Homeಮುಖಪುಟಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಲಾಕ್‌ಡೌನ್ ಅವಧಿಯಲ್ಲಿ ಬಾಲ್ಯ ವಿವಾಹದ ಕುರಿತು ಸಂಗ್ರಹಿಸಿದ ಡೇಟಾವನ್ನು ಎನ್‌ಸಿಆರ್‌ಬಿ ಹೊಂದಿಲ್ಲ ಮತ್ತು ಅದು ಲಭ್ಯವಿಲ್ಲ ಎಂದು ಸಚಿವಾಲಯ ತಿಳಿಸಿದೆ.

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ (ಜೂನ್ ನಿಂದ ಅಕ್ಟೋಬರ್ ತಿಂಗಳ ನಡುವೆ) ಬಾಲ್ಯ ವಿವಾಹಗಳ ಸಂಖ್ಯೆ 33% ಗಿಂತ ಹೆಚ್ಚಾಗಿದೆ. ಅದರಲ್ಲೂ ಆಗಸ್ಟ್ ತಿಂಗಳಲ್ಲೇ 88% ಬಾಲ್ಯವಿವಾಹಗಳು ನಡೆದಿವೆ ಎಂದು ಆರ್‌ಟಿಐ ವರದಿ ಉಲ್ಲೇಖಿಸಿ ದಿ ವೈರ್‌ನ ವರದಿ ಮಾಡಿದೆ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ಮತ್ತು ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್‌ಗೆ (ಸಿಐಎಫ್) ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ಲಾಕ್‌ಡೌನ್ ನಲ್ಲಿ ಬಾಲ್ಯವಿವಾಹಕ್ಕೆ ಒಳಗಾದವರ ಬಗ್ಗೆ ಮಾಹಿತಿ ದೊರೆತಿದೆ. ಆದರೂ ಕೂಡ, 2020 ರ ಸೆಪ್ಟೆಂಬರ್‌ನಲ್ಲಿ ನಡೆದ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ, ರಾಜ್ಯಸಭಾ ಸಂಸದ ಅಮನ್ ಪಟ್ನಾಯಕ್ ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳ ಬಗ್ಗೆ ಸರ್ಕಾರಕ್ಕೆ ಪ್ರಶ್ನಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, “ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಯಿಂದ ಪಡೆದ ಮಾಹಿತಿಯ ಪ್ರಕಾರ, ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳನ್ನು ಸೂಚಿಸಲು ಯಾವುದೇ ಮಾಹಿತಿಯಿಲ್ಲ” ಎಂದಿದ್ದರು.

ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ಸಚಿವಾಲಯದ ಮುಂದೆ ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ನಾಲ್ಕು ವಿಚಾರಗಳಿಗೆ ಸಂಬಂಧಿಸಿದಂತೆ ಉತ್ತರವನ್ನು ಬಯಸಿತ್ತು..

1. 2020 ರ ಏಪ್ರಿಲ್ 1 ರಿಂದ 2020 ರ ಅಕ್ಟೋಬರ್ 31 ರವರೆಗೆ ಪ್ರತಿ ತಿಂಗಳು ಬಾಲ್ಯವಿವಾಹದ ಘಟನೆಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸ್ವೀಕರಿಸುವ ರಾಜ್ಯವಾರು ದೂರುಗಳ ಮಾಹಿತಿ. 

2. 2019 ರ ಏಪ್ರಿಲ್ 1 ರಿಂದ 2019 ರ ಅಕ್ಟೋಬರ್ 31 ರವರೆಗೆ ಪ್ರತಿ ತಿಂಗಳು ಬಾಲ್ಯವಿವಾಹದ ಘಟನೆಗಳ ಬಗ್ಗೆ ಸಚಿವಾಲಯವು ಸ್ವೀಕರಿಸುವ ರಾಜ್ಯವಾರು ದೂರುಗಳ ಮಾಹಿತಿ.

3. ಬಾಲ್ಯ ವಿವಾಹಗಳ ಘಟನೆಗಳ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ 2020 ರ ಏಪ್ರಿಲ್ 1 ರಿಂದ 2020 ರ ಸೆಪ್ಟೆಂಬರ್ 17 ರವರೆಗೆ ದೊರೆತಿರುವ ಮಾಹಿತಿ ಬಗ್ಗೆ ವಿವರಿಸಿ.

4. 2020 ರ ಏಪ್ರಿಲ್ 1 ರಿಂದ 2020 ರ ಸೆಪ್ಟೆಂಬರ್ 17 ರ ನಡುವಿನ ಬಾಲ್ಯ ವಿವಾಹಗಳ ಘಟನೆಗಳ ಬಗ್ಗೆ ಬಂದಿರುವ ಮಾಹಿತಿಯನ್ನು ರಾಜ್ಯಸಭಾದಲ್ಲಿ ಬಳಸದಿರುವ ಬಗ್ಗೆ ಮಾಹಿತಿ ಕೊರಲಾಗಿತ್ತು.

ಸಚಿವಾಲಯವು ಆರಂಭದಲ್ಲಿ ಈ ಪ್ರಶ್ನೆಗಳಿಗೆ “ಈ ವಿಭಾಗದಲ್ಲಿ ಲಭ್ಯವಿಲ್ಲ” ಎಂದು ಹೇಳಿ, ಮೊದಲ ಮೂರು ಪ್ರಶ್ನೆಗಳನ್ನು ಎನ್‌ಸಿಆರ್‌ಬಿಗೆ ವರ್ಗಾಯಿಸಿತು. ಕುತೂಹಲಕಾರಿಯಾಗಿ, ಮೂರನೆಯ ಪ್ರಶ್ನೆ ನಿರ್ದಿಷ್ಟವಾಗಿ ಇರಾನಿ ಮತ್ತು ಸಚಿವಾಲಯಕ್ಕೆ ಸಂಬಂಧಿಸಿದೆ, ಆದರೆ ಸಚಿವಾಲಯ ಅದನ್ನು ಎನ್‌ಸಿಆರ್‌ಬಿಗೆ ವರ್ಗಾಯಿಸಿತು. ನಾಲ್ಕನೆಯ ಪ್ರಶ್ನೆಗೆ, ಸಚಿವಾಲಯವು “ಮಕ್ಕಳ ಕಲ್ಯಾಣ ವಿಭಾಗಕ್ಕೆ ಸಂಬಂಧಿಸಿಲ್ಲ” ಎಂದು ಹೇಳಿದೆ.

ಮೇಲ್ಮನವಿಯ ಮೇರೆಗೆ, ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್‌ಗೆ (ಸಿಐಎಫ್) ಅರ್ಜಿ ಕಳುಹಿಸಲಾಗಿತ್ತು. ಇದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ನೋಡಲ್ ಏಜೆನ್ಸಿಯಾಗಿದ್ದು, ದೇಶಾದ್ಯಂತ ಚಿಲ್ಡ್‌ಲೈನ್ 1098 ಸೇವೆಗಳನ್ನು ಸ್ಥಾಪಿಸುವುದು, ನಿರ್ವಹಿಸುವುದು ಮತ್ತು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಹೊಂದಿದೆ.

ಈ ಘಟಕವು, ಆರ್‌ಟಿಐಗೆ ಪ್ರತಿಕ್ರಿಯೆ ನೀಡಿದ್ದು, ಲಾಕ್‌ಡೌನ್ ತಿಂಗಳುಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ವರದಿಯಾಗಿರುವುದನ್ನು ತಿಳಿಸಿದೆ.

ಚೈಲ್ಡ್‌ಲೈನ್ 1098 ಒದಗಿಸಿದ ಮಾಹಿತಿಯ ಆಧಾರದ ಮೇಲೆ 5,584 ಬಾಲ್ಯ ವಿವಾಹಗಳನ್ನು ನಿಲ್ಲಿಸಲು ಸಚಿವಾಲಯ ಮಧ್ಯಪ್ರವೇಶಿಸಿದೆ ಎಂದು ಜೂನ್ 2020ರಲ್ಲಿ ಎಎನ್‌ಐ, ಟೈಮ್ಸ್ ಆಫ್ ಇಂಡಿಯಾ ಮತ್ತು ಇತರ ಮಾಧ್ಯಮಗಳು ವರದಿ ಮಾಡಿದ್ದವು.

18,200 ಕ್ಕೂ ಹೆಚ್ಚು ಕರೆಗಳಿಗೆ ಪ್ರತಿಕ್ರಿಯೆಯಾಗಿ, 898 ಬಾಲ್ಯ ವಿವಾಹಗಳನ್ನು  ಸಚಿವಾಲಯ ತಡೆದಿದೆ ಎಂಬುದರ ಬಗ್ಗೆ ಸಚಿವೆ ಸ್ಮೃತಿ ಇರಾನಿ ಸ್ವತಃ ಏಪ್ರಿಲ್‌ನಲ್ಲಿ ಟ್ವೀಟ್ ಮಾಡಿದ್ದರು.

ಆದರೆ, ಕುತೂಹಲಕಾರಿ ಸಂಗತಿಯೆಂದರೆ, ಸಂಸತ್ತಿನಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಸಚಿವಾಲಯವು  “ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಯಿಂದ ಪಡೆದ ಮಾಹಿತಿಯ ಪ್ರಕಾರ, ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳನ್ನು ಸೂಚಿಸಲು ಯಾವುದೇ ಮಾಹಿತಿಯಿಲ್ಲ” ಎಂದು ಉತ್ತರಿಸಿದೆ. ಜೊತೆಗೆ ಆರ್‌ಟಿಐ ಪ್ರಶ್ನೆಗೂ ನೀಡಿರಯವ ಪ್ರತಿಕ್ರಿಯೆಯೆಂದರೆ, ಲಾಕ್‌ಡೌನ್ ಅವಧಿಯಲ್ಲಿ ಸಂಗ್ರಹಿಸಿದ ಡೇಟಾವನ್ನು ಎನ್‌ಸಿಆರ್‌ಬಿ ಹೊಂದಿಲ್ಲ ಮತ್ತು ಅದು ಲಭ್ಯವಿಲ್ಲ ಎಂಬುದಾಗಿದೆ.

ಇತ್ತೀಚೆಗೆ ಪ್ರಕಟವಾದ ಎನ್‌ಎಫ್‌ಎಚ್‌ಎಸ್ (ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ) ಫ್ಯಾಕ್ಟ್‌ಶೀಟ್ ದೇಶದ ವಿವಿಧ ಭಾಗಗಳಲ್ಲಿ ಬಾಲ್ಯವಿವಾಹಗಳು ಹೆಚ್ಚರುವ ಪ್ರಮಾಣವನ್ನು ತೋರಿಸುತ್ತದೆ. ಕೆಲವು ರಾಜ್ಯಗಳಲ್ಲಿ, ಸ್ತ್ರೀ ಜನಸಂಖ್ಯೆಯ 40% ಕ್ಕಿಂತ ಹೆಚ್ಚು ಜನರು 18 ವರ್ಷ ತುಂಬುವ ಮೊದಲೇ ಬಾಲ್ಯವಿವಾಹಕ್ಕೆ ಒಳಗಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...