Homeಮುಖಪುಟಪ್ಯಾಲೆಸ್ತೀನ್‌ ಕುರಿತ ಹೇಳಿಕೆ: ಬ್ರಿಟನ್‌ ಸಚಿವೆ ಸುಯೆಲ್ಲಾ ವಜಾ

ಪ್ಯಾಲೆಸ್ತೀನ್‌ ಕುರಿತ ಹೇಳಿಕೆ: ಬ್ರಿಟನ್‌ ಸಚಿವೆ ಸುಯೆಲ್ಲಾ ವಜಾ

- Advertisement -
- Advertisement -

ಪ್ಯಾಲೆಸ್ತೀನ್ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಆಂತರಿಕ ಸಚಿವೆ ಸುಯೆಲ್ಲಾ ಬ್ರೆವರ್‌ಮನ್ ಅವರನ್ನು ಸೋಮವಾರ ವಜಾಗೊಳಿಸಿದ್ದಾರೆ.

ಬ್ರಿಟನ್‌ ಅತ್ಯಂತ ಹಿರಿಯ ಸಚಿವರಲ್ಲಿ ಒಬ್ಬರಾದ ಬ್ರೇವರ್‌ಮ್ಯಾನ್ ವಿರುದ್ಧದ ಕ್ರಮವು ಪ್ಯಾಲೇಸ್ತೀನ್‌ ಪರ  ಮೆರವಣಿಗೆಯನ್ನು ಪೋಲೀಸರು ನಿರ್ವಹಿಸಿದ ರೀತಿಯ ಬಗ್ಗೆ ಅವರ ಹೇಳಿಕೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಇತ್ತೀಚೆಗೆ ಪ್ಯಾಲೆಸ್ತೀನ್‌ ಪರ ಮೆರವಣಿಗೆ ಮಾಡಿದ ಸಮಯದಲ್ಲಿ ಪೊಲೀಸರು ನಡೆದುಕೊಂಡ ರೀತಿಯನ್ನು ಸುಯೆಲ್ಲಾ ಬ್ರಾವರ್‌ಮನ್ ಟೀಕಿಸಿದ್ದರು. ಶನಿವಾರ ನಡೆದ ಮೆರವಣಿಗೆಯನ್ನು ಪೊಲೀಸರು ನಿರ್ವಹಣೆ ಮಾಡಿದ ರೀತಿಯ ಬಗ್ಗೆ ಒಂದು ಲೇಖನವನ್ನು ಕೂಡ ಬರೆದಿದ್ದರು. ಇದಕ್ಕೆ ಸುನಕ್‌ ಅವರ ಅನುಮತಿ ಪಡೆದಿರಲಿಲ್ಲ ಎನ್ನಲಾಗಿದೆ.

ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ಸುನಕ್ ಅವರು ಸರ್ಕಾರವನ್ನು ತೊರೆಯಲು ಸುಯೆಲ್ಲಾ ಬ್ರಾವರ್ಮನ್ ಅವರಿಗೆ ಸೂಚಿಸಿದ್ದಾರೆ ಮತ್ತು ಅವರು ಈ ನಿರ್ದೇಶನವನ್ನು ಒಪ್ಪಿಕೊಂಡಿದ್ದಾರೆ. ನಾನು ಸರಿಯಾದ ಸಮಯದಲ್ಲಿ ಈ ಬಗ್ಗೆ ಹೆಚ್ಚಿನದನ್ನು ಹೇಳುತ್ತೇನೆ ಎಂದು ಸುಯೆಲ್ಲಾ ಬ್ರೆವರ್‌ಮನ್ ಹೇಳಿದ್ದಾರೆ. ಬ್ರಾವರ್‌ಮನ್ ಗೆ ಸರ್ಕಾರದಲ್ಲಿ ಸಣ್ಣ ಹುದ್ದೆ ನೀಡುವ ಪ್ರಸ್ತಾಪವಿತ್ತು. ಆದರೆ ಅವರು ಅದನ್ನು ಸ್ವೀಕರಿಸಲು ಒಪ್ಪಲಿಲ್ಲ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ಅವರು ಗಾಝಾದಲ್ಲಿ ಕದನ ವಿರಾಮಕ್ಕೆ ಕರೆ ನೀಡುವ ರ್ಯಾಲಿಗಳನ್ನು ದ್ವೇಷದ ಮೆರವಣಿಗೆಗಳು ಎಂದು ಕರೆದಿದ್ದರು. ಪ್ಯಾಲೆಸ್ತೀನ್‌ ಪರವಾದ ಪ್ರತಿಭಟನೆಗಳು ಕೆಲವು ಗುಂಪುಗಳ ಪ್ರಾಮುಖ್ಯತೆಯ ಪ್ರತಿಪಾದನೆಯಾಗಿದೆ ಎಂದು ಹೇಳಿದ್ದರು.

ಬ್ರೆವರ್‌ಮನ್ ಹೇಳಿಕೆ ಉದ್ವಿಗ್ನತೆಗೆ ಕಾರಣವಾಗಿತ್ತು ಮತ್ತು ಬಲಪಂಥೀಯ ಪ್ರತಿಭಟನಾಕಾರರು ಲಂಡನ್‌ನ ಬೀದಿಗಳಲ್ಲಿ ಪ್ರತಿಭಟನೆ ಮಾಡಲು ಪ್ರಚೋದಿಸಿತ್ತು ಎನ್ನಲಾಗಿದೆ.

ಸೆ.2022ರಲ್ಲಿ ಮಾಜಿ ಪ್ರಧಾನಿ ಲಿಜ್ ಟ್ರಸ್ ಅವರು ಈ ಸ್ಥಾನಕ್ಕೆ ಬ್ರೆವರ್‌ಮನ್ ಅವರನ್ನು ನೇಮಿಸಿದ್ದರು. ತಮ್ಮ ವೈಯಕ್ತಿಕ ಇಮೇಲ್‌ನಿಂದ ಅಧಿಕೃತ ದಾಖಲೆಯನ್ನು ಕಳುಹಿಸಿದ್ದರಿಂದ ಅವರು ನಂತರ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು. ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ರಿಷಿ ಸುನಕ್ ಅವರು ಬ್ರೆವರ್‌ಮನ್ ಅವರನ್ನು ಮತ್ತೆ ನೇಮಿಸಿದ್ದರು.

ಇದನ್ನು ಓದಿ: ಗಾಝಾ ನರಮೇಧವನ್ನು ಬೆಂಬಲಿಸುವ ಸರಕಾರಗಳಿಗೆ ನಾಚಿಕೆಯಾಗಬೇಕು; ಪ್ರಿಯಾಂಕ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...