Homeಚಳವಳಿಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು...

ಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು ಹೇಳುತ್ತಾರೆ??

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಾಗರಿಕ ಪೌರತ್ವ ತಿದ್ದುಪಡಿ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಹಿಂಸಾಚಾರ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿದ ನಂತರ ಅಲ್ಲಿನ ಸರ್ಕಾರ ‘ಗಲಭೆಕೋರರ’ ಆಸ್ತಿಪಾಸ್ತಿ ಮುಟ್ಟುಗೋಲು/ಜಪ್ತಿ ಮಾಡುವ ಕಾಯ್ದೆಯನ್ನು ಜಾರಿಗೆ ತಂದಿದೆ. ಗಲಭೆಕೋರರ ಆರೋಪ ಸಾಬೀತಾಗುವ ಮೊದಲೇ ಈ ಕ್ರಮ ಜರುಗಿಸಲು ಸಾಧ್ಯವೇ ಎಂಬ ಚರ್ಚೆಗಳೂ ಶುರುವಾಗಿವೆ. ವಕೀಲ ಸಮೂದಲ್ಲೇ ಈ ಕಾಯ್ದೆಯ ಪರ ಮತ್ತು ವಿರೋಧ ನಿಲುವುಗಳು ವ್ಯಕ್ತವಾಗುತ್ತಿವೆ. ಬಹುಪಾಲು ಹಿರಿಯ ವಕೀಲರು ಈ ಕಾಯ್ದೆಗೆ ಕಾನೂನು ಮಾನ್ಯತೆಯಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಮಂಗಳೂರು ಗಲಭೆಯ ನಂತರ ಕರ್ನಾಟಕದಲ್ಲೂ ಇಂತಹ ಕಾಯ್ದೆ ತರುವುದಾಗಿ ಕೆಲವು ಸಚಿವರು ಹೇಳಿದರಾದರೂ, ಅಂತಿಮದಲ್ಲಿ ಸದ್ಯಕ್ಕೆ ಅಂತಹ ಕಾಯ್ದೆಯನ್ನು ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಈ ನಡುವೆಯೇ ಗಲಭೆ ಸಂಭವಿಸಿದ ಉತ್ತರಪ್ರದೇಶದ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳು 138 ಗಲಭೆಕೋರ ಆರೋಪಿಗಳಿಗೆ 50 ಲಕ್ಷ ರೂಪಾಯಿಗಳ ದಂಡ ಪಾವತಿಸುವಂತೆ ನೋಟಿಸ್‌ಗಳನ್ನು ನೀಡಿದ್ದಾರೆ. ಇದೇ ಹೊತ್ತಲ್ಲಿ ಗಲಭೆಕೋರರ ಆಸ್ತಿ-ಪಾಸ್ತಿ ಜಪ್ತಿ ಮಾಡಿ ಎಂದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಹೀಗಾಗಿ ಅಲ್ಲಿನ ಜಿಲ್ಲಾಡಳಿತಗಳು, ದಂಡ ಪಾವತಿಸಲು ವಿಫಲರಾದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಅಮನ್ ಲೇಖಿಯಂತಹ ಹಲವು ವಕೀಲರು ಈ ಕ್ರಮ ಸರಿಯಾಗಿದೆ ಎಂದು ಸಮರ್ಥಿಸುತ್ತಿದ್ದರೆ, ಬಹುಪಾಲು ವಕೀಲರು ಇದಕ್ಕೆ ಕಾನೂನಿನ ಮಾನ್ಯತೆ ಕಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುಪ್ರಿಂಕೋರ್ಟ್ ಹಿರಿಯ ವಕೀಲ ಸಂಜಯ ಹೆಗಡೆ ಪ್ರಕಾರ, ಆಸ್ತಿಪಾಸ್ತಿ ಹಾನಿ ಮಾಡಿದ ಆರೋಪ ಸಾಬೀತಾಗುವುದು ಕ್ರಿಮಿನಲ್ ವಿಚಾರಣೆಯ ಬಳಿಕವಷ್ಟೇ. ಕೇವಲ ಫೋಟೊ, ವಿಡಿಯೋ ತುಣುಕುಗಳ ಆಧಾರದಲ್ಲಿ ಗಲಭೆಕೋರ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕ್ರಮಕ್ಕೆ ಕಾನೂನು ಮಾನ್ಯತೆ ಸಿಗುವುದು ಸಂಶಯ. ಬಹುಷಃ ಸದ್ಯ ಜನರಲ್ಲಿ  ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಮತ್ತು ಪೊಲೀಸ್ ಗೋಲಿಬಾರ್ ವಿರುದ್ಧ ಇರುವ ಅಸಹನೆ ಮತ್ತು ಭಿನ್ನಮತವನ್ನು ಶಮನ ಮಾಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂತಹ ದಾರಿ ತುಳಿದಿರಬೇಕು ಎನ್ನುತ್ತಾರೆ.

ಸುಪ್ರಿಂಕೋರ್ಟಿನ ಇನ್ನೊಬ್ಬ ಹಿರಿಯ ವಕೀಲ ಸಿ.ಯು. ಸಿಂಗ್, ಈ ಕಾಯ್ದೆ ಸಂಪೂರ್ಣ ಅಸಾಂವಿಧಾನಿಕ. ಇದಕ್ಕೆ ಕಾನೂನಿನ ಮಾನ್ಯತೆ ಸಿಗದು. ಆರೋಪಿಗಳಿಗೆ ಮುಕ್ತ ವಿಚಾರಣೆಯ ಅವಕಾಶಕ್ಕೆ ಆಸ್ಪದವೇ ಇಲ್ಲದಂತೆ ಪೂರ್ವಗ್ರಹಪೀಡಿತ ನಿರ್ಧಾರದ ಆಧಾರದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದ ಅಸಾಧ್ಯ ಎನ್ನುತ್ತಾರೆ. ಪೊಲೀಸರೇ ಗಲಭೆಗೆ ಪ್ರಚೋದಿಸಿದ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ವಿಡಿಯೋಗಳೂ ಯುಟ್ಯಬ್‌ನಲ್ಲಿ ಹರಿದಾಡುತ್ತಿವೆ. ಹೀಗಾಗಿ ಕ್ರಿಮಿನಲ್ ವಿಚಾರಣೆಯಿಲ್ಲದೇ ಜನರನ್ನು ಗಲಭೆಕೋರರು, ಆಸ್ತಿಪಾಸ್ತಿಗೆ ಹಾನಿ ಮಾಡಿದವರು ಎಂದು ಪೂರ್ವಗ್ರಹದಿಂದ ನಿರ್ಧರಿಸಿ ಕ್ರಮ ಕೈಗೊಳ್ಳುವುದು ಅರಣ್ಯನ್ಯಾಯವಾಗುತ್ತದೆ ಎಂದಿದ್ದಾರೆ.

‘ಗಲಭೆ ಮತ್ತು ಹಿಂಸಾಚಾರ ಸಂಭವಿಸಿದಾಗ ಅದರಲ್ಲಿ ಭಾಗಿಯಾದವರಿಗಿಂತ ಮೊದಲು ಆಯೋಜಕರನ್ನೂ ವಿಚಾರಣೆಗೆ ಒಳಪಡಿಸಿ ಕ್ರಮ ಕೈಗೊಳ್ಳಬೇಕು ಎಂದು ಸುಪ್ರಿಂಕೋರ್ಟು ಹೇಳಿದೆ. ಪದ್ಮಾವತಿ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಸಂಭವಿಸಿದ ಗಲಭೆ ಪ್ರಕರಣಗಳಲ್ಲಿ ಆಯೋಜಕರನ್ನು ಮೊದಲು ಆರೋಪಿಗಳನ್ನಾಗಿ ಪರಿಗಣಿಸಲಾಗಿತ್ತು’ ಎಂದು ಸಿಂಗ್ ವಿವರಿಸುತ್ತಾರೆ.

ಇನ್ನೊಬ್ಬ ಹಿರಿಯ ವಕೀಲ ಮಹಮ್ಮದ್ ಪಾಷರವರ ಪ್ರಕಾರ, ‘ಈ ಕ್ರಮವು ಸಂವಿಧಾನ ಮತ್ತು ರೂಲ್ ಆಫ್ ಲಾಗಳನ್ನು ನಾಶ ಮಾಡುವ ಆರೆಸ್ಸೆಸ್‌ನ ಸಿದ್ದಾಂತದ ಭಾಗವಾಗಿದೆ. ಪೊಲೀಸರು ಕೇವಲ ಲಭ್ಯವಿರುವ ವಿಡಿಯೋಗಳ ಆಧಾರದಲ್ಲಿ ಜನರನ್ನು ಅಪರಾಧಿಗಳು ಎಂದು ನಿರ್ಧರಿಸುತ್ತಿದ್ದಾರೆ. ವಿಡಿಯೋಗಳ ಅಸಲೀತನವನ್ನು ಪರೀಕ್ಷಿಸುತ್ತಲೇ ಇಲ್ಲ. ಗಲಭೆಕೋರರು ಮಾತ್ರವಲ್ಲದೇ ಅಮಾಯಕರನ್ನು ವಿಚಾರಣೆಯಿಲ್ಲದೇ ಸಂಶಯಾತ್ಮಕ ಆರೋಪಿಗಳನ್ನು ಅಪರಾಧಿಗಳೆಂದು ನಿರ್ಧರಿಸಿ ಶಿಕ್ಷೆ ವಿಧಿಸುವುದು ಕ್ರೂರ ಮತ್ತು ಅಸಂವಿಧಾನಿಕವಾಗಿದೆ’…

ಬಹುಪಾಲು ಹಿರಿಯ ವಕೀಲರು ಇಂಥಹುದ್ದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಯೋಗಿ ಆದಿತ್ಯನಾಥರ ಹೊಸ ಕಾಯ್ದೆಗೆ ಕೋರ್ಟಿನಲ್ಲಿ ಮಾನ್ಯತೆ ಸಿಗಲಾರದು ಎನ್ನಲಾಗಿದೆ. ಸದ್ಯದ ಬಿಕ್ಕಟ್ಟು ಮತ್ತು ಜನರ ಪ್ರತಿರೋಧಗಳಿಂದ ಪಾರಾಗಲು ಈ ಕಾನೂನಾತ್ಮಕವಾಗಿ ಬೆನ್ನೆಲುಬಿಲ್ಲದ ಕಾಯ್ದೆಯನ್ನು ಜಾರಿಗೆ ತಂದು ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.
( ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...