Homeಚಳವಳಿಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು...

ಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು ಹೇಳುತ್ತಾರೆ??

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಾಗರಿಕ ಪೌರತ್ವ ತಿದ್ದುಪಡಿ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಹಿಂಸಾಚಾರ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿದ ನಂತರ ಅಲ್ಲಿನ ಸರ್ಕಾರ ‘ಗಲಭೆಕೋರರ’ ಆಸ್ತಿಪಾಸ್ತಿ ಮುಟ್ಟುಗೋಲು/ಜಪ್ತಿ ಮಾಡುವ ಕಾಯ್ದೆಯನ್ನು ಜಾರಿಗೆ ತಂದಿದೆ. ಗಲಭೆಕೋರರ ಆರೋಪ ಸಾಬೀತಾಗುವ ಮೊದಲೇ ಈ ಕ್ರಮ ಜರುಗಿಸಲು ಸಾಧ್ಯವೇ ಎಂಬ ಚರ್ಚೆಗಳೂ ಶುರುವಾಗಿವೆ. ವಕೀಲ ಸಮೂದಲ್ಲೇ ಈ ಕಾಯ್ದೆಯ ಪರ ಮತ್ತು ವಿರೋಧ ನಿಲುವುಗಳು ವ್ಯಕ್ತವಾಗುತ್ತಿವೆ. ಬಹುಪಾಲು ಹಿರಿಯ ವಕೀಲರು ಈ ಕಾಯ್ದೆಗೆ ಕಾನೂನು ಮಾನ್ಯತೆಯಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಮಂಗಳೂರು ಗಲಭೆಯ ನಂತರ ಕರ್ನಾಟಕದಲ್ಲೂ ಇಂತಹ ಕಾಯ್ದೆ ತರುವುದಾಗಿ ಕೆಲವು ಸಚಿವರು ಹೇಳಿದರಾದರೂ, ಅಂತಿಮದಲ್ಲಿ ಸದ್ಯಕ್ಕೆ ಅಂತಹ ಕಾಯ್ದೆಯನ್ನು ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಈ ನಡುವೆಯೇ ಗಲಭೆ ಸಂಭವಿಸಿದ ಉತ್ತರಪ್ರದೇಶದ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳು 138 ಗಲಭೆಕೋರ ಆರೋಪಿಗಳಿಗೆ 50 ಲಕ್ಷ ರೂಪಾಯಿಗಳ ದಂಡ ಪಾವತಿಸುವಂತೆ ನೋಟಿಸ್‌ಗಳನ್ನು ನೀಡಿದ್ದಾರೆ. ಇದೇ ಹೊತ್ತಲ್ಲಿ ಗಲಭೆಕೋರರ ಆಸ್ತಿ-ಪಾಸ್ತಿ ಜಪ್ತಿ ಮಾಡಿ ಎಂದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಹೀಗಾಗಿ ಅಲ್ಲಿನ ಜಿಲ್ಲಾಡಳಿತಗಳು, ದಂಡ ಪಾವತಿಸಲು ವಿಫಲರಾದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಅಮನ್ ಲೇಖಿಯಂತಹ ಹಲವು ವಕೀಲರು ಈ ಕ್ರಮ ಸರಿಯಾಗಿದೆ ಎಂದು ಸಮರ್ಥಿಸುತ್ತಿದ್ದರೆ, ಬಹುಪಾಲು ವಕೀಲರು ಇದಕ್ಕೆ ಕಾನೂನಿನ ಮಾನ್ಯತೆ ಕಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುಪ್ರಿಂಕೋರ್ಟ್ ಹಿರಿಯ ವಕೀಲ ಸಂಜಯ ಹೆಗಡೆ ಪ್ರಕಾರ, ಆಸ್ತಿಪಾಸ್ತಿ ಹಾನಿ ಮಾಡಿದ ಆರೋಪ ಸಾಬೀತಾಗುವುದು ಕ್ರಿಮಿನಲ್ ವಿಚಾರಣೆಯ ಬಳಿಕವಷ್ಟೇ. ಕೇವಲ ಫೋಟೊ, ವಿಡಿಯೋ ತುಣುಕುಗಳ ಆಧಾರದಲ್ಲಿ ಗಲಭೆಕೋರ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕ್ರಮಕ್ಕೆ ಕಾನೂನು ಮಾನ್ಯತೆ ಸಿಗುವುದು ಸಂಶಯ. ಬಹುಷಃ ಸದ್ಯ ಜನರಲ್ಲಿ  ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಮತ್ತು ಪೊಲೀಸ್ ಗೋಲಿಬಾರ್ ವಿರುದ್ಧ ಇರುವ ಅಸಹನೆ ಮತ್ತು ಭಿನ್ನಮತವನ್ನು ಶಮನ ಮಾಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂತಹ ದಾರಿ ತುಳಿದಿರಬೇಕು ಎನ್ನುತ್ತಾರೆ.

ಸುಪ್ರಿಂಕೋರ್ಟಿನ ಇನ್ನೊಬ್ಬ ಹಿರಿಯ ವಕೀಲ ಸಿ.ಯು. ಸಿಂಗ್, ಈ ಕಾಯ್ದೆ ಸಂಪೂರ್ಣ ಅಸಾಂವಿಧಾನಿಕ. ಇದಕ್ಕೆ ಕಾನೂನಿನ ಮಾನ್ಯತೆ ಸಿಗದು. ಆರೋಪಿಗಳಿಗೆ ಮುಕ್ತ ವಿಚಾರಣೆಯ ಅವಕಾಶಕ್ಕೆ ಆಸ್ಪದವೇ ಇಲ್ಲದಂತೆ ಪೂರ್ವಗ್ರಹಪೀಡಿತ ನಿರ್ಧಾರದ ಆಧಾರದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದ ಅಸಾಧ್ಯ ಎನ್ನುತ್ತಾರೆ. ಪೊಲೀಸರೇ ಗಲಭೆಗೆ ಪ್ರಚೋದಿಸಿದ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ವಿಡಿಯೋಗಳೂ ಯುಟ್ಯಬ್‌ನಲ್ಲಿ ಹರಿದಾಡುತ್ತಿವೆ. ಹೀಗಾಗಿ ಕ್ರಿಮಿನಲ್ ವಿಚಾರಣೆಯಿಲ್ಲದೇ ಜನರನ್ನು ಗಲಭೆಕೋರರು, ಆಸ್ತಿಪಾಸ್ತಿಗೆ ಹಾನಿ ಮಾಡಿದವರು ಎಂದು ಪೂರ್ವಗ್ರಹದಿಂದ ನಿರ್ಧರಿಸಿ ಕ್ರಮ ಕೈಗೊಳ್ಳುವುದು ಅರಣ್ಯನ್ಯಾಯವಾಗುತ್ತದೆ ಎಂದಿದ್ದಾರೆ.

‘ಗಲಭೆ ಮತ್ತು ಹಿಂಸಾಚಾರ ಸಂಭವಿಸಿದಾಗ ಅದರಲ್ಲಿ ಭಾಗಿಯಾದವರಿಗಿಂತ ಮೊದಲು ಆಯೋಜಕರನ್ನೂ ವಿಚಾರಣೆಗೆ ಒಳಪಡಿಸಿ ಕ್ರಮ ಕೈಗೊಳ್ಳಬೇಕು ಎಂದು ಸುಪ್ರಿಂಕೋರ್ಟು ಹೇಳಿದೆ. ಪದ್ಮಾವತಿ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಸಂಭವಿಸಿದ ಗಲಭೆ ಪ್ರಕರಣಗಳಲ್ಲಿ ಆಯೋಜಕರನ್ನು ಮೊದಲು ಆರೋಪಿಗಳನ್ನಾಗಿ ಪರಿಗಣಿಸಲಾಗಿತ್ತು’ ಎಂದು ಸಿಂಗ್ ವಿವರಿಸುತ್ತಾರೆ.

ಇನ್ನೊಬ್ಬ ಹಿರಿಯ ವಕೀಲ ಮಹಮ್ಮದ್ ಪಾಷರವರ ಪ್ರಕಾರ, ‘ಈ ಕ್ರಮವು ಸಂವಿಧಾನ ಮತ್ತು ರೂಲ್ ಆಫ್ ಲಾಗಳನ್ನು ನಾಶ ಮಾಡುವ ಆರೆಸ್ಸೆಸ್‌ನ ಸಿದ್ದಾಂತದ ಭಾಗವಾಗಿದೆ. ಪೊಲೀಸರು ಕೇವಲ ಲಭ್ಯವಿರುವ ವಿಡಿಯೋಗಳ ಆಧಾರದಲ್ಲಿ ಜನರನ್ನು ಅಪರಾಧಿಗಳು ಎಂದು ನಿರ್ಧರಿಸುತ್ತಿದ್ದಾರೆ. ವಿಡಿಯೋಗಳ ಅಸಲೀತನವನ್ನು ಪರೀಕ್ಷಿಸುತ್ತಲೇ ಇಲ್ಲ. ಗಲಭೆಕೋರರು ಮಾತ್ರವಲ್ಲದೇ ಅಮಾಯಕರನ್ನು ವಿಚಾರಣೆಯಿಲ್ಲದೇ ಸಂಶಯಾತ್ಮಕ ಆರೋಪಿಗಳನ್ನು ಅಪರಾಧಿಗಳೆಂದು ನಿರ್ಧರಿಸಿ ಶಿಕ್ಷೆ ವಿಧಿಸುವುದು ಕ್ರೂರ ಮತ್ತು ಅಸಂವಿಧಾನಿಕವಾಗಿದೆ’…

ಬಹುಪಾಲು ಹಿರಿಯ ವಕೀಲರು ಇಂಥಹುದ್ದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಯೋಗಿ ಆದಿತ್ಯನಾಥರ ಹೊಸ ಕಾಯ್ದೆಗೆ ಕೋರ್ಟಿನಲ್ಲಿ ಮಾನ್ಯತೆ ಸಿಗಲಾರದು ಎನ್ನಲಾಗಿದೆ. ಸದ್ಯದ ಬಿಕ್ಕಟ್ಟು ಮತ್ತು ಜನರ ಪ್ರತಿರೋಧಗಳಿಂದ ಪಾರಾಗಲು ಈ ಕಾನೂನಾತ್ಮಕವಾಗಿ ಬೆನ್ನೆಲುಬಿಲ್ಲದ ಕಾಯ್ದೆಯನ್ನು ಜಾರಿಗೆ ತಂದು ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.
( ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...