Homeಅಂತರಾಷ್ಟ್ರೀಯಇಂಗ್ಲೇಂಡ್‌ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ

ಇಂಗ್ಲೇಂಡ್‌ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ

- Advertisement -
- Advertisement -

ಭಾರತೀಯ ಮೂಲದ ರಿಷಿ ಸುನಕ್ ಅವರನ್ನು ಸೋಮವಾರ ಸಂಜೆ ಇಂಗ್ಲೇಂಡ್‌‌ ಪ್ರಧಾನ ಮಂತ್ರಿಯಾಗಿ ಹೆಸರಿಸಲಾಗಿದೆ. ಈ ಮೂಲಕ ಇಂಗ್ಲೇಂಡ್‌‌ನ ಅತ್ಯಂತ ಕಿರಿಯ ಮತ್ತು ಬಿಳಿಯನಲ್ಲದ ಮೊದಲ ಪ್ರಧಾನಮಂತ್ರಿಯಾಗಿ ಅವರು ಹೊರಹೊಮ್ಮಲಿದ್ದಾರೆ. ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಇಂಗ್ಲೇಂಡ್‌‌ನ ಈ ಹಿಂದಿನ ಪ್ರಧಾನಿ ಲಿಜ್ ಟ್ರಸ್‌‌‌ ಅವರು ಅಧಿಕಾರಕ್ಕೆ ಏರಿದ 45 ದಿನಗಳಲ್ಲೆ ರಾಜೀನಾಮೆ ನೀಡಿದ್ದರು.

ಕಳೆದ ಏಳು ತಿಂಗಳಲ್ಲಿ ಇಂಗ್ಲೇಂಡ್‌ ಕಾಣುತ್ತಿರುವ ಮೂರನೇ ಪ್ರಧಾನಿಯಾಗಿದ್ದಾರೆ ರಿಷಿ ಸುನಕ್. ಬೋರಿಸ್ ಜಾನ್ಸನ್‌ ಅವರು ಪ್ರಧಾನಿ ಸ್ಥಾನದಿಂದ ಇಳಿದ ನಂತರ ಲಿಜ್ ಟ್ರಸ್‌‌‌‌ ಅವರ ಉತ್ತರಾಧಿಕಾರಿಯಾಗಿ ಅಧಿಕಾರಕ್ಕೆ ಏರಿದ್ದರು. ಆದರೆ ಕೇವಲ 45 ದಿನಗಳ ಅಧಿಕಾರದ ನಂತರ ಅಕ್ಟೋಬರ್ 20 ರಂದು ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರು ಯುಕೆಯಲ್ಲಿ ಅತ್ಯಂತ ಕಿರಿಯ ಮತ್ತು ಮೊದಲ ಬಣ್ಣದ ಪ್ರಧಾನ ಮಂತ್ರಿಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ವಾರವಷ್ಟೆ ಕೆರಿಬಿಯನ್ ರಜೆಯನ್ನು ಕಡಿತಗೊಳಿಸಿ ಮತ್ತೆ ಪ್ರಧಾನ ಮಂತ್ರಿ ರೇಸ್‌ಗೆ ಬೋರಿಸ್ ಜಾನ್ಸನ್‌ ಪ್ರವೇಶಿಸಿದ್ದರು. ಆದರೆ ನಿನ್ನೆ ಪ್ರಧಾನಮಂತ್ರಿ ಸ್ಪರ್ಧೆಯ ತಮ್ಮ ಪ್ರಯತ್ನವನ್ನು ಕೊನೆಗೊಳಿಸಿ ಅಚ್ಚರಿ ಮೂಡಿಸಿದ್ದರು. ಸಂಸತ್ತಿನಲ್ಲಿ ಏಕೀಕೃತ ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೊಸ ದುರಂತಗಳಿಗೆ ಅವಕಾಶ ಮಾಡಿಕೊಡುವ ಬೋರಿಸ್ ಜಾನ್ಸನ್ ಪ್ರಮಾದಗಳು

ಪ್ರಧಾನಮಂತ್ರಿ ಸ್ಪರ್ಧೆಯಲ್ಲಿದ್ದ ಇತರ ಸ್ಪರ್ಧಿಗಳಾದ, ಪೆನ್ನಿ ಮೊರ್ಡಾಂಟ್‌ ಪಕ್ಷದ ಆಂತರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಅಗತ್ಯವಾದ ನಿರ್ಣಾಯಕ ಸಂಖ್ಯೆಯನ್ನು ಪಡೆಯಲು ವಿಫಲರಾಗಿ, ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ. ರಿಷಿ ಸುನಕ್ ಅವರು ಸಂಸತ್ತಿನ 142 ಸದಸ್ಯರ ಬೆಂಬಲವನ್ನು ಹೊಂದಿದ್ದಾರೆ.

“ನಮ್ಮ ಆರ್ಥಿಕತೆಯನ್ನು ಸರಿಪಡಿಸಲು, ಪಕ್ಷವನ್ನು ಒಗ್ಗೂಡಿಸಲು ಮತ್ತು ನಮ್ಮ ದೇಶಕ್ಕಾಗಿ ಸೇವೆ ಸಲ್ಲಿಸಲು ನಾನು ಬಯಸುತ್ತೇನೆ” ಎಂದು ರಿಷಿ ಸುನಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬ್ರಿಟನ್ ಆರ್ಥಿಕವಾಗಿ ಭಾರಿ ಆರ್ಥಿಕ ಹಿಂಜರಿತ ಮತ್ತು ಹೆಚ್ಚುತ್ತಿರುವ ಬಡ್ಡಿದರಗಳ ಸಂಯೋಜನೆಯನ್ನು ಎದುರಿಸುತ್ತಿದೆ. ಆರ್ಥಿಕ ತಜ್ಞರು ಇದಕ್ಕೆ ಕನ್ಸರ್ವೇಟಿವ್ ಪಕ್ಷವನ್ನು ದೂರುತ್ತಿದ್ದು, “ಆರ್ಥಿಕ ಹಿನ್ನಡೆಯು ಪಕ್ಷದ ತಪ್ಪು ಲೆಕ್ಕಾಚಾರಗಳ ಸರಣಿ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಇಂಗ್ಲೆಂಡ್ ನೂತನ ಪ್ರಧಾನಿಯಾಗಿದ್ದ ಲಿಜ್ ಟ್ರಸ್ ರಾಜೀನಾಮೆ

ರಿಷಿ ಸುನಕ್ ಮುಂದಿನ ಪ್ರಧಾನಿಯಾಗುತ್ತಾರೆ ಎಂಬುದು ಸ್ಪಷ್ಟವಾಗುತ್ತಿದ್ದಂತೆ ಪೌಂಡ್ ಇಂದು ಸ್ವಲ್ಪಮಟ್ಟಿಗೆ ಏರಿಕೆ ಕಂಡಿದೆ ಎಂದು ವರದಿಯಾಗಿದೆ. ರಿಷಿ ಸುನಕ್ ಅವರು ಬ್ಯಾಂಕ್ ಆಫ್ ಇಂಗ್ಲೆಂಡ್‌ನ ಸ್ವಾತಂತ್ರ್ಯವನ್ನು ಸಹ ಬೆಂಬಲಿಸಿದ್ದಾರೆ.

ಭಾರತ ಮೂಲದ ರಿಷಿ ಸುನಕ್ ಅವರು ಇನ್ಫೋಸಿಸ್‌ನ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಮಗಳು ಅಕ್ಷತಾ ಮೂರ್ತಿ ಅವರ ಪತಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಬಾರತ ಮೂಲದ ರಿಶಿ ಸುನಕ್ ಇಂಗ್ಲೆಂಡ್ ಪ್ರದಾನಿ ಆಗಬಹುದು, ಆದರೆ ಇಟಲಿ ಮೂಲದ ಸೋನಿಯಾ ಗಾಂಧಿಯವರು ಬಾರತದ ಪ್ರದಾನಿ ಆಗಬಾರದು! ಇದು ನಮ್ಮ ನಿಯಮ.

  2. ನಮ್ಮ ಭಾರತ ದೇಶದಲ್ಲಿ ಹೋರದೇಶದವರು ಬಂದ್ದು ಪ್ರಧಾನಿ ಮುಖ್ಯಮಂತ್ರಿ ಆಯ್ಕೆಮಾಡಿದರೆ ದೇಶವು ಸತ್ಯ ನ್ಯಾಯ ಹಾಗೆ ಸಂವಿಧಾನ ಗೌರವಿಸುವುದು ಕಲಿಸುತ್ತಾರೆ ಜೀವನದ ಸತ್ಯ ವಾಗಿ ಮನುಷ್ಯ ಜೀವಿಸುವ ಮಾರ್ಗ ಕಲಿಸಿಕೋಡುವುದರಿಂದ ಮಾಟಮಂತ್ರ ರೌಡಿಜಂ ಜಾತಿಗಳು ದರ್ಮ ಜಗಳ ಹೋಗಿ ನೇಮ್ಮದಿಯಾಗಿ ಜೀವಿಸಲಿಕ್ಕೆ ಆಶೀರ್ವಾದ ಆಗಬಹುದು ಅನಿಸುತ್ತದೆ

  3. Yes you are correct sister when our country is leaving the castiesm andquarrl between the two religions that.time is our country is becoming devloped

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...