Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಇಂದು ಸಂಜೆ ಪ್ರದರ್ಶನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಎಡಪಂಥೀಯ ಗುಂಪಿನ ಸದಸ್ಯರು ಸೇರಿದಂತೆ 12 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ವಿದ್ಯಾರ್ಥಿಗಳನ್ನು ದೆಹಲಿಯ ಪ್ರತಿಷ್ಠಿತ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಅಮಾನತುಗೊಳಿಸಲಾಗಿದೆ. ಈ ಅನ್ಯಾಯದ ವಿರುದ್ಧ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು, ಬ್ಯಾನರ್‌ಗಳನ್ನು ಬೀಸುತ್ತಾ ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ಎಳೆದೊಯ್ದರು.

ಪೊಲೀಸರು ಅಶ್ರುವಾಯು ಫಿರಂಗಿಗಳೊಂದಿಗೆ ವ್ಯಾನ್‌ಗಳಲ್ಲಿ ದೆಹಲಿಯ ಕಾಲೇಜಿನ ಗೇಟ್‌ ಒಳಗೆ ಬಂದರು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾತ್ರ ಕಾಲೇಜಿನ ಒಳಗೆ ಪ್ರವೇಶ ನೀಡಲಾಯಿತು ಆಗ ಇತರರು ತಿರುಗಿಬಿದ್ದರು ಆಗ ಗಲಾಟೆ ಸಂಭವಿಸಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)ಯ ವಿದ್ಯಾರ್ಥಿ ಘಟಕವಾದ ಎಸ್‌ಎಫ್‌ಐನವರು ಪ್ರಧಾನಿ ನರೇಂದ್ರ ಮೋದಿ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಇಂದು ಸಂಜೆ ಪ್ರದರ್ಶನ ಮಾಡುವ ವಿಚಾರವನ್ನು ಫೇಸ್‌ಬುಕ್‌ನಲ್ಲಿ ಘೋಷಿಸಿದ್ದಾರೆ. ನಂತರ ಮಂಗಳವಾರ ಜಾಮಿಯಾ ಅಧಿಕಾರಿಗಳು, ಕ್ಯಾಂಪಸ್‌ನಲ್ಲಿ ಯಾವುದೇ ಅನಧಿಕೃತ ಕೂಟಗಳಿಗೆ ಅವಕಾಶ ನೀಡುವುದಿಲ್ಲ ಎಂದು ಆದೇಶ ಹೊರಡಿಸಿದೆ.

ಇದನ್ನೂ ಓದಿ: ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

ಈ ಬಗ್ಗೆ ಎಸ್‌ಎಫ್‌ಐ ನಾಯಕ ವರ್ಕಿ ಪರಕ್ಕಲ್ ಎನ್‌ಡಿಟಿವಿಗೆ ಮಾತನಾಡಿದ್ದು, “ವಿದ್ಯಾರ್ಥಿಗಳು ಕಾನೂನುಬಾಹಿರವಾಗಿ ಏನನ್ನೂ ಮಾಡಿಲ್ಲ, ಸಾಕ್ಷ್ಯಚಿತ್ರವನ್ನು ಔಪಚಾರಿಕವಾಗಿ ನಿಷೇಧಿಸಲಾಗಿಲ್ಲ, ಸರ್ಕಾರದ ವಿರುದ್ಧ ಭಿನ್ನಾಭಿಪ್ರಾಯವು ಸಂವಿಧಾನದಲ್ಲಿ ಪ್ರತಿಪಾದಿಸಲ್ಪಟ್ಟ ಹಕ್ಕು, ನಮಗೆ ಕಲಿಸಬೇಕಾದ ಉನ್ನತ ಶಿಕ್ಷಣದ ಸ್ಥಳಗಳಲ್ಲಿ ಪ್ರಜಾಪ್ರಭುತ್ವದ ಈ ಮೂಲಭೂತ ಗುಣಗಳನ್ನು ನಿರಾಕರಿಸುತ್ತಿದ್ದಾರೆ. ಇದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಹೇಳಲಾಗುತ್ತದೆ. ಆದರೆ ವಿದ್ಯಾರ್ಥಿಗಳು ಪ್ರಶ್ನಿಸಲು, ಟೀಕಿಸಲು, ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ನಿರ್ಭಂಧ ಹೇರಲಾಗುತ್ತಿದೆ. ಇದು ಅತ್ಯಂತ ಅಪಾಯಕಾರಿ ಪ್ರವೃತ್ತಿಯನ್ನು ತೋರಿಸುತ್ತಿದೆ” ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2002ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದ ಗೋಧ್ರಾ ಹತ್ಯಾಕಾಂಡವನ್ನು ಆಧರಿಸಿದ ಸಾಕ್ಷ್ಯಚಿತ್ರವು ದೇಶ ಮಾತ್ರವಲ್ಲದೇ ವಿಶ್ವದಾದ್ಯಂತ ಬಿರುಗಾಳಿಯನ್ನು ಎಬ್ಬಿಸಿದೆ. ಸರ್ಕಾರವು ಚಲನಚಿತ್ರದ ಮೇಲೆ ಹಿಡಿತ ಸಾಧಿಸಿದೆ ಮತ್ತು ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಅದರ ಲಿಂಕ್‌ಗಳನ್ನು ತೆಗೆದುಹಾಕುವಂತೆ ಕೇಳಿದೆ. ಪ್ರತಿಪಕ್ಷಗಳು ಈ ಕ್ರಮವನ್ನು ‘ಘೋರ ಸೆನ್ಸಾರ್‌ಶಿಪ್’ ಎಂದು ಟೀಕಿಸಿವೆ.

ನಿನ್ನೆ ಸಂಜೆ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ಕೆಲವು ವಿದ್ಯಾರ್ಥಿಗಳು ಈ ಸಾಕ್ಷ್ಯಚಿತ್ರದ ಪ್ರದರ್ಶನ ಕಾರ್ಯಕ್ರಮ ಆಯೋಜಿಸಿದ್ದರು. ಆದರೆ ಆಡಳಿತ ಮಂಡಳಿಯು, ಇಂಟರ್ನೆಟ್ ಮತ್ತು ವಿದ್ಯುತ್ ಎರಡನ್ನೂ ಸ್ಥಗಿತಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿತು. ಆದರೆ ನೂರಾರು ಜನಸಮೂಹವು ಫೋನ್ ಪರದೆಗಳಲ್ಲಿ ಅಥವಾ ಅವರ ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಲು ಕತ್ತಲೆಯಲ್ಲಿ ಹೊರಗೆ ಒಟ್ಟಿಗೆ ಸೇರಿತು ಮತ್ತು ಸಂಜೆ ಪ್ರತಿಭಟನಾ ಮೆರವಣಿಗೆಯೊಂದಿಗೆ ಕೊನೆಗೊಳಿಸಿದರು.

2002ರ ಗೋಧ್ರಾ ಹತ್ಯಾಕಾಂಡವು ಮೂರು ದಿನಗಳ ನಡೆಯಿತು. ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ರೈಲಿನ ಬೋಗಿಗೆ ಬೆಂಕಿ ಹಚ್ಚಿ 59 ಜನರನ್ನು ಕೊಲ್ಲಲಾಯಿತು. ಆ ನಂತರ ಪ್ರಾರಂಭವಾದ ಗಲಭೆಯಲ್ಲಿ 1,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಆರೆ ಈ ಗಲಭೆಯನ್ನು ತಡೆಯಲು ರಾಜ್ಯ ಪೊಲೀಸರು ಸಾಕಷ್ಟು ಪ್ರಯತ್ನಗಳನ್ನು ಮಾಡಲಿಲ್ಲ ಎಂಬ ಗಂಭೀರ ಆರೋಪವನ್ನು ಮೋದಿ ಎದುರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...