Homeಅಂತರಾಷ್ಟ್ರೀಯ‘ದ್ವೇಷಾಪರಾಧ ಹೆಚ್ಚಳ’: ಕೆನಡಾದಲ್ಲಿರುವ ಭಾರತೀಯರಿಗೆ ಎಚ್ಚರಿಕೆಯಿಂದ ಇರುವಂತೆ ಕೇಳಿಕೊಂಡ ಭಾರತ

‘ದ್ವೇಷಾಪರಾಧ ಹೆಚ್ಚಳ’: ಕೆನಡಾದಲ್ಲಿರುವ ಭಾರತೀಯರಿಗೆ ಎಚ್ಚರಿಕೆಯಿಂದ ಇರುವಂತೆ ಕೇಳಿಕೊಂಡ ಭಾರತ

- Advertisement -
- Advertisement -

ಕೆನಡಾದಲ್ಲಿ ದ್ವೇಷಪರಾಧಗಳು, ಪ್ರತ್ಯೇಕತಾವಾದ ಹಿಂಸಾಚಾರ ಮತ್ತು ಭಾರತ ವಿರೋಧಿ ಚಟುವಟಿಕೆಗಳ ತೀವ್ರ ಹೆಚ್ಚಳಗೊಂಡಿದ್ದು, ಈ ಹಿನ್ನಲೆಯಲ್ಲಿ ಕೆನಡಾದಲ್ಲಿರುವ ಭಾರತೀಯ ಪ್ರಜೆಗಳು ಮತ್ತು ಆ ದೇಶಕ್ಕೆ ಪ್ರಯಾಣಿಸುವ ಭಾರತೀಯರಿಗೆ ಎಚ್ಚರಿಕೆಯಿಂದ ಇರಲು ಭಾರತ ಶುಕ್ರವಾರ ಸಲಹೆ ನೀಡಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಸಲಹೆ ನೀಡಿದೆ. ಕೆನಡಾದ ಹೈಕಮಿಷನ್ ಅಥವಾ ಕಾನ್ಸುಲೇಟ್ ಜನರಲ್ ಅವರು ಕೆನಡಾದ ಅಧಿಕಾರಿಗಳೊಂದಿಗೆ ಈ ಘಟನೆಗಳ ಬಗ್ಗೆ ಗಮನಸೆಳೆದಿದ್ದು, ಈ ಅಪರಾಧಗಳ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ವಿನಂತಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆನಡಾದಲ್ಲಿ ಈ ಅಪರಾಧ ಎಸಗುವ ಅಪರಾಧಿಗಳನ್ನು ಇದುವರೆಗೆ ಕಾನೂನಿನ ಕುಣಿಕೆಗೆ ಒಳಪಡಿಸಿಲ್ಲ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಕೆನಡಾ: ದ್ವೇಷಪೂರಿತ ದಾಳಿಗೆ ಒಂದೇ ಕುಟುಂಬದ ನಾಲ್ವರು ಬಲಿ

“ಮೇಲೆ ವಿವರಿಸಿದಂತೆ ಅಪರಾಧಗಳ ಹೆಚ್ಚುತ್ತಿರುವ ಘಟನೆಗಳ ಹಿನ್ನಲೆಯಲ್ಲಿ, ಭಾರತೀಯ ಪ್ರಜೆಗಳು ಮತ್ತು ಕೆನಡಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ಶಿಕ್ಷಣಕ್ಕಾಗಿ ಅಥವಾ ಇತರ ಪ್ರಯಾಣಕ್ಕಾಗಿ ಕೆನಡಾಕ್ಕೆ ತೆರಳುವವರು ಸರಿಯಾದ ಎಚ್ಚರಿಕೆಯನ್ನು ವಹಿಸಬೇಕು ಮತ್ತು ಜಾಗರೂಕರಾಗಿರಲು ಸೂಚಿಸಲಾಗಿದೆ” ಎಂದು ಸಚಿವಾಲಯದ ಸಲಹೆಯು ಹೇಳಿದೆ.

ಇದನ್ನೂ ಓದಿ: ಸೆಪ್ಟೆಂಬರ್‌ 5 ‘ಗೌರಿ ಲಂಕೇಶ್‌ ದಿನ’ ಎಂದು ಘೋಷಿಸಿದ ಕೆನಡಾದ ಬರ್ನಾಬಿ ನಗರ!

ಭಾರತೀಯ ಪ್ರಜೆಗಳು ಮತ್ತು ಕೆನಡಾದಲ್ಲಿರುವ ಭಾರತದ ವಿದ್ಯಾರ್ಥಿಗಳು ಸಚಿವಾಲಯದ ವೆಬ್‌ಸೈಟ್‌ಗಳು ಅಥವಾ MADAD ಪೋರ್ಟಲ್ madad.gov.in ಮೂಲಕ ಒಟ್ಟಾವಾದಲ್ಲಿರುವ ಭಾರತದ ಹೈಕಮಿಷನ್ ಅಥವಾ ಟೊರೊಂಟೊ ಮತ್ತು ವ್ಯಾಂಕೋವರ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಸಚಿವಾಲಯ ತಿಳಿಸಿದೆ.

ಯಾವುದೇ ಅವಶ್ಯಕತೆ ಅಥವಾ ತುರ್ತು ಸಂದರ್ಭದಲ್ಲಿ ಕೆನಡಾದಲ್ಲಿರುವ ಭಾರತೀಯ ನಾಗರಿಕರೊಂದಿಗೆ ಉತ್ತಮ ಸಂಪರ್ಕ ಸಾಧಿಸಲು ಈ ನೋಂದಣಿಯು ಹೈ ಕಮಿಷನ್ ಮತ್ತು ಕಾನ್ಸುಲೇಟ್ ಜನರಲ್ ಅನ್ನು ಸಕ್ರಿಯಗೊಳಿಸುತ್ತದೆ ಎಂದು ಅದು ಹೇಳಿದೆ.

ಟೊರೊಂಟೊದಲ್ಲಿರುವ BAPS ಸ್ವಾಮಿನಾರಾಯಣ ಮಂದಿರದಲ್ಲಿ ಭಾರತ ವಿರೋಧಿ ಬರಹಗಳನ್ನು ಬರೆದು ವಿರೂಪಗೊಳಿಸಲಾಯಿತು ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಭಾರತೀಯ ಹೈಕಮಿಷನ್ ಕಳೆದ ವಾರ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಘಟನೆಯ ಬಗ್ಗೆ ತನಿಖೆ ಮಾಡಲು ಮತ್ತು ದುಷ್ಕರ್ಮಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಕೆನಡಾದ ಅಧಿಕಾರಿಗಳನ್ನು  ವಿನಂತಿಸಿದೆ.

ಇದನ್ನೂ ಓದಿ: ‘ಎಂದೆಂದಿಗೂ ನೀ ಕನ್ನಡವಾಗಿರು’; ಕೆನಡಾದ ಸಂಸತ್ತಿನಲ್ಲಿ ಮೊಳಗಿದ ರಾಷ್ಟ್ರಕವಿ ಕುವೆಂಪು ಗೀತೆ!

ಕೆನಡಾ ಭಾರತೀಯ ಮೂಲದ 16 ಲಕ್ಷ ಜನರಿಗೆ ಮತ್ತು ಅನಿವಾಸಿ ಭಾರತೀಯರಿಗೆ ನೆಲೆಯಾಗಿದೆ. ಪ್ರಪಂಚದಾದ್ಯಂತದ ಭಾರತೀಯರು ಅತೀ ಹೆಚ್ಚು ಇರುವ ರಾಷ್ಟ್ರಗಳಲ್ಲಿ ಕೆನಡಾ ಕೂಡಾ ಒಂದಾಗಿದೆ. ಅಲ್ಲದೆ ಕೆನಡಾದಲ್ಲಿ ರಕ್ಷಣಾ ಸಚಿವೆ ಅನಿತಾ ಆನಂದ್ ಸೇರಿದಂತೆ ಭಾರತೀಯ ಮೂಲದ 17 ಸಂಸದರು ಮತ್ತು ಮೂವರು ಕ್ಯಾಬಿನೆಟ್ ಮಂತ್ರಿಗಳು ದೇಶದ ಆಡಳಿತರೂಢ ಸರ್ಕಾರದಲ್ಲಿ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...