Homeಚಳವಳಿಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು...

ಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು ಹೇಳುತ್ತಾರೆ??

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಾಗರಿಕ ಪೌರತ್ವ ತಿದ್ದುಪಡಿ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಹಿಂಸಾಚಾರ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿದ ನಂತರ ಅಲ್ಲಿನ ಸರ್ಕಾರ ‘ಗಲಭೆಕೋರರ’ ಆಸ್ತಿಪಾಸ್ತಿ ಮುಟ್ಟುಗೋಲು/ಜಪ್ತಿ ಮಾಡುವ ಕಾಯ್ದೆಯನ್ನು ಜಾರಿಗೆ ತಂದಿದೆ. ಗಲಭೆಕೋರರ ಆರೋಪ ಸಾಬೀತಾಗುವ ಮೊದಲೇ ಈ ಕ್ರಮ ಜರುಗಿಸಲು ಸಾಧ್ಯವೇ ಎಂಬ ಚರ್ಚೆಗಳೂ ಶುರುವಾಗಿವೆ. ವಕೀಲ ಸಮೂದಲ್ಲೇ ಈ ಕಾಯ್ದೆಯ ಪರ ಮತ್ತು ವಿರೋಧ ನಿಲುವುಗಳು ವ್ಯಕ್ತವಾಗುತ್ತಿವೆ. ಬಹುಪಾಲು ಹಿರಿಯ ವಕೀಲರು ಈ ಕಾಯ್ದೆಗೆ ಕಾನೂನು ಮಾನ್ಯತೆಯಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಮಂಗಳೂರು ಗಲಭೆಯ ನಂತರ ಕರ್ನಾಟಕದಲ್ಲೂ ಇಂತಹ ಕಾಯ್ದೆ ತರುವುದಾಗಿ ಕೆಲವು ಸಚಿವರು ಹೇಳಿದರಾದರೂ, ಅಂತಿಮದಲ್ಲಿ ಸದ್ಯಕ್ಕೆ ಅಂತಹ ಕಾಯ್ದೆಯನ್ನು ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಈ ನಡುವೆಯೇ ಗಲಭೆ ಸಂಭವಿಸಿದ ಉತ್ತರಪ್ರದೇಶದ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳು 138 ಗಲಭೆಕೋರ ಆರೋಪಿಗಳಿಗೆ 50 ಲಕ್ಷ ರೂಪಾಯಿಗಳ ದಂಡ ಪಾವತಿಸುವಂತೆ ನೋಟಿಸ್‌ಗಳನ್ನು ನೀಡಿದ್ದಾರೆ. ಇದೇ ಹೊತ್ತಲ್ಲಿ ಗಲಭೆಕೋರರ ಆಸ್ತಿ-ಪಾಸ್ತಿ ಜಪ್ತಿ ಮಾಡಿ ಎಂದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಹೀಗಾಗಿ ಅಲ್ಲಿನ ಜಿಲ್ಲಾಡಳಿತಗಳು, ದಂಡ ಪಾವತಿಸಲು ವಿಫಲರಾದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಅಮನ್ ಲೇಖಿಯಂತಹ ಹಲವು ವಕೀಲರು ಈ ಕ್ರಮ ಸರಿಯಾಗಿದೆ ಎಂದು ಸಮರ್ಥಿಸುತ್ತಿದ್ದರೆ, ಬಹುಪಾಲು ವಕೀಲರು ಇದಕ್ಕೆ ಕಾನೂನಿನ ಮಾನ್ಯತೆ ಕಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುಪ್ರಿಂಕೋರ್ಟ್ ಹಿರಿಯ ವಕೀಲ ಸಂಜಯ ಹೆಗಡೆ ಪ್ರಕಾರ, ಆಸ್ತಿಪಾಸ್ತಿ ಹಾನಿ ಮಾಡಿದ ಆರೋಪ ಸಾಬೀತಾಗುವುದು ಕ್ರಿಮಿನಲ್ ವಿಚಾರಣೆಯ ಬಳಿಕವಷ್ಟೇ. ಕೇವಲ ಫೋಟೊ, ವಿಡಿಯೋ ತುಣುಕುಗಳ ಆಧಾರದಲ್ಲಿ ಗಲಭೆಕೋರ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕ್ರಮಕ್ಕೆ ಕಾನೂನು ಮಾನ್ಯತೆ ಸಿಗುವುದು ಸಂಶಯ. ಬಹುಷಃ ಸದ್ಯ ಜನರಲ್ಲಿ  ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಮತ್ತು ಪೊಲೀಸ್ ಗೋಲಿಬಾರ್ ವಿರುದ್ಧ ಇರುವ ಅಸಹನೆ ಮತ್ತು ಭಿನ್ನಮತವನ್ನು ಶಮನ ಮಾಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂತಹ ದಾರಿ ತುಳಿದಿರಬೇಕು ಎನ್ನುತ್ತಾರೆ.

ಸುಪ್ರಿಂಕೋರ್ಟಿನ ಇನ್ನೊಬ್ಬ ಹಿರಿಯ ವಕೀಲ ಸಿ.ಯು. ಸಿಂಗ್, ಈ ಕಾಯ್ದೆ ಸಂಪೂರ್ಣ ಅಸಾಂವಿಧಾನಿಕ. ಇದಕ್ಕೆ ಕಾನೂನಿನ ಮಾನ್ಯತೆ ಸಿಗದು. ಆರೋಪಿಗಳಿಗೆ ಮುಕ್ತ ವಿಚಾರಣೆಯ ಅವಕಾಶಕ್ಕೆ ಆಸ್ಪದವೇ ಇಲ್ಲದಂತೆ ಪೂರ್ವಗ್ರಹಪೀಡಿತ ನಿರ್ಧಾರದ ಆಧಾರದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದ ಅಸಾಧ್ಯ ಎನ್ನುತ್ತಾರೆ. ಪೊಲೀಸರೇ ಗಲಭೆಗೆ ಪ್ರಚೋದಿಸಿದ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ವಿಡಿಯೋಗಳೂ ಯುಟ್ಯಬ್‌ನಲ್ಲಿ ಹರಿದಾಡುತ್ತಿವೆ. ಹೀಗಾಗಿ ಕ್ರಿಮಿನಲ್ ವಿಚಾರಣೆಯಿಲ್ಲದೇ ಜನರನ್ನು ಗಲಭೆಕೋರರು, ಆಸ್ತಿಪಾಸ್ತಿಗೆ ಹಾನಿ ಮಾಡಿದವರು ಎಂದು ಪೂರ್ವಗ್ರಹದಿಂದ ನಿರ್ಧರಿಸಿ ಕ್ರಮ ಕೈಗೊಳ್ಳುವುದು ಅರಣ್ಯನ್ಯಾಯವಾಗುತ್ತದೆ ಎಂದಿದ್ದಾರೆ.

‘ಗಲಭೆ ಮತ್ತು ಹಿಂಸಾಚಾರ ಸಂಭವಿಸಿದಾಗ ಅದರಲ್ಲಿ ಭಾಗಿಯಾದವರಿಗಿಂತ ಮೊದಲು ಆಯೋಜಕರನ್ನೂ ವಿಚಾರಣೆಗೆ ಒಳಪಡಿಸಿ ಕ್ರಮ ಕೈಗೊಳ್ಳಬೇಕು ಎಂದು ಸುಪ್ರಿಂಕೋರ್ಟು ಹೇಳಿದೆ. ಪದ್ಮಾವತಿ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಸಂಭವಿಸಿದ ಗಲಭೆ ಪ್ರಕರಣಗಳಲ್ಲಿ ಆಯೋಜಕರನ್ನು ಮೊದಲು ಆರೋಪಿಗಳನ್ನಾಗಿ ಪರಿಗಣಿಸಲಾಗಿತ್ತು’ ಎಂದು ಸಿಂಗ್ ವಿವರಿಸುತ್ತಾರೆ.

ಇನ್ನೊಬ್ಬ ಹಿರಿಯ ವಕೀಲ ಮಹಮ್ಮದ್ ಪಾಷರವರ ಪ್ರಕಾರ, ‘ಈ ಕ್ರಮವು ಸಂವಿಧಾನ ಮತ್ತು ರೂಲ್ ಆಫ್ ಲಾಗಳನ್ನು ನಾಶ ಮಾಡುವ ಆರೆಸ್ಸೆಸ್‌ನ ಸಿದ್ದಾಂತದ ಭಾಗವಾಗಿದೆ. ಪೊಲೀಸರು ಕೇವಲ ಲಭ್ಯವಿರುವ ವಿಡಿಯೋಗಳ ಆಧಾರದಲ್ಲಿ ಜನರನ್ನು ಅಪರಾಧಿಗಳು ಎಂದು ನಿರ್ಧರಿಸುತ್ತಿದ್ದಾರೆ. ವಿಡಿಯೋಗಳ ಅಸಲೀತನವನ್ನು ಪರೀಕ್ಷಿಸುತ್ತಲೇ ಇಲ್ಲ. ಗಲಭೆಕೋರರು ಮಾತ್ರವಲ್ಲದೇ ಅಮಾಯಕರನ್ನು ವಿಚಾರಣೆಯಿಲ್ಲದೇ ಸಂಶಯಾತ್ಮಕ ಆರೋಪಿಗಳನ್ನು ಅಪರಾಧಿಗಳೆಂದು ನಿರ್ಧರಿಸಿ ಶಿಕ್ಷೆ ವಿಧಿಸುವುದು ಕ್ರೂರ ಮತ್ತು ಅಸಂವಿಧಾನಿಕವಾಗಿದೆ’…

ಬಹುಪಾಲು ಹಿರಿಯ ವಕೀಲರು ಇಂಥಹುದ್ದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಯೋಗಿ ಆದಿತ್ಯನಾಥರ ಹೊಸ ಕಾಯ್ದೆಗೆ ಕೋರ್ಟಿನಲ್ಲಿ ಮಾನ್ಯತೆ ಸಿಗಲಾರದು ಎನ್ನಲಾಗಿದೆ. ಸದ್ಯದ ಬಿಕ್ಕಟ್ಟು ಮತ್ತು ಜನರ ಪ್ರತಿರೋಧಗಳಿಂದ ಪಾರಾಗಲು ಈ ಕಾನೂನಾತ್ಮಕವಾಗಿ ಬೆನ್ನೆಲುಬಿಲ್ಲದ ಕಾಯ್ದೆಯನ್ನು ಜಾರಿಗೆ ತಂದು ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.
( ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...