Homeಮುಖಪುಟಏರುತ್ತಿರುವ ಜಾಗತಿಕ ತಾಪಮಾನ: ಈ ಶತಮಾನದ ಅಂತ್ಯದೊಳಗೆ ಮಂಗಳೂರು-ಮುಂಬೈ ಸಮುದ್ರ ಸಮಾಧಿ!

ಏರುತ್ತಿರುವ ಜಾಗತಿಕ ತಾಪಮಾನ: ಈ ಶತಮಾನದ ಅಂತ್ಯದೊಳಗೆ ಮಂಗಳೂರು-ಮುಂಬೈ ಸಮುದ್ರ ಸಮಾಧಿ!

- Advertisement -
- Advertisement -

ಒಂದೇ ಸಮನೆ ಏರಿಕೆಯಾಗುತ್ತಿರುವ ಜಾಗತಿಕ ತಾಪಮಾನ ಇನ್ನೊಂದು ದಶಕದಲ್ಲಿ ಅಂದಾಜು ಮಟ್ಟಕ್ಕಿಂತ ಹೆಚ್ಚಾಗಲಿದೆ. ಇದರಿಂದ ಪ್ರಕೃತಿ ವಿಕೋಪವಾಗಿ ಜೀವ ಜಾಲಕ್ಕೆ ಗಂಡಾಂತರ ಎದುರಾಗಲಿದೆಯೆಂದು ವಿಶ್ವ ಸಂಸ್ಥೆಯ ಹವಾಮಾನ ಬದಲಾವಣೆ ಕುರಿತ ವರದಿ ಆಘಾತಕಾರಿ ಎಚ್ಚರಿಕೆ ಈಚೆಗಷ್ಟೆ ನೀಡಿತ್ತು. ವಿಶ್ವ ಸಂಸ್ಥೆಯ ಈ ಸಮಿತಿ 1988ರಿಂದ 5-7 ವರ್ಷಕ್ಕೊಮ್ಮೆ ತಾಪಮಾನ ಏರಿಕೆ, ಹಸಿರು ಮನೆ ಅನಿಲ ಪರಿಣಾಮ, ಸಮುದ್ರ ಮಟ್ಟ, ಮಂಜು ಕರಗುವಿಕೆ ಬಗ್ಗೆ ವರದಿ ಕೊಡುತ್ತಿದೆ.

ವಿಶ್ವ ಸಂಸ್ಥೆಯ ಭೂ ತಾಪಮಾನದ ವರದಿ ಆಧರಿಸಿ ಅಮೆರಿಕಾದ ಬಾಹ್ಯಾಕಾಶ ಸಂಸ್ಥೆ ನಾಸಾ ಪ್ರಕಟಿಸಿರುವ ತನ್ನ 6ನೇ ಮೌಲ್ಯ ಮಾಪನ ವರದಿಯಲ್ಲಿ ಬೆಚ್ಚಿಬೀಳಿಸುವ ಸಂಗತಿಗಳಿವೆ! ಜಾಗತಿಕ ತಾಪಮಾನ ಏರು ಗತಿಯಲ್ಲಿರುವುದರಿಂದ ಸಮುದ್ರ ಮಟ್ಟದಲ್ಲೂ ದೊಡ್ಡ ಏರಿಕೆಯಾಗುತ್ತಿದೆ. ಹೀಗಾಗಿ ಕಡಲಂಚಿನ ಊರೂರುಗಳನ್ನು ಸಮುದ್ರ ಆಪೋಷನ ಪಡೆಯಲಿದೆ. ಭಾರತದ ಮಂಗಳೂರು, ಮುಂಬೈ, ಕೊಚ್ಚಿ, ವಿಶಾಖಪಟ್ಟಣಂ… ಮುಂತಾದ 12ಕ್ಕಿಂತ ಹೆಚ್ಚು ಮಹಾನಗರಗಳು 2100ರ ಒಳಗಾಗಿ ಸಮುದ್ರ ಪಾಲಾಗಲಿದೆಯೆಂದು ನಾಸಾ ಸ್ಪಷ್ಟವಾಗಿ ಹೇಳಿದೆ.

ಜಗತ್ತಿನಾದ್ಯಂತ ಸಮುದ್ರದಲ್ಲಾಗತ್ತಿರುವ ಏರುಪೇರಿನ ಆಧಾರದಲ್ಲಿ ವರದಿ ಸಿದ್ಧಪಡಿಸಿರುವ ನಾಸಾ, ಸಮುದ್ರದ ಈಗಿನ ಸ್ಥಿತಿ-ಗತಿ ಪ್ರಕಾರ ಸಮುದ್ರ ಏರಿದರೆ ಇನ್ನೆರಡು ಅಡಿ ಏರುತ್ತದೆ ಎಂದಿದೆ. ಶತಮಾನದ ಅಂತ್ಯದೊಳಗೆ ಇದು ಇನ್ನಷ್ಟು ತೀವ್ರಗೊಂಡರೆ 2100ರ ಕೊನೆಗೆ 3 ಅಡಿಯಷ್ಟು ಉಕ್ಕೇರುತ್ತದೆ. ಆಗ ಮಂಗಳೂರು, ಮಂಬೈ, ಮರ್ಮಗೋವಾ, ಕೊಚ್ಚಿ, ವಿಶಾಖಪಟ್ಟಣಂ, ಪಾರಾದೀಪ್, ಖದೀರ್ಪುರ್, ಚೆನ್ನೈ, ತೂತ್ತುಕುಡಿ, ಕಂಡ್ಲಾ, ಒಖಾ, ಭಾವನಗರ್ ಕಡಲಲ್ಲಿ ಕರಗಲಿವೆ ಎಂಬುದು ನಾಸಾ ಲೆಕ್ಕಾಚಾರವಾಗಿದೆ.

ಏಷ್ಯಾದ ಸುತ್ತಲಿನ ಸಮುದ್ರ ಮಟ್ಟವು ಜಾಗತಿಕ ಸರಾಸರಿ ದರಕ್ಕಿಂತ ವೇಗವಾಗಿ ಏರುತ್ತಿದೆ. ಈ ರೀತಿಯ ಸಮುದ್ರ ಮಟ್ಟ ಬದಲಾವಣೆ ಸಾಮನ್ಯವಾಗಿ 100 ವರ್ಷಕ್ಕೊಮ್ಮೆ ಆಗುತ್ತಿತ್ತು. ಇನ್ನು ಮುಂದೆ 2050ರ ತನಕ 6ರಿಂದ 9ವರ್ಷಕ್ಕೊಮ್ಮೆ ಸಂಭವಿಸಬಹುದು. 2006ರಿಂದ 2018ರ ತನಕ ನಡೆಸಿದ ಅಧ್ಯಯನ ಅಂದಾಜಿನಂತೆ ಸಮುದ್ರದ ಜಾಗತಿಕ ಸರಾಸರಿ ಮಟ್ಟ ಪ್ರತಿ ವರ್ಷ ಸುಮಾರು 3.7 ಮಿಲಿ ಮೀಟರ್ ನಷ್ಟು ಏರಿಕೆಯಾಗುತ್ತಿದೆ ಎಂದು ನಾಸಾ ಅಧ್ಯಯನ ವರದಿಯಲ್ಲಿ ಉಲ್ಲೇಖವಾಗಿದೆ.

ನಾಸಾ ಪ್ರಕಟಪಡಿಸಿರುವ ವರದಿಯಂತೆ ಕರ್ನಾಟಕದ ಬರಿ ಮಂಗಳೂರು ಮಾತ್ರವಲ್ಲ, ಕಡಲಂಚಿನ ಕಾರವಾರ, ಕುಮಟಾ, ಹೊನ್ನಾವರ, ಭಟ್ಕಳ ಮತ್ತು ಉಡುಪಿ ಜಿಲ್ಲೆಯ ಹಲವು ಪ್ರದೇಶಗಳು ಸಮುದ್ರದಲ್ಲಿ ಲೀನವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ! ಸಾರ್ವಜನಿಕರಿಗಾಗಿ ನಾಸಾ ಸ್ಥಳೀಯ ಸಮುದ್ರ ಮಟ್ಟವನ್ನು ತಿಳಿಯುವ ಆನ್‌ಲೈನ್ ಸಾಧನ ಕಂಡುಹಿಡಿದಿದೆ. 2020 ರಿಂದ 2150ರ ಒಳಗಿನ ದಶಕಗಳನ್ನು ಆಯ್ದುಕೊಂಡು ನಮಗೆ ಬೇಕಾದ ಪ್ರದೇಶದ ಸಮುದ್ರ ಮಟ್ಟ ತಿಳಿಯಬಹುದಾಗಿದೆ. ಮಾಹಿತಿಯನ್ನು ಡೌನ್ಲೋಡ್ ಮಾಡಿಕೊಳ್ಳ ಬಹುದಾಗಿದೆ.

ಮಂಗಳೂರಿನ ಸಮುದ್ರ ಮಟ್ಟ 2100ರ ಒಳಗೆ 1.87 ಅಡಿ ಏರಿಕೆಯಾಗಲಿದೆಯೆಂಬ ಎಚ್ಚರಿಕೆ ಕೊಟ್ಟಿದೆ. ಅಂದರೆ ಕಡಲು ಕ್ರಮೇಣ ಮಂಗಳೂರನ್ನು ಕಬಳಿಸಲಿದೆ ಎಂದರ್ಥ. ನಾಸಾ ವಿಜ್ಞಾನಿಗಳ ಮುಳುಗಡೆ ವರದಿ ಬಗ್ಗೆ ನಾನಾ ನಮೂನೆಯ ಜಿಜ್ಞಾಸೆ ಶುರುವಾಗಿದೆ. ಇದೆಲ್ಲ ಬರಿ ಸುಳ್ಳು; ಹಿಂದೆ ಜಗತ್ತೆ ಮುಳುಗುತ್ತದೆಂದು ಬೊಬ್ಬೆ ಎಬ್ಬಿಸಲಾಗಿತ್ತಲ್ಲ ಹಾಗೇ ಇದೆಂಬ ಅಭಿಪಾಯ ವ್ಯಕ್ತವಾಗುತ್ತಿದೆ. ಈ ಬಗ್ಗೆ ಟ್ರೋಲ್‌ಗಳೂ ನಡೆದಿದೆ. ಇನ್ನೊಂದೆಡೆ ನಾಸಾ ವಿಜ್ಞಾನಿಗಳೇಕೆ ಸುಳ್ಳು ಹೇಳುತ್ತಾರೆ; ಇಂಥ ಗಂಭೀರ ವಿಷಯ ಆಳವಾದ ಅಧ್ಯಯನವಿಲ್ಲದೆ ಹೇಳಲು ಸಾಧ್ಯವೇ ಇಲ್ಲ; ನಾಸಾ ವಿಜ್ಞಾನಿಗಳ ಅಭಿಪ್ರಾಯ ಕರಾರುವಾಕ್ ಆಗಿದೆ ಎನ್ನುವ ಚರ್ಚೆ ನಡೆದಿದೆ.

ನಾಸಾ ವಿಜ್ಞಾನಿಗಳು ಕೊಟ್ಟಿರುವ ಮಾಹಿತಿ ಸರಿಯಾದದ್ದು; ಮುಂದಿನ ದಿನಗಳ ಸಂಭವನೀಯ ಘಟನೆ ಎಂದು ಮಂಗಳೂರಿನ ಪಿಲಿಕುಳ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ-ಸಂಶೋಧಕ ಪ್ರೊ.ಕೆವಿ.ರಾವ್ ಹೇಳುತ್ತಾರೆ. ನಿತ್ಯ ನಗರೀಕರಣ, ಕಾರ್ಖಾನೆಗಳ ಹೆಚ್ಚಳವೇ ಮುಂತಾದ ಕಾರಣದಿಂದ ಜಾಗತಿಕ ಮಾಲಿನ್ಯ ವಿಪರೀತವಾಗುತ್ತಿದೆ. ಇದೇ ಗತಿಯಲ್ಲಿ ಮಾಲಿನ್ಯ ಹೆಚ್ಚಳವಾದರೆ ಮನುಷ್ಯನ ಕೈತಪ್ಪಿ ಜಗತ್ತಿನ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಅಷ್ಟು ಸುಲಭವಲ್ಲವೆಂದು ಪ್ರೊ.ರಾವ್ ಅಭಿಪ್ರಾಯ.

ಪ್ರೊ.ಕೆವಿ.ರಾವ್

ಪ್ರಕೃತಿ ನಮಗೆ ಆಕ್ಸಿಜನ್, ನೈಟ್ರೋಜನ್ ಮತ್ತಿತರ ಅನಿಲವನ್ನು ಸಾಕಷ್ಟು ನೀಡುತ್ತಿದೆ. ಪ್ರಕೃತಿ ನೀಡಿರುವ ಪೂರಕ ವಾತಾವರಣವನ್ನು ನಾವೇ ಹಾಳುಮಾಡುತ್ತಿದ್ದೇವೆ; ಕಾಡು ನಾಶವಾಗಿ ನಗರಗಳಾಗಿವೆ; ಇದರಿಂದ ಜಾಗತಿಕ ತಾಪಮಾನ ಹದಗೆಟ್ಟಿ ಪರಿಸರ ಸಂರಕ್ಷಿಸದೇ ಇರುವುದರಿಂದ ಸಾಗರದ ಹಿಮ ಗಡ್ಡೆಗಳು ನಿರೀಕ್ಷೆಗಿಂತ ವೇಗವಾಗಿ ಕರಗುತ್ತಿವೆ. ನಮ್ಮ ಸುತ್ತಲಿನ ಜಾಗವನ್ನು ಕಾಳಜಿಯಿಂದ ಕಾಪಾಡಿಕೊಳ್ಳದಿದ್ದರೆ ವಾತಾವರಣದ ಉಷ್ಣತೆ ಏರಿಕೆಯಾಗಿ ನೀರ್ಗಲ್ಲುಗಳು ಕರಗಿ ಸಮುದ್ರ ಉಕ್ಕೇರುವುದು ಸಹಜ ಪ್ರಕ್ರಿಯೆ; ಆಗ ಕಡಲ ತಡಿಯ ಪ್ರದೇಶ ಸಮುದ್ರದ ಪಾಲಾಗುತ್ತದೆ. ಇದನ್ನೆ ನಾಸಾ ಅಧ್ಯಯನದ ಮೂಲಕ ತಿಳಿಸಿದೆಯೆಂದು ಪ್ರೊ.ರಾವ್ ಹೇಳಿದ್ದಾರೆ.

ಹಾಲಿ ವೇಗದಲ್ಲೇ ನೀರ್ಗಲ್ಲುಗಳು ಕರಗುತ್ತ ಹೋದರೆ ಸಮಸ್ಯೆ ಏನಾಗಬಹುದೆಂದು ನಾಸಾ ವಿಜ್ಞಾನಿಗಳು ಲೆಕ್ಕ ಹಾಕಿದಾಗ ನಿರೀಕ್ಷಗಿಂತಲೂ ಆಘಾತಕಾರಿ ಅಂಶಗಳು ಗೋಚರಿಸಿದೆ. ದಕ್ಷಿಣದ ಮಹಾನಗರಗಳಾದ ಮುಂಬೈ, ಮಂಗಳೂರು ಸಮುದ್ರಕ್ಕೆ ಹತ್ತಿರದಲ್ಲಿದೆ. ಸಮುದ್ರದಲ್ಲಿ ಒಂದು ಮೀಟರ್ ನೀರು ಜಾಸ್ತಿಯಾದರೂ ಬಹಳಷ್ಟು ನಗರಗಳು ಮುಳುಗುತ್ತವೆ. ಈ ಕುರಿತು ವಿಶ್ವ ಸಂಸ್ಥೆ, ಜಾಗತಿಕ ಸಂಸ್ಥೆಗಳಲ್ಲಿ ತುಂಬ ಚರ್ಚೆಯಾಗಿದೆ.

ಸಮುದ್ರ ಒಮ್ಮೆ ಮುನ್ನುಗ್ಗಿದರೆ ಮತ್ತೆ ಹಿಂದಕ್ಕೆ ಬರಲಾರದು. ವಾತಾವರಣ, ಪ್ರಕೃತಿಯನ್ನು ಮನುಷ್ಯ ಕಾಪಾಡಿಕೊಳ್ಳದಿದ್ದರೆ ಮುಂದೆ ದೊಡ್ಡ ಅನಾಹುತ ಕಾದಿದೆ. ಈಗಾಗಲೆ ವಾತಾವರಣ ಇದ್ದಕ್ಕಿದ್ದಂತೆ ಅನಾಹುತಕಾರಿಯಾಗಿ ಬದಲಾಗುತ್ತಿದೆ. ಅತಿವೃಷ್ಟಿಯಾಗುತ್ತಿದೆ; ಮೇಘ ಸ್ಪೋಟದಿಂದ ನರೆಯೇರುತ್ತಿದೆ; ಸಮುದ್ರದ ನೀರು ತಂತಾನೆ ಉಕ್ಕಿ ಹರಿಯುವುದು, ಸುನಾಮಿ, ಸೈಕ್ಲೋನ್ ಅಪ್ಪಳಿಸುತ್ತಿರುವುದೆಲ್ಲ ವಾತಾವರಣ ಕಲುಷಿತಗೊಂಡಿರುವುದಕ್ಕೆ ಸಂಕೇತ ಎಂದು ವಾತಾವರಣದ ಅನಾಹುತ ವಿವರಿಸುವ ಪ್ರೊ.ರಾವ್, ಮನು ಕುಲ-ಜೀವ ಸಂಕುಲ ಉಳಿಯಬೇಕೆಂದರೆ ಪರಿಸರ ಸಂರಕ್ಷಣೆ ಆಗಲೇಬೇಕೆನ್ನುತ್ತಾರೆ.

ಜಾಗತಿಕ ತಾಪಮಾನ ಬದಲಾವಣೆಯಿಂದ ಹಿಮಾಲಯದ ನೀರ್ಗಲ್ಲುಗಳು ಕರಗುತ್ತಿವೆ; ಕಾರ್ಬನ್ ಡೈಆಕ್ಸೈಡ್‌ ಉಷ್ಣತೆ ಹೆಚ್ಚುತ್ತಿದೆ. ಉಷ್ಣತೆಯಿಂದ ನೀರಾವಿ ಹೆಚ್ಚುತ್ತದೆ. ನೀರಾವಿ ಏರಿಕೆಯಾದರೆ ಹಸಿರು ಮನೆ ಅನಿಲದ ಮೇಲೆ ಪರಿಣಾವಾಗುತ್ತದೆ. ದೇಶದ ಬೆನ್ನೆಲುಬಾದ ಕೃಷಿಯನ್ನು ನಿರ್ಧರಿಸುವ ಮಾನ್ಸೂನ್ ಮಾರುತದ ದಿಕ್ಕನ್ನೇ ತಪ್ಪಿಸಲಿದೆ ಜಾಗತಿಕ ತಾಪಮಾನ ಹೆಚ್ಚಳ. ಇದೆಲ್ಲದರ ಒಟ್ಟೂ ಪರಿಣಾಮವೇ ಹವಾಮಾನ ವೈಪರಿತ್ಯ. ಹೀಗಾಗಿ ಕಡಲಂಚಿನ ಹಲವು ನಗರಗಳು ಮುಳುಗುವ ಆತಂಕ ಎದುರಾಗಿದೆ ಎಂದು ವಿಜ್ಞಾನಿಗಳು ಎಚ್ಚರಿಕೆ ಕೊಟ್ಟಿದ್ದಾರೆ!


ಇದನ್ನೂ ಓದಿ: ಕಾಳಿ ನದಿ ಮೇಲೆ ಸಚಿವ ನಿರಾಣಿ ಸಹೋದರರ ಕಣ್ಣು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...