Homeಮುಖಪುಟಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಲಾಕ್‌ಡೌನ್ ಅವಧಿಯಲ್ಲಿ ಬಾಲ್ಯ ವಿವಾಹದ ಕುರಿತು ಸಂಗ್ರಹಿಸಿದ ಡೇಟಾವನ್ನು ಎನ್‌ಸಿಆರ್‌ಬಿ ಹೊಂದಿಲ್ಲ ಮತ್ತು ಅದು ಲಭ್ಯವಿಲ್ಲ ಎಂದು ಸಚಿವಾಲಯ ತಿಳಿಸಿದೆ.

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ (ಜೂನ್ ನಿಂದ ಅಕ್ಟೋಬರ್ ತಿಂಗಳ ನಡುವೆ) ಬಾಲ್ಯ ವಿವಾಹಗಳ ಸಂಖ್ಯೆ 33% ಗಿಂತ ಹೆಚ್ಚಾಗಿದೆ. ಅದರಲ್ಲೂ ಆಗಸ್ಟ್ ತಿಂಗಳಲ್ಲೇ 88% ಬಾಲ್ಯವಿವಾಹಗಳು ನಡೆದಿವೆ ಎಂದು ಆರ್‌ಟಿಐ ವರದಿ ಉಲ್ಲೇಖಿಸಿ ದಿ ವೈರ್‌ನ ವರದಿ ಮಾಡಿದೆ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ಮತ್ತು ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್‌ಗೆ (ಸಿಐಎಫ್) ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ಲಾಕ್‌ಡೌನ್ ನಲ್ಲಿ ಬಾಲ್ಯವಿವಾಹಕ್ಕೆ ಒಳಗಾದವರ ಬಗ್ಗೆ ಮಾಹಿತಿ ದೊರೆತಿದೆ. ಆದರೂ ಕೂಡ, 2020 ರ ಸೆಪ್ಟೆಂಬರ್‌ನಲ್ಲಿ ನಡೆದ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ, ರಾಜ್ಯಸಭಾ ಸಂಸದ ಅಮನ್ ಪಟ್ನಾಯಕ್ ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳ ಬಗ್ಗೆ ಸರ್ಕಾರಕ್ಕೆ ಪ್ರಶ್ನಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, “ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಯಿಂದ ಪಡೆದ ಮಾಹಿತಿಯ ಪ್ರಕಾರ, ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳನ್ನು ಸೂಚಿಸಲು ಯಾವುದೇ ಮಾಹಿತಿಯಿಲ್ಲ” ಎಂದಿದ್ದರು.

ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ಸಚಿವಾಲಯದ ಮುಂದೆ ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ನಾಲ್ಕು ವಿಚಾರಗಳಿಗೆ ಸಂಬಂಧಿಸಿದಂತೆ ಉತ್ತರವನ್ನು ಬಯಸಿತ್ತು..

1. 2020 ರ ಏಪ್ರಿಲ್ 1 ರಿಂದ 2020 ರ ಅಕ್ಟೋಬರ್ 31 ರವರೆಗೆ ಪ್ರತಿ ತಿಂಗಳು ಬಾಲ್ಯವಿವಾಹದ ಘಟನೆಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸ್ವೀಕರಿಸುವ ರಾಜ್ಯವಾರು ದೂರುಗಳ ಮಾಹಿತಿ. 

2. 2019 ರ ಏಪ್ರಿಲ್ 1 ರಿಂದ 2019 ರ ಅಕ್ಟೋಬರ್ 31 ರವರೆಗೆ ಪ್ರತಿ ತಿಂಗಳು ಬಾಲ್ಯವಿವಾಹದ ಘಟನೆಗಳ ಬಗ್ಗೆ ಸಚಿವಾಲಯವು ಸ್ವೀಕರಿಸುವ ರಾಜ್ಯವಾರು ದೂರುಗಳ ಮಾಹಿತಿ.

3. ಬಾಲ್ಯ ವಿವಾಹಗಳ ಘಟನೆಗಳ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ 2020 ರ ಏಪ್ರಿಲ್ 1 ರಿಂದ 2020 ರ ಸೆಪ್ಟೆಂಬರ್ 17 ರವರೆಗೆ ದೊರೆತಿರುವ ಮಾಹಿತಿ ಬಗ್ಗೆ ವಿವರಿಸಿ.

4. 2020 ರ ಏಪ್ರಿಲ್ 1 ರಿಂದ 2020 ರ ಸೆಪ್ಟೆಂಬರ್ 17 ರ ನಡುವಿನ ಬಾಲ್ಯ ವಿವಾಹಗಳ ಘಟನೆಗಳ ಬಗ್ಗೆ ಬಂದಿರುವ ಮಾಹಿತಿಯನ್ನು ರಾಜ್ಯಸಭಾದಲ್ಲಿ ಬಳಸದಿರುವ ಬಗ್ಗೆ ಮಾಹಿತಿ ಕೊರಲಾಗಿತ್ತು.

ಸಚಿವಾಲಯವು ಆರಂಭದಲ್ಲಿ ಈ ಪ್ರಶ್ನೆಗಳಿಗೆ “ಈ ವಿಭಾಗದಲ್ಲಿ ಲಭ್ಯವಿಲ್ಲ” ಎಂದು ಹೇಳಿ, ಮೊದಲ ಮೂರು ಪ್ರಶ್ನೆಗಳನ್ನು ಎನ್‌ಸಿಆರ್‌ಬಿಗೆ ವರ್ಗಾಯಿಸಿತು. ಕುತೂಹಲಕಾರಿಯಾಗಿ, ಮೂರನೆಯ ಪ್ರಶ್ನೆ ನಿರ್ದಿಷ್ಟವಾಗಿ ಇರಾನಿ ಮತ್ತು ಸಚಿವಾಲಯಕ್ಕೆ ಸಂಬಂಧಿಸಿದೆ, ಆದರೆ ಸಚಿವಾಲಯ ಅದನ್ನು ಎನ್‌ಸಿಆರ್‌ಬಿಗೆ ವರ್ಗಾಯಿಸಿತು. ನಾಲ್ಕನೆಯ ಪ್ರಶ್ನೆಗೆ, ಸಚಿವಾಲಯವು “ಮಕ್ಕಳ ಕಲ್ಯಾಣ ವಿಭಾಗಕ್ಕೆ ಸಂಬಂಧಿಸಿಲ್ಲ” ಎಂದು ಹೇಳಿದೆ.

ಮೇಲ್ಮನವಿಯ ಮೇರೆಗೆ, ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್‌ಗೆ (ಸಿಐಎಫ್) ಅರ್ಜಿ ಕಳುಹಿಸಲಾಗಿತ್ತು. ಇದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ನೋಡಲ್ ಏಜೆನ್ಸಿಯಾಗಿದ್ದು, ದೇಶಾದ್ಯಂತ ಚಿಲ್ಡ್‌ಲೈನ್ 1098 ಸೇವೆಗಳನ್ನು ಸ್ಥಾಪಿಸುವುದು, ನಿರ್ವಹಿಸುವುದು ಮತ್ತು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಹೊಂದಿದೆ.

ಈ ಘಟಕವು, ಆರ್‌ಟಿಐಗೆ ಪ್ರತಿಕ್ರಿಯೆ ನೀಡಿದ್ದು, ಲಾಕ್‌ಡೌನ್ ತಿಂಗಳುಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ವರದಿಯಾಗಿರುವುದನ್ನು ತಿಳಿಸಿದೆ.

ಚೈಲ್ಡ್‌ಲೈನ್ 1098 ಒದಗಿಸಿದ ಮಾಹಿತಿಯ ಆಧಾರದ ಮೇಲೆ 5,584 ಬಾಲ್ಯ ವಿವಾಹಗಳನ್ನು ನಿಲ್ಲಿಸಲು ಸಚಿವಾಲಯ ಮಧ್ಯಪ್ರವೇಶಿಸಿದೆ ಎಂದು ಜೂನ್ 2020ರಲ್ಲಿ ಎಎನ್‌ಐ, ಟೈಮ್ಸ್ ಆಫ್ ಇಂಡಿಯಾ ಮತ್ತು ಇತರ ಮಾಧ್ಯಮಗಳು ವರದಿ ಮಾಡಿದ್ದವು.

18,200 ಕ್ಕೂ ಹೆಚ್ಚು ಕರೆಗಳಿಗೆ ಪ್ರತಿಕ್ರಿಯೆಯಾಗಿ, 898 ಬಾಲ್ಯ ವಿವಾಹಗಳನ್ನು  ಸಚಿವಾಲಯ ತಡೆದಿದೆ ಎಂಬುದರ ಬಗ್ಗೆ ಸಚಿವೆ ಸ್ಮೃತಿ ಇರಾನಿ ಸ್ವತಃ ಏಪ್ರಿಲ್‌ನಲ್ಲಿ ಟ್ವೀಟ್ ಮಾಡಿದ್ದರು.

ಆದರೆ, ಕುತೂಹಲಕಾರಿ ಸಂಗತಿಯೆಂದರೆ, ಸಂಸತ್ತಿನಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಸಚಿವಾಲಯವು  “ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಯಿಂದ ಪಡೆದ ಮಾಹಿತಿಯ ಪ್ರಕಾರ, ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳನ್ನು ಸೂಚಿಸಲು ಯಾವುದೇ ಮಾಹಿತಿಯಿಲ್ಲ” ಎಂದು ಉತ್ತರಿಸಿದೆ. ಜೊತೆಗೆ ಆರ್‌ಟಿಐ ಪ್ರಶ್ನೆಗೂ ನೀಡಿರಯವ ಪ್ರತಿಕ್ರಿಯೆಯೆಂದರೆ, ಲಾಕ್‌ಡೌನ್ ಅವಧಿಯಲ್ಲಿ ಸಂಗ್ರಹಿಸಿದ ಡೇಟಾವನ್ನು ಎನ್‌ಸಿಆರ್‌ಬಿ ಹೊಂದಿಲ್ಲ ಮತ್ತು ಅದು ಲಭ್ಯವಿಲ್ಲ ಎಂಬುದಾಗಿದೆ.

ಇತ್ತೀಚೆಗೆ ಪ್ರಕಟವಾದ ಎನ್‌ಎಫ್‌ಎಚ್‌ಎಸ್ (ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ) ಫ್ಯಾಕ್ಟ್‌ಶೀಟ್ ದೇಶದ ವಿವಿಧ ಭಾಗಗಳಲ್ಲಿ ಬಾಲ್ಯವಿವಾಹಗಳು ಹೆಚ್ಚರುವ ಪ್ರಮಾಣವನ್ನು ತೋರಿಸುತ್ತದೆ. ಕೆಲವು ರಾಜ್ಯಗಳಲ್ಲಿ, ಸ್ತ್ರೀ ಜನಸಂಖ್ಯೆಯ 40% ಕ್ಕಿಂತ ಹೆಚ್ಚು ಜನರು 18 ವರ್ಷ ತುಂಬುವ ಮೊದಲೇ ಬಾಲ್ಯವಿವಾಹಕ್ಕೆ ಒಳಗಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...