Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಇಂದು ಸಂಜೆ ಪ್ರದರ್ಶನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಎಡಪಂಥೀಯ ಗುಂಪಿನ ಸದಸ್ಯರು ಸೇರಿದಂತೆ 12 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ವಿದ್ಯಾರ್ಥಿಗಳನ್ನು ದೆಹಲಿಯ ಪ್ರತಿಷ್ಠಿತ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಅಮಾನತುಗೊಳಿಸಲಾಗಿದೆ. ಈ ಅನ್ಯಾಯದ ವಿರುದ್ಧ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು, ಬ್ಯಾನರ್‌ಗಳನ್ನು ಬೀಸುತ್ತಾ ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ಎಳೆದೊಯ್ದರು.

ಪೊಲೀಸರು ಅಶ್ರುವಾಯು ಫಿರಂಗಿಗಳೊಂದಿಗೆ ವ್ಯಾನ್‌ಗಳಲ್ಲಿ ದೆಹಲಿಯ ಕಾಲೇಜಿನ ಗೇಟ್‌ ಒಳಗೆ ಬಂದರು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾತ್ರ ಕಾಲೇಜಿನ ಒಳಗೆ ಪ್ರವೇಶ ನೀಡಲಾಯಿತು ಆಗ ಇತರರು ತಿರುಗಿಬಿದ್ದರು ಆಗ ಗಲಾಟೆ ಸಂಭವಿಸಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)ಯ ವಿದ್ಯಾರ್ಥಿ ಘಟಕವಾದ ಎಸ್‌ಎಫ್‌ಐನವರು ಪ್ರಧಾನಿ ನರೇಂದ್ರ ಮೋದಿ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಇಂದು ಸಂಜೆ ಪ್ರದರ್ಶನ ಮಾಡುವ ವಿಚಾರವನ್ನು ಫೇಸ್‌ಬುಕ್‌ನಲ್ಲಿ ಘೋಷಿಸಿದ್ದಾರೆ. ನಂತರ ಮಂಗಳವಾರ ಜಾಮಿಯಾ ಅಧಿಕಾರಿಗಳು, ಕ್ಯಾಂಪಸ್‌ನಲ್ಲಿ ಯಾವುದೇ ಅನಧಿಕೃತ ಕೂಟಗಳಿಗೆ ಅವಕಾಶ ನೀಡುವುದಿಲ್ಲ ಎಂದು ಆದೇಶ ಹೊರಡಿಸಿದೆ.

ಇದನ್ನೂ ಓದಿ: ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

ಈ ಬಗ್ಗೆ ಎಸ್‌ಎಫ್‌ಐ ನಾಯಕ ವರ್ಕಿ ಪರಕ್ಕಲ್ ಎನ್‌ಡಿಟಿವಿಗೆ ಮಾತನಾಡಿದ್ದು, “ವಿದ್ಯಾರ್ಥಿಗಳು ಕಾನೂನುಬಾಹಿರವಾಗಿ ಏನನ್ನೂ ಮಾಡಿಲ್ಲ, ಸಾಕ್ಷ್ಯಚಿತ್ರವನ್ನು ಔಪಚಾರಿಕವಾಗಿ ನಿಷೇಧಿಸಲಾಗಿಲ್ಲ, ಸರ್ಕಾರದ ವಿರುದ್ಧ ಭಿನ್ನಾಭಿಪ್ರಾಯವು ಸಂವಿಧಾನದಲ್ಲಿ ಪ್ರತಿಪಾದಿಸಲ್ಪಟ್ಟ ಹಕ್ಕು, ನಮಗೆ ಕಲಿಸಬೇಕಾದ ಉನ್ನತ ಶಿಕ್ಷಣದ ಸ್ಥಳಗಳಲ್ಲಿ ಪ್ರಜಾಪ್ರಭುತ್ವದ ಈ ಮೂಲಭೂತ ಗುಣಗಳನ್ನು ನಿರಾಕರಿಸುತ್ತಿದ್ದಾರೆ. ಇದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಹೇಳಲಾಗುತ್ತದೆ. ಆದರೆ ವಿದ್ಯಾರ್ಥಿಗಳು ಪ್ರಶ್ನಿಸಲು, ಟೀಕಿಸಲು, ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ನಿರ್ಭಂಧ ಹೇರಲಾಗುತ್ತಿದೆ. ಇದು ಅತ್ಯಂತ ಅಪಾಯಕಾರಿ ಪ್ರವೃತ್ತಿಯನ್ನು ತೋರಿಸುತ್ತಿದೆ” ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2002ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದ ಗೋಧ್ರಾ ಹತ್ಯಾಕಾಂಡವನ್ನು ಆಧರಿಸಿದ ಸಾಕ್ಷ್ಯಚಿತ್ರವು ದೇಶ ಮಾತ್ರವಲ್ಲದೇ ವಿಶ್ವದಾದ್ಯಂತ ಬಿರುಗಾಳಿಯನ್ನು ಎಬ್ಬಿಸಿದೆ. ಸರ್ಕಾರವು ಚಲನಚಿತ್ರದ ಮೇಲೆ ಹಿಡಿತ ಸಾಧಿಸಿದೆ ಮತ್ತು ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಅದರ ಲಿಂಕ್‌ಗಳನ್ನು ತೆಗೆದುಹಾಕುವಂತೆ ಕೇಳಿದೆ. ಪ್ರತಿಪಕ್ಷಗಳು ಈ ಕ್ರಮವನ್ನು ‘ಘೋರ ಸೆನ್ಸಾರ್‌ಶಿಪ್’ ಎಂದು ಟೀಕಿಸಿವೆ.

ನಿನ್ನೆ ಸಂಜೆ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ಕೆಲವು ವಿದ್ಯಾರ್ಥಿಗಳು ಈ ಸಾಕ್ಷ್ಯಚಿತ್ರದ ಪ್ರದರ್ಶನ ಕಾರ್ಯಕ್ರಮ ಆಯೋಜಿಸಿದ್ದರು. ಆದರೆ ಆಡಳಿತ ಮಂಡಳಿಯು, ಇಂಟರ್ನೆಟ್ ಮತ್ತು ವಿದ್ಯುತ್ ಎರಡನ್ನೂ ಸ್ಥಗಿತಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿತು. ಆದರೆ ನೂರಾರು ಜನಸಮೂಹವು ಫೋನ್ ಪರದೆಗಳಲ್ಲಿ ಅಥವಾ ಅವರ ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಲು ಕತ್ತಲೆಯಲ್ಲಿ ಹೊರಗೆ ಒಟ್ಟಿಗೆ ಸೇರಿತು ಮತ್ತು ಸಂಜೆ ಪ್ರತಿಭಟನಾ ಮೆರವಣಿಗೆಯೊಂದಿಗೆ ಕೊನೆಗೊಳಿಸಿದರು.

2002ರ ಗೋಧ್ರಾ ಹತ್ಯಾಕಾಂಡವು ಮೂರು ದಿನಗಳ ನಡೆಯಿತು. ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ರೈಲಿನ ಬೋಗಿಗೆ ಬೆಂಕಿ ಹಚ್ಚಿ 59 ಜನರನ್ನು ಕೊಲ್ಲಲಾಯಿತು. ಆ ನಂತರ ಪ್ರಾರಂಭವಾದ ಗಲಭೆಯಲ್ಲಿ 1,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಆರೆ ಈ ಗಲಭೆಯನ್ನು ತಡೆಯಲು ರಾಜ್ಯ ಪೊಲೀಸರು ಸಾಕಷ್ಟು ಪ್ರಯತ್ನಗಳನ್ನು ಮಾಡಲಿಲ್ಲ ಎಂಬ ಗಂಭೀರ ಆರೋಪವನ್ನು ಮೋದಿ ಎದುರಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...