Homeಮುಖಪುಟಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಲಾಕ್‌ಡೌನ್ ಅವಧಿಯಲ್ಲಿ ಬಾಲ್ಯ ವಿವಾಹದ ಕುರಿತು ಸಂಗ್ರಹಿಸಿದ ಡೇಟಾವನ್ನು ಎನ್‌ಸಿಆರ್‌ಬಿ ಹೊಂದಿಲ್ಲ ಮತ್ತು ಅದು ಲಭ್ಯವಿಲ್ಲ ಎಂದು ಸಚಿವಾಲಯ ತಿಳಿಸಿದೆ.

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ (ಜೂನ್ ನಿಂದ ಅಕ್ಟೋಬರ್ ತಿಂಗಳ ನಡುವೆ) ಬಾಲ್ಯ ವಿವಾಹಗಳ ಸಂಖ್ಯೆ 33% ಗಿಂತ ಹೆಚ್ಚಾಗಿದೆ. ಅದರಲ್ಲೂ ಆಗಸ್ಟ್ ತಿಂಗಳಲ್ಲೇ 88% ಬಾಲ್ಯವಿವಾಹಗಳು ನಡೆದಿವೆ ಎಂದು ಆರ್‌ಟಿಐ ವರದಿ ಉಲ್ಲೇಖಿಸಿ ದಿ ವೈರ್‌ನ ವರದಿ ಮಾಡಿದೆ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ಮತ್ತು ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್‌ಗೆ (ಸಿಐಎಫ್) ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ಲಾಕ್‌ಡೌನ್ ನಲ್ಲಿ ಬಾಲ್ಯವಿವಾಹಕ್ಕೆ ಒಳಗಾದವರ ಬಗ್ಗೆ ಮಾಹಿತಿ ದೊರೆತಿದೆ. ಆದರೂ ಕೂಡ, 2020 ರ ಸೆಪ್ಟೆಂಬರ್‌ನಲ್ಲಿ ನಡೆದ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ, ರಾಜ್ಯಸಭಾ ಸಂಸದ ಅಮನ್ ಪಟ್ನಾಯಕ್ ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳ ಬಗ್ಗೆ ಸರ್ಕಾರಕ್ಕೆ ಪ್ರಶ್ನಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, “ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಯಿಂದ ಪಡೆದ ಮಾಹಿತಿಯ ಪ್ರಕಾರ, ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳನ್ನು ಸೂಚಿಸಲು ಯಾವುದೇ ಮಾಹಿತಿಯಿಲ್ಲ” ಎಂದಿದ್ದರು.

ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ಸಚಿವಾಲಯದ ಮುಂದೆ ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ನಾಲ್ಕು ವಿಚಾರಗಳಿಗೆ ಸಂಬಂಧಿಸಿದಂತೆ ಉತ್ತರವನ್ನು ಬಯಸಿತ್ತು..

1. 2020 ರ ಏಪ್ರಿಲ್ 1 ರಿಂದ 2020 ರ ಅಕ್ಟೋಬರ್ 31 ರವರೆಗೆ ಪ್ರತಿ ತಿಂಗಳು ಬಾಲ್ಯವಿವಾಹದ ಘಟನೆಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸ್ವೀಕರಿಸುವ ರಾಜ್ಯವಾರು ದೂರುಗಳ ಮಾಹಿತಿ. 

2. 2019 ರ ಏಪ್ರಿಲ್ 1 ರಿಂದ 2019 ರ ಅಕ್ಟೋಬರ್ 31 ರವರೆಗೆ ಪ್ರತಿ ತಿಂಗಳು ಬಾಲ್ಯವಿವಾಹದ ಘಟನೆಗಳ ಬಗ್ಗೆ ಸಚಿವಾಲಯವು ಸ್ವೀಕರಿಸುವ ರಾಜ್ಯವಾರು ದೂರುಗಳ ಮಾಹಿತಿ.

3. ಬಾಲ್ಯ ವಿವಾಹಗಳ ಘಟನೆಗಳ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ 2020 ರ ಏಪ್ರಿಲ್ 1 ರಿಂದ 2020 ರ ಸೆಪ್ಟೆಂಬರ್ 17 ರವರೆಗೆ ದೊರೆತಿರುವ ಮಾಹಿತಿ ಬಗ್ಗೆ ವಿವರಿಸಿ.

4. 2020 ರ ಏಪ್ರಿಲ್ 1 ರಿಂದ 2020 ರ ಸೆಪ್ಟೆಂಬರ್ 17 ರ ನಡುವಿನ ಬಾಲ್ಯ ವಿವಾಹಗಳ ಘಟನೆಗಳ ಬಗ್ಗೆ ಬಂದಿರುವ ಮಾಹಿತಿಯನ್ನು ರಾಜ್ಯಸಭಾದಲ್ಲಿ ಬಳಸದಿರುವ ಬಗ್ಗೆ ಮಾಹಿತಿ ಕೊರಲಾಗಿತ್ತು.

ಸಚಿವಾಲಯವು ಆರಂಭದಲ್ಲಿ ಈ ಪ್ರಶ್ನೆಗಳಿಗೆ “ಈ ವಿಭಾಗದಲ್ಲಿ ಲಭ್ಯವಿಲ್ಲ” ಎಂದು ಹೇಳಿ, ಮೊದಲ ಮೂರು ಪ್ರಶ್ನೆಗಳನ್ನು ಎನ್‌ಸಿಆರ್‌ಬಿಗೆ ವರ್ಗಾಯಿಸಿತು. ಕುತೂಹಲಕಾರಿಯಾಗಿ, ಮೂರನೆಯ ಪ್ರಶ್ನೆ ನಿರ್ದಿಷ್ಟವಾಗಿ ಇರಾನಿ ಮತ್ತು ಸಚಿವಾಲಯಕ್ಕೆ ಸಂಬಂಧಿಸಿದೆ, ಆದರೆ ಸಚಿವಾಲಯ ಅದನ್ನು ಎನ್‌ಸಿಆರ್‌ಬಿಗೆ ವರ್ಗಾಯಿಸಿತು. ನಾಲ್ಕನೆಯ ಪ್ರಶ್ನೆಗೆ, ಸಚಿವಾಲಯವು “ಮಕ್ಕಳ ಕಲ್ಯಾಣ ವಿಭಾಗಕ್ಕೆ ಸಂಬಂಧಿಸಿಲ್ಲ” ಎಂದು ಹೇಳಿದೆ.

ಮೇಲ್ಮನವಿಯ ಮೇರೆಗೆ, ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್‌ಗೆ (ಸಿಐಎಫ್) ಅರ್ಜಿ ಕಳುಹಿಸಲಾಗಿತ್ತು. ಇದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ನೋಡಲ್ ಏಜೆನ್ಸಿಯಾಗಿದ್ದು, ದೇಶಾದ್ಯಂತ ಚಿಲ್ಡ್‌ಲೈನ್ 1098 ಸೇವೆಗಳನ್ನು ಸ್ಥಾಪಿಸುವುದು, ನಿರ್ವಹಿಸುವುದು ಮತ್ತು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಹೊಂದಿದೆ.

ಈ ಘಟಕವು, ಆರ್‌ಟಿಐಗೆ ಪ್ರತಿಕ್ರಿಯೆ ನೀಡಿದ್ದು, ಲಾಕ್‌ಡೌನ್ ತಿಂಗಳುಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ವರದಿಯಾಗಿರುವುದನ್ನು ತಿಳಿಸಿದೆ.

ಚೈಲ್ಡ್‌ಲೈನ್ 1098 ಒದಗಿಸಿದ ಮಾಹಿತಿಯ ಆಧಾರದ ಮೇಲೆ 5,584 ಬಾಲ್ಯ ವಿವಾಹಗಳನ್ನು ನಿಲ್ಲಿಸಲು ಸಚಿವಾಲಯ ಮಧ್ಯಪ್ರವೇಶಿಸಿದೆ ಎಂದು ಜೂನ್ 2020ರಲ್ಲಿ ಎಎನ್‌ಐ, ಟೈಮ್ಸ್ ಆಫ್ ಇಂಡಿಯಾ ಮತ್ತು ಇತರ ಮಾಧ್ಯಮಗಳು ವರದಿ ಮಾಡಿದ್ದವು.

18,200 ಕ್ಕೂ ಹೆಚ್ಚು ಕರೆಗಳಿಗೆ ಪ್ರತಿಕ್ರಿಯೆಯಾಗಿ, 898 ಬಾಲ್ಯ ವಿವಾಹಗಳನ್ನು  ಸಚಿವಾಲಯ ತಡೆದಿದೆ ಎಂಬುದರ ಬಗ್ಗೆ ಸಚಿವೆ ಸ್ಮೃತಿ ಇರಾನಿ ಸ್ವತಃ ಏಪ್ರಿಲ್‌ನಲ್ಲಿ ಟ್ವೀಟ್ ಮಾಡಿದ್ದರು.

ಆದರೆ, ಕುತೂಹಲಕಾರಿ ಸಂಗತಿಯೆಂದರೆ, ಸಂಸತ್ತಿನಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಸಚಿವಾಲಯವು  “ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಯಿಂದ ಪಡೆದ ಮಾಹಿತಿಯ ಪ್ರಕಾರ, ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳನ್ನು ಸೂಚಿಸಲು ಯಾವುದೇ ಮಾಹಿತಿಯಿಲ್ಲ” ಎಂದು ಉತ್ತರಿಸಿದೆ. ಜೊತೆಗೆ ಆರ್‌ಟಿಐ ಪ್ರಶ್ನೆಗೂ ನೀಡಿರಯವ ಪ್ರತಿಕ್ರಿಯೆಯೆಂದರೆ, ಲಾಕ್‌ಡೌನ್ ಅವಧಿಯಲ್ಲಿ ಸಂಗ್ರಹಿಸಿದ ಡೇಟಾವನ್ನು ಎನ್‌ಸಿಆರ್‌ಬಿ ಹೊಂದಿಲ್ಲ ಮತ್ತು ಅದು ಲಭ್ಯವಿಲ್ಲ ಎಂಬುದಾಗಿದೆ.

ಇತ್ತೀಚೆಗೆ ಪ್ರಕಟವಾದ ಎನ್‌ಎಫ್‌ಎಚ್‌ಎಸ್ (ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ) ಫ್ಯಾಕ್ಟ್‌ಶೀಟ್ ದೇಶದ ವಿವಿಧ ಭಾಗಗಳಲ್ಲಿ ಬಾಲ್ಯವಿವಾಹಗಳು ಹೆಚ್ಚರುವ ಪ್ರಮಾಣವನ್ನು ತೋರಿಸುತ್ತದೆ. ಕೆಲವು ರಾಜ್ಯಗಳಲ್ಲಿ, ಸ್ತ್ರೀ ಜನಸಂಖ್ಯೆಯ 40% ಕ್ಕಿಂತ ಹೆಚ್ಚು ಜನರು 18 ವರ್ಷ ತುಂಬುವ ಮೊದಲೇ ಬಾಲ್ಯವಿವಾಹಕ್ಕೆ ಒಳಗಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....