Homeಮುಖಪುಟಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

- Advertisement -
- Advertisement -

ಹರಿದ ಜೀನ್ಸ್ ಧರಿಸುವುದು ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡಲು ದಾರಿ ಮಾಡಿಕೊಡುತ್ತದೆ. ಇಂದಿನ ಪೋಷಕರು ಮಕ್ಕಳಿಗಾಗಿ ರೂಪಿಸಿರುವ “ಕೆಟ್ಟ ಉದಾಹರಣೆಯ” ಪರಿಣಾಮವಾಗಿದೆ. ಇದರಿಂದ ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ​​ಸಿಂಗ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಗಳವಾರ ಡೆಹರಾಡೂನ್‌ನಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ರಾಜ್ಯ ಆಯೋಗ ಆಯೋಜಿಸಿದ್ದ ಎರಡು ದಿನಗಳ ಕಾರ್ಯಾಗಾರ ಮಾದಕ ದ್ರವ್ಯ ಸೇವನೆ ಕುರಿತ ಕಾರ್ಯಾಗಾರದಲ್ಲಿ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಮಾತನಾಡಿದ್ದಾರೆ.

“ಬರೀ ಮೊಣಕಾಲುಗಳನ್ನು ತೋರಿಸುವುದು, ಹರಿದ ಡೆನಿಮ್ ಬಟ್ಟೆಗಳನ್ನು ಧರಿಸಿ ಶ್ರೀಮಂತ ಮಕ್ಕಳಂತೆ ಕಾಣುವುದು, ಇಂತಹ ವಿಷಯಗಳನ್ನು ಇಂದು ಮನೆಗಳಲ್ಲಿ ಕಲಿಸಲಾಗುತ್ತಿದೆ. ಇವುಗಳೆಲ್ಲ ಮನೆಯಿಂದಲೇ ಆರಂಭವಾಗುತ್ತದೆ. ಇರದಲ್ಲಿ ಶಾಲೆ ಮತ್ತು ಶಿಕ್ಷಕರ ತಪ್ಪಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ‘ಭವಿಷ್ಯದಲ್ಲಿ ಮೋದಿ ಕೂಡಾ ರಾಮನ ಅವತಾರ’- ಉತ್ತಾರಾಖಂಡ‌ ಸಿಎಂ

’ನಾನು ನನ್ನ ಮಗನನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೇನೆ, ನಾನು ನನ್ನ ಮೊಣಕಾಲುಗಳನ್ನು ತೋರಿಸುತ್ತಿದ್ದೇನೆಯೇ..? ಯಾಕೆ ಹರಿದ ಜೀನ್ಸ್ ಧರಿಸಿದ್ದೇನೆ? ಎಂಬುದನ್ನು ಪೋಷಕರು ಯೋಚಿಸಬೇಕು. ತಮ್ಮ ಮೊಣಕಾಲುಗಳನ್ನು ತೋರಿಸಿಕೊಂಡು ಹೋಗುವುದರಲ್ಲಿ ಹುಡುಗಿಯರು ಕಡಿಮೆ ಇಲ್ಲ ಎಂದಿದ್ದಾರೆ.

’ಇವೆಲ್ಲವೂ, ಪಾಶ್ಚಿಮಾತ್ಯೀಕರಣದ ಹುಚ್ಚು ಅನುಕರಣೆಯಿಂದ ಬಂದಿದೆ. ಪಾಶ್ಚಾತ್ಯ ಜಗತ್ತು ಯೋಗ ಮಾಡುತ್ತಾ, ದೇಹವನ್ನು ಮುಚ್ಚಿಕೊಳ್ಳುತ್ತಾ ನಮ್ಮನ್ನು ಹಿಂಬಾಲಿಸುತ್ತಿರುವಾಗ ನಾವು ನಗ್ನತೆಯತ್ತ ಓಡುತ್ತಿದ್ದೇವೆ’ ಎಂದು ನೂತನ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಹರಿದ ಜೀನ್ಸ್ ಧರಿಸಿ ಎನ್‌ಜಿಒ ನಡೆಸುತ್ತಿದ್ದ ಮಹಿಳೆಯನ್ನು ಭೇಟಿಯಾಗಿ ತಾನು ಆಘಾತಕ್ಕೊಳಗಾಗಿದ್ದೇನೆ ಎಂದು ಸಿಎಂ ಹೇಳಿದ್ದಾರೆ. “ಈ ರೀತಿಯ ಮಹಿಳೆಯರು ಸಮಾಜದಲ್ಲಿ ಜನರನ್ನು ಭೇಟಿ ಮಾಡಲು, ಅವರ ಸಮಸ್ಯೆಗಳನ್ನು ಪರಿಹರಿಸಲು ಹೊರಟರೆ, ನಾವು ಸಮಾಜಕ್ಕೆ, ನಮ್ಮ ಮಕ್ಕಳಿಗೆ ಯಾವ ರೀತಿಯ ಸಂದೇಶವನ್ನು ನೀಡಲು ಸಾಧ್ಯ? ಇದು ಮನೆಯಲ್ಲಿಯೇ ಪ್ರಾರಂಭವಾಗುತ್ತದೆ. ನಾವು ಏನು ಮಾಡುತ್ತೇವೆಯೋ ಅದನ್ನು ನಮ್ಮ ಮಕ್ಕಳೂ ಅನುಸರಿಸುತ್ತಾರೆ” ಎಂದು ಹೆಣ್ಣು ಮಕ್ಕಳ ಬಟ್ಟೆ ಆಯ್ಕೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಹೇಳಿಕೆಗೆ ಹಲವು ಮಂದಿ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ನಾಯಕ ಸಂಜಯ್ ಝಾ ಕೂಡ ಪ್ರತಿಕ್ರಿಯೆ ನೀಡಿದ್ದು, ತಿರಥ್ ಸಿಂಗ್ ರಾವತ್ ಮಾತನ್ನು ನೀವು ಅನುಮೋದಿಸುತ್ತಿರಾ ಎಂದು ಪ್ರಶ್ನಿಸಿದ್ದಾರೆ.

ಹರಿದ ಜೀನ್ಸ್ ಧರಿಸುವುದರಿಂದ ನಮ್ಮ ಸಂಸ್ಕೃತಿಯನ್ನು ಹಾಳುಮಾಡುತ್ತದೆ ಎಂದು ತೋರುತ್ತದೆ. ಇದು ಮಾದಕ ವಸ್ತು ಸೇವನೆಗೆ ಕಾರಣವಾಗುತ್ತದೆ ಎಂಬ ಉತ್ತರಾಖಂಡ ಸಿಎಂ ಮಾತುಗಳನ್ನು ಉಲ್ಲೇಖಿಸಿ, ಹರಿದ ಜೀನ್ಸ್ ಧರಿಸಿ ಪುಸ್ತಕ ಹಿಡಿದುಕೊಂಡಿರುವ ವ್ಯಕ್ತಿಯ ಚಿತ್ರವನ್ನು ಪೊಸ್ಟ್ ಮಾಡಿದ್ದಾರೆ.

ತಿರಥ್ ಸಿಂಗ್ ರಾವತ್, ಮಾರ್ಚ್ 11 ರಂದು ಉತ್ತರಾಖಂಡದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಾರ್ಚ್ 9 ರಂದು ಅಲ್ಲಿನ ಮುಖ್ಯಮಂತ್ರಿಯಾಗಿದ್ದ ತ್ರಿವೇಂದ್ರ ಸಿಂಗ್ ರಾವತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.


ಇದನ್ನೂ ಓದಿ: ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...