Homeಅಂತರಾಷ್ಟ್ರೀಯ‘ದ್ವೇಷಾಪರಾಧ ಹೆಚ್ಚಳ’: ಕೆನಡಾದಲ್ಲಿರುವ ಭಾರತೀಯರಿಗೆ ಎಚ್ಚರಿಕೆಯಿಂದ ಇರುವಂತೆ ಕೇಳಿಕೊಂಡ ಭಾರತ

‘ದ್ವೇಷಾಪರಾಧ ಹೆಚ್ಚಳ’: ಕೆನಡಾದಲ್ಲಿರುವ ಭಾರತೀಯರಿಗೆ ಎಚ್ಚರಿಕೆಯಿಂದ ಇರುವಂತೆ ಕೇಳಿಕೊಂಡ ಭಾರತ

- Advertisement -
- Advertisement -

ಕೆನಡಾದಲ್ಲಿ ದ್ವೇಷಪರಾಧಗಳು, ಪ್ರತ್ಯೇಕತಾವಾದ ಹಿಂಸಾಚಾರ ಮತ್ತು ಭಾರತ ವಿರೋಧಿ ಚಟುವಟಿಕೆಗಳ ತೀವ್ರ ಹೆಚ್ಚಳಗೊಂಡಿದ್ದು, ಈ ಹಿನ್ನಲೆಯಲ್ಲಿ ಕೆನಡಾದಲ್ಲಿರುವ ಭಾರತೀಯ ಪ್ರಜೆಗಳು ಮತ್ತು ಆ ದೇಶಕ್ಕೆ ಪ್ರಯಾಣಿಸುವ ಭಾರತೀಯರಿಗೆ ಎಚ್ಚರಿಕೆಯಿಂದ ಇರಲು ಭಾರತ ಶುಕ್ರವಾರ ಸಲಹೆ ನೀಡಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಸಲಹೆ ನೀಡಿದೆ. ಕೆನಡಾದ ಹೈಕಮಿಷನ್ ಅಥವಾ ಕಾನ್ಸುಲೇಟ್ ಜನರಲ್ ಅವರು ಕೆನಡಾದ ಅಧಿಕಾರಿಗಳೊಂದಿಗೆ ಈ ಘಟನೆಗಳ ಬಗ್ಗೆ ಗಮನಸೆಳೆದಿದ್ದು, ಈ ಅಪರಾಧಗಳ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ವಿನಂತಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆನಡಾದಲ್ಲಿ ಈ ಅಪರಾಧ ಎಸಗುವ ಅಪರಾಧಿಗಳನ್ನು ಇದುವರೆಗೆ ಕಾನೂನಿನ ಕುಣಿಕೆಗೆ ಒಳಪಡಿಸಿಲ್ಲ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಕೆನಡಾ: ದ್ವೇಷಪೂರಿತ ದಾಳಿಗೆ ಒಂದೇ ಕುಟುಂಬದ ನಾಲ್ವರು ಬಲಿ

“ಮೇಲೆ ವಿವರಿಸಿದಂತೆ ಅಪರಾಧಗಳ ಹೆಚ್ಚುತ್ತಿರುವ ಘಟನೆಗಳ ಹಿನ್ನಲೆಯಲ್ಲಿ, ಭಾರತೀಯ ಪ್ರಜೆಗಳು ಮತ್ತು ಕೆನಡಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ಶಿಕ್ಷಣಕ್ಕಾಗಿ ಅಥವಾ ಇತರ ಪ್ರಯಾಣಕ್ಕಾಗಿ ಕೆನಡಾಕ್ಕೆ ತೆರಳುವವರು ಸರಿಯಾದ ಎಚ್ಚರಿಕೆಯನ್ನು ವಹಿಸಬೇಕು ಮತ್ತು ಜಾಗರೂಕರಾಗಿರಲು ಸೂಚಿಸಲಾಗಿದೆ” ಎಂದು ಸಚಿವಾಲಯದ ಸಲಹೆಯು ಹೇಳಿದೆ.

ಇದನ್ನೂ ಓದಿ: ಸೆಪ್ಟೆಂಬರ್‌ 5 ‘ಗೌರಿ ಲಂಕೇಶ್‌ ದಿನ’ ಎಂದು ಘೋಷಿಸಿದ ಕೆನಡಾದ ಬರ್ನಾಬಿ ನಗರ!

ಭಾರತೀಯ ಪ್ರಜೆಗಳು ಮತ್ತು ಕೆನಡಾದಲ್ಲಿರುವ ಭಾರತದ ವಿದ್ಯಾರ್ಥಿಗಳು ಸಚಿವಾಲಯದ ವೆಬ್‌ಸೈಟ್‌ಗಳು ಅಥವಾ MADAD ಪೋರ್ಟಲ್ madad.gov.in ಮೂಲಕ ಒಟ್ಟಾವಾದಲ್ಲಿರುವ ಭಾರತದ ಹೈಕಮಿಷನ್ ಅಥವಾ ಟೊರೊಂಟೊ ಮತ್ತು ವ್ಯಾಂಕೋವರ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಸಚಿವಾಲಯ ತಿಳಿಸಿದೆ.

ಯಾವುದೇ ಅವಶ್ಯಕತೆ ಅಥವಾ ತುರ್ತು ಸಂದರ್ಭದಲ್ಲಿ ಕೆನಡಾದಲ್ಲಿರುವ ಭಾರತೀಯ ನಾಗರಿಕರೊಂದಿಗೆ ಉತ್ತಮ ಸಂಪರ್ಕ ಸಾಧಿಸಲು ಈ ನೋಂದಣಿಯು ಹೈ ಕಮಿಷನ್ ಮತ್ತು ಕಾನ್ಸುಲೇಟ್ ಜನರಲ್ ಅನ್ನು ಸಕ್ರಿಯಗೊಳಿಸುತ್ತದೆ ಎಂದು ಅದು ಹೇಳಿದೆ.

ಟೊರೊಂಟೊದಲ್ಲಿರುವ BAPS ಸ್ವಾಮಿನಾರಾಯಣ ಮಂದಿರದಲ್ಲಿ ಭಾರತ ವಿರೋಧಿ ಬರಹಗಳನ್ನು ಬರೆದು ವಿರೂಪಗೊಳಿಸಲಾಯಿತು ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಭಾರತೀಯ ಹೈಕಮಿಷನ್ ಕಳೆದ ವಾರ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಘಟನೆಯ ಬಗ್ಗೆ ತನಿಖೆ ಮಾಡಲು ಮತ್ತು ದುಷ್ಕರ್ಮಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಕೆನಡಾದ ಅಧಿಕಾರಿಗಳನ್ನು  ವಿನಂತಿಸಿದೆ.

ಇದನ್ನೂ ಓದಿ: ‘ಎಂದೆಂದಿಗೂ ನೀ ಕನ್ನಡವಾಗಿರು’; ಕೆನಡಾದ ಸಂಸತ್ತಿನಲ್ಲಿ ಮೊಳಗಿದ ರಾಷ್ಟ್ರಕವಿ ಕುವೆಂಪು ಗೀತೆ!

ಕೆನಡಾ ಭಾರತೀಯ ಮೂಲದ 16 ಲಕ್ಷ ಜನರಿಗೆ ಮತ್ತು ಅನಿವಾಸಿ ಭಾರತೀಯರಿಗೆ ನೆಲೆಯಾಗಿದೆ. ಪ್ರಪಂಚದಾದ್ಯಂತದ ಭಾರತೀಯರು ಅತೀ ಹೆಚ್ಚು ಇರುವ ರಾಷ್ಟ್ರಗಳಲ್ಲಿ ಕೆನಡಾ ಕೂಡಾ ಒಂದಾಗಿದೆ. ಅಲ್ಲದೆ ಕೆನಡಾದಲ್ಲಿ ರಕ್ಷಣಾ ಸಚಿವೆ ಅನಿತಾ ಆನಂದ್ ಸೇರಿದಂತೆ ಭಾರತೀಯ ಮೂಲದ 17 ಸಂಸದರು ಮತ್ತು ಮೂವರು ಕ್ಯಾಬಿನೆಟ್ ಮಂತ್ರಿಗಳು ದೇಶದ ಆಡಳಿತರೂಢ ಸರ್ಕಾರದಲ್ಲಿ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...