Homeಮುಖಪುಟಪ್ಯಾಲೆಸ್ತೀನ್‌ ಕುರಿತ ಹೇಳಿಕೆ: ಬ್ರಿಟನ್‌ ಸಚಿವೆ ಸುಯೆಲ್ಲಾ ವಜಾ

ಪ್ಯಾಲೆಸ್ತೀನ್‌ ಕುರಿತ ಹೇಳಿಕೆ: ಬ್ರಿಟನ್‌ ಸಚಿವೆ ಸುಯೆಲ್ಲಾ ವಜಾ

- Advertisement -
- Advertisement -

ಪ್ಯಾಲೆಸ್ತೀನ್ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಆಂತರಿಕ ಸಚಿವೆ ಸುಯೆಲ್ಲಾ ಬ್ರೆವರ್‌ಮನ್ ಅವರನ್ನು ಸೋಮವಾರ ವಜಾಗೊಳಿಸಿದ್ದಾರೆ.

ಬ್ರಿಟನ್‌ ಅತ್ಯಂತ ಹಿರಿಯ ಸಚಿವರಲ್ಲಿ ಒಬ್ಬರಾದ ಬ್ರೇವರ್‌ಮ್ಯಾನ್ ವಿರುದ್ಧದ ಕ್ರಮವು ಪ್ಯಾಲೇಸ್ತೀನ್‌ ಪರ  ಮೆರವಣಿಗೆಯನ್ನು ಪೋಲೀಸರು ನಿರ್ವಹಿಸಿದ ರೀತಿಯ ಬಗ್ಗೆ ಅವರ ಹೇಳಿಕೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಇತ್ತೀಚೆಗೆ ಪ್ಯಾಲೆಸ್ತೀನ್‌ ಪರ ಮೆರವಣಿಗೆ ಮಾಡಿದ ಸಮಯದಲ್ಲಿ ಪೊಲೀಸರು ನಡೆದುಕೊಂಡ ರೀತಿಯನ್ನು ಸುಯೆಲ್ಲಾ ಬ್ರಾವರ್‌ಮನ್ ಟೀಕಿಸಿದ್ದರು. ಶನಿವಾರ ನಡೆದ ಮೆರವಣಿಗೆಯನ್ನು ಪೊಲೀಸರು ನಿರ್ವಹಣೆ ಮಾಡಿದ ರೀತಿಯ ಬಗ್ಗೆ ಒಂದು ಲೇಖನವನ್ನು ಕೂಡ ಬರೆದಿದ್ದರು. ಇದಕ್ಕೆ ಸುನಕ್‌ ಅವರ ಅನುಮತಿ ಪಡೆದಿರಲಿಲ್ಲ ಎನ್ನಲಾಗಿದೆ.

ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ಸುನಕ್ ಅವರು ಸರ್ಕಾರವನ್ನು ತೊರೆಯಲು ಸುಯೆಲ್ಲಾ ಬ್ರಾವರ್ಮನ್ ಅವರಿಗೆ ಸೂಚಿಸಿದ್ದಾರೆ ಮತ್ತು ಅವರು ಈ ನಿರ್ದೇಶನವನ್ನು ಒಪ್ಪಿಕೊಂಡಿದ್ದಾರೆ. ನಾನು ಸರಿಯಾದ ಸಮಯದಲ್ಲಿ ಈ ಬಗ್ಗೆ ಹೆಚ್ಚಿನದನ್ನು ಹೇಳುತ್ತೇನೆ ಎಂದು ಸುಯೆಲ್ಲಾ ಬ್ರೆವರ್‌ಮನ್ ಹೇಳಿದ್ದಾರೆ. ಬ್ರಾವರ್‌ಮನ್ ಗೆ ಸರ್ಕಾರದಲ್ಲಿ ಸಣ್ಣ ಹುದ್ದೆ ನೀಡುವ ಪ್ರಸ್ತಾಪವಿತ್ತು. ಆದರೆ ಅವರು ಅದನ್ನು ಸ್ವೀಕರಿಸಲು ಒಪ್ಪಲಿಲ್ಲ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ಅವರು ಗಾಝಾದಲ್ಲಿ ಕದನ ವಿರಾಮಕ್ಕೆ ಕರೆ ನೀಡುವ ರ್ಯಾಲಿಗಳನ್ನು ದ್ವೇಷದ ಮೆರವಣಿಗೆಗಳು ಎಂದು ಕರೆದಿದ್ದರು. ಪ್ಯಾಲೆಸ್ತೀನ್‌ ಪರವಾದ ಪ್ರತಿಭಟನೆಗಳು ಕೆಲವು ಗುಂಪುಗಳ ಪ್ರಾಮುಖ್ಯತೆಯ ಪ್ರತಿಪಾದನೆಯಾಗಿದೆ ಎಂದು ಹೇಳಿದ್ದರು.

ಬ್ರೆವರ್‌ಮನ್ ಹೇಳಿಕೆ ಉದ್ವಿಗ್ನತೆಗೆ ಕಾರಣವಾಗಿತ್ತು ಮತ್ತು ಬಲಪಂಥೀಯ ಪ್ರತಿಭಟನಾಕಾರರು ಲಂಡನ್‌ನ ಬೀದಿಗಳಲ್ಲಿ ಪ್ರತಿಭಟನೆ ಮಾಡಲು ಪ್ರಚೋದಿಸಿತ್ತು ಎನ್ನಲಾಗಿದೆ.

ಸೆ.2022ರಲ್ಲಿ ಮಾಜಿ ಪ್ರಧಾನಿ ಲಿಜ್ ಟ್ರಸ್ ಅವರು ಈ ಸ್ಥಾನಕ್ಕೆ ಬ್ರೆವರ್‌ಮನ್ ಅವರನ್ನು ನೇಮಿಸಿದ್ದರು. ತಮ್ಮ ವೈಯಕ್ತಿಕ ಇಮೇಲ್‌ನಿಂದ ಅಧಿಕೃತ ದಾಖಲೆಯನ್ನು ಕಳುಹಿಸಿದ್ದರಿಂದ ಅವರು ನಂತರ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು. ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ರಿಷಿ ಸುನಕ್ ಅವರು ಬ್ರೆವರ್‌ಮನ್ ಅವರನ್ನು ಮತ್ತೆ ನೇಮಿಸಿದ್ದರು.

ಇದನ್ನು ಓದಿ: ಗಾಝಾ ನರಮೇಧವನ್ನು ಬೆಂಬಲಿಸುವ ಸರಕಾರಗಳಿಗೆ ನಾಚಿಕೆಯಾಗಬೇಕು; ಪ್ರಿಯಾಂಕ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...