Homeಮುಖಪುಟಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ

ಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ

ಬೆಂಗಳೂರಿನಲ್ಲಿ ಆಗಸ್ಟ್ 11 ರಂದು ನಡೆದ ಹಿಂಸಾಚಾರದಲ್ಲಿ ಪೊಲೀಸ್ ತೆಗೆದುಕೊಂಡ ಕ್ರಮಗಳ ಕುರಿತು ವರದಿ ಮಾಡುವಾಗ ಇಂಡಿಯಾ ಟುಡೆ, ದಿ ನ್ಯೂಸ್ ಮಿನಿಟ್ ಮತ್ತು ಸುವರ್ಣ ನ್ಯೂಸ್‌ನ ಐದು ಪತ್ರಕರ್ತರ ಮೇಲೆ ಬೆಂಗಳೂರು ಪೊಲೀಸರು ಹಲ್ಲೆ ನಡೆಸಿದ್ದಾರೆ.

- Advertisement -
- Advertisement -

ದೇಶದಲ್ಲಿ ಪತ್ರಕರ್ತರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ, ಹಲವಾರು ಪತ್ರಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ. ಹಲ್ಲೆ ತಡೆಗೆ ಆಗ್ರಹಿಸಿ ಆನ್‌ಲೈನ್ ಅಭಿಯಾನವನ್ನು ಆರಂಭಿಸಿದ್ದಾರೆ.

ಕಳೆದ ವಾರವೊಂದರಲ್ಲೆ ಎರಡು ಪ್ರತ್ಯೇಕ ಘಟನೆಗಳಲ್ಲಿ ಎಂಟು ಪತ್ರಕರ್ತರು ತಮ್ಮ ಕೆಲಸ ನಿರ್ವಹಿಸುವಾಗ ಹಲ್ಲೆಗೊಳಗಾಗಿದ್ದಾರೆ. ದೆಹಲಿ ಮೂಲದ ಕಾರವಾನ್ ನಿಯತಕಾಲಿಕೆಗೆ ಸೇರಿದ ಶಾಹಿದ್ ತಂತ್ರ, ಪ್ರಬ್ಜಿತ್ ಸಿಂಗ್ ಮತ್ತು ಮಹಿಳಾ ಪತ್ರಕರ್ತರ ಮೇಲೆ ಈಶಾನ್ಯ ದೆಹಲಿಯಲ್ಲಿ ಜನಸಮೂಹವೊಂದು ಹಲ್ಲೆ ನಡೆಸಿದೆ.

ಬೆಂಗಳೂರಿನಲ್ಲಿ ಆಗಸ್ಟ್ 11 ರಂದು ನಡೆದ ಹಿಂಸಾಚಾರದಲ್ಲಿ ಪೊಲೀಸ್ ತೆಗೆದುಕೊಂಡ ಕ್ರಮಗಳ ಕುರಿತು ವರದಿ ಮಾಡುವಾಗ ಇಂಡಿಯಾ ಟುಡೆ, ದಿ ನ್ಯೂಸ್ ಮಿನಿಟ್ ಮತ್ತು ಸುವರ್ಣ ನ್ಯೂಸ್‌ನ ಐದು ಪತ್ರಕರ್ತರ ಮೇಲೆ ಬೆಂಗಳೂರು ಪೊಲೀಸರು ಹಲ್ಲೆ ನಡೆಸಿದ್ದಾರೆ.

ದೈಹಿಕ ಹಲ್ಲೆಯಿಂದ ಆರಂಭವಾಗಿ ಸುಳ್ಳು ಕೇಸ್‌ ಹಾಕುವವರೆಗೆ ಪತ್ರಕರ್ತರು ಕೆಲಸ ನಿರ್ವಹಿಸುವಾಗ ನಾನಾ ರೀತಿಯ ತೊಂದರೆಗಳನ್ನು ಎದರಿಸುತ್ತಿದ್ದಾರೆ. ಕಳೆದ ವರ್ಷದಲ್ಲಿ ಈ ದಾಳಿಗಳು ನಾಟಕೀಯವೆಂಬಂತೆ ಹೆಚ್ಚಾಗಿವೆ. ಅದರಲ್ಲೂ ವಿಶೇಷವಾಗಿ ದೆಹಲಿ ಗಲಭೆಗಳು ಮತ್ತು ಕೊರೊನಾ ಸಾಂಕ್ರಾಮಿಕದಿಂದ ವಿಧಿಸಲಾದ ಲಾಕ್‌ಡೌನ್‌ನಲ್ಲಿನ ಸರ್ಕಾರದ ನ್ಯೂನತೆಗಳ ಬಗ್ಗೆ ವರದಿ ಮಾಡುತ್ತಿರುವವರ ಮೇಲೆ ಹಲ್ಲೆ, ದಾಳಿ ನಡೆಯುತ್ತಲೇ ಇದೆ ಎಂಬ ಆರೋಪ ಕೇಳಿಬಂದಿದೆ.

ಕಾಶ್ಮೀರ ಮತ್ತು ಛತ್ತೀಸ್‌ಗಢದ ಸಂಘರ್ಷ ಪ್ರದೇಶಗಳಲ್ಲಿನ ಪತ್ರಕರ್ತರನ್ನು ನಿಯಮಿತವಾಗಿ ಬೆದರಿಸಲಾಗುತ್ತಿದ್ದು, ಪ್ರಶ್ನಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಹಾಗಾಗಿ ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯಲು ಮತ್ತು ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡುವ ವಾತವಾರಣಕ್ಕೆ ಆಗ್ರಹಿಸಿ ಈ ಆನ್‌ಲೈನ್ ಅಭಿಯಾನ ಆರಂಭವಾಗಿದೆ.

ಹಲವಾರು ಪತ್ರಕರ್ತರು ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸುತ್ತಿದ್ದಂತೆ, #StopMediaLockdown ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್, “ಉದ್ದೇಶಪೂರ್ವಕ ದಾಳಿ, ಸುಳ್ಳು ಪ್ರಕರಣಗಳು, ಪೊಲೀಸ್ ಹಿಂಸಾಚಾರವನ್ನು ನಿಲ್ಲಿಸಿ” ಎಂದು ಟ್ವೀಟ್ ಮಾಡಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮವೊಂದಕ್ಕೆ ಹಾಜರಾಗುವ ಯೋಗಿ ಆದಿತ್ಯನಾಥ್ ಸರ್ಕಾರದ ಕ್ರಮಗಳ ಕುರಿತು ವರದಿಯನ್ನು ಪ್ರಕಟಿಸಿದ್ದಕ್ಕಾಗಿ ದಿ ವೈರ್ ಮತ್ತು ವರದರಾಜನ್ ವಿರುದ್ಧ ಎರಡು ಎಫ್‌ಐಆರ್ ದಾಖಲಿಸಲಾಗಿದೆ.

ಸ್ಕ್ರಾಲ್‌ನ ಸಂಪಾದಕ ನರೇಶ್ ಫರ್ನಾಂಡಿಸ್ “ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿನಿಧಿಸುವ ಕ್ಷೇತ್ರವಾದ ವಾರಣಾಸಿಯ ನಿವಾಸಿಗಳು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ವರದಿ ಮಾಡಿದ್ದಕ್ಕಾಗಿ ವೆಬ್‌ಸೈಟ್‌ನ ಕಾರ್ಯನಿರ್ವಾಹಕ ಸಂಪಾದಕ ಸುಪ್ರಿಯಾ ಶರ್ಮಾ ಅವರನ್ನು ಇತ್ತೀಚೆಗೆ ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಹಲ್ಲೆಯಾಗಿದೆ ದೂರಲಾಗಿದೆ.

ಬಿಜೆಪಿ ನೇತೃತ್ವದ ರಾಜ್ಯಗಳಿಂದ ಹೆಚ್ಚಿನ ಹಿಂಸಾಚಾರ ಮತ್ತು ಪೊಲೀಸರ ಮಿತಿಮೀರಿದ ಪ್ರಕರಣಗಳು ವರದಿಯಾಗಿವೆ. ಇತರ ರಾಜ್ಯಗಳಲ್ಲಿಯೂ ಸಹ, ಪೊಲೀಸರು ವರದಿಗಾರರ ವಿರುದ್ಧ, ವಿಶೇಷವಾಗಿ ಸಾಂಕ್ರಾಮಿಕ ರೋಗದ ಬಗ್ಗೆ ವರದಿ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಕೊರೊನಾ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸಲು ಮತ್ತು ಸೋಂಕಿತ ಜನರಿಗೆ ಸೂಕ್ತವಾದ ವೈದ್ಯಕೀಯ ವ್ಯವಸ್ಥೆಗಳನ್ನು ಮಾಡಲು ರಾಜ್ಯ ಸರ್ಕಾರದ ವೈಫಲ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ಮಹಾರಾಷ್ಟ್ರದ ಪ್ರಾದೇಶಿಕ ಪತ್ರಿಕೆಗಳ ಕನಿಷ್ಠ 15 ವರದಿಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕನಿಷ್ಠ ಎರಡು ನಿದರ್ಶನಗಳಲ್ಲಿ ವರದಿಗಾರರನ್ನು ಜೈಲಿಗೆ ಕಳುಹಿಸಲಾಗಿದೆ.


ಇದನ್ನೂ ಓದಿ: ಪತ್ರಕರ್ತರ ಬಂಧನ: ಯೋಗಿಯ ಉತ್ತರಪ್ರದೇಶ ಸರ್ಕಾರಕ್ಕೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...