Homeಅಂತರಾಷ್ಟ್ರೀಯಇಂಗ್ಲೇಂಡ್‌ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ

ಇಂಗ್ಲೇಂಡ್‌ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ

- Advertisement -
- Advertisement -

ಭಾರತೀಯ ಮೂಲದ ರಿಷಿ ಸುನಕ್ ಅವರನ್ನು ಸೋಮವಾರ ಸಂಜೆ ಇಂಗ್ಲೇಂಡ್‌‌ ಪ್ರಧಾನ ಮಂತ್ರಿಯಾಗಿ ಹೆಸರಿಸಲಾಗಿದೆ. ಈ ಮೂಲಕ ಇಂಗ್ಲೇಂಡ್‌‌ನ ಅತ್ಯಂತ ಕಿರಿಯ ಮತ್ತು ಬಿಳಿಯನಲ್ಲದ ಮೊದಲ ಪ್ರಧಾನಮಂತ್ರಿಯಾಗಿ ಅವರು ಹೊರಹೊಮ್ಮಲಿದ್ದಾರೆ. ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಇಂಗ್ಲೇಂಡ್‌‌ನ ಈ ಹಿಂದಿನ ಪ್ರಧಾನಿ ಲಿಜ್ ಟ್ರಸ್‌‌‌ ಅವರು ಅಧಿಕಾರಕ್ಕೆ ಏರಿದ 45 ದಿನಗಳಲ್ಲೆ ರಾಜೀನಾಮೆ ನೀಡಿದ್ದರು.

ಕಳೆದ ಏಳು ತಿಂಗಳಲ್ಲಿ ಇಂಗ್ಲೇಂಡ್‌ ಕಾಣುತ್ತಿರುವ ಮೂರನೇ ಪ್ರಧಾನಿಯಾಗಿದ್ದಾರೆ ರಿಷಿ ಸುನಕ್. ಬೋರಿಸ್ ಜಾನ್ಸನ್‌ ಅವರು ಪ್ರಧಾನಿ ಸ್ಥಾನದಿಂದ ಇಳಿದ ನಂತರ ಲಿಜ್ ಟ್ರಸ್‌‌‌‌ ಅವರ ಉತ್ತರಾಧಿಕಾರಿಯಾಗಿ ಅಧಿಕಾರಕ್ಕೆ ಏರಿದ್ದರು. ಆದರೆ ಕೇವಲ 45 ದಿನಗಳ ಅಧಿಕಾರದ ನಂತರ ಅಕ್ಟೋಬರ್ 20 ರಂದು ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರು ಯುಕೆಯಲ್ಲಿ ಅತ್ಯಂತ ಕಿರಿಯ ಮತ್ತು ಮೊದಲ ಬಣ್ಣದ ಪ್ರಧಾನ ಮಂತ್ರಿಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ವಾರವಷ್ಟೆ ಕೆರಿಬಿಯನ್ ರಜೆಯನ್ನು ಕಡಿತಗೊಳಿಸಿ ಮತ್ತೆ ಪ್ರಧಾನ ಮಂತ್ರಿ ರೇಸ್‌ಗೆ ಬೋರಿಸ್ ಜಾನ್ಸನ್‌ ಪ್ರವೇಶಿಸಿದ್ದರು. ಆದರೆ ನಿನ್ನೆ ಪ್ರಧಾನಮಂತ್ರಿ ಸ್ಪರ್ಧೆಯ ತಮ್ಮ ಪ್ರಯತ್ನವನ್ನು ಕೊನೆಗೊಳಿಸಿ ಅಚ್ಚರಿ ಮೂಡಿಸಿದ್ದರು. ಸಂಸತ್ತಿನಲ್ಲಿ ಏಕೀಕೃತ ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೊಸ ದುರಂತಗಳಿಗೆ ಅವಕಾಶ ಮಾಡಿಕೊಡುವ ಬೋರಿಸ್ ಜಾನ್ಸನ್ ಪ್ರಮಾದಗಳು

ಪ್ರಧಾನಮಂತ್ರಿ ಸ್ಪರ್ಧೆಯಲ್ಲಿದ್ದ ಇತರ ಸ್ಪರ್ಧಿಗಳಾದ, ಪೆನ್ನಿ ಮೊರ್ಡಾಂಟ್‌ ಪಕ್ಷದ ಆಂತರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಅಗತ್ಯವಾದ ನಿರ್ಣಾಯಕ ಸಂಖ್ಯೆಯನ್ನು ಪಡೆಯಲು ವಿಫಲರಾಗಿ, ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ. ರಿಷಿ ಸುನಕ್ ಅವರು ಸಂಸತ್ತಿನ 142 ಸದಸ್ಯರ ಬೆಂಬಲವನ್ನು ಹೊಂದಿದ್ದಾರೆ.

“ನಮ್ಮ ಆರ್ಥಿಕತೆಯನ್ನು ಸರಿಪಡಿಸಲು, ಪಕ್ಷವನ್ನು ಒಗ್ಗೂಡಿಸಲು ಮತ್ತು ನಮ್ಮ ದೇಶಕ್ಕಾಗಿ ಸೇವೆ ಸಲ್ಲಿಸಲು ನಾನು ಬಯಸುತ್ತೇನೆ” ಎಂದು ರಿಷಿ ಸುನಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬ್ರಿಟನ್ ಆರ್ಥಿಕವಾಗಿ ಭಾರಿ ಆರ್ಥಿಕ ಹಿಂಜರಿತ ಮತ್ತು ಹೆಚ್ಚುತ್ತಿರುವ ಬಡ್ಡಿದರಗಳ ಸಂಯೋಜನೆಯನ್ನು ಎದುರಿಸುತ್ತಿದೆ. ಆರ್ಥಿಕ ತಜ್ಞರು ಇದಕ್ಕೆ ಕನ್ಸರ್ವೇಟಿವ್ ಪಕ್ಷವನ್ನು ದೂರುತ್ತಿದ್ದು, “ಆರ್ಥಿಕ ಹಿನ್ನಡೆಯು ಪಕ್ಷದ ತಪ್ಪು ಲೆಕ್ಕಾಚಾರಗಳ ಸರಣಿ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಇಂಗ್ಲೆಂಡ್ ನೂತನ ಪ್ರಧಾನಿಯಾಗಿದ್ದ ಲಿಜ್ ಟ್ರಸ್ ರಾಜೀನಾಮೆ

ರಿಷಿ ಸುನಕ್ ಮುಂದಿನ ಪ್ರಧಾನಿಯಾಗುತ್ತಾರೆ ಎಂಬುದು ಸ್ಪಷ್ಟವಾಗುತ್ತಿದ್ದಂತೆ ಪೌಂಡ್ ಇಂದು ಸ್ವಲ್ಪಮಟ್ಟಿಗೆ ಏರಿಕೆ ಕಂಡಿದೆ ಎಂದು ವರದಿಯಾಗಿದೆ. ರಿಷಿ ಸುನಕ್ ಅವರು ಬ್ಯಾಂಕ್ ಆಫ್ ಇಂಗ್ಲೆಂಡ್‌ನ ಸ್ವಾತಂತ್ರ್ಯವನ್ನು ಸಹ ಬೆಂಬಲಿಸಿದ್ದಾರೆ.

ಭಾರತ ಮೂಲದ ರಿಷಿ ಸುನಕ್ ಅವರು ಇನ್ಫೋಸಿಸ್‌ನ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಮಗಳು ಅಕ್ಷತಾ ಮೂರ್ತಿ ಅವರ ಪತಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಬಾರತ ಮೂಲದ ರಿಶಿ ಸುನಕ್ ಇಂಗ್ಲೆಂಡ್ ಪ್ರದಾನಿ ಆಗಬಹುದು, ಆದರೆ ಇಟಲಿ ಮೂಲದ ಸೋನಿಯಾ ಗಾಂಧಿಯವರು ಬಾರತದ ಪ್ರದಾನಿ ಆಗಬಾರದು! ಇದು ನಮ್ಮ ನಿಯಮ.

  2. ನಮ್ಮ ಭಾರತ ದೇಶದಲ್ಲಿ ಹೋರದೇಶದವರು ಬಂದ್ದು ಪ್ರಧಾನಿ ಮುಖ್ಯಮಂತ್ರಿ ಆಯ್ಕೆಮಾಡಿದರೆ ದೇಶವು ಸತ್ಯ ನ್ಯಾಯ ಹಾಗೆ ಸಂವಿಧಾನ ಗೌರವಿಸುವುದು ಕಲಿಸುತ್ತಾರೆ ಜೀವನದ ಸತ್ಯ ವಾಗಿ ಮನುಷ್ಯ ಜೀವಿಸುವ ಮಾರ್ಗ ಕಲಿಸಿಕೋಡುವುದರಿಂದ ಮಾಟಮಂತ್ರ ರೌಡಿಜಂ ಜಾತಿಗಳು ದರ್ಮ ಜಗಳ ಹೋಗಿ ನೇಮ್ಮದಿಯಾಗಿ ಜೀವಿಸಲಿಕ್ಕೆ ಆಶೀರ್ವಾದ ಆಗಬಹುದು ಅನಿಸುತ್ತದೆ

  3. Yes you are correct sister when our country is leaving the castiesm andquarrl between the two religions that.time is our country is becoming devloped

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...