Homeಅಂತರಾಷ್ಟ್ರೀಯರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ರಿಹಾನ್ನಾ ರೈತ ಪ್ರತಿಭಟನೆ ಬೆಂಬಲಿಸಿ ನಿನ್ನೆ ಟ್ವೀಟ್ ಮಾಡಿದ ಬಳಿಕ ಭಾರತದ ರೈತ ಹೋರಾಟಕ್ಕೆ ಜಗತ್ತಿನ ವಿವಿಧ ಭಾಗಗಳಿಂದ ಬೆಂಬಲ ಹರಿದು ಬರುತ್ತಿದೆ.

- Advertisement -
- Advertisement -

ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಭಾರತದ ರೈತ ಹೋರಾಟ ಬೆಂಬಲಿಸಿ ಮಾಡಿದ ಟ್ವೀಟ್ ನಂತರ, ಕೇಂದ್ರದ ಮೂರು ವಿವಾದಾತ್ಮಕ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಈಗ ಜಾಗತಿಕ ಮನ್ನಣೆ ಸಿಗತೊಡಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಿರಿಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಮತ್ತು ಜಗತ್ತನ ವಿವಿಧ ಭಾಗಗಳ ಜನಪ್ರತಿನಿಧಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ರೈತ ಹೋರಾಟಕ್ಕೆ ಅಪಾರ ಬೆಂಬಲವನ್ನು ನೀಡಿದ್ದಾರೆ. ಕಳೆದ ನವೆಂಬರ್ ಅಂತ್ಯದಲ್ಲಿ ದೆಹಲಿಯ ಗಡಿಯ ಬಳಿ ಪ್ರಾರಂಭವಾದ ಆಂದೋಲನದ ಬಗ್ಗೆ ಅಮೆರಿಕ ಮತ್ತು ಬ್ರಿಟನ್‌ಗಳ ಕೆಲವು ಜನಪ್ರತಿನಿಧಿಗಳು ಪ್ರತಿಕ್ರಿಯೆ ನೀಡಿದ್ದು ಬೆಂಬಲ ಸೂಚಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಟ್ರಾಕ್ಟರ್ ರ್‍ಯಾಲಿ ಮತ್ತು ಗಣರಾಜ್ಯೋತ್ಸವದ ನಂತರದ ಅಹಿತಕರ ಘಟನೆಗಳಿಗೆ ದೆಹಲಿಯು ಸಾಕ್ಷಿಯಾದ ಸುಮಾರು ಒಂದು ವಾರದ ನಂತರ, ದೆಹಲಿ ಹೊರವಲಯದಲ್ಲಿ ಅನೇಕ ಬ್ಯಾರಿಕೇಡ್‌ಗಳು ಮತ್ತು ಮುಳ್ಳುತಂತಿ ಬೇಲಿಗಳನ್ನು ಹಾಕಲಾಗಿದೆ. ಇದನ್ನು ಪ್ರತಿಭಟನಾಕಾರರು “ತೀವ್ರ ದ್ವೇಷದ ಕ್ರಮಗಳು” ಎಂದು ವ್ಯಾಖ್ಯಾನಿಸಿದ್ದಾರೆ. ಇಂಟರ್‌ನೆಟ್ ಸ್ಥಗಿತಗೊಳಿಸಿದ್ದು, ಹಲವು ಸಂಘಟನೆಗಳ ಟ್ವಿಟರ್ ಖಾಯೆಗಳನ್ನೂ ಸ್ಥಗಿತಗೊಳಿಸಲಾಗಿತ್ತು.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ನಿನ್ನೆ ಸಂಜೆ, ಪಾಪ್ ಐಕಾನ್ ರಿಹಾನ್ನಾ ತನ್ನ 100 ಮಿಲಿಯನ್ ಅನುಯಾಯಿಗಳನ್ನು ಉದ್ದೇಶಿಸಿ, “ನಾವು ಈ ರೈತರ ಪ್ರತಿಭಟನೆ ಬಗ್ಗೆ ಏಕೆ ಮಾತನಾಡುತ್ತಿಲ್ಲ?” ಎಂದು ಟ್ವೀಟ್ ಮಾಡಿ, ಇಂಟರ್‌ನೆಟ್ ಸ್ಥಗಿತ ಕುರಿತಾದ ಸಿಎನ್‌ಎನ್ ವರದಿ ಹಂಚಿಕೊಂಡಿದ್ದರು. ಇದು ಈಗ ಜಾಗತಿಕ ಮಟ್ಟದಲ್ಲಿ ಬೆಂಬಲವನ್ನು ಪಡೆಯುತ್ತಿದೆ.

ಯುಕೆ ಸಂಸದೆ ಕ್ಲೌಡಿಯಾ ವೆಬ್ಬೆ ಅವರು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ: “ಭಾರತೀಯ ರೈತರಿಗೆ ನನ್ನ ಬೆಂಬಲ. ಧನ್ಯವಾದಗಳು ರಿಹಾನ್ನಾ. ರಾಜಕೀಯ ನಾಯಕತ್ವದ ಕೊರತೆಯಿರುವ ಈ ಸಂದರ್ಭದಲ್ಲಿ ನೀವು ಮುಂದೆ ಹೆಜ್ಜೆ ಹಾಕಿದ್ದಕ್ಕಾಗಿ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ರಿಹಾನ್ನ ಟ್ವೀಟ್ ನಂತರ ಅನೇಕರು ಪ್ರತಿಭಟನಾಕಾರರಿಗೆ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದಾರೆ. ಪಂಜಾಬಿ ಪಾಪ್ ಗಾಯಕ ದಿಲ್‌ಜಿತ್‌ , “ಆಂದೋಲನವನ್ನು ಬೆಂಬಲಿಸುವ ಧ್ವನಿಗಳಿಗೆ ಸ್ಪೂರ್ತಿ ನೀಡಿದ ಅಂತರರಾಷ್ಟ್ರೀಯ ಐಕಾನ್‌ಗೆ ಧನ್ಯವಾದಗಳು” ಎಂದಿದ್ದಾರೆ.

ಅಮೆರಿಕಾ ಡೆಮಾಕ್ರಟ್ ಸಂಸದ ಜಿಮ್ ಕೋಸ್ಟಾ, ರಿಹಾನ್ನಾ ಪೋಸ್ಟ್ ಮಾಡಿದ ಹ್ಯಾಶ್‌ಟ್ಯಾಗ್ -#FarmersProtest ಅನ್ನು ಬಳಸಿ, ’ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವೆ’ ಎಂದು ಅವರು ಒತ್ತಿ ಹೇಳಿದ್ದಾರೆ. “ಭಾರತದಲ್ಲಿ ನಡೆಯುತ್ತಿರುವ ಘಟನೆಗಳು ಕಿರಿಕಿರಿ ಉಂಟು ಮಾಡುತ್ತಿವೆ. ವಿದೇಶಾಂಗ ವ್ಯವಹಾರಗಳ ಸಮಿತಿಯ ಸದಸ್ಯನಾಗಿ ನಾನು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಯಾವಾಗಲೂ ಗೌರವಿಸಬೇಕು’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸರ್ಕಾರ ನೀಡುತ್ತಿರುವ ಕಿರುಕುಳ ನಿಲ್ಲಿಸುವವರೆಗೆ ಯಾವುದೇ ಮಾತುಕತೆಯಿಲ್ಲ: ರೈತ ಒಕ್ಕೂಟ

ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸೋದರಿಯ ಮಗಳು ಮೀನಾ ಹ್ಯಾರಿಸ್ ಕೂಡ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. “ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆದಿರುವುದು ಕಾಕತಾಳೀಯವಲ್ಲ, ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಜಾಪ್ರಭುತ್ವವು ಆಕ್ರಮಣಕ್ಕೊಳಗಾಗಿದೆ. ಭಾರತದ ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ರೈತ ಪ್ರತಿಭಟನಾಕಾರರ ವಿರುದ್ಧ ಅರೆಸೈನಿಕ ಪಡೆಗಳ ದೌರ್ಜನ್ಯದ ವಿರುದ್ಧ ನಾವೆಲ್ಲರೂ ಆಕ್ರೋಶಗೊಳ್ಳಬೇಕು”ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಹೋರಾಟ ಮಾಡುತ್ತಿರುವ ಪ್ರತಿಭಟನಾಕಾರರು, ಬ್ಯಾರಿಕೇಡ್‌ಗಳು ಮತ್ತು ಮುಳ್ಳುತಂತಿ ಬೇಲಿಗಳನ್ನು ಅಳವಡಿಸಿದ್ದರಿಂದ ನೀರು ಮತ್ತು ವಿದ್ಯುತ್ ಸರಬರಾಜಿನಲ್ಲಿ ಅಡ್ಡಿ ಉಂಟಾಗಿದೆ. ರಸ್ತೆಗಳಲ್ಲಿ ಕಂದಕ ಅಗೆಯುವುದು, ಮೊಳೆ ನೆಡುವುದು ಮತ್ತು ತಾತ್ಕಾಲಿಕ ಇಂಟರ್ನೆಟ್ ಅಮಾನತುಗೊಳಿಸುವಿಕೆಯು ಸರ್ಕಾರವು ಆಯೋಜಿಸುತ್ತಿರುವ “ದಾಳಿಯ” ಭಾಗವಾಗಿದೆ ಎಂದು ರೈತ ಒಕ್ಕೂಟ ಸಂಯುಕ್ತ್ ಕಿಸಾನ್ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸೇತುವೆಗಳನ್ನು ಕಟ್ಟಿ, ಗೋಡೆಗಳನ್ನಲ್ಲ: ರೈತ ಹೋರಾಟ ಹಣಿಯುವ ಕೇಂದ್ರದ ಕ್ರಮಕ್ಕೆ ರಾಹುಲ್ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...