Homeಮುಖಪುಟಪ್ಯಾಲೆಸ್ತೀನ್‌ ಕುರಿತ ಹೇಳಿಕೆ: ಬ್ರಿಟನ್‌ ಸಚಿವೆ ಸುಯೆಲ್ಲಾ ವಜಾ

ಪ್ಯಾಲೆಸ್ತೀನ್‌ ಕುರಿತ ಹೇಳಿಕೆ: ಬ್ರಿಟನ್‌ ಸಚಿವೆ ಸುಯೆಲ್ಲಾ ವಜಾ

- Advertisement -
- Advertisement -

ಪ್ಯಾಲೆಸ್ತೀನ್ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಆಂತರಿಕ ಸಚಿವೆ ಸುಯೆಲ್ಲಾ ಬ್ರೆವರ್‌ಮನ್ ಅವರನ್ನು ಸೋಮವಾರ ವಜಾಗೊಳಿಸಿದ್ದಾರೆ.

ಬ್ರಿಟನ್‌ ಅತ್ಯಂತ ಹಿರಿಯ ಸಚಿವರಲ್ಲಿ ಒಬ್ಬರಾದ ಬ್ರೇವರ್‌ಮ್ಯಾನ್ ವಿರುದ್ಧದ ಕ್ರಮವು ಪ್ಯಾಲೇಸ್ತೀನ್‌ ಪರ  ಮೆರವಣಿಗೆಯನ್ನು ಪೋಲೀಸರು ನಿರ್ವಹಿಸಿದ ರೀತಿಯ ಬಗ್ಗೆ ಅವರ ಹೇಳಿಕೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಇತ್ತೀಚೆಗೆ ಪ್ಯಾಲೆಸ್ತೀನ್‌ ಪರ ಮೆರವಣಿಗೆ ಮಾಡಿದ ಸಮಯದಲ್ಲಿ ಪೊಲೀಸರು ನಡೆದುಕೊಂಡ ರೀತಿಯನ್ನು ಸುಯೆಲ್ಲಾ ಬ್ರಾವರ್‌ಮನ್ ಟೀಕಿಸಿದ್ದರು. ಶನಿವಾರ ನಡೆದ ಮೆರವಣಿಗೆಯನ್ನು ಪೊಲೀಸರು ನಿರ್ವಹಣೆ ಮಾಡಿದ ರೀತಿಯ ಬಗ್ಗೆ ಒಂದು ಲೇಖನವನ್ನು ಕೂಡ ಬರೆದಿದ್ದರು. ಇದಕ್ಕೆ ಸುನಕ್‌ ಅವರ ಅನುಮತಿ ಪಡೆದಿರಲಿಲ್ಲ ಎನ್ನಲಾಗಿದೆ.

ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ಸುನಕ್ ಅವರು ಸರ್ಕಾರವನ್ನು ತೊರೆಯಲು ಸುಯೆಲ್ಲಾ ಬ್ರಾವರ್ಮನ್ ಅವರಿಗೆ ಸೂಚಿಸಿದ್ದಾರೆ ಮತ್ತು ಅವರು ಈ ನಿರ್ದೇಶನವನ್ನು ಒಪ್ಪಿಕೊಂಡಿದ್ದಾರೆ. ನಾನು ಸರಿಯಾದ ಸಮಯದಲ್ಲಿ ಈ ಬಗ್ಗೆ ಹೆಚ್ಚಿನದನ್ನು ಹೇಳುತ್ತೇನೆ ಎಂದು ಸುಯೆಲ್ಲಾ ಬ್ರೆವರ್‌ಮನ್ ಹೇಳಿದ್ದಾರೆ. ಬ್ರಾವರ್‌ಮನ್ ಗೆ ಸರ್ಕಾರದಲ್ಲಿ ಸಣ್ಣ ಹುದ್ದೆ ನೀಡುವ ಪ್ರಸ್ತಾಪವಿತ್ತು. ಆದರೆ ಅವರು ಅದನ್ನು ಸ್ವೀಕರಿಸಲು ಒಪ್ಪಲಿಲ್ಲ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ಅವರು ಗಾಝಾದಲ್ಲಿ ಕದನ ವಿರಾಮಕ್ಕೆ ಕರೆ ನೀಡುವ ರ್ಯಾಲಿಗಳನ್ನು ದ್ವೇಷದ ಮೆರವಣಿಗೆಗಳು ಎಂದು ಕರೆದಿದ್ದರು. ಪ್ಯಾಲೆಸ್ತೀನ್‌ ಪರವಾದ ಪ್ರತಿಭಟನೆಗಳು ಕೆಲವು ಗುಂಪುಗಳ ಪ್ರಾಮುಖ್ಯತೆಯ ಪ್ರತಿಪಾದನೆಯಾಗಿದೆ ಎಂದು ಹೇಳಿದ್ದರು.

ಬ್ರೆವರ್‌ಮನ್ ಹೇಳಿಕೆ ಉದ್ವಿಗ್ನತೆಗೆ ಕಾರಣವಾಗಿತ್ತು ಮತ್ತು ಬಲಪಂಥೀಯ ಪ್ರತಿಭಟನಾಕಾರರು ಲಂಡನ್‌ನ ಬೀದಿಗಳಲ್ಲಿ ಪ್ರತಿಭಟನೆ ಮಾಡಲು ಪ್ರಚೋದಿಸಿತ್ತು ಎನ್ನಲಾಗಿದೆ.

ಸೆ.2022ರಲ್ಲಿ ಮಾಜಿ ಪ್ರಧಾನಿ ಲಿಜ್ ಟ್ರಸ್ ಅವರು ಈ ಸ್ಥಾನಕ್ಕೆ ಬ್ರೆವರ್‌ಮನ್ ಅವರನ್ನು ನೇಮಿಸಿದ್ದರು. ತಮ್ಮ ವೈಯಕ್ತಿಕ ಇಮೇಲ್‌ನಿಂದ ಅಧಿಕೃತ ದಾಖಲೆಯನ್ನು ಕಳುಹಿಸಿದ್ದರಿಂದ ಅವರು ನಂತರ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು. ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ರಿಷಿ ಸುನಕ್ ಅವರು ಬ್ರೆವರ್‌ಮನ್ ಅವರನ್ನು ಮತ್ತೆ ನೇಮಿಸಿದ್ದರು.

ಇದನ್ನು ಓದಿ: ಗಾಝಾ ನರಮೇಧವನ್ನು ಬೆಂಬಲಿಸುವ ಸರಕಾರಗಳಿಗೆ ನಾಚಿಕೆಯಾಗಬೇಕು; ಪ್ರಿಯಾಂಕ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...