Homeಅಂತರಾಷ್ಟ್ರೀಯಇಂಗ್ಲೇಂಡ್‌ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ

ಇಂಗ್ಲೇಂಡ್‌ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ

- Advertisement -
- Advertisement -

ಭಾರತೀಯ ಮೂಲದ ರಿಷಿ ಸುನಕ್ ಅವರನ್ನು ಸೋಮವಾರ ಸಂಜೆ ಇಂಗ್ಲೇಂಡ್‌‌ ಪ್ರಧಾನ ಮಂತ್ರಿಯಾಗಿ ಹೆಸರಿಸಲಾಗಿದೆ. ಈ ಮೂಲಕ ಇಂಗ್ಲೇಂಡ್‌‌ನ ಅತ್ಯಂತ ಕಿರಿಯ ಮತ್ತು ಬಿಳಿಯನಲ್ಲದ ಮೊದಲ ಪ್ರಧಾನಮಂತ್ರಿಯಾಗಿ ಅವರು ಹೊರಹೊಮ್ಮಲಿದ್ದಾರೆ. ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಇಂಗ್ಲೇಂಡ್‌‌ನ ಈ ಹಿಂದಿನ ಪ್ರಧಾನಿ ಲಿಜ್ ಟ್ರಸ್‌‌‌ ಅವರು ಅಧಿಕಾರಕ್ಕೆ ಏರಿದ 45 ದಿನಗಳಲ್ಲೆ ರಾಜೀನಾಮೆ ನೀಡಿದ್ದರು.

ಕಳೆದ ಏಳು ತಿಂಗಳಲ್ಲಿ ಇಂಗ್ಲೇಂಡ್‌ ಕಾಣುತ್ತಿರುವ ಮೂರನೇ ಪ್ರಧಾನಿಯಾಗಿದ್ದಾರೆ ರಿಷಿ ಸುನಕ್. ಬೋರಿಸ್ ಜಾನ್ಸನ್‌ ಅವರು ಪ್ರಧಾನಿ ಸ್ಥಾನದಿಂದ ಇಳಿದ ನಂತರ ಲಿಜ್ ಟ್ರಸ್‌‌‌‌ ಅವರ ಉತ್ತರಾಧಿಕಾರಿಯಾಗಿ ಅಧಿಕಾರಕ್ಕೆ ಏರಿದ್ದರು. ಆದರೆ ಕೇವಲ 45 ದಿನಗಳ ಅಧಿಕಾರದ ನಂತರ ಅಕ್ಟೋಬರ್ 20 ರಂದು ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರು ಯುಕೆಯಲ್ಲಿ ಅತ್ಯಂತ ಕಿರಿಯ ಮತ್ತು ಮೊದಲ ಬಣ್ಣದ ಪ್ರಧಾನ ಮಂತ್ರಿಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ವಾರವಷ್ಟೆ ಕೆರಿಬಿಯನ್ ರಜೆಯನ್ನು ಕಡಿತಗೊಳಿಸಿ ಮತ್ತೆ ಪ್ರಧಾನ ಮಂತ್ರಿ ರೇಸ್‌ಗೆ ಬೋರಿಸ್ ಜಾನ್ಸನ್‌ ಪ್ರವೇಶಿಸಿದ್ದರು. ಆದರೆ ನಿನ್ನೆ ಪ್ರಧಾನಮಂತ್ರಿ ಸ್ಪರ್ಧೆಯ ತಮ್ಮ ಪ್ರಯತ್ನವನ್ನು ಕೊನೆಗೊಳಿಸಿ ಅಚ್ಚರಿ ಮೂಡಿಸಿದ್ದರು. ಸಂಸತ್ತಿನಲ್ಲಿ ಏಕೀಕೃತ ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೊಸ ದುರಂತಗಳಿಗೆ ಅವಕಾಶ ಮಾಡಿಕೊಡುವ ಬೋರಿಸ್ ಜಾನ್ಸನ್ ಪ್ರಮಾದಗಳು

ಪ್ರಧಾನಮಂತ್ರಿ ಸ್ಪರ್ಧೆಯಲ್ಲಿದ್ದ ಇತರ ಸ್ಪರ್ಧಿಗಳಾದ, ಪೆನ್ನಿ ಮೊರ್ಡಾಂಟ್‌ ಪಕ್ಷದ ಆಂತರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಅಗತ್ಯವಾದ ನಿರ್ಣಾಯಕ ಸಂಖ್ಯೆಯನ್ನು ಪಡೆಯಲು ವಿಫಲರಾಗಿ, ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ. ರಿಷಿ ಸುನಕ್ ಅವರು ಸಂಸತ್ತಿನ 142 ಸದಸ್ಯರ ಬೆಂಬಲವನ್ನು ಹೊಂದಿದ್ದಾರೆ.

“ನಮ್ಮ ಆರ್ಥಿಕತೆಯನ್ನು ಸರಿಪಡಿಸಲು, ಪಕ್ಷವನ್ನು ಒಗ್ಗೂಡಿಸಲು ಮತ್ತು ನಮ್ಮ ದೇಶಕ್ಕಾಗಿ ಸೇವೆ ಸಲ್ಲಿಸಲು ನಾನು ಬಯಸುತ್ತೇನೆ” ಎಂದು ರಿಷಿ ಸುನಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬ್ರಿಟನ್ ಆರ್ಥಿಕವಾಗಿ ಭಾರಿ ಆರ್ಥಿಕ ಹಿಂಜರಿತ ಮತ್ತು ಹೆಚ್ಚುತ್ತಿರುವ ಬಡ್ಡಿದರಗಳ ಸಂಯೋಜನೆಯನ್ನು ಎದುರಿಸುತ್ತಿದೆ. ಆರ್ಥಿಕ ತಜ್ಞರು ಇದಕ್ಕೆ ಕನ್ಸರ್ವೇಟಿವ್ ಪಕ್ಷವನ್ನು ದೂರುತ್ತಿದ್ದು, “ಆರ್ಥಿಕ ಹಿನ್ನಡೆಯು ಪಕ್ಷದ ತಪ್ಪು ಲೆಕ್ಕಾಚಾರಗಳ ಸರಣಿ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಇಂಗ್ಲೆಂಡ್ ನೂತನ ಪ್ರಧಾನಿಯಾಗಿದ್ದ ಲಿಜ್ ಟ್ರಸ್ ರಾಜೀನಾಮೆ

ರಿಷಿ ಸುನಕ್ ಮುಂದಿನ ಪ್ರಧಾನಿಯಾಗುತ್ತಾರೆ ಎಂಬುದು ಸ್ಪಷ್ಟವಾಗುತ್ತಿದ್ದಂತೆ ಪೌಂಡ್ ಇಂದು ಸ್ವಲ್ಪಮಟ್ಟಿಗೆ ಏರಿಕೆ ಕಂಡಿದೆ ಎಂದು ವರದಿಯಾಗಿದೆ. ರಿಷಿ ಸುನಕ್ ಅವರು ಬ್ಯಾಂಕ್ ಆಫ್ ಇಂಗ್ಲೆಂಡ್‌ನ ಸ್ವಾತಂತ್ರ್ಯವನ್ನು ಸಹ ಬೆಂಬಲಿಸಿದ್ದಾರೆ.

ಭಾರತ ಮೂಲದ ರಿಷಿ ಸುನಕ್ ಅವರು ಇನ್ಫೋಸಿಸ್‌ನ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಮಗಳು ಅಕ್ಷತಾ ಮೂರ್ತಿ ಅವರ ಪತಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಬಾರತ ಮೂಲದ ರಿಶಿ ಸುನಕ್ ಇಂಗ್ಲೆಂಡ್ ಪ್ರದಾನಿ ಆಗಬಹುದು, ಆದರೆ ಇಟಲಿ ಮೂಲದ ಸೋನಿಯಾ ಗಾಂಧಿಯವರು ಬಾರತದ ಪ್ರದಾನಿ ಆಗಬಾರದು! ಇದು ನಮ್ಮ ನಿಯಮ.

  2. ನಮ್ಮ ಭಾರತ ದೇಶದಲ್ಲಿ ಹೋರದೇಶದವರು ಬಂದ್ದು ಪ್ರಧಾನಿ ಮುಖ್ಯಮಂತ್ರಿ ಆಯ್ಕೆಮಾಡಿದರೆ ದೇಶವು ಸತ್ಯ ನ್ಯಾಯ ಹಾಗೆ ಸಂವಿಧಾನ ಗೌರವಿಸುವುದು ಕಲಿಸುತ್ತಾರೆ ಜೀವನದ ಸತ್ಯ ವಾಗಿ ಮನುಷ್ಯ ಜೀವಿಸುವ ಮಾರ್ಗ ಕಲಿಸಿಕೋಡುವುದರಿಂದ ಮಾಟಮಂತ್ರ ರೌಡಿಜಂ ಜಾತಿಗಳು ದರ್ಮ ಜಗಳ ಹೋಗಿ ನೇಮ್ಮದಿಯಾಗಿ ಜೀವಿಸಲಿಕ್ಕೆ ಆಶೀರ್ವಾದ ಆಗಬಹುದು ಅನಿಸುತ್ತದೆ

  3. Yes you are correct sister when our country is leaving the castiesm andquarrl between the two religions that.time is our country is becoming devloped

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...