Homeಚಳವಳಿಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು...

ಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು ಹೇಳುತ್ತಾರೆ??

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಾಗರಿಕ ಪೌರತ್ವ ತಿದ್ದುಪಡಿ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಹಿಂಸಾಚಾರ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿದ ನಂತರ ಅಲ್ಲಿನ ಸರ್ಕಾರ ‘ಗಲಭೆಕೋರರ’ ಆಸ್ತಿಪಾಸ್ತಿ ಮುಟ್ಟುಗೋಲು/ಜಪ್ತಿ ಮಾಡುವ ಕಾಯ್ದೆಯನ್ನು ಜಾರಿಗೆ ತಂದಿದೆ. ಗಲಭೆಕೋರರ ಆರೋಪ ಸಾಬೀತಾಗುವ ಮೊದಲೇ ಈ ಕ್ರಮ ಜರುಗಿಸಲು ಸಾಧ್ಯವೇ ಎಂಬ ಚರ್ಚೆಗಳೂ ಶುರುವಾಗಿವೆ. ವಕೀಲ ಸಮೂದಲ್ಲೇ ಈ ಕಾಯ್ದೆಯ ಪರ ಮತ್ತು ವಿರೋಧ ನಿಲುವುಗಳು ವ್ಯಕ್ತವಾಗುತ್ತಿವೆ. ಬಹುಪಾಲು ಹಿರಿಯ ವಕೀಲರು ಈ ಕಾಯ್ದೆಗೆ ಕಾನೂನು ಮಾನ್ಯತೆಯಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಮಂಗಳೂರು ಗಲಭೆಯ ನಂತರ ಕರ್ನಾಟಕದಲ್ಲೂ ಇಂತಹ ಕಾಯ್ದೆ ತರುವುದಾಗಿ ಕೆಲವು ಸಚಿವರು ಹೇಳಿದರಾದರೂ, ಅಂತಿಮದಲ್ಲಿ ಸದ್ಯಕ್ಕೆ ಅಂತಹ ಕಾಯ್ದೆಯನ್ನು ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಈ ನಡುವೆಯೇ ಗಲಭೆ ಸಂಭವಿಸಿದ ಉತ್ತರಪ್ರದೇಶದ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳು 138 ಗಲಭೆಕೋರ ಆರೋಪಿಗಳಿಗೆ 50 ಲಕ್ಷ ರೂಪಾಯಿಗಳ ದಂಡ ಪಾವತಿಸುವಂತೆ ನೋಟಿಸ್‌ಗಳನ್ನು ನೀಡಿದ್ದಾರೆ. ಇದೇ ಹೊತ್ತಲ್ಲಿ ಗಲಭೆಕೋರರ ಆಸ್ತಿ-ಪಾಸ್ತಿ ಜಪ್ತಿ ಮಾಡಿ ಎಂದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಹೀಗಾಗಿ ಅಲ್ಲಿನ ಜಿಲ್ಲಾಡಳಿತಗಳು, ದಂಡ ಪಾವತಿಸಲು ವಿಫಲರಾದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಅಮನ್ ಲೇಖಿಯಂತಹ ಹಲವು ವಕೀಲರು ಈ ಕ್ರಮ ಸರಿಯಾಗಿದೆ ಎಂದು ಸಮರ್ಥಿಸುತ್ತಿದ್ದರೆ, ಬಹುಪಾಲು ವಕೀಲರು ಇದಕ್ಕೆ ಕಾನೂನಿನ ಮಾನ್ಯತೆ ಕಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುಪ್ರಿಂಕೋರ್ಟ್ ಹಿರಿಯ ವಕೀಲ ಸಂಜಯ ಹೆಗಡೆ ಪ್ರಕಾರ, ಆಸ್ತಿಪಾಸ್ತಿ ಹಾನಿ ಮಾಡಿದ ಆರೋಪ ಸಾಬೀತಾಗುವುದು ಕ್ರಿಮಿನಲ್ ವಿಚಾರಣೆಯ ಬಳಿಕವಷ್ಟೇ. ಕೇವಲ ಫೋಟೊ, ವಿಡಿಯೋ ತುಣುಕುಗಳ ಆಧಾರದಲ್ಲಿ ಗಲಭೆಕೋರ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕ್ರಮಕ್ಕೆ ಕಾನೂನು ಮಾನ್ಯತೆ ಸಿಗುವುದು ಸಂಶಯ. ಬಹುಷಃ ಸದ್ಯ ಜನರಲ್ಲಿ  ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಮತ್ತು ಪೊಲೀಸ್ ಗೋಲಿಬಾರ್ ವಿರುದ್ಧ ಇರುವ ಅಸಹನೆ ಮತ್ತು ಭಿನ್ನಮತವನ್ನು ಶಮನ ಮಾಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂತಹ ದಾರಿ ತುಳಿದಿರಬೇಕು ಎನ್ನುತ್ತಾರೆ.

ಸುಪ್ರಿಂಕೋರ್ಟಿನ ಇನ್ನೊಬ್ಬ ಹಿರಿಯ ವಕೀಲ ಸಿ.ಯು. ಸಿಂಗ್, ಈ ಕಾಯ್ದೆ ಸಂಪೂರ್ಣ ಅಸಾಂವಿಧಾನಿಕ. ಇದಕ್ಕೆ ಕಾನೂನಿನ ಮಾನ್ಯತೆ ಸಿಗದು. ಆರೋಪಿಗಳಿಗೆ ಮುಕ್ತ ವಿಚಾರಣೆಯ ಅವಕಾಶಕ್ಕೆ ಆಸ್ಪದವೇ ಇಲ್ಲದಂತೆ ಪೂರ್ವಗ್ರಹಪೀಡಿತ ನಿರ್ಧಾರದ ಆಧಾರದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದ ಅಸಾಧ್ಯ ಎನ್ನುತ್ತಾರೆ. ಪೊಲೀಸರೇ ಗಲಭೆಗೆ ಪ್ರಚೋದಿಸಿದ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ವಿಡಿಯೋಗಳೂ ಯುಟ್ಯಬ್‌ನಲ್ಲಿ ಹರಿದಾಡುತ್ತಿವೆ. ಹೀಗಾಗಿ ಕ್ರಿಮಿನಲ್ ವಿಚಾರಣೆಯಿಲ್ಲದೇ ಜನರನ್ನು ಗಲಭೆಕೋರರು, ಆಸ್ತಿಪಾಸ್ತಿಗೆ ಹಾನಿ ಮಾಡಿದವರು ಎಂದು ಪೂರ್ವಗ್ರಹದಿಂದ ನಿರ್ಧರಿಸಿ ಕ್ರಮ ಕೈಗೊಳ್ಳುವುದು ಅರಣ್ಯನ್ಯಾಯವಾಗುತ್ತದೆ ಎಂದಿದ್ದಾರೆ.

‘ಗಲಭೆ ಮತ್ತು ಹಿಂಸಾಚಾರ ಸಂಭವಿಸಿದಾಗ ಅದರಲ್ಲಿ ಭಾಗಿಯಾದವರಿಗಿಂತ ಮೊದಲು ಆಯೋಜಕರನ್ನೂ ವಿಚಾರಣೆಗೆ ಒಳಪಡಿಸಿ ಕ್ರಮ ಕೈಗೊಳ್ಳಬೇಕು ಎಂದು ಸುಪ್ರಿಂಕೋರ್ಟು ಹೇಳಿದೆ. ಪದ್ಮಾವತಿ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಸಂಭವಿಸಿದ ಗಲಭೆ ಪ್ರಕರಣಗಳಲ್ಲಿ ಆಯೋಜಕರನ್ನು ಮೊದಲು ಆರೋಪಿಗಳನ್ನಾಗಿ ಪರಿಗಣಿಸಲಾಗಿತ್ತು’ ಎಂದು ಸಿಂಗ್ ವಿವರಿಸುತ್ತಾರೆ.

ಇನ್ನೊಬ್ಬ ಹಿರಿಯ ವಕೀಲ ಮಹಮ್ಮದ್ ಪಾಷರವರ ಪ್ರಕಾರ, ‘ಈ ಕ್ರಮವು ಸಂವಿಧಾನ ಮತ್ತು ರೂಲ್ ಆಫ್ ಲಾಗಳನ್ನು ನಾಶ ಮಾಡುವ ಆರೆಸ್ಸೆಸ್‌ನ ಸಿದ್ದಾಂತದ ಭಾಗವಾಗಿದೆ. ಪೊಲೀಸರು ಕೇವಲ ಲಭ್ಯವಿರುವ ವಿಡಿಯೋಗಳ ಆಧಾರದಲ್ಲಿ ಜನರನ್ನು ಅಪರಾಧಿಗಳು ಎಂದು ನಿರ್ಧರಿಸುತ್ತಿದ್ದಾರೆ. ವಿಡಿಯೋಗಳ ಅಸಲೀತನವನ್ನು ಪರೀಕ್ಷಿಸುತ್ತಲೇ ಇಲ್ಲ. ಗಲಭೆಕೋರರು ಮಾತ್ರವಲ್ಲದೇ ಅಮಾಯಕರನ್ನು ವಿಚಾರಣೆಯಿಲ್ಲದೇ ಸಂಶಯಾತ್ಮಕ ಆರೋಪಿಗಳನ್ನು ಅಪರಾಧಿಗಳೆಂದು ನಿರ್ಧರಿಸಿ ಶಿಕ್ಷೆ ವಿಧಿಸುವುದು ಕ್ರೂರ ಮತ್ತು ಅಸಂವಿಧಾನಿಕವಾಗಿದೆ’…

ಬಹುಪಾಲು ಹಿರಿಯ ವಕೀಲರು ಇಂಥಹುದ್ದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಯೋಗಿ ಆದಿತ್ಯನಾಥರ ಹೊಸ ಕಾಯ್ದೆಗೆ ಕೋರ್ಟಿನಲ್ಲಿ ಮಾನ್ಯತೆ ಸಿಗಲಾರದು ಎನ್ನಲಾಗಿದೆ. ಸದ್ಯದ ಬಿಕ್ಕಟ್ಟು ಮತ್ತು ಜನರ ಪ್ರತಿರೋಧಗಳಿಂದ ಪಾರಾಗಲು ಈ ಕಾನೂನಾತ್ಮಕವಾಗಿ ಬೆನ್ನೆಲುಬಿಲ್ಲದ ಕಾಯ್ದೆಯನ್ನು ಜಾರಿಗೆ ತಂದು ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.
( ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...