಯ ಗಡಿಯ ಬಳಿ ಪ್ರಾರಂಭವಾದ ಆಂದೋಲನದ ಬಗ್ಗೆ ಅಮೆರಿಕ ಮತ್ತು ಬ್ರಿಟನ್‌ಗಳ ಕೆಲವು ಜನಪ್ರತಿನಿಧಿಗಳು ಪ್ರತಿಕ್ರಿಯೆ ನೀಡಿದ್ದು ಬೆಂಬಲ ಸೂಚಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಟ್ರಾಕ್ಟರ್ ರ್‍ಯಾಲಿ ಮತ್ತು ಗಣರಾಜ್ಯೋತ್ಸವದ ನಂತರದ ಅಹಿತಕರ ಘಟನೆಗಳಿಗೆ ದೆಹಲಿಯು ಸಾಕ್ಷಿಯಾದ ಸುಮಾರು ಒಂದು ವಾರದ ನಂತರ, ದೆಹಲಿ ಹೊರವಲಯದಲ್ಲಿ ಅನೇಕ ಬ್ಯಾರಿಕೇಡ್‌ಗಳು ಮತ್ತು ಮುಳ್ಳುತಂತಿ ಬೇಲಿಗಳನ್ನು ಹಾಕಲಾಗಿದೆ. ಇದನ್ನು ಪ್ರತಿಭಟನಾಕಾರರು “ತೀವ್ರ ದ್ವೇಷದ ಕ್ರಮಗಳು” ಎಂದು ವ್ಯಾಖ್ಯಾನಿಸಿದ್ದಾರೆ. ಇಂಟರ್‌ನೆಟ್ ಸ್ಥಗಿತಗೊಳಿಸಿದ್ದು, ಹಲವು ಸಂಘಟನೆಗಳ ಟ್ವಿಟರ್ ಖಾಯೆಗಳನ್ನೂ ಸ್ಥಗಿತಗೊಳಿಸಲಾಗಿತ್ತು.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ನಿನ್ನೆ ಸಂಜೆ, ಪಾಪ್ ಐಕಾನ್ ರಿಹಾನ್ನಾ ತನ್ನ 100 ಮಿಲಿಯನ್ ಅನುಯಾಯಿಗಳನ್ನು ಉದ್ದೇಶಿಸಿ, “ನಾವು ಈ ರೈತರ ಪ್ರತಿಭಟನೆ ಬಗ್ಗೆ ಏಕೆ ಮಾತನಾಡುತ್ತಿಲ್ಲ?” ಎಂದು ಟ್ವೀಟ್ ಮಾಡಿ, ಇಂಟರ್‌ನೆಟ್ ಸ್ಥಗಿತ ಕುರಿತಾದ ಸಿಎನ್‌ಎನ್ ವರದಿ ಹಂಚಿಕೊಂಡಿದ್ದರು. ಇದು ಈಗ ಜಾಗತಿಕ ಮಟ್ಟದಲ್ಲಿ ಬೆಂಬಲವನ್ನು ಪಡೆಯುತ್ತಿದೆ.

ಯುಕೆ ಸಂಸದೆ ಕ್ಲೌಡಿಯಾ ವೆಬ್ಬೆ ಅವರು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ: “ಭಾರತೀಯ ರೈತರಿಗೆ ನನ್ನ ಬೆಂಬಲ. ಧನ್ಯವಾದಗಳು ರಿಹಾನ್ನಾ. ರಾಜಕೀಯ ನಾಯಕತ್ವದ ಕೊರತೆಯಿರುವ ಈ ಸಂದರ್ಭದಲ್ಲಿ ನೀವು ಮುಂದೆ ಹೆಜ್ಜೆ ಹಾಕಿದ್ದಕ್ಕಾಗಿ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ರಿಹಾನ್ನ ಟ್ವೀಟ್ ನಂತರ ಅನೇಕರು ಪ್ರತಿಭಟನಾಕಾರರಿಗೆ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದಾರೆ. ಪಂಜಾಬಿ ಪಾಪ್ ಗಾಯಕ ದಿಲ್‌ಜಿತ್‌ , “ಆಂದೋಲನವನ್ನು ಬೆಂಬಲಿಸುವ ಧ್ವನಿಗಳಿಗೆ ಸ್ಪೂರ್ತಿ ನೀಡಿದ ಅಂತರರಾಷ್ಟ್ರೀಯ ಐಕಾನ್‌ಗೆ ಧನ್ಯವಾದಗಳು” ಎಂದಿದ್ದಾರೆ.

ಅಮೆರಿಕಾ ಡೆಮಾಕ್ರಟ್ ಸಂಸದ ಜಿಮ್ ಕೋಸ್ಟಾ, ರಿಹಾನ್ನಾ ಪೋಸ್ಟ್ ಮಾಡಿದ ಹ್ಯಾಶ್‌ಟ್ಯಾಗ್ -#FarmersProtest ಅನ್ನು ಬಳಸಿ, ’ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವೆ’ ಎಂದು ಅವರು ಒತ್ತಿ ಹೇಳಿದ್ದಾರೆ. “ಭಾರತದಲ್ಲಿ ನಡೆಯುತ್ತಿರುವ ಘಟನೆಗಳು ಕಿರಿಕಿರಿ ಉಂಟು ಮಾಡುತ್ತಿವೆ. ವಿದೇಶಾಂಗ ವ್ಯವಹಾರಗಳ ಸಮಿತಿಯ ಸದಸ್ಯನಾಗಿ ನಾನು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಯಾವಾಗಲೂ ಗೌರವಿಸಬೇಕು’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸರ್ಕಾರ ನೀಡುತ್ತಿರುವ ಕಿರುಕುಳ ನಿಲ್ಲಿಸುವವರೆಗೆ ಯಾವುದೇ ಮಾತುಕತೆಯಿಲ್ಲ: ರೈತ ಒಕ್ಕೂಟ

ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸೋದರಿಯ ಮಗಳು ಮೀನಾ ಹ್ಯಾರಿಸ್ ಕೂಡ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. “ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆದಿರುವುದು ಕಾಕತಾಳೀಯವಲ್ಲ, ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಜಾಪ್ರಭುತ್ವವು ಆಕ್ರಮಣಕ್ಕೊಳಗಾಗಿದೆ. ಭಾರತದ ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ರೈತ ಪ್ರತಿಭಟನಾಕಾರರ ವಿರುದ್ಧ ಅರೆಸೈನಿಕ ಪಡೆಗಳ ದೌರ್ಜನ್ಯದ ವಿರುದ್ಧ ನಾವೆಲ್ಲರೂ ಆಕ್ರೋಶಗೊಳ್ಳಬೇಕು”ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಹೋರಾಟ ಮಾಡುತ್ತಿರುವ ಪ್ರತಿಭಟನಾಕಾರರು, ಬ್ಯಾರಿಕೇಡ್‌ಗಳು ಮತ್ತು ಮುಳ್ಳುತಂತಿ ಬೇಲಿಗಳನ್ನು ಅಳವಡಿಸಿದ್ದರಿಂದ ನೀರು ಮತ್ತು ವಿದ್ಯುತ್ ಸರಬರಾಜಿನಲ್ಲಿ ಅಡ್ಡಿ ಉಂಟಾಗಿದೆ. ರಸ್ತೆಗಳಲ್ಲಿ ಕಂದಕ ಅಗೆಯುವುದು, ಮೊಳೆ ನೆಡುವುದು ಮತ್ತು ತಾತ್ಕಾಲಿಕ ಇಂಟರ್ನೆಟ್ ಅಮಾನತುಗೊಳಿಸುವಿಕೆಯು ಸರ್ಕಾರವು ಆಯೋಜಿಸುತ್ತಿರುವ “ದಾಳಿಯ” ಭಾಗವಾಗಿದೆ ಎಂದು ರೈತ ಒಕ್ಕೂಟ ಸಂಯುಕ್ತ್ ಕಿಸಾನ್ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸೇತುವೆಗಳನ್ನು ಕಟ್ಟಿ, ಗೋಡೆಗಳನ್ನಲ್ಲ: ರೈತ ಹೋರಾಟ ಹಣಿಯುವ ಕೇಂದ್ರದ ಕ್ರಮಕ್ಕೆ ರಾಹುಲ್ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...