Homeಅಂತರಾಷ್ಟ್ರೀಯಇಂಗ್ಲೇಂಡ್‌ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ

ಇಂಗ್ಲೇಂಡ್‌ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ

- Advertisement -
- Advertisement -

ಭಾರತೀಯ ಮೂಲದ ರಿಷಿ ಸುನಕ್ ಅವರನ್ನು ಸೋಮವಾರ ಸಂಜೆ ಇಂಗ್ಲೇಂಡ್‌‌ ಪ್ರಧಾನ ಮಂತ್ರಿಯಾಗಿ ಹೆಸರಿಸಲಾಗಿದೆ. ಈ ಮೂಲಕ ಇಂಗ್ಲೇಂಡ್‌‌ನ ಅತ್ಯಂತ ಕಿರಿಯ ಮತ್ತು ಬಿಳಿಯನಲ್ಲದ ಮೊದಲ ಪ್ರಧಾನಮಂತ್ರಿಯಾಗಿ ಅವರು ಹೊರಹೊಮ್ಮಲಿದ್ದಾರೆ. ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಇಂಗ್ಲೇಂಡ್‌‌ನ ಈ ಹಿಂದಿನ ಪ್ರಧಾನಿ ಲಿಜ್ ಟ್ರಸ್‌‌‌ ಅವರು ಅಧಿಕಾರಕ್ಕೆ ಏರಿದ 45 ದಿನಗಳಲ್ಲೆ ರಾಜೀನಾಮೆ ನೀಡಿದ್ದರು.

ಕಳೆದ ಏಳು ತಿಂಗಳಲ್ಲಿ ಇಂಗ್ಲೇಂಡ್‌ ಕಾಣುತ್ತಿರುವ ಮೂರನೇ ಪ್ರಧಾನಿಯಾಗಿದ್ದಾರೆ ರಿಷಿ ಸುನಕ್. ಬೋರಿಸ್ ಜಾನ್ಸನ್‌ ಅವರು ಪ್ರಧಾನಿ ಸ್ಥಾನದಿಂದ ಇಳಿದ ನಂತರ ಲಿಜ್ ಟ್ರಸ್‌‌‌‌ ಅವರ ಉತ್ತರಾಧಿಕಾರಿಯಾಗಿ ಅಧಿಕಾರಕ್ಕೆ ಏರಿದ್ದರು. ಆದರೆ ಕೇವಲ 45 ದಿನಗಳ ಅಧಿಕಾರದ ನಂತರ ಅಕ್ಟೋಬರ್ 20 ರಂದು ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರು ಯುಕೆಯಲ್ಲಿ ಅತ್ಯಂತ ಕಿರಿಯ ಮತ್ತು ಮೊದಲ ಬಣ್ಣದ ಪ್ರಧಾನ ಮಂತ್ರಿಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ವಾರವಷ್ಟೆ ಕೆರಿಬಿಯನ್ ರಜೆಯನ್ನು ಕಡಿತಗೊಳಿಸಿ ಮತ್ತೆ ಪ್ರಧಾನ ಮಂತ್ರಿ ರೇಸ್‌ಗೆ ಬೋರಿಸ್ ಜಾನ್ಸನ್‌ ಪ್ರವೇಶಿಸಿದ್ದರು. ಆದರೆ ನಿನ್ನೆ ಪ್ರಧಾನಮಂತ್ರಿ ಸ್ಪರ್ಧೆಯ ತಮ್ಮ ಪ್ರಯತ್ನವನ್ನು ಕೊನೆಗೊಳಿಸಿ ಅಚ್ಚರಿ ಮೂಡಿಸಿದ್ದರು. ಸಂಸತ್ತಿನಲ್ಲಿ ಏಕೀಕೃತ ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೊಸ ದುರಂತಗಳಿಗೆ ಅವಕಾಶ ಮಾಡಿಕೊಡುವ ಬೋರಿಸ್ ಜಾನ್ಸನ್ ಪ್ರಮಾದಗಳು

ಪ್ರಧಾನಮಂತ್ರಿ ಸ್ಪರ್ಧೆಯಲ್ಲಿದ್ದ ಇತರ ಸ್ಪರ್ಧಿಗಳಾದ, ಪೆನ್ನಿ ಮೊರ್ಡಾಂಟ್‌ ಪಕ್ಷದ ಆಂತರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಅಗತ್ಯವಾದ ನಿರ್ಣಾಯಕ ಸಂಖ್ಯೆಯನ್ನು ಪಡೆಯಲು ವಿಫಲರಾಗಿ, ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ. ರಿಷಿ ಸುನಕ್ ಅವರು ಸಂಸತ್ತಿನ 142 ಸದಸ್ಯರ ಬೆಂಬಲವನ್ನು ಹೊಂದಿದ್ದಾರೆ.

“ನಮ್ಮ ಆರ್ಥಿಕತೆಯನ್ನು ಸರಿಪಡಿಸಲು, ಪಕ್ಷವನ್ನು ಒಗ್ಗೂಡಿಸಲು ಮತ್ತು ನಮ್ಮ ದೇಶಕ್ಕಾಗಿ ಸೇವೆ ಸಲ್ಲಿಸಲು ನಾನು ಬಯಸುತ್ತೇನೆ” ಎಂದು ರಿಷಿ ಸುನಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬ್ರಿಟನ್ ಆರ್ಥಿಕವಾಗಿ ಭಾರಿ ಆರ್ಥಿಕ ಹಿಂಜರಿತ ಮತ್ತು ಹೆಚ್ಚುತ್ತಿರುವ ಬಡ್ಡಿದರಗಳ ಸಂಯೋಜನೆಯನ್ನು ಎದುರಿಸುತ್ತಿದೆ. ಆರ್ಥಿಕ ತಜ್ಞರು ಇದಕ್ಕೆ ಕನ್ಸರ್ವೇಟಿವ್ ಪಕ್ಷವನ್ನು ದೂರುತ್ತಿದ್ದು, “ಆರ್ಥಿಕ ಹಿನ್ನಡೆಯು ಪಕ್ಷದ ತಪ್ಪು ಲೆಕ್ಕಾಚಾರಗಳ ಸರಣಿ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಇಂಗ್ಲೆಂಡ್ ನೂತನ ಪ್ರಧಾನಿಯಾಗಿದ್ದ ಲಿಜ್ ಟ್ರಸ್ ರಾಜೀನಾಮೆ

ರಿಷಿ ಸುನಕ್ ಮುಂದಿನ ಪ್ರಧಾನಿಯಾಗುತ್ತಾರೆ ಎಂಬುದು ಸ್ಪಷ್ಟವಾಗುತ್ತಿದ್ದಂತೆ ಪೌಂಡ್ ಇಂದು ಸ್ವಲ್ಪಮಟ್ಟಿಗೆ ಏರಿಕೆ ಕಂಡಿದೆ ಎಂದು ವರದಿಯಾಗಿದೆ. ರಿಷಿ ಸುನಕ್ ಅವರು ಬ್ಯಾಂಕ್ ಆಫ್ ಇಂಗ್ಲೆಂಡ್‌ನ ಸ್ವಾತಂತ್ರ್ಯವನ್ನು ಸಹ ಬೆಂಬಲಿಸಿದ್ದಾರೆ.

ಭಾರತ ಮೂಲದ ರಿಷಿ ಸುನಕ್ ಅವರು ಇನ್ಫೋಸಿಸ್‌ನ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಮಗಳು ಅಕ್ಷತಾ ಮೂರ್ತಿ ಅವರ ಪತಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಬಾರತ ಮೂಲದ ರಿಶಿ ಸುನಕ್ ಇಂಗ್ಲೆಂಡ್ ಪ್ರದಾನಿ ಆಗಬಹುದು, ಆದರೆ ಇಟಲಿ ಮೂಲದ ಸೋನಿಯಾ ಗಾಂಧಿಯವರು ಬಾರತದ ಪ್ರದಾನಿ ಆಗಬಾರದು! ಇದು ನಮ್ಮ ನಿಯಮ.

  2. ನಮ್ಮ ಭಾರತ ದೇಶದಲ್ಲಿ ಹೋರದೇಶದವರು ಬಂದ್ದು ಪ್ರಧಾನಿ ಮುಖ್ಯಮಂತ್ರಿ ಆಯ್ಕೆಮಾಡಿದರೆ ದೇಶವು ಸತ್ಯ ನ್ಯಾಯ ಹಾಗೆ ಸಂವಿಧಾನ ಗೌರವಿಸುವುದು ಕಲಿಸುತ್ತಾರೆ ಜೀವನದ ಸತ್ಯ ವಾಗಿ ಮನುಷ್ಯ ಜೀವಿಸುವ ಮಾರ್ಗ ಕಲಿಸಿಕೋಡುವುದರಿಂದ ಮಾಟಮಂತ್ರ ರೌಡಿಜಂ ಜಾತಿಗಳು ದರ್ಮ ಜಗಳ ಹೋಗಿ ನೇಮ್ಮದಿಯಾಗಿ ಜೀವಿಸಲಿಕ್ಕೆ ಆಶೀರ್ವಾದ ಆಗಬಹುದು ಅನಿಸುತ್ತದೆ

  3. Yes you are correct sister when our country is leaving the castiesm andquarrl between the two religions that.time is our country is becoming devloped

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...