Homeಮುಖಪುಟಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಲಾಕ್‌ಡೌನ್ ಅವಧಿಯಲ್ಲಿ ಬಾಲ್ಯ ವಿವಾಹದ ಕುರಿತು ಸಂಗ್ರಹಿಸಿದ ಡೇಟಾವನ್ನು ಎನ್‌ಸಿಆರ್‌ಬಿ ಹೊಂದಿಲ್ಲ ಮತ್ತು ಅದು ಲಭ್ಯವಿಲ್ಲ ಎಂದು ಸಚಿವಾಲಯ ತಿಳಿಸಿದೆ.

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ (ಜೂನ್ ನಿಂದ ಅಕ್ಟೋಬರ್ ತಿಂಗಳ ನಡುವೆ) ಬಾಲ್ಯ ವಿವಾಹಗಳ ಸಂಖ್ಯೆ 33% ಗಿಂತ ಹೆಚ್ಚಾಗಿದೆ. ಅದರಲ್ಲೂ ಆಗಸ್ಟ್ ತಿಂಗಳಲ್ಲೇ 88% ಬಾಲ್ಯವಿವಾಹಗಳು ನಡೆದಿವೆ ಎಂದು ಆರ್‌ಟಿಐ ವರದಿ ಉಲ್ಲೇಖಿಸಿ ದಿ ವೈರ್‌ನ ವರದಿ ಮಾಡಿದೆ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ಮತ್ತು ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್‌ಗೆ (ಸಿಐಎಫ್) ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ಲಾಕ್‌ಡೌನ್ ನಲ್ಲಿ ಬಾಲ್ಯವಿವಾಹಕ್ಕೆ ಒಳಗಾದವರ ಬಗ್ಗೆ ಮಾಹಿತಿ ದೊರೆತಿದೆ. ಆದರೂ ಕೂಡ, 2020 ರ ಸೆಪ್ಟೆಂಬರ್‌ನಲ್ಲಿ ನಡೆದ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ, ರಾಜ್ಯಸಭಾ ಸಂಸದ ಅಮನ್ ಪಟ್ನಾಯಕ್ ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳ ಬಗ್ಗೆ ಸರ್ಕಾರಕ್ಕೆ ಪ್ರಶ್ನಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, “ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಯಿಂದ ಪಡೆದ ಮಾಹಿತಿಯ ಪ್ರಕಾರ, ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳನ್ನು ಸೂಚಿಸಲು ಯಾವುದೇ ಮಾಹಿತಿಯಿಲ್ಲ” ಎಂದಿದ್ದರು.

ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ಸಚಿವಾಲಯದ ಮುಂದೆ ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ನಾಲ್ಕು ವಿಚಾರಗಳಿಗೆ ಸಂಬಂಧಿಸಿದಂತೆ ಉತ್ತರವನ್ನು ಬಯಸಿತ್ತು..

1. 2020 ರ ಏಪ್ರಿಲ್ 1 ರಿಂದ 2020 ರ ಅಕ್ಟೋಬರ್ 31 ರವರೆಗೆ ಪ್ರತಿ ತಿಂಗಳು ಬಾಲ್ಯವಿವಾಹದ ಘಟನೆಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸ್ವೀಕರಿಸುವ ರಾಜ್ಯವಾರು ದೂರುಗಳ ಮಾಹಿತಿ. 

2. 2019 ರ ಏಪ್ರಿಲ್ 1 ರಿಂದ 2019 ರ ಅಕ್ಟೋಬರ್ 31 ರವರೆಗೆ ಪ್ರತಿ ತಿಂಗಳು ಬಾಲ್ಯವಿವಾಹದ ಘಟನೆಗಳ ಬಗ್ಗೆ ಸಚಿವಾಲಯವು ಸ್ವೀಕರಿಸುವ ರಾಜ್ಯವಾರು ದೂರುಗಳ ಮಾಹಿತಿ.

3. ಬಾಲ್ಯ ವಿವಾಹಗಳ ಘಟನೆಗಳ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ 2020 ರ ಏಪ್ರಿಲ್ 1 ರಿಂದ 2020 ರ ಸೆಪ್ಟೆಂಬರ್ 17 ರವರೆಗೆ ದೊರೆತಿರುವ ಮಾಹಿತಿ ಬಗ್ಗೆ ವಿವರಿಸಿ.

4. 2020 ರ ಏಪ್ರಿಲ್ 1 ರಿಂದ 2020 ರ ಸೆಪ್ಟೆಂಬರ್ 17 ರ ನಡುವಿನ ಬಾಲ್ಯ ವಿವಾಹಗಳ ಘಟನೆಗಳ ಬಗ್ಗೆ ಬಂದಿರುವ ಮಾಹಿತಿಯನ್ನು ರಾಜ್ಯಸಭಾದಲ್ಲಿ ಬಳಸದಿರುವ ಬಗ್ಗೆ ಮಾಹಿತಿ ಕೊರಲಾಗಿತ್ತು.

ಸಚಿವಾಲಯವು ಆರಂಭದಲ್ಲಿ ಈ ಪ್ರಶ್ನೆಗಳಿಗೆ “ಈ ವಿಭಾಗದಲ್ಲಿ ಲಭ್ಯವಿಲ್ಲ” ಎಂದು ಹೇಳಿ, ಮೊದಲ ಮೂರು ಪ್ರಶ್ನೆಗಳನ್ನು ಎನ್‌ಸಿಆರ್‌ಬಿಗೆ ವರ್ಗಾಯಿಸಿತು. ಕುತೂಹಲಕಾರಿಯಾಗಿ, ಮೂರನೆಯ ಪ್ರಶ್ನೆ ನಿರ್ದಿಷ್ಟವಾಗಿ ಇರಾನಿ ಮತ್ತು ಸಚಿವಾಲಯಕ್ಕೆ ಸಂಬಂಧಿಸಿದೆ, ಆದರೆ ಸಚಿವಾಲಯ ಅದನ್ನು ಎನ್‌ಸಿಆರ್‌ಬಿಗೆ ವರ್ಗಾಯಿಸಿತು. ನಾಲ್ಕನೆಯ ಪ್ರಶ್ನೆಗೆ, ಸಚಿವಾಲಯವು “ಮಕ್ಕಳ ಕಲ್ಯಾಣ ವಿಭಾಗಕ್ಕೆ ಸಂಬಂಧಿಸಿಲ್ಲ” ಎಂದು ಹೇಳಿದೆ.

ಮೇಲ್ಮನವಿಯ ಮೇರೆಗೆ, ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್‌ಗೆ (ಸಿಐಎಫ್) ಅರ್ಜಿ ಕಳುಹಿಸಲಾಗಿತ್ತು. ಇದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ನೋಡಲ್ ಏಜೆನ್ಸಿಯಾಗಿದ್ದು, ದೇಶಾದ್ಯಂತ ಚಿಲ್ಡ್‌ಲೈನ್ 1098 ಸೇವೆಗಳನ್ನು ಸ್ಥಾಪಿಸುವುದು, ನಿರ್ವಹಿಸುವುದು ಮತ್ತು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಹೊಂದಿದೆ.

ಈ ಘಟಕವು, ಆರ್‌ಟಿಐಗೆ ಪ್ರತಿಕ್ರಿಯೆ ನೀಡಿದ್ದು, ಲಾಕ್‌ಡೌನ್ ತಿಂಗಳುಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ವರದಿಯಾಗಿರುವುದನ್ನು ತಿಳಿಸಿದೆ.

ಚೈಲ್ಡ್‌ಲೈನ್ 1098 ಒದಗಿಸಿದ ಮಾಹಿತಿಯ ಆಧಾರದ ಮೇಲೆ 5,584 ಬಾಲ್ಯ ವಿವಾಹಗಳನ್ನು ನಿಲ್ಲಿಸಲು ಸಚಿವಾಲಯ ಮಧ್ಯಪ್ರವೇಶಿಸಿದೆ ಎಂದು ಜೂನ್ 2020ರಲ್ಲಿ ಎಎನ್‌ಐ, ಟೈಮ್ಸ್ ಆಫ್ ಇಂಡಿಯಾ ಮತ್ತು ಇತರ ಮಾಧ್ಯಮಗಳು ವರದಿ ಮಾಡಿದ್ದವು.

18,200 ಕ್ಕೂ ಹೆಚ್ಚು ಕರೆಗಳಿಗೆ ಪ್ರತಿಕ್ರಿಯೆಯಾಗಿ, 898 ಬಾಲ್ಯ ವಿವಾಹಗಳನ್ನು  ಸಚಿವಾಲಯ ತಡೆದಿದೆ ಎಂಬುದರ ಬಗ್ಗೆ ಸಚಿವೆ ಸ್ಮೃತಿ ಇರಾನಿ ಸ್ವತಃ ಏಪ್ರಿಲ್‌ನಲ್ಲಿ ಟ್ವೀಟ್ ಮಾಡಿದ್ದರು.

ಆದರೆ, ಕುತೂಹಲಕಾರಿ ಸಂಗತಿಯೆಂದರೆ, ಸಂಸತ್ತಿನಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಸಚಿವಾಲಯವು  “ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಯಿಂದ ಪಡೆದ ಮಾಹಿತಿಯ ಪ್ರಕಾರ, ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳನ್ನು ಸೂಚಿಸಲು ಯಾವುದೇ ಮಾಹಿತಿಯಿಲ್ಲ” ಎಂದು ಉತ್ತರಿಸಿದೆ. ಜೊತೆಗೆ ಆರ್‌ಟಿಐ ಪ್ರಶ್ನೆಗೂ ನೀಡಿರಯವ ಪ್ರತಿಕ್ರಿಯೆಯೆಂದರೆ, ಲಾಕ್‌ಡೌನ್ ಅವಧಿಯಲ್ಲಿ ಸಂಗ್ರಹಿಸಿದ ಡೇಟಾವನ್ನು ಎನ್‌ಸಿಆರ್‌ಬಿ ಹೊಂದಿಲ್ಲ ಮತ್ತು ಅದು ಲಭ್ಯವಿಲ್ಲ ಎಂಬುದಾಗಿದೆ.

ಇತ್ತೀಚೆಗೆ ಪ್ರಕಟವಾದ ಎನ್‌ಎಫ್‌ಎಚ್‌ಎಸ್ (ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ) ಫ್ಯಾಕ್ಟ್‌ಶೀಟ್ ದೇಶದ ವಿವಿಧ ಭಾಗಗಳಲ್ಲಿ ಬಾಲ್ಯವಿವಾಹಗಳು ಹೆಚ್ಚರುವ ಪ್ರಮಾಣವನ್ನು ತೋರಿಸುತ್ತದೆ. ಕೆಲವು ರಾಜ್ಯಗಳಲ್ಲಿ, ಸ್ತ್ರೀ ಜನಸಂಖ್ಯೆಯ 40% ಕ್ಕಿಂತ ಹೆಚ್ಚು ಜನರು 18 ವರ್ಷ ತುಂಬುವ ಮೊದಲೇ ಬಾಲ್ಯವಿವಾಹಕ್ಕೆ ಒಳಗಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...