Homeಮುಖಪುಟಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

- Advertisement -
- Advertisement -

ಹರಿದ ಜೀನ್ಸ್ ಧರಿಸುವುದು ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡಲು ದಾರಿ ಮಾಡಿಕೊಡುತ್ತದೆ. ಇಂದಿನ ಪೋಷಕರು ಮಕ್ಕಳಿಗಾಗಿ ರೂಪಿಸಿರುವ “ಕೆಟ್ಟ ಉದಾಹರಣೆಯ” ಪರಿಣಾಮವಾಗಿದೆ. ಇದರಿಂದ ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ​​ಸಿಂಗ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಗಳವಾರ ಡೆಹರಾಡೂನ್‌ನಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ರಾಜ್ಯ ಆಯೋಗ ಆಯೋಜಿಸಿದ್ದ ಎರಡು ದಿನಗಳ ಕಾರ್ಯಾಗಾರ ಮಾದಕ ದ್ರವ್ಯ ಸೇವನೆ ಕುರಿತ ಕಾರ್ಯಾಗಾರದಲ್ಲಿ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಮಾತನಾಡಿದ್ದಾರೆ.

“ಬರೀ ಮೊಣಕಾಲುಗಳನ್ನು ತೋರಿಸುವುದು, ಹರಿದ ಡೆನಿಮ್ ಬಟ್ಟೆಗಳನ್ನು ಧರಿಸಿ ಶ್ರೀಮಂತ ಮಕ್ಕಳಂತೆ ಕಾಣುವುದು, ಇಂತಹ ವಿಷಯಗಳನ್ನು ಇಂದು ಮನೆಗಳಲ್ಲಿ ಕಲಿಸಲಾಗುತ್ತಿದೆ. ಇವುಗಳೆಲ್ಲ ಮನೆಯಿಂದಲೇ ಆರಂಭವಾಗುತ್ತದೆ. ಇರದಲ್ಲಿ ಶಾಲೆ ಮತ್ತು ಶಿಕ್ಷಕರ ತಪ್ಪಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ‘ಭವಿಷ್ಯದಲ್ಲಿ ಮೋದಿ ಕೂಡಾ ರಾಮನ ಅವತಾರ’- ಉತ್ತಾರಾಖಂಡ‌ ಸಿಎಂ

’ನಾನು ನನ್ನ ಮಗನನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೇನೆ, ನಾನು ನನ್ನ ಮೊಣಕಾಲುಗಳನ್ನು ತೋರಿಸುತ್ತಿದ್ದೇನೆಯೇ..? ಯಾಕೆ ಹರಿದ ಜೀನ್ಸ್ ಧರಿಸಿದ್ದೇನೆ? ಎಂಬುದನ್ನು ಪೋಷಕರು ಯೋಚಿಸಬೇಕು. ತಮ್ಮ ಮೊಣಕಾಲುಗಳನ್ನು ತೋರಿಸಿಕೊಂಡು ಹೋಗುವುದರಲ್ಲಿ ಹುಡುಗಿಯರು ಕಡಿಮೆ ಇಲ್ಲ ಎಂದಿದ್ದಾರೆ.

’ಇವೆಲ್ಲವೂ, ಪಾಶ್ಚಿಮಾತ್ಯೀಕರಣದ ಹುಚ್ಚು ಅನುಕರಣೆಯಿಂದ ಬಂದಿದೆ. ಪಾಶ್ಚಾತ್ಯ ಜಗತ್ತು ಯೋಗ ಮಾಡುತ್ತಾ, ದೇಹವನ್ನು ಮುಚ್ಚಿಕೊಳ್ಳುತ್ತಾ ನಮ್ಮನ್ನು ಹಿಂಬಾಲಿಸುತ್ತಿರುವಾಗ ನಾವು ನಗ್ನತೆಯತ್ತ ಓಡುತ್ತಿದ್ದೇವೆ’ ಎಂದು ನೂತನ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಹರಿದ ಜೀನ್ಸ್ ಧರಿಸಿ ಎನ್‌ಜಿಒ ನಡೆಸುತ್ತಿದ್ದ ಮಹಿಳೆಯನ್ನು ಭೇಟಿಯಾಗಿ ತಾನು ಆಘಾತಕ್ಕೊಳಗಾಗಿದ್ದೇನೆ ಎಂದು ಸಿಎಂ ಹೇಳಿದ್ದಾರೆ. “ಈ ರೀತಿಯ ಮಹಿಳೆಯರು ಸಮಾಜದಲ್ಲಿ ಜನರನ್ನು ಭೇಟಿ ಮಾಡಲು, ಅವರ ಸಮಸ್ಯೆಗಳನ್ನು ಪರಿಹರಿಸಲು ಹೊರಟರೆ, ನಾವು ಸಮಾಜಕ್ಕೆ, ನಮ್ಮ ಮಕ್ಕಳಿಗೆ ಯಾವ ರೀತಿಯ ಸಂದೇಶವನ್ನು ನೀಡಲು ಸಾಧ್ಯ? ಇದು ಮನೆಯಲ್ಲಿಯೇ ಪ್ರಾರಂಭವಾಗುತ್ತದೆ. ನಾವು ಏನು ಮಾಡುತ್ತೇವೆಯೋ ಅದನ್ನು ನಮ್ಮ ಮಕ್ಕಳೂ ಅನುಸರಿಸುತ್ತಾರೆ” ಎಂದು ಹೆಣ್ಣು ಮಕ್ಕಳ ಬಟ್ಟೆ ಆಯ್ಕೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಹೇಳಿಕೆಗೆ ಹಲವು ಮಂದಿ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ನಾಯಕ ಸಂಜಯ್ ಝಾ ಕೂಡ ಪ್ರತಿಕ್ರಿಯೆ ನೀಡಿದ್ದು, ತಿರಥ್ ಸಿಂಗ್ ರಾವತ್ ಮಾತನ್ನು ನೀವು ಅನುಮೋದಿಸುತ್ತಿರಾ ಎಂದು ಪ್ರಶ್ನಿಸಿದ್ದಾರೆ.

ಹರಿದ ಜೀನ್ಸ್ ಧರಿಸುವುದರಿಂದ ನಮ್ಮ ಸಂಸ್ಕೃತಿಯನ್ನು ಹಾಳುಮಾಡುತ್ತದೆ ಎಂದು ತೋರುತ್ತದೆ. ಇದು ಮಾದಕ ವಸ್ತು ಸೇವನೆಗೆ ಕಾರಣವಾಗುತ್ತದೆ ಎಂಬ ಉತ್ತರಾಖಂಡ ಸಿಎಂ ಮಾತುಗಳನ್ನು ಉಲ್ಲೇಖಿಸಿ, ಹರಿದ ಜೀನ್ಸ್ ಧರಿಸಿ ಪುಸ್ತಕ ಹಿಡಿದುಕೊಂಡಿರುವ ವ್ಯಕ್ತಿಯ ಚಿತ್ರವನ್ನು ಪೊಸ್ಟ್ ಮಾಡಿದ್ದಾರೆ.

ತಿರಥ್ ಸಿಂಗ್ ರಾವತ್, ಮಾರ್ಚ್ 11 ರಂದು ಉತ್ತರಾಖಂಡದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಾರ್ಚ್ 9 ರಂದು ಅಲ್ಲಿನ ಮುಖ್ಯಮಂತ್ರಿಯಾಗಿದ್ದ ತ್ರಿವೇಂದ್ರ ಸಿಂಗ್ ರಾವತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.


ಇದನ್ನೂ ಓದಿ: ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...