Homeಸಿನಿಮಾಕ್ರೀಡೆಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗುವ ಹುರುಪಿನಲ್ಲಿರುವ ರಿಷಬ್ ಪಂತ್‌

ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗುವ ಹುರುಪಿನಲ್ಲಿರುವ ರಿಷಬ್ ಪಂತ್‌

- Advertisement -
- Advertisement -

ವೆಸ್ಟ್ ಇಂಡೀಸ್‌ನ ಮೊದಲ ಏಕದಿನ ಪಂದ್ಯದಿಂದ ಕೆ.ಎಲ್‌.ರಾಹುಲ್ ಹೊರಗುಳಿದ ಸಂದರ್ಭದಲ್ಲೇ ಧೋನಿ ನುಡಿದ 2017 ರ ಭವಿಷ್ಯ ನಿಜವಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಮೊದಲ ಪಂದ್ಯಕ್ಕೆ ತಂಡದ ಉಪನಾಯಕ ಕೆ.ಎಲ್.ರಾಹುಲ್, ಅನುಪಸ್ಥಿತಿಯಲ್ಲಿ ವಿಕೆಟ್-ಕೀಪರ್‌ ರಿಷಬ್‌ ಪಂತ್‌ರನ್ನು ಉಪನಾಯಕನೆಂದು ಘೋಷಿಸಲಾಗಿದೆ.

ರಿಷಬ್ ಪಂತ್ ಉಪನಾಯಕನ ಪಾತ್ರ ನಿರ್ವಹಿಸುತ್ತಿದ್ದಂತೆ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ 2017 ರಲ್ಲಿ ಪತ್ರಿಕಾಗೋಷ್ಠಿಯಲ್ಲಿಆಡಿದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಮುನ್ನೆಲೆಗೆ ಬಂದಿವೆ. ಕ್ರಿಕೆಟ್‌ ಮಂಡಳಿ ಯಾರನ್ನೇ ತಂಡದ ನಾಯಕನೆಂದು ಅಧಿಕೃತವಾಗಿ ಘೋಷಿಸದಿದ್ದರೂ, ತಂಡದ ವಿಕೆಟ್-ಕೀಪರ್ ಉಪನಾಯಕನಂತೆಯೇ ಕಾರ್ಯನಿರ್ವಹಿಸುತ್ತಾನೆ. ಪಂದ್ಯದ ಸಮಯದಲ್ಲಿ ಮೈದಾನ ಸಿದ್ಧಪಡಿಸುವ ಜವಾಬ್ದಾರಿ ವಿಕೆಟ್-ಕೀಪರ್‌ ಮೇಲಿರುತ್ತದೆ. ನಾಯಕನ ಸಲಹೆಗಳಿಗೆ ಅನುಗುಣವಾಗಿ ಅಗತ್ಯ ಬದಲಾವಣೆಗಳನ್ನು ಆತನೇ ಮಾಡುತ್ತಾನೆ ಎಂದು ಧೋನಿ ಹೇಳಿದ್ದರು.

ಇದನ್ನೂ ಓದಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ವೆಸ್ಟ್ಇಂಡೀಸ್‌ ವಿರುದ್ಧದ ಏಕದಿನ ಸರಣಿಯ ಮೂರು ಪಂದ್ಯ ಆಡಲು ಭಾರತ ತಂಡವನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದ್ದು, ರಿಷಬ್ ಪಂತ್ ಉಪನಾಯಕರಾಗಿದ್ದಾರೆ. ಆದರೆ 2ನೇ ಏಕದಿನ ಪಂದ್ಯದಿಂದ ರಾಹುಲ್‌ ತಮ್ಮ ಕರ್ತವ್ಯಕ್ಕೆ ಮರಳಲಿದ್ದಾರೆ.

ಸೀಮಿತ ಓವರ್‌ಗಳ ಕ್ರಿಕೆಟ್‌ ಪಂದ್ಯದಲ್ಲಿ ನಾಯಕತ್ವದ ಭಾಗವಾಗಿ ಪಂತ್‌ರನ್ನು ಪರಿಗಣಿಸಿರುವುದು ತಾತ್ಕಾಲಿಕ ನಿರ್ಧಾರವಾದರೂ, ಭವಿಷ್ಯದಲ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅವರನ್ನು ಭಾರತ ಕ್ರಿಕೆಟ್ ತಂಡದ ಮುಂದಿನ ನಾಯಕನನ್ನಾಗಿ ಮಾಡುವ ಬಗ್ಗೆ ಚರ್ಚೆಗಳು ಬಲವಾಗಿ ನಡೆಯುತ್ತಿವೆ.

ಕ್ರಿಕೆಟ್‌ ಅಭಿಮಾನಿಗಳು ಮತ್ತು ಪರಿಣಿತರ ಅಭಿಪ್ರಾಯದಂತೆ ತಂಡದ ನಾಯಕ ಸ್ಥಾನವನ್ನುಅಲಂಕರಿಸುವ ಓಟದಲ್ಲಿ ರೋಹಿತ್‌ ಶರ್ಮಾ ಮೊದಲ ಸ್ಥಾನದಲ್ಲಿದ್ದಂತೆ, ಮುಂದಿನ ದಿನಗಳಲ್ಲಿ ಪಂತ್‌ ಸಹ ಸ್ಥಾನ ಗಿಟ್ಟಿಸುವ ಸಾಲಿನಲ್ಲಿ ಪ್ರಮುಖರಾಗಲಿರುವ ಕಾಲ ದೂರವಿಲ್ಲಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಅನೇಕ ಕ್ರಿಕೆಟ್‌ ವಿಶ್ಲೇಷಕರ ಅಭಿಪ್ರಾಯದಂತೆ ಮುಂದಿನ ಏಪ್ರಿಲ್‌ಗೆ ರೋಹಿತ್‌ ಶರ್ಮಾ ಅವರಿಗೆ 35 ವರ್ಷವಾಗಲಿದ್ದು, ಕೆಲ ವರ್ಷಗಳವರೆಗೆ ಅವರು ಕ್ಯಾಪ್ಟನ್‌ ಸ್ಥಾನದಲ್ಲಿರಬಹುದು. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಹೆಸರುಗಳನ್ನು ಹಿಂದಿಕ್ಕುವ ಸಾಮರ್ಥ್ಯವಿರುವ, ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್ ಮುನ್ನೆಡೆಸುವಂಥ ನಾಯಕನನ್ನುಗುರುತಿಸುವ ಜವಾಬ್ದಾರಿಯೂ ಬಿಸಿಸಿಐ ಮುಂದಿದೆ. ಇದೇ ಕಾರಣಕ್ಕೆ 25 ವರ್ಷದ ಪಂತ್‌ರಂತಹ ಯುವ ಆಟಗಾರರನ್ನು ಪ್ರೋತ್ಸಾಹಿಸಲಾಗುತ್ತಿದೆ.

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 2021 ರ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ಸ್ಥಾನವನ್ನು ಉತ್ತಮವಾಗಿ ನಿರ್ವಹಿಸಿದ ಅನುಭವ ರಿಷಬ್‌ ಪಂತ್‌ಗಿದೆ. ದೆಹಲಿ ತಂಡವನ್ನು ಅಂಕಪಟ್ಟಿಯಲ್ಲಿ ನಂಬರ್‌ 1 ಆಗಿ ಪ್ಲೇ ಆಫ್‌ಗೆ ತಂದು ನಿಲ್ಲಿಸಿದ್ದರು.

ಮಾರ್ಚ್ 27 ರಲ್ಲಿ ಪ್ರಸಕ್ತ ಸಾಲಿನ ಕ್ರಿಕೆಟ್‌ ಸೀಸನ್ ಆರಂಭವಾಗುವ ನಿರೀಕ್ಷೆ ಇದ್ದು, ಪಂತ್ ನಾಯಕ ಸ್ಥಾನಕ್ಕೆ ಹಿಂದಿರುಗುವ ಹಾಗೂ ಮತ್ತೊಮ್ಮೆ ದೆಹಲಿಗೆ ಟ್ರೋಫಿ ತರಲು ಪ್ರಯತ್ನಿಸುವ ನಿರೀಕ್ಷೆ ಅವರ ಅಭಿಮಾನಿಗಳಿಗಿದೆ.

ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್‌‌‌ಗೆ ವಿದಾಯ ಹೇಳಿದ ಹರ್ಭಜನ್‌ ಸಿಂಗ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...