Homeಚಳವಳಿಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು...

ಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು ಹೇಳುತ್ತಾರೆ??

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಾಗರಿಕ ಪೌರತ್ವ ತಿದ್ದುಪಡಿ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಹಿಂಸಾಚಾರ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿದ ನಂತರ ಅಲ್ಲಿನ ಸರ್ಕಾರ ‘ಗಲಭೆಕೋರರ’ ಆಸ್ತಿಪಾಸ್ತಿ ಮುಟ್ಟುಗೋಲು/ಜಪ್ತಿ ಮಾಡುವ ಕಾಯ್ದೆಯನ್ನು ಜಾರಿಗೆ ತಂದಿದೆ. ಗಲಭೆಕೋರರ ಆರೋಪ ಸಾಬೀತಾಗುವ ಮೊದಲೇ ಈ ಕ್ರಮ ಜರುಗಿಸಲು ಸಾಧ್ಯವೇ ಎಂಬ ಚರ್ಚೆಗಳೂ ಶುರುವಾಗಿವೆ. ವಕೀಲ ಸಮೂದಲ್ಲೇ ಈ ಕಾಯ್ದೆಯ ಪರ ಮತ್ತು ವಿರೋಧ ನಿಲುವುಗಳು ವ್ಯಕ್ತವಾಗುತ್ತಿವೆ. ಬಹುಪಾಲು ಹಿರಿಯ ವಕೀಲರು ಈ ಕಾಯ್ದೆಗೆ ಕಾನೂನು ಮಾನ್ಯತೆಯಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಮಂಗಳೂರು ಗಲಭೆಯ ನಂತರ ಕರ್ನಾಟಕದಲ್ಲೂ ಇಂತಹ ಕಾಯ್ದೆ ತರುವುದಾಗಿ ಕೆಲವು ಸಚಿವರು ಹೇಳಿದರಾದರೂ, ಅಂತಿಮದಲ್ಲಿ ಸದ್ಯಕ್ಕೆ ಅಂತಹ ಕಾಯ್ದೆಯನ್ನು ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಈ ನಡುವೆಯೇ ಗಲಭೆ ಸಂಭವಿಸಿದ ಉತ್ತರಪ್ರದೇಶದ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳು 138 ಗಲಭೆಕೋರ ಆರೋಪಿಗಳಿಗೆ 50 ಲಕ್ಷ ರೂಪಾಯಿಗಳ ದಂಡ ಪಾವತಿಸುವಂತೆ ನೋಟಿಸ್‌ಗಳನ್ನು ನೀಡಿದ್ದಾರೆ. ಇದೇ ಹೊತ್ತಲ್ಲಿ ಗಲಭೆಕೋರರ ಆಸ್ತಿ-ಪಾಸ್ತಿ ಜಪ್ತಿ ಮಾಡಿ ಎಂದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಹೀಗಾಗಿ ಅಲ್ಲಿನ ಜಿಲ್ಲಾಡಳಿತಗಳು, ದಂಡ ಪಾವತಿಸಲು ವಿಫಲರಾದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಅಮನ್ ಲೇಖಿಯಂತಹ ಹಲವು ವಕೀಲರು ಈ ಕ್ರಮ ಸರಿಯಾಗಿದೆ ಎಂದು ಸಮರ್ಥಿಸುತ್ತಿದ್ದರೆ, ಬಹುಪಾಲು ವಕೀಲರು ಇದಕ್ಕೆ ಕಾನೂನಿನ ಮಾನ್ಯತೆ ಕಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುಪ್ರಿಂಕೋರ್ಟ್ ಹಿರಿಯ ವಕೀಲ ಸಂಜಯ ಹೆಗಡೆ ಪ್ರಕಾರ, ಆಸ್ತಿಪಾಸ್ತಿ ಹಾನಿ ಮಾಡಿದ ಆರೋಪ ಸಾಬೀತಾಗುವುದು ಕ್ರಿಮಿನಲ್ ವಿಚಾರಣೆಯ ಬಳಿಕವಷ್ಟೇ. ಕೇವಲ ಫೋಟೊ, ವಿಡಿಯೋ ತುಣುಕುಗಳ ಆಧಾರದಲ್ಲಿ ಗಲಭೆಕೋರ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕ್ರಮಕ್ಕೆ ಕಾನೂನು ಮಾನ್ಯತೆ ಸಿಗುವುದು ಸಂಶಯ. ಬಹುಷಃ ಸದ್ಯ ಜನರಲ್ಲಿ  ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಮತ್ತು ಪೊಲೀಸ್ ಗೋಲಿಬಾರ್ ವಿರುದ್ಧ ಇರುವ ಅಸಹನೆ ಮತ್ತು ಭಿನ್ನಮತವನ್ನು ಶಮನ ಮಾಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂತಹ ದಾರಿ ತುಳಿದಿರಬೇಕು ಎನ್ನುತ್ತಾರೆ.

ಸುಪ್ರಿಂಕೋರ್ಟಿನ ಇನ್ನೊಬ್ಬ ಹಿರಿಯ ವಕೀಲ ಸಿ.ಯು. ಸಿಂಗ್, ಈ ಕಾಯ್ದೆ ಸಂಪೂರ್ಣ ಅಸಾಂವಿಧಾನಿಕ. ಇದಕ್ಕೆ ಕಾನೂನಿನ ಮಾನ್ಯತೆ ಸಿಗದು. ಆರೋಪಿಗಳಿಗೆ ಮುಕ್ತ ವಿಚಾರಣೆಯ ಅವಕಾಶಕ್ಕೆ ಆಸ್ಪದವೇ ಇಲ್ಲದಂತೆ ಪೂರ್ವಗ್ರಹಪೀಡಿತ ನಿರ್ಧಾರದ ಆಧಾರದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದ ಅಸಾಧ್ಯ ಎನ್ನುತ್ತಾರೆ. ಪೊಲೀಸರೇ ಗಲಭೆಗೆ ಪ್ರಚೋದಿಸಿದ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ವಿಡಿಯೋಗಳೂ ಯುಟ್ಯಬ್‌ನಲ್ಲಿ ಹರಿದಾಡುತ್ತಿವೆ. ಹೀಗಾಗಿ ಕ್ರಿಮಿನಲ್ ವಿಚಾರಣೆಯಿಲ್ಲದೇ ಜನರನ್ನು ಗಲಭೆಕೋರರು, ಆಸ್ತಿಪಾಸ್ತಿಗೆ ಹಾನಿ ಮಾಡಿದವರು ಎಂದು ಪೂರ್ವಗ್ರಹದಿಂದ ನಿರ್ಧರಿಸಿ ಕ್ರಮ ಕೈಗೊಳ್ಳುವುದು ಅರಣ್ಯನ್ಯಾಯವಾಗುತ್ತದೆ ಎಂದಿದ್ದಾರೆ.

‘ಗಲಭೆ ಮತ್ತು ಹಿಂಸಾಚಾರ ಸಂಭವಿಸಿದಾಗ ಅದರಲ್ಲಿ ಭಾಗಿಯಾದವರಿಗಿಂತ ಮೊದಲು ಆಯೋಜಕರನ್ನೂ ವಿಚಾರಣೆಗೆ ಒಳಪಡಿಸಿ ಕ್ರಮ ಕೈಗೊಳ್ಳಬೇಕು ಎಂದು ಸುಪ್ರಿಂಕೋರ್ಟು ಹೇಳಿದೆ. ಪದ್ಮಾವತಿ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಸಂಭವಿಸಿದ ಗಲಭೆ ಪ್ರಕರಣಗಳಲ್ಲಿ ಆಯೋಜಕರನ್ನು ಮೊದಲು ಆರೋಪಿಗಳನ್ನಾಗಿ ಪರಿಗಣಿಸಲಾಗಿತ್ತು’ ಎಂದು ಸಿಂಗ್ ವಿವರಿಸುತ್ತಾರೆ.

ಇನ್ನೊಬ್ಬ ಹಿರಿಯ ವಕೀಲ ಮಹಮ್ಮದ್ ಪಾಷರವರ ಪ್ರಕಾರ, ‘ಈ ಕ್ರಮವು ಸಂವಿಧಾನ ಮತ್ತು ರೂಲ್ ಆಫ್ ಲಾಗಳನ್ನು ನಾಶ ಮಾಡುವ ಆರೆಸ್ಸೆಸ್‌ನ ಸಿದ್ದಾಂತದ ಭಾಗವಾಗಿದೆ. ಪೊಲೀಸರು ಕೇವಲ ಲಭ್ಯವಿರುವ ವಿಡಿಯೋಗಳ ಆಧಾರದಲ್ಲಿ ಜನರನ್ನು ಅಪರಾಧಿಗಳು ಎಂದು ನಿರ್ಧರಿಸುತ್ತಿದ್ದಾರೆ. ವಿಡಿಯೋಗಳ ಅಸಲೀತನವನ್ನು ಪರೀಕ್ಷಿಸುತ್ತಲೇ ಇಲ್ಲ. ಗಲಭೆಕೋರರು ಮಾತ್ರವಲ್ಲದೇ ಅಮಾಯಕರನ್ನು ವಿಚಾರಣೆಯಿಲ್ಲದೇ ಸಂಶಯಾತ್ಮಕ ಆರೋಪಿಗಳನ್ನು ಅಪರಾಧಿಗಳೆಂದು ನಿರ್ಧರಿಸಿ ಶಿಕ್ಷೆ ವಿಧಿಸುವುದು ಕ್ರೂರ ಮತ್ತು ಅಸಂವಿಧಾನಿಕವಾಗಿದೆ’…

ಬಹುಪಾಲು ಹಿರಿಯ ವಕೀಲರು ಇಂಥಹುದ್ದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಯೋಗಿ ಆದಿತ್ಯನಾಥರ ಹೊಸ ಕಾಯ್ದೆಗೆ ಕೋರ್ಟಿನಲ್ಲಿ ಮಾನ್ಯತೆ ಸಿಗಲಾರದು ಎನ್ನಲಾಗಿದೆ. ಸದ್ಯದ ಬಿಕ್ಕಟ್ಟು ಮತ್ತು ಜನರ ಪ್ರತಿರೋಧಗಳಿಂದ ಪಾರಾಗಲು ಈ ಕಾನೂನಾತ್ಮಕವಾಗಿ ಬೆನ್ನೆಲುಬಿಲ್ಲದ ಕಾಯ್ದೆಯನ್ನು ಜಾರಿಗೆ ತಂದು ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.
( ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....