Homeಚಳವಳಿಲಿಂಗತ್ವ ಕಂದರವನ್ನು ಹೆಚ್ಚಿಸಿದ ಲಾಕ್‌ಡೌನ್‌: ಮಹಿಳೆಯರನ್ನು ಮರೆತುಬಿಟ್ಟ ಸರ್ಕಾರ

ಲಿಂಗತ್ವ ಕಂದರವನ್ನು ಹೆಚ್ಚಿಸಿದ ಲಾಕ್‌ಡೌನ್‌: ಮಹಿಳೆಯರನ್ನು ಮರೆತುಬಿಟ್ಟ ಸರ್ಕಾರ

ಭಾರತದಲ್ಲಿ ಪ್ರತಿನಿತ್ಯ 70,000 ಮಹಿಳೆಯರು ಹೆರುತ್ತಾರೆ, ಮತ್ತು 45,000 ಹೆಣ್ಣುಮಕ್ಕಳು ಗರ್ಭಪಾತ ಮಾಡಿಸುತ್ತಾರೆ ಎಂಬುದನ್ನು ಸರಕಾರ ಮರೆತುಬಿಟ್ಟಿದೆ. ಪ್ರತಿನಿತ್ಯ 10,000ದಷ್ಟು ಮಹಿಳೆಯರಿಗೆ ಆರೋಗ್ಯ ಶುಶ್ರೂಸೆ ಬೇಕಾಗುತ್ತದೆ.

- Advertisement -
- Advertisement -

ಭಾರತವು ಕೊರೋನ ಪಿಡುಗು ಮತ್ತು ನಂತರ ಹೇರಲಾದ ಲಾಕ್‌ಡೌನ್ ಪರಿಣಾಮವಾಗಿ ಕಳೆದ ಕೆಲವು ತಿಂಗಳುಗಳಿಂದ ಹಿಂದೆಂದೂ ಕಂಡಿರದಂತಹ ಬಿಕ್ಕಟ್ಟನ್ನು ಅನುಭವಿಸುತ್ತಿದೆ. ಈ ನಿರ್ಧಾರದ ಅಯೋಜಿತ ಮತ್ತು ಕಠೋರ ಸ್ವರೂಪವು ಆರೋಗ್ಯ ಮತ್ತು ಶುಶ್ರೂಷೆಯ ಬಿಕ್ಕಟ್ಟಿನ ಹೊರತಾಗಿ ದೊಡ್ಡ ಪ್ರಮಾಣದ ಮಾನವೀಯ ದುರಂತಕ್ಕೆ ಕಾರಣವಾಯಿತು. ಅತ್ಯಂತ ಕಣ್ಣಿಗೆ ರಾಚುವ ದುಷ್ಪರಿಣಾಮವು ಅನೌಪಚಾರಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲಾಯಿತು. ಅವರು ಹತಾಶರಾಗಿ ನಗರಗಳಿಂದ ನೂರಾರು ಮೈಲಿ ದೂರದಲ್ಲಿರುವ ತಮ್ಮ ಊರುಗಳಿಗೆ ಧಾವಿಸಬೇಕಾಯಿತು. ಇನ್ನೂ ಕೂಡಾ ಅವರು ಆದಾಯ ನಷ್ಟ, ಉಪವಾಸ ಮತ್ತು ಬಡತನಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ನರಳುತ್ತಿದ್ದಾರೆ. ಆದರೆ, ಕಣ್ಣಿಗೆ ಬೀಳದ ಪರಿಣಾಮವು ಮಹಿಳೆಯರು, ಹೆಣ್ಣು ಮಕ್ಕಳು ಮತ್ತು ಅಸಮ ಲಿಂಗತ್ವವಿರುವ ವ್ಯಕ್ತಿಗಳ ಮೇಲಾಗಿದ್ದು, ಅವರು ಮೌನವಾಗಿ ತಮ್ಮ ನೋವನ್ನು ಅದುಮಿಕೊಂಡು ಕಷ್ಟಪಡುತ್ತಿದ್ದಾರೆ.

ಈ ಬಿಕ್ಕಟ್ಟಿನ ಮುಂಚೂಣಿಯಲ್ಲಿ ಆರೋಗ್ಯ ಕಾರ್ಯಕರ್ತೆಯರಾಗಿರುವ, ಆಯಾಗಳು, ದಾದಿಯರು ಮತ್ತು ಸ್ವಚ್ಛತಾ ಕಾರ್ಮಿಕರಾಗಿ ಕೆಲಸ ಮಾಡುವ ಮಹಿಳೆಯರು ನಮ್ಮ ಕಣ್ಣಿಗೆ ಬೀಳುತ್ತಿಲ್ಲ. ನಮ್ಮ ಆರೋಗ್ಯ ವ್ಯವಸ್ಥೆಯಲ್ಲಿ 70 ಶೇಕಡಾದಷ್ಟು ಮಹಿಳೆಯರೇ ಇರುವುದೆಂದು ನಮಗೆಲ್ಲಾ ಗೊತ್ತಿದೆ. ಆದರೂ, ಅವರ ಸಹಜ ಹಕ್ಕುಗಳಿಗೆ ಯಾವುದೇ ಖಾತರಿಯಿಲ್ಲ. ಸಾಮಾನ್ಯವಾಗಿ ಆರೋಗ್ಯ ವ್ಯವಸ್ಥೆಯ ಶ್ರೇಣೀಕೃತ ವ್ಯವಸ್ಥೆಯಲ್ಲಿ ಅತ್ಯಂತ ಕೆಳಗೆ ಇರುವವರೇ ಮಹಿಳೆಯರು. 10 ಲಕ್ಷಕ್ಕೂ ಹೆಚ್ಚು  ಹಲವಾರು ರಾಜ್ಯಗಳಲ್ಲಿ ಕನಿಷ್ಟ ವೇತನವನ್ನೂ ಪಡೆಯದೇ ಅತ್ಯಂತ ಹೆಚ್ಚು ಅಪಾಯವಿರುವ ಸಮುದಾಯ ಕಣ್ಗಾವಲಿನಲ್ಲಿ ತೊಡಗಿರುವುದು ನಮಗೆ ಕಾಣಿಸುತ್ತಿಲ್ಲ.

ದಾದಿಯರು ಹೇಗೆ ಆಸ್ಪತ್ರೆಗಳು ಸಂಬಳವಿಲ್ಲದೇ ಕೆಲಸ ಮಾಡಲು ಕೆಲವು ತಿಂಗಳುಗಳಿಂದ ಒತ್ತಾಯಿಸುತ್ತಿವೆ ಎಂಬ ಕುರಿತು ಗಮನ ಸೆಳೆಯಲು ಸಾಂಕೇತಿಕ ಮುಷ್ಕರವನ್ನೂ ನಡೆಸಿದ್ದಾರೆ. ವೈದ್ಯರುಗಳಿಗಿಂತ ಹೆಚ್ಚು ಸಮಯವನ್ನು ಕೊರೋನ ರೋಗಿಗಳ ಸಂಪರ್ಕದಲ್ಲಿ ಕಳೆಯುವ ಮಹಿಳಾ ಆರೋಗ್ಯ ಕಾರ್ಯಕರ್ತರಿಗೆ ಅಗತ್ಯವಾದ ಪಿಪಿಇ ಕಿಟ್‌ಗಳನ್ನು ಸಾಕಷ್ಟು ಪ್ರಮಾಣದಲ್ಲಿ ನೀಡಲಾಗುತ್ತಿಲ್ಲ ಎಂದು ಅವರು ದೂರಿದ್ದಾರೆ. ಮಹಿಳಾ ದಾದಿಯರು ಅಶೌಚ ಮತ್ತು ಅಸುರಕ್ಷಿತ ತಾಣಗಳಲ್ಲಿ ರಾತ್ರಿ ಹೊತ್ತು ಉಳಿಯುವಂತೆ ಮಾಡಲಾಗಿದ್ದರೆ, ಹೆಚ್ಚಾಗಿ ಪುರುಷರೇ ಆಗಿರುವ ವೈದ್ಯರುಗಳನ್ನು ಹೊಟೇಲುಗಳಲ್ಲಿ ವಾಸಿಸಲು ಅವಕಾಶ ನೀಡಲಾಗಿದೆ.

ಮನೆಯೊಳಗೂ ಮಹಿಳೆಯರು ಮಾಡುವ ಸಂಬಳವಿಲ್ಲದ ಕಾಯಕದ ಹೊರೆಯು ಹೆಚ್ಚಿದೆ.  ಏಕೆಂದರೆ, ಮನೆಯಲ್ಲಿ ಅಸ್ವಸ್ಥ ಕುಟುಂಬದ ಸದಸ್ಯರ ಆರೈಕೆ ಮಾಡುವವರೂ ಅವರೇ, ಕ್ವಾರಂಟೈನ್‌ನಲ್ಲಿರುವವರನ್ನು ನೋಡಿಕೊಳ್ಳುವವರೂ ಅವರೇ, ಮನೆಗಳಿಗೆ ಪಡಿತರ ತರುವವರು, ಕೆಲವು ಕಡೆಗಳಲ್ಲಿ ದೂರದೂರದಿಂದ ನೀರು ತರುವವರೂ ಅವರೇ. ಇವೆಲ್ಲವೂ ಅವರನ್ನು ಹೆಚ್ಚಿನ ಸೋಂಕು ಅಪಾಯಕ್ಕೆ ತಳ್ಳುತ್ತದೆ.

ಈ ಸಂದರ್ಭದಲ್ಲಿ ಶಾಲೆಗಳಲ್ಲಿ ಮಧ್ಯಾಹ್ನದ ಊಟ ಮತ್ತು ಅಂಗನವಾಡಿಗಳ ಪೌಷ್ಠಿಕ ಪೂರಕ ಆಹಾರ ಲಭಿಸದೇ ಇರುವುದರಿಂದ ಮತ್ತು ನಗರಗಳಿಗೆ ವಲಸೆ ಹೋಗಿದ್ದ ಹೆಚ್ಚಿನ ಪುರುಷರು ಮನೆಗೆ ಮರಳಿರುವುದರಿಂದ ಪ್ರತಿಯೊಂದು ಮನೆಯಲ್ಲಿ, ಮುಖ್ಯವಾಗಿ ಬಡವರ ಮನೆಗಳಲ್ಲಿ ಆಹಾರಕ್ಕಾಗಿ ಒತ್ತಡವು ಹೆಚ್ಚಿದೆ. ಸಾಮಾನ್ಯವಾಗಿ ಮಹಿಳೆಯರು ಕೊನೆಗೆ ಉಣ್ಣುತ್ತಾರೆ ಮತ್ತು ಪುರುಷರಿಗೆ ಹೋಲಿಸಿದರೆ ಕಡಿಮೆ ಪೌಷ್ಟಿಕಾಂಶವುಳ್ಳ ಆಹಾರ ಸೇವಿಸುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿದೆ.

ಈಗ ಆಹಾರದ ಲಭ್ಯತೆ ಕಡಿಮೆಯಾಗಿರುವಾಗ, ಮುಖ್ಯವಾಗಿ ಗರ್ಭಿಣಿಯರು ಮತ್ತು ಮೊಲೆಯೂಡಿಸುವ ಮಹಿಳೆಯರ ಪರಿಸ್ಥಿತಿ ಹದಗೆಡಲಿದೆ. ಇದು ಒಂದು ಆತಂಕಕಾರಿ ವಿಷಯವಾಗಿದೆ. ಯಾಕೆಂದರೆ, ಭಾರತವು ಈಗಾಗಲೇ ಮಹಿಳೆಯರಲ್ಲಿ ರಕ್ತಹೀನತೆ ಮತ್ತು ದೈಹಿಕ ದೌರ್ಬಲ್ಯದ ಮಟ್ಟದಲ್ಲಿ ಅತ್ಯಂತ ಕೆಳಗಿನ ಸ್ಥಾನದಲ್ಲಿದ್ದು, ನಾಚಿಕೆಗೇಡಿನ ಪರಿಸ್ಥಿತಿಯಲ್ಲಿದೆ. ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ 2016 (NFHS-4) ತೋರಿಸಿರುವಂತೆ, ಗರ್ಭಿಣಿಯರು ಮತ್ತು ಮೊಲೆಯೂಡಿಸುವ ಮಹಿಳೆಯರೂ ಸೇರಿದಂತೆ ಒಟ್ಟಾರೆ ಮಹಿಳೆಯರಲ್ಲಿ ಅರ್ಧದಷ್ಟು ಮಂದಿ ರಕ್ತಹೀನತೆಯಿಂದ ಬಳಲುತ್ತಿದ್ದಾರೆ.

ಮನೆಗಳ ಒಳಗೆಯೇ, ಅತ್ಯಂತ ಹೆಚ್ಚಿನ ಮಾನಸಿಕ ಒತ್ತಡದ ಸಂದರ್ಭದಲ್ಲಿ ಕೌಟುಂಬಿಕ ಹಿಂಸೆಯು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಲಾಕ್‌ಡೌನ್ ಸಮಯದಲ್ಲಿ ಹಿಂಸಾಚಾರದ ವರದಿ ಮಾಡುವುದು ಅಥವಾ ಔಷಧಾಲಯಗಳು ಮುಚ್ಚಿರುವುದರಿಂದ ಸೂಕ್ತವಾದ ಚಿಕಿತ್ಸೆ ಪಡೆಯುವುದು ಕೂಡಾ ಅತ್ಯಂತ ಕಷ್ಟಸಾಧ್ಯ ವಿಷಯವಾಗಿದೆ. ಅದಕ್ಕಿಂತ ಹೆಚ್ಚಾಗಿ ಹಿಂಸಾತ್ಮಕವಾಗಿ ಲಾಕ್‌ಡೌನ್ ಅನುಷ್ಟಾನಗೊಳಿಸುತ್ತಿರುವ ಪೊಲೀಸರನ್ನು ಸಂಪರ್ಕಿಸಿ ನೆರವು ಪಡೆಯುವುದೂ ಕೂಡಾ ತುಂಬಾ ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಮಹಿಳೆಯರು, ಹೆಣ್ಣುಮಕ್ಕಳು ಮತ್ತು ಅಸಮ ಲಿಂಗತ್ವ ಹೊಂದಿರುವ ವ್ಯಕ್ತಿಗಳು ಹಾಗೂ ಲೈಂಗಿಕ ಕಾರ್ಮಿಕರು ಸಾಕಷ್ಟು ಹೆಚ್ಚಿನ ಪ್ರಮಾಣದಲ್ಲಿ ಲೈಂಗಿಕ ಕಿರುಕುಳ ಹೊಂದಿರುವ ಸಾಧ್ಯತೆಗಳು ಇವೆ. ಅವರಿಗೆ ಈ ಬಲಾತ್ಕಾರದ ಲಾಕ್‌ಡೌನ್ ಸಂದರ್ಭದಲ್ಲಿ ರಕ್ಷಣೆ, ಸಂತಾನೋತ್ಪತ್ತಿ ನಿರೋಧಕ ಸಾಧನಗಳ ಲಭ್ಯತೆ ಇರುವುದು ಸಾಧ್ಯವಿಲ್ಲ. ಇದು ಎಚ್ಐವಿ ಮತ್ತಿತರ ಲೈಂಗಿಕವಾಗಿ ಹರಡುವ ರೋಗಗಳ, ಬಯಸದಿರುವ ಗರ್ಭ, ಗರ್ಭಪಾತ ಇತ್ಯಾದಿ ಅಪಾಯಗಳನ್ನು ಗಣನೀಯವಾಗಿ ಹೆಚ್ಚುಮಾಡುತ್ತದೆ.

ಭಾರತದಲ್ಲಿ ಸಂತಾನೋತ್ಪತ್ತಿ ಆರೋಗ್ಯ ಸೇವೆಗಳ ಪ್ರತಿಷ್ಠಾನ (FRHSI) ಅಧ್ಯಯನದ ಪ್ರಕಾರ ಈ ಲಾಕ್‌ಡೌನ್ ಎಂಟು ಲಕ್ಷಕ್ಕೂ ಹೆಚ್ಚು ಅಸುರಕ್ಷಿತ ಗರ್ಭಪಾತಕ್ಕೆ ಕಾರಣವಾಗಲಿದೆ. 23 ಲಕ್ಷ ಬಯಸದ ಗರ್ಭಗಳಿಂದ 1,750ರಷ್ಟು ತಾಯಂದಿರ ಮರಣವು (ಎಂಎಂಅರ್) ಸಂಭವಿಸಲಿವೆ. ಹೆಣ್ಣುಮಕ್ಕಳ ಋತುಕಾಲದ (ಮುಟ್ಟು ಕಾಲದ) ಸುರಕ್ಷಾ ಸಾಧನಗಳು ಸ್ಯಾನಿಟರಿ ಪ್ಯಾಡ್) ಇತ್ಯಾದಿ ಇಲ್ಲಿಯವರೆಗೆ ಶಾಲೆಯಿಂದ, ಅಂಗನವಾಡಿಯಿಂದ ಅಥವಾ ಆಶಾ ಕಾರ್ಯಕರ್ತೆಯರಿಂದ ದೊರಕುತ್ತಿದ್ದವು. ಈಗ ಅದೂ ಇಲ್ಲವಾಗಿದೆ. ದುಬಾರಿಯಾದ ಇಂತಹ ಉತ್ಪನ್ನಗಳನ್ನು ಖರೀದಿಸಲು ಎಷ್ಟು ಹೆಣ್ಣುಮಕ್ಕಳಿಗೆ ಸಾಧ್ಯವಿದೆ ಮತ್ತು ಎಷ್ಟು ಜನ ಈ ಲಾಕ್‌ಡೌನ್ ಸಂದರ್ಭದಲ್ಲಿ ಹೋಗಿ ಕೊಳ್ಳಲು ಸಾಧ್ಯ?

ಅವಸರದ ಲಾಕ್‌ಡೌನ್ ನಿರ್ಧಾರದ ಸಂದರ್ಭದಲ್ಲಿ ಭಾರತದಲ್ಲಿ ಪ್ರತಿನಿತ್ಯ 70,000 ಮಹಿಳೆಯರು ಹೆರುತ್ತಾರೆ, ಮತ್ತು 45,000 ಹೆಣ್ಣುಮಕ್ಕಳು ಗರ್ಭಪಾತ ಮಾಡಿಸುತ್ತಾರೆ ಎಂಬುದನ್ನು ಸರಕಾರ ಮರೆತುಬಿಟ್ಟಿದೆ. ಪ್ರತಿನಿತ್ಯ 10,000ದಷ್ಟು ಮಹಿಳೆಯರಿಗೆ ವಿಶೇಷ ಶುಶ್ರೂಷೆ ಬೇಕಾಗಿರುವ ಹೆರಿಗೆ ಸಂಬಂಧಿ ಕಷ್ಟಗಳು ಎದುರಾಗುತ್ತವೆ ಎಂಬುದೂ ಸರಕಾರಕ್ಕೆ ಮರೆತುಹೋದಂತಿದೆ. ಇಂತವರಿಗೆ ಸರಕಾರಿ ಆಗಲೀ, ಖಾಸಗಿಯಾಗಲೀ ಯಾವುದೇ ಸೇವೆಯನ್ನು ಪಡೆಯಲು ಸಾಧ್ಯವಾಗುತ್ತಿಲ್ಲ.

 

ಲಾಕ್‌ಡೌನ್‌ನ ಅವಸರದ ನಿರ್ಧಾರದ ಈ ಸಂದರ್ಭದಲ್ಲಿ ಹಲವಾರು ಗರ್ಭಿಣಿಯರು ಐದಾರು ಆಸ್ಪತ್ರೆಗಳಿಗೆ ಅಲೆದಾಡಿದ ಮಾಧ್ಯಮ ವರದಿಗಳಿವೆ. ಅವುಗಳು ರೋಗಿಗಳನ್ನು ದಾಖಲಿಸಲು ಹಿಂಜರಿಯುತ್ತಿರುವುದೇ ಇದಕ್ಕೆ ಕಾರಣ. ಮಹಿಳೆಯರು ಮನೆಗಳಲ್ಲಿ, ರೈಲುಗಳಲ್ಲಿ, ವಾಹನಗಳಲ್ಲಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇಂತಹ ಪ್ರಕರಣಗಳ ಕುರಿತು ದೂರುಗಳು ತೆಲಂಗಾಣ, ಮುಂಬಯಿ ಮತ್ತು ದಿಲ್ಲಿ ಹೈಕೋರ್ಟ್‌ಗಳಲ್ಲಿ ದಾಖಲಾಗಿವೆ. ಹಲವಾರು ಮಹಿಳೆಯರು ಬಹಿರಂಗವಾಗಿ ತಮ್ಮ ಊರುಗಳಿಗೆ ನೂರಾರು ಮೈಲಿ ನಡೆಯುತ್ತಾ ರಸ್ತೆಗಳಲ್ಲಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅವರ ಮಾಲಕರಾಗಲೀ, ಸರಕಾರವಾಗಲೀ ಅವರ ನೆರವಿಗೆ ಬಂದಿಲ್ಲ. ಇದಕ್ಕಿಂತ ನಾಚಿಕೆಗೆಡು ಬೇರೆ ಇದೆಯೇ ಒಂದು ದೇಶಕ್ಕೆ?

ಇದು ಭಾರತವು ಎದುರಿಸಬೇಕಾಗಿರುವ ಮೊದಲ ಬಿಕ್ಕಟ್ಟು ಏನೂ ಅಲ್ಲ. ಈ ದೇಶದಲ್ಲಿ ಮಹಿಳೆಯರು ಮತ್ತವರ ಆರೋಗ್ಯದ ಬಗ್ಗೆ ದಂಗುಬಡಿಸುವಂತಹ ಅಸಡ್ಡೆ ತೋರಲಾಗಿದೆ. ಯಾವುದೇ ಸಾಂಕ್ರಾಮಿಕ ರೋಗವು ಪುರುಷರು, ಮಹಿಳೆಯರು, ಅಸಮ ಲಿಂಗತ್ವ ಹೊಂದಿರುವವರು ಮತ್ತು ಮಕ್ಕಳ ಮೇಲೆ ಬೇರೆಬೇರೆ ರೀತಿಯ ಪರಿಣಾಮಗಳನ್ನು ಬೀರುತ್ತವೆ ಎಂಬ ಸೂಕ್ಷ್ಮತೆಯನ್ನು ನಮ್ಮ ಯೋಜಕರು ತಿಳಿದುಕೊಳ್ಳಬೇಕಾಗುತ್ತದೆ. ಜಾತಿ, ಧರ್ಮ, ಅಂತಸ್ತು, ಪ್ರಾದೇಶಿಕತೆ, ಸಂಪನ್ಮೂಲ ಮತ್ತು ಸೌಲಭ್ಯಗಳ ಲಭ್ಯತೆಯ ಆಧಾರದಲ್ಲೂ ಇವುಗಳು ಬದಲಾಗುತ್ತವೆ ಎಂಬುದನ್ನು ಕೂಡಾ ಅವರು ತಿಳಿದುಕೊಳ್ಳಬೇಕು. ಈ ಪಿಡುಗು ಈಗಾಗಲೇ ನಮ್ಮ ಸಮಾಜದಲ್ಲಿ ಇರುವ ಲಿಂಗತ್ವ ಸಂಬಂಧಿ ಕಂದರವನ್ನು ಇನ್ನಷ್ಟು ಆಲ, ಅಗಲ ಮಾಡದಂತೆ ತಡೆಯಬೇಕು.

  • ಜಶೋಧರ ದಾಸ್‌ಗುಪ್ತಾ

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...