Homeಸಿನಿಮಾಕ್ರೀಡೆಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗುವ ಹುರುಪಿನಲ್ಲಿರುವ ರಿಷಬ್ ಪಂತ್‌

ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗುವ ಹುರುಪಿನಲ್ಲಿರುವ ರಿಷಬ್ ಪಂತ್‌

- Advertisement -
- Advertisement -

ವೆಸ್ಟ್ ಇಂಡೀಸ್‌ನ ಮೊದಲ ಏಕದಿನ ಪಂದ್ಯದಿಂದ ಕೆ.ಎಲ್‌.ರಾಹುಲ್ ಹೊರಗುಳಿದ ಸಂದರ್ಭದಲ್ಲೇ ಧೋನಿ ನುಡಿದ 2017 ರ ಭವಿಷ್ಯ ನಿಜವಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಮೊದಲ ಪಂದ್ಯಕ್ಕೆ ತಂಡದ ಉಪನಾಯಕ ಕೆ.ಎಲ್.ರಾಹುಲ್, ಅನುಪಸ್ಥಿತಿಯಲ್ಲಿ ವಿಕೆಟ್-ಕೀಪರ್‌ ರಿಷಬ್‌ ಪಂತ್‌ರನ್ನು ಉಪನಾಯಕನೆಂದು ಘೋಷಿಸಲಾಗಿದೆ.

ರಿಷಬ್ ಪಂತ್ ಉಪನಾಯಕನ ಪಾತ್ರ ನಿರ್ವಹಿಸುತ್ತಿದ್ದಂತೆ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ 2017 ರಲ್ಲಿ ಪತ್ರಿಕಾಗೋಷ್ಠಿಯಲ್ಲಿಆಡಿದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಮುನ್ನೆಲೆಗೆ ಬಂದಿವೆ. ಕ್ರಿಕೆಟ್‌ ಮಂಡಳಿ ಯಾರನ್ನೇ ತಂಡದ ನಾಯಕನೆಂದು ಅಧಿಕೃತವಾಗಿ ಘೋಷಿಸದಿದ್ದರೂ, ತಂಡದ ವಿಕೆಟ್-ಕೀಪರ್ ಉಪನಾಯಕನಂತೆಯೇ ಕಾರ್ಯನಿರ್ವಹಿಸುತ್ತಾನೆ. ಪಂದ್ಯದ ಸಮಯದಲ್ಲಿ ಮೈದಾನ ಸಿದ್ಧಪಡಿಸುವ ಜವಾಬ್ದಾರಿ ವಿಕೆಟ್-ಕೀಪರ್‌ ಮೇಲಿರುತ್ತದೆ. ನಾಯಕನ ಸಲಹೆಗಳಿಗೆ ಅನುಗುಣವಾಗಿ ಅಗತ್ಯ ಬದಲಾವಣೆಗಳನ್ನು ಆತನೇ ಮಾಡುತ್ತಾನೆ ಎಂದು ಧೋನಿ ಹೇಳಿದ್ದರು.

ಇದನ್ನೂ ಓದಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ವೆಸ್ಟ್ಇಂಡೀಸ್‌ ವಿರುದ್ಧದ ಏಕದಿನ ಸರಣಿಯ ಮೂರು ಪಂದ್ಯ ಆಡಲು ಭಾರತ ತಂಡವನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದ್ದು, ರಿಷಬ್ ಪಂತ್ ಉಪನಾಯಕರಾಗಿದ್ದಾರೆ. ಆದರೆ 2ನೇ ಏಕದಿನ ಪಂದ್ಯದಿಂದ ರಾಹುಲ್‌ ತಮ್ಮ ಕರ್ತವ್ಯಕ್ಕೆ ಮರಳಲಿದ್ದಾರೆ.

ಸೀಮಿತ ಓವರ್‌ಗಳ ಕ್ರಿಕೆಟ್‌ ಪಂದ್ಯದಲ್ಲಿ ನಾಯಕತ್ವದ ಭಾಗವಾಗಿ ಪಂತ್‌ರನ್ನು ಪರಿಗಣಿಸಿರುವುದು ತಾತ್ಕಾಲಿಕ ನಿರ್ಧಾರವಾದರೂ, ಭವಿಷ್ಯದಲ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅವರನ್ನು ಭಾರತ ಕ್ರಿಕೆಟ್ ತಂಡದ ಮುಂದಿನ ನಾಯಕನನ್ನಾಗಿ ಮಾಡುವ ಬಗ್ಗೆ ಚರ್ಚೆಗಳು ಬಲವಾಗಿ ನಡೆಯುತ್ತಿವೆ.

ಕ್ರಿಕೆಟ್‌ ಅಭಿಮಾನಿಗಳು ಮತ್ತು ಪರಿಣಿತರ ಅಭಿಪ್ರಾಯದಂತೆ ತಂಡದ ನಾಯಕ ಸ್ಥಾನವನ್ನುಅಲಂಕರಿಸುವ ಓಟದಲ್ಲಿ ರೋಹಿತ್‌ ಶರ್ಮಾ ಮೊದಲ ಸ್ಥಾನದಲ್ಲಿದ್ದಂತೆ, ಮುಂದಿನ ದಿನಗಳಲ್ಲಿ ಪಂತ್‌ ಸಹ ಸ್ಥಾನ ಗಿಟ್ಟಿಸುವ ಸಾಲಿನಲ್ಲಿ ಪ್ರಮುಖರಾಗಲಿರುವ ಕಾಲ ದೂರವಿಲ್ಲಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಅನೇಕ ಕ್ರಿಕೆಟ್‌ ವಿಶ್ಲೇಷಕರ ಅಭಿಪ್ರಾಯದಂತೆ ಮುಂದಿನ ಏಪ್ರಿಲ್‌ಗೆ ರೋಹಿತ್‌ ಶರ್ಮಾ ಅವರಿಗೆ 35 ವರ್ಷವಾಗಲಿದ್ದು, ಕೆಲ ವರ್ಷಗಳವರೆಗೆ ಅವರು ಕ್ಯಾಪ್ಟನ್‌ ಸ್ಥಾನದಲ್ಲಿರಬಹುದು. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಹೆಸರುಗಳನ್ನು ಹಿಂದಿಕ್ಕುವ ಸಾಮರ್ಥ್ಯವಿರುವ, ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್ ಮುನ್ನೆಡೆಸುವಂಥ ನಾಯಕನನ್ನುಗುರುತಿಸುವ ಜವಾಬ್ದಾರಿಯೂ ಬಿಸಿಸಿಐ ಮುಂದಿದೆ. ಇದೇ ಕಾರಣಕ್ಕೆ 25 ವರ್ಷದ ಪಂತ್‌ರಂತಹ ಯುವ ಆಟಗಾರರನ್ನು ಪ್ರೋತ್ಸಾಹಿಸಲಾಗುತ್ತಿದೆ.

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 2021 ರ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ಸ್ಥಾನವನ್ನು ಉತ್ತಮವಾಗಿ ನಿರ್ವಹಿಸಿದ ಅನುಭವ ರಿಷಬ್‌ ಪಂತ್‌ಗಿದೆ. ದೆಹಲಿ ತಂಡವನ್ನು ಅಂಕಪಟ್ಟಿಯಲ್ಲಿ ನಂಬರ್‌ 1 ಆಗಿ ಪ್ಲೇ ಆಫ್‌ಗೆ ತಂದು ನಿಲ್ಲಿಸಿದ್ದರು.

ಮಾರ್ಚ್ 27 ರಲ್ಲಿ ಪ್ರಸಕ್ತ ಸಾಲಿನ ಕ್ರಿಕೆಟ್‌ ಸೀಸನ್ ಆರಂಭವಾಗುವ ನಿರೀಕ್ಷೆ ಇದ್ದು, ಪಂತ್ ನಾಯಕ ಸ್ಥಾನಕ್ಕೆ ಹಿಂದಿರುಗುವ ಹಾಗೂ ಮತ್ತೊಮ್ಮೆ ದೆಹಲಿಗೆ ಟ್ರೋಫಿ ತರಲು ಪ್ರಯತ್ನಿಸುವ ನಿರೀಕ್ಷೆ ಅವರ ಅಭಿಮಾನಿಗಳಿಗಿದೆ.

ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್‌‌‌ಗೆ ವಿದಾಯ ಹೇಳಿದ ಹರ್ಭಜನ್‌ ಸಿಂಗ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...