Homeಮುಖಪುಟಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಲಾಕ್‌ಡೌನ್ ಅವಧಿಯಲ್ಲಿ ಬಾಲ್ಯ ವಿವಾಹದ ಕುರಿತು ಸಂಗ್ರಹಿಸಿದ ಡೇಟಾವನ್ನು ಎನ್‌ಸಿಆರ್‌ಬಿ ಹೊಂದಿಲ್ಲ ಮತ್ತು ಅದು ಲಭ್ಯವಿಲ್ಲ ಎಂದು ಸಚಿವಾಲಯ ತಿಳಿಸಿದೆ.

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ (ಜೂನ್ ನಿಂದ ಅಕ್ಟೋಬರ್ ತಿಂಗಳ ನಡುವೆ) ಬಾಲ್ಯ ವಿವಾಹಗಳ ಸಂಖ್ಯೆ 33% ಗಿಂತ ಹೆಚ್ಚಾಗಿದೆ. ಅದರಲ್ಲೂ ಆಗಸ್ಟ್ ತಿಂಗಳಲ್ಲೇ 88% ಬಾಲ್ಯವಿವಾಹಗಳು ನಡೆದಿವೆ ಎಂದು ಆರ್‌ಟಿಐ ವರದಿ ಉಲ್ಲೇಖಿಸಿ ದಿ ವೈರ್‌ನ ವರದಿ ಮಾಡಿದೆ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ಮತ್ತು ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್‌ಗೆ (ಸಿಐಎಫ್) ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ಲಾಕ್‌ಡೌನ್ ನಲ್ಲಿ ಬಾಲ್ಯವಿವಾಹಕ್ಕೆ ಒಳಗಾದವರ ಬಗ್ಗೆ ಮಾಹಿತಿ ದೊರೆತಿದೆ. ಆದರೂ ಕೂಡ, 2020 ರ ಸೆಪ್ಟೆಂಬರ್‌ನಲ್ಲಿ ನಡೆದ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ, ರಾಜ್ಯಸಭಾ ಸಂಸದ ಅಮನ್ ಪಟ್ನಾಯಕ್ ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳ ಬಗ್ಗೆ ಸರ್ಕಾರಕ್ಕೆ ಪ್ರಶ್ನಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, “ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಯಿಂದ ಪಡೆದ ಮಾಹಿತಿಯ ಪ್ರಕಾರ, ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳನ್ನು ಸೂಚಿಸಲು ಯಾವುದೇ ಮಾಹಿತಿಯಿಲ್ಲ” ಎಂದಿದ್ದರು.

ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ಸಚಿವಾಲಯದ ಮುಂದೆ ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ನಾಲ್ಕು ವಿಚಾರಗಳಿಗೆ ಸಂಬಂಧಿಸಿದಂತೆ ಉತ್ತರವನ್ನು ಬಯಸಿತ್ತು..

1. 2020 ರ ಏಪ್ರಿಲ್ 1 ರಿಂದ 2020 ರ ಅಕ್ಟೋಬರ್ 31 ರವರೆಗೆ ಪ್ರತಿ ತಿಂಗಳು ಬಾಲ್ಯವಿವಾಹದ ಘಟನೆಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸ್ವೀಕರಿಸುವ ರಾಜ್ಯವಾರು ದೂರುಗಳ ಮಾಹಿತಿ. 

2. 2019 ರ ಏಪ್ರಿಲ್ 1 ರಿಂದ 2019 ರ ಅಕ್ಟೋಬರ್ 31 ರವರೆಗೆ ಪ್ರತಿ ತಿಂಗಳು ಬಾಲ್ಯವಿವಾಹದ ಘಟನೆಗಳ ಬಗ್ಗೆ ಸಚಿವಾಲಯವು ಸ್ವೀಕರಿಸುವ ರಾಜ್ಯವಾರು ದೂರುಗಳ ಮಾಹಿತಿ.

3. ಬಾಲ್ಯ ವಿವಾಹಗಳ ಘಟನೆಗಳ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ 2020 ರ ಏಪ್ರಿಲ್ 1 ರಿಂದ 2020 ರ ಸೆಪ್ಟೆಂಬರ್ 17 ರವರೆಗೆ ದೊರೆತಿರುವ ಮಾಹಿತಿ ಬಗ್ಗೆ ವಿವರಿಸಿ.

4. 2020 ರ ಏಪ್ರಿಲ್ 1 ರಿಂದ 2020 ರ ಸೆಪ್ಟೆಂಬರ್ 17 ರ ನಡುವಿನ ಬಾಲ್ಯ ವಿವಾಹಗಳ ಘಟನೆಗಳ ಬಗ್ಗೆ ಬಂದಿರುವ ಮಾಹಿತಿಯನ್ನು ರಾಜ್ಯಸಭಾದಲ್ಲಿ ಬಳಸದಿರುವ ಬಗ್ಗೆ ಮಾಹಿತಿ ಕೊರಲಾಗಿತ್ತು.

ಸಚಿವಾಲಯವು ಆರಂಭದಲ್ಲಿ ಈ ಪ್ರಶ್ನೆಗಳಿಗೆ “ಈ ವಿಭಾಗದಲ್ಲಿ ಲಭ್ಯವಿಲ್ಲ” ಎಂದು ಹೇಳಿ, ಮೊದಲ ಮೂರು ಪ್ರಶ್ನೆಗಳನ್ನು ಎನ್‌ಸಿಆರ್‌ಬಿಗೆ ವರ್ಗಾಯಿಸಿತು. ಕುತೂಹಲಕಾರಿಯಾಗಿ, ಮೂರನೆಯ ಪ್ರಶ್ನೆ ನಿರ್ದಿಷ್ಟವಾಗಿ ಇರಾನಿ ಮತ್ತು ಸಚಿವಾಲಯಕ್ಕೆ ಸಂಬಂಧಿಸಿದೆ, ಆದರೆ ಸಚಿವಾಲಯ ಅದನ್ನು ಎನ್‌ಸಿಆರ್‌ಬಿಗೆ ವರ್ಗಾಯಿಸಿತು. ನಾಲ್ಕನೆಯ ಪ್ರಶ್ನೆಗೆ, ಸಚಿವಾಲಯವು “ಮಕ್ಕಳ ಕಲ್ಯಾಣ ವಿಭಾಗಕ್ಕೆ ಸಂಬಂಧಿಸಿಲ್ಲ” ಎಂದು ಹೇಳಿದೆ.

ಮೇಲ್ಮನವಿಯ ಮೇರೆಗೆ, ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್‌ಗೆ (ಸಿಐಎಫ್) ಅರ್ಜಿ ಕಳುಹಿಸಲಾಗಿತ್ತು. ಇದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ನೋಡಲ್ ಏಜೆನ್ಸಿಯಾಗಿದ್ದು, ದೇಶಾದ್ಯಂತ ಚಿಲ್ಡ್‌ಲೈನ್ 1098 ಸೇವೆಗಳನ್ನು ಸ್ಥಾಪಿಸುವುದು, ನಿರ್ವಹಿಸುವುದು ಮತ್ತು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಹೊಂದಿದೆ.

ಈ ಘಟಕವು, ಆರ್‌ಟಿಐಗೆ ಪ್ರತಿಕ್ರಿಯೆ ನೀಡಿದ್ದು, ಲಾಕ್‌ಡೌನ್ ತಿಂಗಳುಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ವರದಿಯಾಗಿರುವುದನ್ನು ತಿಳಿಸಿದೆ.

ಚೈಲ್ಡ್‌ಲೈನ್ 1098 ಒದಗಿಸಿದ ಮಾಹಿತಿಯ ಆಧಾರದ ಮೇಲೆ 5,584 ಬಾಲ್ಯ ವಿವಾಹಗಳನ್ನು ನಿಲ್ಲಿಸಲು ಸಚಿವಾಲಯ ಮಧ್ಯಪ್ರವೇಶಿಸಿದೆ ಎಂದು ಜೂನ್ 2020ರಲ್ಲಿ ಎಎನ್‌ಐ, ಟೈಮ್ಸ್ ಆಫ್ ಇಂಡಿಯಾ ಮತ್ತು ಇತರ ಮಾಧ್ಯಮಗಳು ವರದಿ ಮಾಡಿದ್ದವು.

18,200 ಕ್ಕೂ ಹೆಚ್ಚು ಕರೆಗಳಿಗೆ ಪ್ರತಿಕ್ರಿಯೆಯಾಗಿ, 898 ಬಾಲ್ಯ ವಿವಾಹಗಳನ್ನು  ಸಚಿವಾಲಯ ತಡೆದಿದೆ ಎಂಬುದರ ಬಗ್ಗೆ ಸಚಿವೆ ಸ್ಮೃತಿ ಇರಾನಿ ಸ್ವತಃ ಏಪ್ರಿಲ್‌ನಲ್ಲಿ ಟ್ವೀಟ್ ಮಾಡಿದ್ದರು.

ಆದರೆ, ಕುತೂಹಲಕಾರಿ ಸಂಗತಿಯೆಂದರೆ, ಸಂಸತ್ತಿನಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಸಚಿವಾಲಯವು  “ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಯಿಂದ ಪಡೆದ ಮಾಹಿತಿಯ ಪ್ರಕಾರ, ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳನ್ನು ಸೂಚಿಸಲು ಯಾವುದೇ ಮಾಹಿತಿಯಿಲ್ಲ” ಎಂದು ಉತ್ತರಿಸಿದೆ. ಜೊತೆಗೆ ಆರ್‌ಟಿಐ ಪ್ರಶ್ನೆಗೂ ನೀಡಿರಯವ ಪ್ರತಿಕ್ರಿಯೆಯೆಂದರೆ, ಲಾಕ್‌ಡೌನ್ ಅವಧಿಯಲ್ಲಿ ಸಂಗ್ರಹಿಸಿದ ಡೇಟಾವನ್ನು ಎನ್‌ಸಿಆರ್‌ಬಿ ಹೊಂದಿಲ್ಲ ಮತ್ತು ಅದು ಲಭ್ಯವಿಲ್ಲ ಎಂಬುದಾಗಿದೆ.

ಇತ್ತೀಚೆಗೆ ಪ್ರಕಟವಾದ ಎನ್‌ಎಫ್‌ಎಚ್‌ಎಸ್ (ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ) ಫ್ಯಾಕ್ಟ್‌ಶೀಟ್ ದೇಶದ ವಿವಿಧ ಭಾಗಗಳಲ್ಲಿ ಬಾಲ್ಯವಿವಾಹಗಳು ಹೆಚ್ಚರುವ ಪ್ರಮಾಣವನ್ನು ತೋರಿಸುತ್ತದೆ. ಕೆಲವು ರಾಜ್ಯಗಳಲ್ಲಿ, ಸ್ತ್ರೀ ಜನಸಂಖ್ಯೆಯ 40% ಕ್ಕಿಂತ ಹೆಚ್ಚು ಜನರು 18 ವರ್ಷ ತುಂಬುವ ಮೊದಲೇ ಬಾಲ್ಯವಿವಾಹಕ್ಕೆ ಒಳಗಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...