Homeಸಿನಿಮಾಕ್ರೀಡೆಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗುವ ಹುರುಪಿನಲ್ಲಿರುವ ರಿಷಬ್ ಪಂತ್‌

ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗುವ ಹುರುಪಿನಲ್ಲಿರುವ ರಿಷಬ್ ಪಂತ್‌

- Advertisement -
- Advertisement -

ವೆಸ್ಟ್ ಇಂಡೀಸ್‌ನ ಮೊದಲ ಏಕದಿನ ಪಂದ್ಯದಿಂದ ಕೆ.ಎಲ್‌.ರಾಹುಲ್ ಹೊರಗುಳಿದ ಸಂದರ್ಭದಲ್ಲೇ ಧೋನಿ ನುಡಿದ 2017 ರ ಭವಿಷ್ಯ ನಿಜವಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಮೊದಲ ಪಂದ್ಯಕ್ಕೆ ತಂಡದ ಉಪನಾಯಕ ಕೆ.ಎಲ್.ರಾಹುಲ್, ಅನುಪಸ್ಥಿತಿಯಲ್ಲಿ ವಿಕೆಟ್-ಕೀಪರ್‌ ರಿಷಬ್‌ ಪಂತ್‌ರನ್ನು ಉಪನಾಯಕನೆಂದು ಘೋಷಿಸಲಾಗಿದೆ.

ರಿಷಬ್ ಪಂತ್ ಉಪನಾಯಕನ ಪಾತ್ರ ನಿರ್ವಹಿಸುತ್ತಿದ್ದಂತೆ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ 2017 ರಲ್ಲಿ ಪತ್ರಿಕಾಗೋಷ್ಠಿಯಲ್ಲಿಆಡಿದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಮುನ್ನೆಲೆಗೆ ಬಂದಿವೆ. ಕ್ರಿಕೆಟ್‌ ಮಂಡಳಿ ಯಾರನ್ನೇ ತಂಡದ ನಾಯಕನೆಂದು ಅಧಿಕೃತವಾಗಿ ಘೋಷಿಸದಿದ್ದರೂ, ತಂಡದ ವಿಕೆಟ್-ಕೀಪರ್ ಉಪನಾಯಕನಂತೆಯೇ ಕಾರ್ಯನಿರ್ವಹಿಸುತ್ತಾನೆ. ಪಂದ್ಯದ ಸಮಯದಲ್ಲಿ ಮೈದಾನ ಸಿದ್ಧಪಡಿಸುವ ಜವಾಬ್ದಾರಿ ವಿಕೆಟ್-ಕೀಪರ್‌ ಮೇಲಿರುತ್ತದೆ. ನಾಯಕನ ಸಲಹೆಗಳಿಗೆ ಅನುಗುಣವಾಗಿ ಅಗತ್ಯ ಬದಲಾವಣೆಗಳನ್ನು ಆತನೇ ಮಾಡುತ್ತಾನೆ ಎಂದು ಧೋನಿ ಹೇಳಿದ್ದರು.

ಇದನ್ನೂ ಓದಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ವೆಸ್ಟ್ಇಂಡೀಸ್‌ ವಿರುದ್ಧದ ಏಕದಿನ ಸರಣಿಯ ಮೂರು ಪಂದ್ಯ ಆಡಲು ಭಾರತ ತಂಡವನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದ್ದು, ರಿಷಬ್ ಪಂತ್ ಉಪನಾಯಕರಾಗಿದ್ದಾರೆ. ಆದರೆ 2ನೇ ಏಕದಿನ ಪಂದ್ಯದಿಂದ ರಾಹುಲ್‌ ತಮ್ಮ ಕರ್ತವ್ಯಕ್ಕೆ ಮರಳಲಿದ್ದಾರೆ.

ಸೀಮಿತ ಓವರ್‌ಗಳ ಕ್ರಿಕೆಟ್‌ ಪಂದ್ಯದಲ್ಲಿ ನಾಯಕತ್ವದ ಭಾಗವಾಗಿ ಪಂತ್‌ರನ್ನು ಪರಿಗಣಿಸಿರುವುದು ತಾತ್ಕಾಲಿಕ ನಿರ್ಧಾರವಾದರೂ, ಭವಿಷ್ಯದಲ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅವರನ್ನು ಭಾರತ ಕ್ರಿಕೆಟ್ ತಂಡದ ಮುಂದಿನ ನಾಯಕನನ್ನಾಗಿ ಮಾಡುವ ಬಗ್ಗೆ ಚರ್ಚೆಗಳು ಬಲವಾಗಿ ನಡೆಯುತ್ತಿವೆ.

ಕ್ರಿಕೆಟ್‌ ಅಭಿಮಾನಿಗಳು ಮತ್ತು ಪರಿಣಿತರ ಅಭಿಪ್ರಾಯದಂತೆ ತಂಡದ ನಾಯಕ ಸ್ಥಾನವನ್ನುಅಲಂಕರಿಸುವ ಓಟದಲ್ಲಿ ರೋಹಿತ್‌ ಶರ್ಮಾ ಮೊದಲ ಸ್ಥಾನದಲ್ಲಿದ್ದಂತೆ, ಮುಂದಿನ ದಿನಗಳಲ್ಲಿ ಪಂತ್‌ ಸಹ ಸ್ಥಾನ ಗಿಟ್ಟಿಸುವ ಸಾಲಿನಲ್ಲಿ ಪ್ರಮುಖರಾಗಲಿರುವ ಕಾಲ ದೂರವಿಲ್ಲಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಅನೇಕ ಕ್ರಿಕೆಟ್‌ ವಿಶ್ಲೇಷಕರ ಅಭಿಪ್ರಾಯದಂತೆ ಮುಂದಿನ ಏಪ್ರಿಲ್‌ಗೆ ರೋಹಿತ್‌ ಶರ್ಮಾ ಅವರಿಗೆ 35 ವರ್ಷವಾಗಲಿದ್ದು, ಕೆಲ ವರ್ಷಗಳವರೆಗೆ ಅವರು ಕ್ಯಾಪ್ಟನ್‌ ಸ್ಥಾನದಲ್ಲಿರಬಹುದು. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಹೆಸರುಗಳನ್ನು ಹಿಂದಿಕ್ಕುವ ಸಾಮರ್ಥ್ಯವಿರುವ, ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್ ಮುನ್ನೆಡೆಸುವಂಥ ನಾಯಕನನ್ನುಗುರುತಿಸುವ ಜವಾಬ್ದಾರಿಯೂ ಬಿಸಿಸಿಐ ಮುಂದಿದೆ. ಇದೇ ಕಾರಣಕ್ಕೆ 25 ವರ್ಷದ ಪಂತ್‌ರಂತಹ ಯುವ ಆಟಗಾರರನ್ನು ಪ್ರೋತ್ಸಾಹಿಸಲಾಗುತ್ತಿದೆ.

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 2021 ರ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ಸ್ಥಾನವನ್ನು ಉತ್ತಮವಾಗಿ ನಿರ್ವಹಿಸಿದ ಅನುಭವ ರಿಷಬ್‌ ಪಂತ್‌ಗಿದೆ. ದೆಹಲಿ ತಂಡವನ್ನು ಅಂಕಪಟ್ಟಿಯಲ್ಲಿ ನಂಬರ್‌ 1 ಆಗಿ ಪ್ಲೇ ಆಫ್‌ಗೆ ತಂದು ನಿಲ್ಲಿಸಿದ್ದರು.

ಮಾರ್ಚ್ 27 ರಲ್ಲಿ ಪ್ರಸಕ್ತ ಸಾಲಿನ ಕ್ರಿಕೆಟ್‌ ಸೀಸನ್ ಆರಂಭವಾಗುವ ನಿರೀಕ್ಷೆ ಇದ್ದು, ಪಂತ್ ನಾಯಕ ಸ್ಥಾನಕ್ಕೆ ಹಿಂದಿರುಗುವ ಹಾಗೂ ಮತ್ತೊಮ್ಮೆ ದೆಹಲಿಗೆ ಟ್ರೋಫಿ ತರಲು ಪ್ರಯತ್ನಿಸುವ ನಿರೀಕ್ಷೆ ಅವರ ಅಭಿಮಾನಿಗಳಿಗಿದೆ.

ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್‌‌‌ಗೆ ವಿದಾಯ ಹೇಳಿದ ಹರ್ಭಜನ್‌ ಸಿಂಗ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...