Homeಸಿನಿಮಾಕ್ರೀಡೆಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗುವ ಹುರುಪಿನಲ್ಲಿರುವ ರಿಷಬ್ ಪಂತ್‌

ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗುವ ಹುರುಪಿನಲ್ಲಿರುವ ರಿಷಬ್ ಪಂತ್‌

- Advertisement -
- Advertisement -

ವೆಸ್ಟ್ ಇಂಡೀಸ್‌ನ ಮೊದಲ ಏಕದಿನ ಪಂದ್ಯದಿಂದ ಕೆ.ಎಲ್‌.ರಾಹುಲ್ ಹೊರಗುಳಿದ ಸಂದರ್ಭದಲ್ಲೇ ಧೋನಿ ನುಡಿದ 2017 ರ ಭವಿಷ್ಯ ನಿಜವಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಮೊದಲ ಪಂದ್ಯಕ್ಕೆ ತಂಡದ ಉಪನಾಯಕ ಕೆ.ಎಲ್.ರಾಹುಲ್, ಅನುಪಸ್ಥಿತಿಯಲ್ಲಿ ವಿಕೆಟ್-ಕೀಪರ್‌ ರಿಷಬ್‌ ಪಂತ್‌ರನ್ನು ಉಪನಾಯಕನೆಂದು ಘೋಷಿಸಲಾಗಿದೆ.

ರಿಷಬ್ ಪಂತ್ ಉಪನಾಯಕನ ಪಾತ್ರ ನಿರ್ವಹಿಸುತ್ತಿದ್ದಂತೆ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ 2017 ರಲ್ಲಿ ಪತ್ರಿಕಾಗೋಷ್ಠಿಯಲ್ಲಿಆಡಿದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಮುನ್ನೆಲೆಗೆ ಬಂದಿವೆ. ಕ್ರಿಕೆಟ್‌ ಮಂಡಳಿ ಯಾರನ್ನೇ ತಂಡದ ನಾಯಕನೆಂದು ಅಧಿಕೃತವಾಗಿ ಘೋಷಿಸದಿದ್ದರೂ, ತಂಡದ ವಿಕೆಟ್-ಕೀಪರ್ ಉಪನಾಯಕನಂತೆಯೇ ಕಾರ್ಯನಿರ್ವಹಿಸುತ್ತಾನೆ. ಪಂದ್ಯದ ಸಮಯದಲ್ಲಿ ಮೈದಾನ ಸಿದ್ಧಪಡಿಸುವ ಜವಾಬ್ದಾರಿ ವಿಕೆಟ್-ಕೀಪರ್‌ ಮೇಲಿರುತ್ತದೆ. ನಾಯಕನ ಸಲಹೆಗಳಿಗೆ ಅನುಗುಣವಾಗಿ ಅಗತ್ಯ ಬದಲಾವಣೆಗಳನ್ನು ಆತನೇ ಮಾಡುತ್ತಾನೆ ಎಂದು ಧೋನಿ ಹೇಳಿದ್ದರು.

ಇದನ್ನೂ ಓದಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ವೆಸ್ಟ್ಇಂಡೀಸ್‌ ವಿರುದ್ಧದ ಏಕದಿನ ಸರಣಿಯ ಮೂರು ಪಂದ್ಯ ಆಡಲು ಭಾರತ ತಂಡವನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದ್ದು, ರಿಷಬ್ ಪಂತ್ ಉಪನಾಯಕರಾಗಿದ್ದಾರೆ. ಆದರೆ 2ನೇ ಏಕದಿನ ಪಂದ್ಯದಿಂದ ರಾಹುಲ್‌ ತಮ್ಮ ಕರ್ತವ್ಯಕ್ಕೆ ಮರಳಲಿದ್ದಾರೆ.

ಸೀಮಿತ ಓವರ್‌ಗಳ ಕ್ರಿಕೆಟ್‌ ಪಂದ್ಯದಲ್ಲಿ ನಾಯಕತ್ವದ ಭಾಗವಾಗಿ ಪಂತ್‌ರನ್ನು ಪರಿಗಣಿಸಿರುವುದು ತಾತ್ಕಾಲಿಕ ನಿರ್ಧಾರವಾದರೂ, ಭವಿಷ್ಯದಲ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅವರನ್ನು ಭಾರತ ಕ್ರಿಕೆಟ್ ತಂಡದ ಮುಂದಿನ ನಾಯಕನನ್ನಾಗಿ ಮಾಡುವ ಬಗ್ಗೆ ಚರ್ಚೆಗಳು ಬಲವಾಗಿ ನಡೆಯುತ್ತಿವೆ.

ಕ್ರಿಕೆಟ್‌ ಅಭಿಮಾನಿಗಳು ಮತ್ತು ಪರಿಣಿತರ ಅಭಿಪ್ರಾಯದಂತೆ ತಂಡದ ನಾಯಕ ಸ್ಥಾನವನ್ನುಅಲಂಕರಿಸುವ ಓಟದಲ್ಲಿ ರೋಹಿತ್‌ ಶರ್ಮಾ ಮೊದಲ ಸ್ಥಾನದಲ್ಲಿದ್ದಂತೆ, ಮುಂದಿನ ದಿನಗಳಲ್ಲಿ ಪಂತ್‌ ಸಹ ಸ್ಥಾನ ಗಿಟ್ಟಿಸುವ ಸಾಲಿನಲ್ಲಿ ಪ್ರಮುಖರಾಗಲಿರುವ ಕಾಲ ದೂರವಿಲ್ಲಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಅನೇಕ ಕ್ರಿಕೆಟ್‌ ವಿಶ್ಲೇಷಕರ ಅಭಿಪ್ರಾಯದಂತೆ ಮುಂದಿನ ಏಪ್ರಿಲ್‌ಗೆ ರೋಹಿತ್‌ ಶರ್ಮಾ ಅವರಿಗೆ 35 ವರ್ಷವಾಗಲಿದ್ದು, ಕೆಲ ವರ್ಷಗಳವರೆಗೆ ಅವರು ಕ್ಯಾಪ್ಟನ್‌ ಸ್ಥಾನದಲ್ಲಿರಬಹುದು. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಹೆಸರುಗಳನ್ನು ಹಿಂದಿಕ್ಕುವ ಸಾಮರ್ಥ್ಯವಿರುವ, ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್ ಮುನ್ನೆಡೆಸುವಂಥ ನಾಯಕನನ್ನುಗುರುತಿಸುವ ಜವಾಬ್ದಾರಿಯೂ ಬಿಸಿಸಿಐ ಮುಂದಿದೆ. ಇದೇ ಕಾರಣಕ್ಕೆ 25 ವರ್ಷದ ಪಂತ್‌ರಂತಹ ಯುವ ಆಟಗಾರರನ್ನು ಪ್ರೋತ್ಸಾಹಿಸಲಾಗುತ್ತಿದೆ.

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 2021 ರ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ಸ್ಥಾನವನ್ನು ಉತ್ತಮವಾಗಿ ನಿರ್ವಹಿಸಿದ ಅನುಭವ ರಿಷಬ್‌ ಪಂತ್‌ಗಿದೆ. ದೆಹಲಿ ತಂಡವನ್ನು ಅಂಕಪಟ್ಟಿಯಲ್ಲಿ ನಂಬರ್‌ 1 ಆಗಿ ಪ್ಲೇ ಆಫ್‌ಗೆ ತಂದು ನಿಲ್ಲಿಸಿದ್ದರು.

ಮಾರ್ಚ್ 27 ರಲ್ಲಿ ಪ್ರಸಕ್ತ ಸಾಲಿನ ಕ್ರಿಕೆಟ್‌ ಸೀಸನ್ ಆರಂಭವಾಗುವ ನಿರೀಕ್ಷೆ ಇದ್ದು, ಪಂತ್ ನಾಯಕ ಸ್ಥಾನಕ್ಕೆ ಹಿಂದಿರುಗುವ ಹಾಗೂ ಮತ್ತೊಮ್ಮೆ ದೆಹಲಿಗೆ ಟ್ರೋಫಿ ತರಲು ಪ್ರಯತ್ನಿಸುವ ನಿರೀಕ್ಷೆ ಅವರ ಅಭಿಮಾನಿಗಳಿಗಿದೆ.

ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್‌‌‌ಗೆ ವಿದಾಯ ಹೇಳಿದ ಹರ್ಭಜನ್‌ ಸಿಂಗ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...