Homeಮುಖಪುಟಏರುತ್ತಿರುವ ಜಾಗತಿಕ ತಾಪಮಾನ: ಈ ಶತಮಾನದ ಅಂತ್ಯದೊಳಗೆ ಮಂಗಳೂರು-ಮುಂಬೈ ಸಮುದ್ರ ಸಮಾಧಿ!

ಏರುತ್ತಿರುವ ಜಾಗತಿಕ ತಾಪಮಾನ: ಈ ಶತಮಾನದ ಅಂತ್ಯದೊಳಗೆ ಮಂಗಳೂರು-ಮುಂಬೈ ಸಮುದ್ರ ಸಮಾಧಿ!

- Advertisement -
- Advertisement -

ಒಂದೇ ಸಮನೆ ಏರಿಕೆಯಾಗುತ್ತಿರುವ ಜಾಗತಿಕ ತಾಪಮಾನ ಇನ್ನೊಂದು ದಶಕದಲ್ಲಿ ಅಂದಾಜು ಮಟ್ಟಕ್ಕಿಂತ ಹೆಚ್ಚಾಗಲಿದೆ. ಇದರಿಂದ ಪ್ರಕೃತಿ ವಿಕೋಪವಾಗಿ ಜೀವ ಜಾಲಕ್ಕೆ ಗಂಡಾಂತರ ಎದುರಾಗಲಿದೆಯೆಂದು ವಿಶ್ವ ಸಂಸ್ಥೆಯ ಹವಾಮಾನ ಬದಲಾವಣೆ ಕುರಿತ ವರದಿ ಆಘಾತಕಾರಿ ಎಚ್ಚರಿಕೆ ಈಚೆಗಷ್ಟೆ ನೀಡಿತ್ತು. ವಿಶ್ವ ಸಂಸ್ಥೆಯ ಈ ಸಮಿತಿ 1988ರಿಂದ 5-7 ವರ್ಷಕ್ಕೊಮ್ಮೆ ತಾಪಮಾನ ಏರಿಕೆ, ಹಸಿರು ಮನೆ ಅನಿಲ ಪರಿಣಾಮ, ಸಮುದ್ರ ಮಟ್ಟ, ಮಂಜು ಕರಗುವಿಕೆ ಬಗ್ಗೆ ವರದಿ ಕೊಡುತ್ತಿದೆ.

ವಿಶ್ವ ಸಂಸ್ಥೆಯ ಭೂ ತಾಪಮಾನದ ವರದಿ ಆಧರಿಸಿ ಅಮೆರಿಕಾದ ಬಾಹ್ಯಾಕಾಶ ಸಂಸ್ಥೆ ನಾಸಾ ಪ್ರಕಟಿಸಿರುವ ತನ್ನ 6ನೇ ಮೌಲ್ಯ ಮಾಪನ ವರದಿಯಲ್ಲಿ ಬೆಚ್ಚಿಬೀಳಿಸುವ ಸಂಗತಿಗಳಿವೆ! ಜಾಗತಿಕ ತಾಪಮಾನ ಏರು ಗತಿಯಲ್ಲಿರುವುದರಿಂದ ಸಮುದ್ರ ಮಟ್ಟದಲ್ಲೂ ದೊಡ್ಡ ಏರಿಕೆಯಾಗುತ್ತಿದೆ. ಹೀಗಾಗಿ ಕಡಲಂಚಿನ ಊರೂರುಗಳನ್ನು ಸಮುದ್ರ ಆಪೋಷನ ಪಡೆಯಲಿದೆ. ಭಾರತದ ಮಂಗಳೂರು, ಮುಂಬೈ, ಕೊಚ್ಚಿ, ವಿಶಾಖಪಟ್ಟಣಂ… ಮುಂತಾದ 12ಕ್ಕಿಂತ ಹೆಚ್ಚು ಮಹಾನಗರಗಳು 2100ರ ಒಳಗಾಗಿ ಸಮುದ್ರ ಪಾಲಾಗಲಿದೆಯೆಂದು ನಾಸಾ ಸ್ಪಷ್ಟವಾಗಿ ಹೇಳಿದೆ.

ಜಗತ್ತಿನಾದ್ಯಂತ ಸಮುದ್ರದಲ್ಲಾಗತ್ತಿರುವ ಏರುಪೇರಿನ ಆಧಾರದಲ್ಲಿ ವರದಿ ಸಿದ್ಧಪಡಿಸಿರುವ ನಾಸಾ, ಸಮುದ್ರದ ಈಗಿನ ಸ್ಥಿತಿ-ಗತಿ ಪ್ರಕಾರ ಸಮುದ್ರ ಏರಿದರೆ ಇನ್ನೆರಡು ಅಡಿ ಏರುತ್ತದೆ ಎಂದಿದೆ. ಶತಮಾನದ ಅಂತ್ಯದೊಳಗೆ ಇದು ಇನ್ನಷ್ಟು ತೀವ್ರಗೊಂಡರೆ 2100ರ ಕೊನೆಗೆ 3 ಅಡಿಯಷ್ಟು ಉಕ್ಕೇರುತ್ತದೆ. ಆಗ ಮಂಗಳೂರು, ಮಂಬೈ, ಮರ್ಮಗೋವಾ, ಕೊಚ್ಚಿ, ವಿಶಾಖಪಟ್ಟಣಂ, ಪಾರಾದೀಪ್, ಖದೀರ್ಪುರ್, ಚೆನ್ನೈ, ತೂತ್ತುಕುಡಿ, ಕಂಡ್ಲಾ, ಒಖಾ, ಭಾವನಗರ್ ಕಡಲಲ್ಲಿ ಕರಗಲಿವೆ ಎಂಬುದು ನಾಸಾ ಲೆಕ್ಕಾಚಾರವಾಗಿದೆ.

ಏಷ್ಯಾದ ಸುತ್ತಲಿನ ಸಮುದ್ರ ಮಟ್ಟವು ಜಾಗತಿಕ ಸರಾಸರಿ ದರಕ್ಕಿಂತ ವೇಗವಾಗಿ ಏರುತ್ತಿದೆ. ಈ ರೀತಿಯ ಸಮುದ್ರ ಮಟ್ಟ ಬದಲಾವಣೆ ಸಾಮನ್ಯವಾಗಿ 100 ವರ್ಷಕ್ಕೊಮ್ಮೆ ಆಗುತ್ತಿತ್ತು. ಇನ್ನು ಮುಂದೆ 2050ರ ತನಕ 6ರಿಂದ 9ವರ್ಷಕ್ಕೊಮ್ಮೆ ಸಂಭವಿಸಬಹುದು. 2006ರಿಂದ 2018ರ ತನಕ ನಡೆಸಿದ ಅಧ್ಯಯನ ಅಂದಾಜಿನಂತೆ ಸಮುದ್ರದ ಜಾಗತಿಕ ಸರಾಸರಿ ಮಟ್ಟ ಪ್ರತಿ ವರ್ಷ ಸುಮಾರು 3.7 ಮಿಲಿ ಮೀಟರ್ ನಷ್ಟು ಏರಿಕೆಯಾಗುತ್ತಿದೆ ಎಂದು ನಾಸಾ ಅಧ್ಯಯನ ವರದಿಯಲ್ಲಿ ಉಲ್ಲೇಖವಾಗಿದೆ.

ನಾಸಾ ಪ್ರಕಟಪಡಿಸಿರುವ ವರದಿಯಂತೆ ಕರ್ನಾಟಕದ ಬರಿ ಮಂಗಳೂರು ಮಾತ್ರವಲ್ಲ, ಕಡಲಂಚಿನ ಕಾರವಾರ, ಕುಮಟಾ, ಹೊನ್ನಾವರ, ಭಟ್ಕಳ ಮತ್ತು ಉಡುಪಿ ಜಿಲ್ಲೆಯ ಹಲವು ಪ್ರದೇಶಗಳು ಸಮುದ್ರದಲ್ಲಿ ಲೀನವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ! ಸಾರ್ವಜನಿಕರಿಗಾಗಿ ನಾಸಾ ಸ್ಥಳೀಯ ಸಮುದ್ರ ಮಟ್ಟವನ್ನು ತಿಳಿಯುವ ಆನ್‌ಲೈನ್ ಸಾಧನ ಕಂಡುಹಿಡಿದಿದೆ. 2020 ರಿಂದ 2150ರ ಒಳಗಿನ ದಶಕಗಳನ್ನು ಆಯ್ದುಕೊಂಡು ನಮಗೆ ಬೇಕಾದ ಪ್ರದೇಶದ ಸಮುದ್ರ ಮಟ್ಟ ತಿಳಿಯಬಹುದಾಗಿದೆ. ಮಾಹಿತಿಯನ್ನು ಡೌನ್ಲೋಡ್ ಮಾಡಿಕೊಳ್ಳ ಬಹುದಾಗಿದೆ.

ಮಂಗಳೂರಿನ ಸಮುದ್ರ ಮಟ್ಟ 2100ರ ಒಳಗೆ 1.87 ಅಡಿ ಏರಿಕೆಯಾಗಲಿದೆಯೆಂಬ ಎಚ್ಚರಿಕೆ ಕೊಟ್ಟಿದೆ. ಅಂದರೆ ಕಡಲು ಕ್ರಮೇಣ ಮಂಗಳೂರನ್ನು ಕಬಳಿಸಲಿದೆ ಎಂದರ್ಥ. ನಾಸಾ ವಿಜ್ಞಾನಿಗಳ ಮುಳುಗಡೆ ವರದಿ ಬಗ್ಗೆ ನಾನಾ ನಮೂನೆಯ ಜಿಜ್ಞಾಸೆ ಶುರುವಾಗಿದೆ. ಇದೆಲ್ಲ ಬರಿ ಸುಳ್ಳು; ಹಿಂದೆ ಜಗತ್ತೆ ಮುಳುಗುತ್ತದೆಂದು ಬೊಬ್ಬೆ ಎಬ್ಬಿಸಲಾಗಿತ್ತಲ್ಲ ಹಾಗೇ ಇದೆಂಬ ಅಭಿಪಾಯ ವ್ಯಕ್ತವಾಗುತ್ತಿದೆ. ಈ ಬಗ್ಗೆ ಟ್ರೋಲ್‌ಗಳೂ ನಡೆದಿದೆ. ಇನ್ನೊಂದೆಡೆ ನಾಸಾ ವಿಜ್ಞಾನಿಗಳೇಕೆ ಸುಳ್ಳು ಹೇಳುತ್ತಾರೆ; ಇಂಥ ಗಂಭೀರ ವಿಷಯ ಆಳವಾದ ಅಧ್ಯಯನವಿಲ್ಲದೆ ಹೇಳಲು ಸಾಧ್ಯವೇ ಇಲ್ಲ; ನಾಸಾ ವಿಜ್ಞಾನಿಗಳ ಅಭಿಪ್ರಾಯ ಕರಾರುವಾಕ್ ಆಗಿದೆ ಎನ್ನುವ ಚರ್ಚೆ ನಡೆದಿದೆ.

ನಾಸಾ ವಿಜ್ಞಾನಿಗಳು ಕೊಟ್ಟಿರುವ ಮಾಹಿತಿ ಸರಿಯಾದದ್ದು; ಮುಂದಿನ ದಿನಗಳ ಸಂಭವನೀಯ ಘಟನೆ ಎಂದು ಮಂಗಳೂರಿನ ಪಿಲಿಕುಳ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ-ಸಂಶೋಧಕ ಪ್ರೊ.ಕೆವಿ.ರಾವ್ ಹೇಳುತ್ತಾರೆ. ನಿತ್ಯ ನಗರೀಕರಣ, ಕಾರ್ಖಾನೆಗಳ ಹೆಚ್ಚಳವೇ ಮುಂತಾದ ಕಾರಣದಿಂದ ಜಾಗತಿಕ ಮಾಲಿನ್ಯ ವಿಪರೀತವಾಗುತ್ತಿದೆ. ಇದೇ ಗತಿಯಲ್ಲಿ ಮಾಲಿನ್ಯ ಹೆಚ್ಚಳವಾದರೆ ಮನುಷ್ಯನ ಕೈತಪ್ಪಿ ಜಗತ್ತಿನ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಅಷ್ಟು ಸುಲಭವಲ್ಲವೆಂದು ಪ್ರೊ.ರಾವ್ ಅಭಿಪ್ರಾಯ.

ಪ್ರೊ.ಕೆವಿ.ರಾವ್

ಪ್ರಕೃತಿ ನಮಗೆ ಆಕ್ಸಿಜನ್, ನೈಟ್ರೋಜನ್ ಮತ್ತಿತರ ಅನಿಲವನ್ನು ಸಾಕಷ್ಟು ನೀಡುತ್ತಿದೆ. ಪ್ರಕೃತಿ ನೀಡಿರುವ ಪೂರಕ ವಾತಾವರಣವನ್ನು ನಾವೇ ಹಾಳುಮಾಡುತ್ತಿದ್ದೇವೆ; ಕಾಡು ನಾಶವಾಗಿ ನಗರಗಳಾಗಿವೆ; ಇದರಿಂದ ಜಾಗತಿಕ ತಾಪಮಾನ ಹದಗೆಟ್ಟಿ ಪರಿಸರ ಸಂರಕ್ಷಿಸದೇ ಇರುವುದರಿಂದ ಸಾಗರದ ಹಿಮ ಗಡ್ಡೆಗಳು ನಿರೀಕ್ಷೆಗಿಂತ ವೇಗವಾಗಿ ಕರಗುತ್ತಿವೆ. ನಮ್ಮ ಸುತ್ತಲಿನ ಜಾಗವನ್ನು ಕಾಳಜಿಯಿಂದ ಕಾಪಾಡಿಕೊಳ್ಳದಿದ್ದರೆ ವಾತಾವರಣದ ಉಷ್ಣತೆ ಏರಿಕೆಯಾಗಿ ನೀರ್ಗಲ್ಲುಗಳು ಕರಗಿ ಸಮುದ್ರ ಉಕ್ಕೇರುವುದು ಸಹಜ ಪ್ರಕ್ರಿಯೆ; ಆಗ ಕಡಲ ತಡಿಯ ಪ್ರದೇಶ ಸಮುದ್ರದ ಪಾಲಾಗುತ್ತದೆ. ಇದನ್ನೆ ನಾಸಾ ಅಧ್ಯಯನದ ಮೂಲಕ ತಿಳಿಸಿದೆಯೆಂದು ಪ್ರೊ.ರಾವ್ ಹೇಳಿದ್ದಾರೆ.

ಹಾಲಿ ವೇಗದಲ್ಲೇ ನೀರ್ಗಲ್ಲುಗಳು ಕರಗುತ್ತ ಹೋದರೆ ಸಮಸ್ಯೆ ಏನಾಗಬಹುದೆಂದು ನಾಸಾ ವಿಜ್ಞಾನಿಗಳು ಲೆಕ್ಕ ಹಾಕಿದಾಗ ನಿರೀಕ್ಷಗಿಂತಲೂ ಆಘಾತಕಾರಿ ಅಂಶಗಳು ಗೋಚರಿಸಿದೆ. ದಕ್ಷಿಣದ ಮಹಾನಗರಗಳಾದ ಮುಂಬೈ, ಮಂಗಳೂರು ಸಮುದ್ರಕ್ಕೆ ಹತ್ತಿರದಲ್ಲಿದೆ. ಸಮುದ್ರದಲ್ಲಿ ಒಂದು ಮೀಟರ್ ನೀರು ಜಾಸ್ತಿಯಾದರೂ ಬಹಳಷ್ಟು ನಗರಗಳು ಮುಳುಗುತ್ತವೆ. ಈ ಕುರಿತು ವಿಶ್ವ ಸಂಸ್ಥೆ, ಜಾಗತಿಕ ಸಂಸ್ಥೆಗಳಲ್ಲಿ ತುಂಬ ಚರ್ಚೆಯಾಗಿದೆ.

ಸಮುದ್ರ ಒಮ್ಮೆ ಮುನ್ನುಗ್ಗಿದರೆ ಮತ್ತೆ ಹಿಂದಕ್ಕೆ ಬರಲಾರದು. ವಾತಾವರಣ, ಪ್ರಕೃತಿಯನ್ನು ಮನುಷ್ಯ ಕಾಪಾಡಿಕೊಳ್ಳದಿದ್ದರೆ ಮುಂದೆ ದೊಡ್ಡ ಅನಾಹುತ ಕಾದಿದೆ. ಈಗಾಗಲೆ ವಾತಾವರಣ ಇದ್ದಕ್ಕಿದ್ದಂತೆ ಅನಾಹುತಕಾರಿಯಾಗಿ ಬದಲಾಗುತ್ತಿದೆ. ಅತಿವೃಷ್ಟಿಯಾಗುತ್ತಿದೆ; ಮೇಘ ಸ್ಪೋಟದಿಂದ ನರೆಯೇರುತ್ತಿದೆ; ಸಮುದ್ರದ ನೀರು ತಂತಾನೆ ಉಕ್ಕಿ ಹರಿಯುವುದು, ಸುನಾಮಿ, ಸೈಕ್ಲೋನ್ ಅಪ್ಪಳಿಸುತ್ತಿರುವುದೆಲ್ಲ ವಾತಾವರಣ ಕಲುಷಿತಗೊಂಡಿರುವುದಕ್ಕೆ ಸಂಕೇತ ಎಂದು ವಾತಾವರಣದ ಅನಾಹುತ ವಿವರಿಸುವ ಪ್ರೊ.ರಾವ್, ಮನು ಕುಲ-ಜೀವ ಸಂಕುಲ ಉಳಿಯಬೇಕೆಂದರೆ ಪರಿಸರ ಸಂರಕ್ಷಣೆ ಆಗಲೇಬೇಕೆನ್ನುತ್ತಾರೆ.

ಜಾಗತಿಕ ತಾಪಮಾನ ಬದಲಾವಣೆಯಿಂದ ಹಿಮಾಲಯದ ನೀರ್ಗಲ್ಲುಗಳು ಕರಗುತ್ತಿವೆ; ಕಾರ್ಬನ್ ಡೈಆಕ್ಸೈಡ್‌ ಉಷ್ಣತೆ ಹೆಚ್ಚುತ್ತಿದೆ. ಉಷ್ಣತೆಯಿಂದ ನೀರಾವಿ ಹೆಚ್ಚುತ್ತದೆ. ನೀರಾವಿ ಏರಿಕೆಯಾದರೆ ಹಸಿರು ಮನೆ ಅನಿಲದ ಮೇಲೆ ಪರಿಣಾವಾಗುತ್ತದೆ. ದೇಶದ ಬೆನ್ನೆಲುಬಾದ ಕೃಷಿಯನ್ನು ನಿರ್ಧರಿಸುವ ಮಾನ್ಸೂನ್ ಮಾರುತದ ದಿಕ್ಕನ್ನೇ ತಪ್ಪಿಸಲಿದೆ ಜಾಗತಿಕ ತಾಪಮಾನ ಹೆಚ್ಚಳ. ಇದೆಲ್ಲದರ ಒಟ್ಟೂ ಪರಿಣಾಮವೇ ಹವಾಮಾನ ವೈಪರಿತ್ಯ. ಹೀಗಾಗಿ ಕಡಲಂಚಿನ ಹಲವು ನಗರಗಳು ಮುಳುಗುವ ಆತಂಕ ಎದುರಾಗಿದೆ ಎಂದು ವಿಜ್ಞಾನಿಗಳು ಎಚ್ಚರಿಕೆ ಕೊಟ್ಟಿದ್ದಾರೆ!


ಇದನ್ನೂ ಓದಿ: ಕಾಳಿ ನದಿ ಮೇಲೆ ಸಚಿವ ನಿರಾಣಿ ಸಹೋದರರ ಕಣ್ಣು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...