Homeಚಳವಳಿಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು...

ಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು ಹೇಳುತ್ತಾರೆ??

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಾಗರಿಕ ಪೌರತ್ವ ತಿದ್ದುಪಡಿ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಹಿಂಸಾಚಾರ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿದ ನಂತರ ಅಲ್ಲಿನ ಸರ್ಕಾರ ‘ಗಲಭೆಕೋರರ’ ಆಸ್ತಿಪಾಸ್ತಿ ಮುಟ್ಟುಗೋಲು/ಜಪ್ತಿ ಮಾಡುವ ಕಾಯ್ದೆಯನ್ನು ಜಾರಿಗೆ ತಂದಿದೆ. ಗಲಭೆಕೋರರ ಆರೋಪ ಸಾಬೀತಾಗುವ ಮೊದಲೇ ಈ ಕ್ರಮ ಜರುಗಿಸಲು ಸಾಧ್ಯವೇ ಎಂಬ ಚರ್ಚೆಗಳೂ ಶುರುವಾಗಿವೆ. ವಕೀಲ ಸಮೂದಲ್ಲೇ ಈ ಕಾಯ್ದೆಯ ಪರ ಮತ್ತು ವಿರೋಧ ನಿಲುವುಗಳು ವ್ಯಕ್ತವಾಗುತ್ತಿವೆ. ಬಹುಪಾಲು ಹಿರಿಯ ವಕೀಲರು ಈ ಕಾಯ್ದೆಗೆ ಕಾನೂನು ಮಾನ್ಯತೆಯಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಮಂಗಳೂರು ಗಲಭೆಯ ನಂತರ ಕರ್ನಾಟಕದಲ್ಲೂ ಇಂತಹ ಕಾಯ್ದೆ ತರುವುದಾಗಿ ಕೆಲವು ಸಚಿವರು ಹೇಳಿದರಾದರೂ, ಅಂತಿಮದಲ್ಲಿ ಸದ್ಯಕ್ಕೆ ಅಂತಹ ಕಾಯ್ದೆಯನ್ನು ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಈ ನಡುವೆಯೇ ಗಲಭೆ ಸಂಭವಿಸಿದ ಉತ್ತರಪ್ರದೇಶದ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳು 138 ಗಲಭೆಕೋರ ಆರೋಪಿಗಳಿಗೆ 50 ಲಕ್ಷ ರೂಪಾಯಿಗಳ ದಂಡ ಪಾವತಿಸುವಂತೆ ನೋಟಿಸ್‌ಗಳನ್ನು ನೀಡಿದ್ದಾರೆ. ಇದೇ ಹೊತ್ತಲ್ಲಿ ಗಲಭೆಕೋರರ ಆಸ್ತಿ-ಪಾಸ್ತಿ ಜಪ್ತಿ ಮಾಡಿ ಎಂದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಹೀಗಾಗಿ ಅಲ್ಲಿನ ಜಿಲ್ಲಾಡಳಿತಗಳು, ದಂಡ ಪಾವತಿಸಲು ವಿಫಲರಾದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಅಮನ್ ಲೇಖಿಯಂತಹ ಹಲವು ವಕೀಲರು ಈ ಕ್ರಮ ಸರಿಯಾಗಿದೆ ಎಂದು ಸಮರ್ಥಿಸುತ್ತಿದ್ದರೆ, ಬಹುಪಾಲು ವಕೀಲರು ಇದಕ್ಕೆ ಕಾನೂನಿನ ಮಾನ್ಯತೆ ಕಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುಪ್ರಿಂಕೋರ್ಟ್ ಹಿರಿಯ ವಕೀಲ ಸಂಜಯ ಹೆಗಡೆ ಪ್ರಕಾರ, ಆಸ್ತಿಪಾಸ್ತಿ ಹಾನಿ ಮಾಡಿದ ಆರೋಪ ಸಾಬೀತಾಗುವುದು ಕ್ರಿಮಿನಲ್ ವಿಚಾರಣೆಯ ಬಳಿಕವಷ್ಟೇ. ಕೇವಲ ಫೋಟೊ, ವಿಡಿಯೋ ತುಣುಕುಗಳ ಆಧಾರದಲ್ಲಿ ಗಲಭೆಕೋರ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕ್ರಮಕ್ಕೆ ಕಾನೂನು ಮಾನ್ಯತೆ ಸಿಗುವುದು ಸಂಶಯ. ಬಹುಷಃ ಸದ್ಯ ಜನರಲ್ಲಿ  ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಮತ್ತು ಪೊಲೀಸ್ ಗೋಲಿಬಾರ್ ವಿರುದ್ಧ ಇರುವ ಅಸಹನೆ ಮತ್ತು ಭಿನ್ನಮತವನ್ನು ಶಮನ ಮಾಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂತಹ ದಾರಿ ತುಳಿದಿರಬೇಕು ಎನ್ನುತ್ತಾರೆ.

ಸುಪ್ರಿಂಕೋರ್ಟಿನ ಇನ್ನೊಬ್ಬ ಹಿರಿಯ ವಕೀಲ ಸಿ.ಯು. ಸಿಂಗ್, ಈ ಕಾಯ್ದೆ ಸಂಪೂರ್ಣ ಅಸಾಂವಿಧಾನಿಕ. ಇದಕ್ಕೆ ಕಾನೂನಿನ ಮಾನ್ಯತೆ ಸಿಗದು. ಆರೋಪಿಗಳಿಗೆ ಮುಕ್ತ ವಿಚಾರಣೆಯ ಅವಕಾಶಕ್ಕೆ ಆಸ್ಪದವೇ ಇಲ್ಲದಂತೆ ಪೂರ್ವಗ್ರಹಪೀಡಿತ ನಿರ್ಧಾರದ ಆಧಾರದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದ ಅಸಾಧ್ಯ ಎನ್ನುತ್ತಾರೆ. ಪೊಲೀಸರೇ ಗಲಭೆಗೆ ಪ್ರಚೋದಿಸಿದ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ವಿಡಿಯೋಗಳೂ ಯುಟ್ಯಬ್‌ನಲ್ಲಿ ಹರಿದಾಡುತ್ತಿವೆ. ಹೀಗಾಗಿ ಕ್ರಿಮಿನಲ್ ವಿಚಾರಣೆಯಿಲ್ಲದೇ ಜನರನ್ನು ಗಲಭೆಕೋರರು, ಆಸ್ತಿಪಾಸ್ತಿಗೆ ಹಾನಿ ಮಾಡಿದವರು ಎಂದು ಪೂರ್ವಗ್ರಹದಿಂದ ನಿರ್ಧರಿಸಿ ಕ್ರಮ ಕೈಗೊಳ್ಳುವುದು ಅರಣ್ಯನ್ಯಾಯವಾಗುತ್ತದೆ ಎಂದಿದ್ದಾರೆ.

‘ಗಲಭೆ ಮತ್ತು ಹಿಂಸಾಚಾರ ಸಂಭವಿಸಿದಾಗ ಅದರಲ್ಲಿ ಭಾಗಿಯಾದವರಿಗಿಂತ ಮೊದಲು ಆಯೋಜಕರನ್ನೂ ವಿಚಾರಣೆಗೆ ಒಳಪಡಿಸಿ ಕ್ರಮ ಕೈಗೊಳ್ಳಬೇಕು ಎಂದು ಸುಪ್ರಿಂಕೋರ್ಟು ಹೇಳಿದೆ. ಪದ್ಮಾವತಿ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಸಂಭವಿಸಿದ ಗಲಭೆ ಪ್ರಕರಣಗಳಲ್ಲಿ ಆಯೋಜಕರನ್ನು ಮೊದಲು ಆರೋಪಿಗಳನ್ನಾಗಿ ಪರಿಗಣಿಸಲಾಗಿತ್ತು’ ಎಂದು ಸಿಂಗ್ ವಿವರಿಸುತ್ತಾರೆ.

ಇನ್ನೊಬ್ಬ ಹಿರಿಯ ವಕೀಲ ಮಹಮ್ಮದ್ ಪಾಷರವರ ಪ್ರಕಾರ, ‘ಈ ಕ್ರಮವು ಸಂವಿಧಾನ ಮತ್ತು ರೂಲ್ ಆಫ್ ಲಾಗಳನ್ನು ನಾಶ ಮಾಡುವ ಆರೆಸ್ಸೆಸ್‌ನ ಸಿದ್ದಾಂತದ ಭಾಗವಾಗಿದೆ. ಪೊಲೀಸರು ಕೇವಲ ಲಭ್ಯವಿರುವ ವಿಡಿಯೋಗಳ ಆಧಾರದಲ್ಲಿ ಜನರನ್ನು ಅಪರಾಧಿಗಳು ಎಂದು ನಿರ್ಧರಿಸುತ್ತಿದ್ದಾರೆ. ವಿಡಿಯೋಗಳ ಅಸಲೀತನವನ್ನು ಪರೀಕ್ಷಿಸುತ್ತಲೇ ಇಲ್ಲ. ಗಲಭೆಕೋರರು ಮಾತ್ರವಲ್ಲದೇ ಅಮಾಯಕರನ್ನು ವಿಚಾರಣೆಯಿಲ್ಲದೇ ಸಂಶಯಾತ್ಮಕ ಆರೋಪಿಗಳನ್ನು ಅಪರಾಧಿಗಳೆಂದು ನಿರ್ಧರಿಸಿ ಶಿಕ್ಷೆ ವಿಧಿಸುವುದು ಕ್ರೂರ ಮತ್ತು ಅಸಂವಿಧಾನಿಕವಾಗಿದೆ’…

ಬಹುಪಾಲು ಹಿರಿಯ ವಕೀಲರು ಇಂಥಹುದ್ದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಯೋಗಿ ಆದಿತ್ಯನಾಥರ ಹೊಸ ಕಾಯ್ದೆಗೆ ಕೋರ್ಟಿನಲ್ಲಿ ಮಾನ್ಯತೆ ಸಿಗಲಾರದು ಎನ್ನಲಾಗಿದೆ. ಸದ್ಯದ ಬಿಕ್ಕಟ್ಟು ಮತ್ತು ಜನರ ಪ್ರತಿರೋಧಗಳಿಂದ ಪಾರಾಗಲು ಈ ಕಾನೂನಾತ್ಮಕವಾಗಿ ಬೆನ್ನೆಲುಬಿಲ್ಲದ ಕಾಯ್ದೆಯನ್ನು ಜಾರಿಗೆ ತಂದು ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.
( ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...