Homeಚಳವಳಿಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು...

ಗಲಭೆಕೋರರ ಆಸ್ತಿ ಜಪ್ತಿ ಕಾಯ್ದೆ : ಕಾನೂನಿನ ಮಾನ್ಯತೆ ಇದೆಯೇ? ಸುಪ್ರೀಂ ಕೋರ್ಟ್‌ ವಕೀಲರು ಏನು ಹೇಳುತ್ತಾರೆ??

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಾಗರಿಕ ಪೌರತ್ವ ತಿದ್ದುಪಡಿ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಹಿಂಸಾಚಾರ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿದ ನಂತರ ಅಲ್ಲಿನ ಸರ್ಕಾರ ‘ಗಲಭೆಕೋರರ’ ಆಸ್ತಿಪಾಸ್ತಿ ಮುಟ್ಟುಗೋಲು/ಜಪ್ತಿ ಮಾಡುವ ಕಾಯ್ದೆಯನ್ನು ಜಾರಿಗೆ ತಂದಿದೆ. ಗಲಭೆಕೋರರ ಆರೋಪ ಸಾಬೀತಾಗುವ ಮೊದಲೇ ಈ ಕ್ರಮ ಜರುಗಿಸಲು ಸಾಧ್ಯವೇ ಎಂಬ ಚರ್ಚೆಗಳೂ ಶುರುವಾಗಿವೆ. ವಕೀಲ ಸಮೂದಲ್ಲೇ ಈ ಕಾಯ್ದೆಯ ಪರ ಮತ್ತು ವಿರೋಧ ನಿಲುವುಗಳು ವ್ಯಕ್ತವಾಗುತ್ತಿವೆ. ಬಹುಪಾಲು ಹಿರಿಯ ವಕೀಲರು ಈ ಕಾಯ್ದೆಗೆ ಕಾನೂನು ಮಾನ್ಯತೆಯಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಮಂಗಳೂರು ಗಲಭೆಯ ನಂತರ ಕರ್ನಾಟಕದಲ್ಲೂ ಇಂತಹ ಕಾಯ್ದೆ ತರುವುದಾಗಿ ಕೆಲವು ಸಚಿವರು ಹೇಳಿದರಾದರೂ, ಅಂತಿಮದಲ್ಲಿ ಸದ್ಯಕ್ಕೆ ಅಂತಹ ಕಾಯ್ದೆಯನ್ನು ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಈ ನಡುವೆಯೇ ಗಲಭೆ ಸಂಭವಿಸಿದ ಉತ್ತರಪ್ರದೇಶದ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳು 138 ಗಲಭೆಕೋರ ಆರೋಪಿಗಳಿಗೆ 50 ಲಕ್ಷ ರೂಪಾಯಿಗಳ ದಂಡ ಪಾವತಿಸುವಂತೆ ನೋಟಿಸ್‌ಗಳನ್ನು ನೀಡಿದ್ದಾರೆ. ಇದೇ ಹೊತ್ತಲ್ಲಿ ಗಲಭೆಕೋರರ ಆಸ್ತಿ-ಪಾಸ್ತಿ ಜಪ್ತಿ ಮಾಡಿ ಎಂದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಹೀಗಾಗಿ ಅಲ್ಲಿನ ಜಿಲ್ಲಾಡಳಿತಗಳು, ದಂಡ ಪಾವತಿಸಲು ವಿಫಲರಾದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಅಮನ್ ಲೇಖಿಯಂತಹ ಹಲವು ವಕೀಲರು ಈ ಕ್ರಮ ಸರಿಯಾಗಿದೆ ಎಂದು ಸಮರ್ಥಿಸುತ್ತಿದ್ದರೆ, ಬಹುಪಾಲು ವಕೀಲರು ಇದಕ್ಕೆ ಕಾನೂನಿನ ಮಾನ್ಯತೆ ಕಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುಪ್ರಿಂಕೋರ್ಟ್ ಹಿರಿಯ ವಕೀಲ ಸಂಜಯ ಹೆಗಡೆ ಪ್ರಕಾರ, ಆಸ್ತಿಪಾಸ್ತಿ ಹಾನಿ ಮಾಡಿದ ಆರೋಪ ಸಾಬೀತಾಗುವುದು ಕ್ರಿಮಿನಲ್ ವಿಚಾರಣೆಯ ಬಳಿಕವಷ್ಟೇ. ಕೇವಲ ಫೋಟೊ, ವಿಡಿಯೋ ತುಣುಕುಗಳ ಆಧಾರದಲ್ಲಿ ಗಲಭೆಕೋರ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕ್ರಮಕ್ಕೆ ಕಾನೂನು ಮಾನ್ಯತೆ ಸಿಗುವುದು ಸಂಶಯ. ಬಹುಷಃ ಸದ್ಯ ಜನರಲ್ಲಿ  ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಮತ್ತು ಪೊಲೀಸ್ ಗೋಲಿಬಾರ್ ವಿರುದ್ಧ ಇರುವ ಅಸಹನೆ ಮತ್ತು ಭಿನ್ನಮತವನ್ನು ಶಮನ ಮಾಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂತಹ ದಾರಿ ತುಳಿದಿರಬೇಕು ಎನ್ನುತ್ತಾರೆ.

ಸುಪ್ರಿಂಕೋರ್ಟಿನ ಇನ್ನೊಬ್ಬ ಹಿರಿಯ ವಕೀಲ ಸಿ.ಯು. ಸಿಂಗ್, ಈ ಕಾಯ್ದೆ ಸಂಪೂರ್ಣ ಅಸಾಂವಿಧಾನಿಕ. ಇದಕ್ಕೆ ಕಾನೂನಿನ ಮಾನ್ಯತೆ ಸಿಗದು. ಆರೋಪಿಗಳಿಗೆ ಮುಕ್ತ ವಿಚಾರಣೆಯ ಅವಕಾಶಕ್ಕೆ ಆಸ್ಪದವೇ ಇಲ್ಲದಂತೆ ಪೂರ್ವಗ್ರಹಪೀಡಿತ ನಿರ್ಧಾರದ ಆಧಾರದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದ ಅಸಾಧ್ಯ ಎನ್ನುತ್ತಾರೆ. ಪೊಲೀಸರೇ ಗಲಭೆಗೆ ಪ್ರಚೋದಿಸಿದ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ವಿಡಿಯೋಗಳೂ ಯುಟ್ಯಬ್‌ನಲ್ಲಿ ಹರಿದಾಡುತ್ತಿವೆ. ಹೀಗಾಗಿ ಕ್ರಿಮಿನಲ್ ವಿಚಾರಣೆಯಿಲ್ಲದೇ ಜನರನ್ನು ಗಲಭೆಕೋರರು, ಆಸ್ತಿಪಾಸ್ತಿಗೆ ಹಾನಿ ಮಾಡಿದವರು ಎಂದು ಪೂರ್ವಗ್ರಹದಿಂದ ನಿರ್ಧರಿಸಿ ಕ್ರಮ ಕೈಗೊಳ್ಳುವುದು ಅರಣ್ಯನ್ಯಾಯವಾಗುತ್ತದೆ ಎಂದಿದ್ದಾರೆ.

‘ಗಲಭೆ ಮತ್ತು ಹಿಂಸಾಚಾರ ಸಂಭವಿಸಿದಾಗ ಅದರಲ್ಲಿ ಭಾಗಿಯಾದವರಿಗಿಂತ ಮೊದಲು ಆಯೋಜಕರನ್ನೂ ವಿಚಾರಣೆಗೆ ಒಳಪಡಿಸಿ ಕ್ರಮ ಕೈಗೊಳ್ಳಬೇಕು ಎಂದು ಸುಪ್ರಿಂಕೋರ್ಟು ಹೇಳಿದೆ. ಪದ್ಮಾವತಿ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಸಂಭವಿಸಿದ ಗಲಭೆ ಪ್ರಕರಣಗಳಲ್ಲಿ ಆಯೋಜಕರನ್ನು ಮೊದಲು ಆರೋಪಿಗಳನ್ನಾಗಿ ಪರಿಗಣಿಸಲಾಗಿತ್ತು’ ಎಂದು ಸಿಂಗ್ ವಿವರಿಸುತ್ತಾರೆ.

ಇನ್ನೊಬ್ಬ ಹಿರಿಯ ವಕೀಲ ಮಹಮ್ಮದ್ ಪಾಷರವರ ಪ್ರಕಾರ, ‘ಈ ಕ್ರಮವು ಸಂವಿಧಾನ ಮತ್ತು ರೂಲ್ ಆಫ್ ಲಾಗಳನ್ನು ನಾಶ ಮಾಡುವ ಆರೆಸ್ಸೆಸ್‌ನ ಸಿದ್ದಾಂತದ ಭಾಗವಾಗಿದೆ. ಪೊಲೀಸರು ಕೇವಲ ಲಭ್ಯವಿರುವ ವಿಡಿಯೋಗಳ ಆಧಾರದಲ್ಲಿ ಜನರನ್ನು ಅಪರಾಧಿಗಳು ಎಂದು ನಿರ್ಧರಿಸುತ್ತಿದ್ದಾರೆ. ವಿಡಿಯೋಗಳ ಅಸಲೀತನವನ್ನು ಪರೀಕ್ಷಿಸುತ್ತಲೇ ಇಲ್ಲ. ಗಲಭೆಕೋರರು ಮಾತ್ರವಲ್ಲದೇ ಅಮಾಯಕರನ್ನು ವಿಚಾರಣೆಯಿಲ್ಲದೇ ಸಂಶಯಾತ್ಮಕ ಆರೋಪಿಗಳನ್ನು ಅಪರಾಧಿಗಳೆಂದು ನಿರ್ಧರಿಸಿ ಶಿಕ್ಷೆ ವಿಧಿಸುವುದು ಕ್ರೂರ ಮತ್ತು ಅಸಂವಿಧಾನಿಕವಾಗಿದೆ’…

ಬಹುಪಾಲು ಹಿರಿಯ ವಕೀಲರು ಇಂಥಹುದ್ದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಯೋಗಿ ಆದಿತ್ಯನಾಥರ ಹೊಸ ಕಾಯ್ದೆಗೆ ಕೋರ್ಟಿನಲ್ಲಿ ಮಾನ್ಯತೆ ಸಿಗಲಾರದು ಎನ್ನಲಾಗಿದೆ. ಸದ್ಯದ ಬಿಕ್ಕಟ್ಟು ಮತ್ತು ಜನರ ಪ್ರತಿರೋಧಗಳಿಂದ ಪಾರಾಗಲು ಈ ಕಾನೂನಾತ್ಮಕವಾಗಿ ಬೆನ್ನೆಲುಬಿಲ್ಲದ ಕಾಯ್ದೆಯನ್ನು ಜಾರಿಗೆ ತಂದು ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.
( ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...