Homeಚಳವಳಿಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು...

ಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು ಹೇಳುತ್ತಾರೆ??

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಾಗರಿಕ ಪೌರತ್ವ ತಿದ್ದುಪಡಿ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಹಿಂಸಾಚಾರ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿದ ನಂತರ ಅಲ್ಲಿನ ಸರ್ಕಾರ ‘ಗಲಭೆಕೋರರ’ ಆಸ್ತಿಪಾಸ್ತಿ ಮುಟ್ಟುಗೋಲು/ಜಪ್ತಿ ಮಾಡುವ ಕಾಯ್ದೆಯನ್ನು ಜಾರಿಗೆ ತಂದಿದೆ. ಗಲಭೆಕೋರರ ಆರೋಪ ಸಾಬೀತಾಗುವ ಮೊದಲೇ ಈ ಕ್ರಮ ಜರುಗಿಸಲು ಸಾಧ್ಯವೇ ಎಂಬ ಚರ್ಚೆಗಳೂ ಶುರುವಾಗಿವೆ. ವಕೀಲ ಸಮೂದಲ್ಲೇ ಈ ಕಾಯ್ದೆಯ ಪರ ಮತ್ತು ವಿರೋಧ ನಿಲುವುಗಳು ವ್ಯಕ್ತವಾಗುತ್ತಿವೆ. ಬಹುಪಾಲು ಹಿರಿಯ ವಕೀಲರು ಈ ಕಾಯ್ದೆಗೆ ಕಾನೂನು ಮಾನ್ಯತೆಯಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಮಂಗಳೂರು ಗಲಭೆಯ ನಂತರ ಕರ್ನಾಟಕದಲ್ಲೂ ಇಂತಹ ಕಾಯ್ದೆ ತರುವುದಾಗಿ ಕೆಲವು ಸಚಿವರು ಹೇಳಿದರಾದರೂ, ಅಂತಿಮದಲ್ಲಿ ಸದ್ಯಕ್ಕೆ ಅಂತಹ ಕಾಯ್ದೆಯನ್ನು ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಈ ನಡುವೆಯೇ ಗಲಭೆ ಸಂಭವಿಸಿದ ಉತ್ತರಪ್ರದೇಶದ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳು 138 ಗಲಭೆಕೋರ ಆರೋಪಿಗಳಿಗೆ 50 ಲಕ್ಷ ರೂಪಾಯಿಗಳ ದಂಡ ಪಾವತಿಸುವಂತೆ ನೋಟಿಸ್‌ಗಳನ್ನು ನೀಡಿದ್ದಾರೆ. ಇದೇ ಹೊತ್ತಲ್ಲಿ ಗಲಭೆಕೋರರ ಆಸ್ತಿ-ಪಾಸ್ತಿ ಜಪ್ತಿ ಮಾಡಿ ಎಂದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಹೀಗಾಗಿ ಅಲ್ಲಿನ ಜಿಲ್ಲಾಡಳಿತಗಳು, ದಂಡ ಪಾವತಿಸಲು ವಿಫಲರಾದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಅಮನ್ ಲೇಖಿಯಂತಹ ಹಲವು ವಕೀಲರು ಈ ಕ್ರಮ ಸರಿಯಾಗಿದೆ ಎಂದು ಸಮರ್ಥಿಸುತ್ತಿದ್ದರೆ, ಬಹುಪಾಲು ವಕೀಲರು ಇದಕ್ಕೆ ಕಾನೂನಿನ ಮಾನ್ಯತೆ ಕಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುಪ್ರಿಂಕೋರ್ಟ್ ಹಿರಿಯ ವಕೀಲ ಸಂಜಯ ಹೆಗಡೆ ಪ್ರಕಾರ, ಆಸ್ತಿಪಾಸ್ತಿ ಹಾನಿ ಮಾಡಿದ ಆರೋಪ ಸಾಬೀತಾಗುವುದು ಕ್ರಿಮಿನಲ್ ವಿಚಾರಣೆಯ ಬಳಿಕವಷ್ಟೇ. ಕೇವಲ ಫೋಟೊ, ವಿಡಿಯೋ ತುಣುಕುಗಳ ಆಧಾರದಲ್ಲಿ ಗಲಭೆಕೋರ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕ್ರಮಕ್ಕೆ ಕಾನೂನು ಮಾನ್ಯತೆ ಸಿಗುವುದು ಸಂಶಯ. ಬಹುಷಃ ಸದ್ಯ ಜನರಲ್ಲಿ  ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಮತ್ತು ಪೊಲೀಸ್ ಗೋಲಿಬಾರ್ ವಿರುದ್ಧ ಇರುವ ಅಸಹನೆ ಮತ್ತು ಭಿನ್ನಮತವನ್ನು ಶಮನ ಮಾಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂತಹ ದಾರಿ ತುಳಿದಿರಬೇಕು ಎನ್ನುತ್ತಾರೆ.

ಸುಪ್ರಿಂಕೋರ್ಟಿನ ಇನ್ನೊಬ್ಬ ಹಿರಿಯ ವಕೀಲ ಸಿ.ಯು. ಸಿಂಗ್, ಈ ಕಾಯ್ದೆ ಸಂಪೂರ್ಣ ಅಸಾಂವಿಧಾನಿಕ. ಇದಕ್ಕೆ ಕಾನೂನಿನ ಮಾನ್ಯತೆ ಸಿಗದು. ಆರೋಪಿಗಳಿಗೆ ಮುಕ್ತ ವಿಚಾರಣೆಯ ಅವಕಾಶಕ್ಕೆ ಆಸ್ಪದವೇ ಇಲ್ಲದಂತೆ ಪೂರ್ವಗ್ರಹಪೀಡಿತ ನಿರ್ಧಾರದ ಆಧಾರದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದ ಅಸಾಧ್ಯ ಎನ್ನುತ್ತಾರೆ. ಪೊಲೀಸರೇ ಗಲಭೆಗೆ ಪ್ರಚೋದಿಸಿದ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ವಿಡಿಯೋಗಳೂ ಯುಟ್ಯಬ್‌ನಲ್ಲಿ ಹರಿದಾಡುತ್ತಿವೆ. ಹೀಗಾಗಿ ಕ್ರಿಮಿನಲ್ ವಿಚಾರಣೆಯಿಲ್ಲದೇ ಜನರನ್ನು ಗಲಭೆಕೋರರು, ಆಸ್ತಿಪಾಸ್ತಿಗೆ ಹಾನಿ ಮಾಡಿದವರು ಎಂದು ಪೂರ್ವಗ್ರಹದಿಂದ ನಿರ್ಧರಿಸಿ ಕ್ರಮ ಕೈಗೊಳ್ಳುವುದು ಅರಣ್ಯನ್ಯಾಯವಾಗುತ್ತದೆ ಎಂದಿದ್ದಾರೆ.

‘ಗಲಭೆ ಮತ್ತು ಹಿಂಸಾಚಾರ ಸಂಭವಿಸಿದಾಗ ಅದರಲ್ಲಿ ಭಾಗಿಯಾದವರಿಗಿಂತ ಮೊದಲು ಆಯೋಜಕರನ್ನೂ ವಿಚಾರಣೆಗೆ ಒಳಪಡಿಸಿ ಕ್ರಮ ಕೈಗೊಳ್ಳಬೇಕು ಎಂದು ಸುಪ್ರಿಂಕೋರ್ಟು ಹೇಳಿದೆ. ಪದ್ಮಾವತಿ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಸಂಭವಿಸಿದ ಗಲಭೆ ಪ್ರಕರಣಗಳಲ್ಲಿ ಆಯೋಜಕರನ್ನು ಮೊದಲು ಆರೋಪಿಗಳನ್ನಾಗಿ ಪರಿಗಣಿಸಲಾಗಿತ್ತು’ ಎಂದು ಸಿಂಗ್ ವಿವರಿಸುತ್ತಾರೆ.

ಇನ್ನೊಬ್ಬ ಹಿರಿಯ ವಕೀಲ ಮಹಮ್ಮದ್ ಪಾಷರವರ ಪ್ರಕಾರ, ‘ಈ ಕ್ರಮವು ಸಂವಿಧಾನ ಮತ್ತು ರೂಲ್ ಆಫ್ ಲಾಗಳನ್ನು ನಾಶ ಮಾಡುವ ಆರೆಸ್ಸೆಸ್‌ನ ಸಿದ್ದಾಂತದ ಭಾಗವಾಗಿದೆ. ಪೊಲೀಸರು ಕೇವಲ ಲಭ್ಯವಿರುವ ವಿಡಿಯೋಗಳ ಆಧಾರದಲ್ಲಿ ಜನರನ್ನು ಅಪರಾಧಿಗಳು ಎಂದು ನಿರ್ಧರಿಸುತ್ತಿದ್ದಾರೆ. ವಿಡಿಯೋಗಳ ಅಸಲೀತನವನ್ನು ಪರೀಕ್ಷಿಸುತ್ತಲೇ ಇಲ್ಲ. ಗಲಭೆಕೋರರು ಮಾತ್ರವಲ್ಲದೇ ಅಮಾಯಕರನ್ನು ವಿಚಾರಣೆಯಿಲ್ಲದೇ ಸಂಶಯಾತ್ಮಕ ಆರೋಪಿಗಳನ್ನು ಅಪರಾಧಿಗಳೆಂದು ನಿರ್ಧರಿಸಿ ಶಿಕ್ಷೆ ವಿಧಿಸುವುದು ಕ್ರೂರ ಮತ್ತು ಅಸಂವಿಧಾನಿಕವಾಗಿದೆ’…

ಬಹುಪಾಲು ಹಿರಿಯ ವಕೀಲರು ಇಂಥಹುದ್ದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಯೋಗಿ ಆದಿತ್ಯನಾಥರ ಹೊಸ ಕಾಯ್ದೆಗೆ ಕೋರ್ಟಿನಲ್ಲಿ ಮಾನ್ಯತೆ ಸಿಗಲಾರದು ಎನ್ನಲಾಗಿದೆ. ಸದ್ಯದ ಬಿಕ್ಕಟ್ಟು ಮತ್ತು ಜನರ ಪ್ರತಿರೋಧಗಳಿಂದ ಪಾರಾಗಲು ಈ ಕಾನೂನಾತ್ಮಕವಾಗಿ ಬೆನ್ನೆಲುಬಿಲ್ಲದ ಕಾಯ್ದೆಯನ್ನು ಜಾರಿಗೆ ತಂದು ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.
( ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...