Homeಮುಖಪುಟಪ್ಯಾಲೆಸ್ತೀನ್‌ ಕುರಿತ ಹೇಳಿಕೆ: ಬ್ರಿಟನ್‌ ಸಚಿವೆ ಸುಯೆಲ್ಲಾ ವಜಾ

ಪ್ಯಾಲೆಸ್ತೀನ್‌ ಕುರಿತ ಹೇಳಿಕೆ: ಬ್ರಿಟನ್‌ ಸಚಿವೆ ಸುಯೆಲ್ಲಾ ವಜಾ

- Advertisement -
- Advertisement -

ಪ್ಯಾಲೆಸ್ತೀನ್ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಆಂತರಿಕ ಸಚಿವೆ ಸುಯೆಲ್ಲಾ ಬ್ರೆವರ್‌ಮನ್ ಅವರನ್ನು ಸೋಮವಾರ ವಜಾಗೊಳಿಸಿದ್ದಾರೆ.

ಬ್ರಿಟನ್‌ ಅತ್ಯಂತ ಹಿರಿಯ ಸಚಿವರಲ್ಲಿ ಒಬ್ಬರಾದ ಬ್ರೇವರ್‌ಮ್ಯಾನ್ ವಿರುದ್ಧದ ಕ್ರಮವು ಪ್ಯಾಲೇಸ್ತೀನ್‌ ಪರ  ಮೆರವಣಿಗೆಯನ್ನು ಪೋಲೀಸರು ನಿರ್ವಹಿಸಿದ ರೀತಿಯ ಬಗ್ಗೆ ಅವರ ಹೇಳಿಕೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಇತ್ತೀಚೆಗೆ ಪ್ಯಾಲೆಸ್ತೀನ್‌ ಪರ ಮೆರವಣಿಗೆ ಮಾಡಿದ ಸಮಯದಲ್ಲಿ ಪೊಲೀಸರು ನಡೆದುಕೊಂಡ ರೀತಿಯನ್ನು ಸುಯೆಲ್ಲಾ ಬ್ರಾವರ್‌ಮನ್ ಟೀಕಿಸಿದ್ದರು. ಶನಿವಾರ ನಡೆದ ಮೆರವಣಿಗೆಯನ್ನು ಪೊಲೀಸರು ನಿರ್ವಹಣೆ ಮಾಡಿದ ರೀತಿಯ ಬಗ್ಗೆ ಒಂದು ಲೇಖನವನ್ನು ಕೂಡ ಬರೆದಿದ್ದರು. ಇದಕ್ಕೆ ಸುನಕ್‌ ಅವರ ಅನುಮತಿ ಪಡೆದಿರಲಿಲ್ಲ ಎನ್ನಲಾಗಿದೆ.

ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ಸುನಕ್ ಅವರು ಸರ್ಕಾರವನ್ನು ತೊರೆಯಲು ಸುಯೆಲ್ಲಾ ಬ್ರಾವರ್ಮನ್ ಅವರಿಗೆ ಸೂಚಿಸಿದ್ದಾರೆ ಮತ್ತು ಅವರು ಈ ನಿರ್ದೇಶನವನ್ನು ಒಪ್ಪಿಕೊಂಡಿದ್ದಾರೆ. ನಾನು ಸರಿಯಾದ ಸಮಯದಲ್ಲಿ ಈ ಬಗ್ಗೆ ಹೆಚ್ಚಿನದನ್ನು ಹೇಳುತ್ತೇನೆ ಎಂದು ಸುಯೆಲ್ಲಾ ಬ್ರೆವರ್‌ಮನ್ ಹೇಳಿದ್ದಾರೆ. ಬ್ರಾವರ್‌ಮನ್ ಗೆ ಸರ್ಕಾರದಲ್ಲಿ ಸಣ್ಣ ಹುದ್ದೆ ನೀಡುವ ಪ್ರಸ್ತಾಪವಿತ್ತು. ಆದರೆ ಅವರು ಅದನ್ನು ಸ್ವೀಕರಿಸಲು ಒಪ್ಪಲಿಲ್ಲ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ಅವರು ಗಾಝಾದಲ್ಲಿ ಕದನ ವಿರಾಮಕ್ಕೆ ಕರೆ ನೀಡುವ ರ್ಯಾಲಿಗಳನ್ನು ದ್ವೇಷದ ಮೆರವಣಿಗೆಗಳು ಎಂದು ಕರೆದಿದ್ದರು. ಪ್ಯಾಲೆಸ್ತೀನ್‌ ಪರವಾದ ಪ್ರತಿಭಟನೆಗಳು ಕೆಲವು ಗುಂಪುಗಳ ಪ್ರಾಮುಖ್ಯತೆಯ ಪ್ರತಿಪಾದನೆಯಾಗಿದೆ ಎಂದು ಹೇಳಿದ್ದರು.

ಬ್ರೆವರ್‌ಮನ್ ಹೇಳಿಕೆ ಉದ್ವಿಗ್ನತೆಗೆ ಕಾರಣವಾಗಿತ್ತು ಮತ್ತು ಬಲಪಂಥೀಯ ಪ್ರತಿಭಟನಾಕಾರರು ಲಂಡನ್‌ನ ಬೀದಿಗಳಲ್ಲಿ ಪ್ರತಿಭಟನೆ ಮಾಡಲು ಪ್ರಚೋದಿಸಿತ್ತು ಎನ್ನಲಾಗಿದೆ.

ಸೆ.2022ರಲ್ಲಿ ಮಾಜಿ ಪ್ರಧಾನಿ ಲಿಜ್ ಟ್ರಸ್ ಅವರು ಈ ಸ್ಥಾನಕ್ಕೆ ಬ್ರೆವರ್‌ಮನ್ ಅವರನ್ನು ನೇಮಿಸಿದ್ದರು. ತಮ್ಮ ವೈಯಕ್ತಿಕ ಇಮೇಲ್‌ನಿಂದ ಅಧಿಕೃತ ದಾಖಲೆಯನ್ನು ಕಳುಹಿಸಿದ್ದರಿಂದ ಅವರು ನಂತರ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು. ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ರಿಷಿ ಸುನಕ್ ಅವರು ಬ್ರೆವರ್‌ಮನ್ ಅವರನ್ನು ಮತ್ತೆ ನೇಮಿಸಿದ್ದರು.

ಇದನ್ನು ಓದಿ: ಗಾಝಾ ನರಮೇಧವನ್ನು ಬೆಂಬಲಿಸುವ ಸರಕಾರಗಳಿಗೆ ನಾಚಿಕೆಯಾಗಬೇಕು; ಪ್ರಿಯಾಂಕ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...