Homeಮುಖಪುಟಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ

ಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ

ಬೆಂಗಳೂರಿನಲ್ಲಿ ಆಗಸ್ಟ್ 11 ರಂದು ನಡೆದ ಹಿಂಸಾಚಾರದಲ್ಲಿ ಪೊಲೀಸ್ ತೆಗೆದುಕೊಂಡ ಕ್ರಮಗಳ ಕುರಿತು ವರದಿ ಮಾಡುವಾಗ ಇಂಡಿಯಾ ಟುಡೆ, ದಿ ನ್ಯೂಸ್ ಮಿನಿಟ್ ಮತ್ತು ಸುವರ್ಣ ನ್ಯೂಸ್‌ನ ಐದು ಪತ್ರಕರ್ತರ ಮೇಲೆ ಬೆಂಗಳೂರು ಪೊಲೀಸರು ಹಲ್ಲೆ ನಡೆಸಿದ್ದಾರೆ.

- Advertisement -
- Advertisement -

ದೇಶದಲ್ಲಿ ಪತ್ರಕರ್ತರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ, ಹಲವಾರು ಪತ್ರಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ. ಹಲ್ಲೆ ತಡೆಗೆ ಆಗ್ರಹಿಸಿ ಆನ್‌ಲೈನ್ ಅಭಿಯಾನವನ್ನು ಆರಂಭಿಸಿದ್ದಾರೆ.

ಕಳೆದ ವಾರವೊಂದರಲ್ಲೆ ಎರಡು ಪ್ರತ್ಯೇಕ ಘಟನೆಗಳಲ್ಲಿ ಎಂಟು ಪತ್ರಕರ್ತರು ತಮ್ಮ ಕೆಲಸ ನಿರ್ವಹಿಸುವಾಗ ಹಲ್ಲೆಗೊಳಗಾಗಿದ್ದಾರೆ. ದೆಹಲಿ ಮೂಲದ ಕಾರವಾನ್ ನಿಯತಕಾಲಿಕೆಗೆ ಸೇರಿದ ಶಾಹಿದ್ ತಂತ್ರ, ಪ್ರಬ್ಜಿತ್ ಸಿಂಗ್ ಮತ್ತು ಮಹಿಳಾ ಪತ್ರಕರ್ತರ ಮೇಲೆ ಈಶಾನ್ಯ ದೆಹಲಿಯಲ್ಲಿ ಜನಸಮೂಹವೊಂದು ಹಲ್ಲೆ ನಡೆಸಿದೆ.

ಬೆಂಗಳೂರಿನಲ್ಲಿ ಆಗಸ್ಟ್ 11 ರಂದು ನಡೆದ ಹಿಂಸಾಚಾರದಲ್ಲಿ ಪೊಲೀಸ್ ತೆಗೆದುಕೊಂಡ ಕ್ರಮಗಳ ಕುರಿತು ವರದಿ ಮಾಡುವಾಗ ಇಂಡಿಯಾ ಟುಡೆ, ದಿ ನ್ಯೂಸ್ ಮಿನಿಟ್ ಮತ್ತು ಸುವರ್ಣ ನ್ಯೂಸ್‌ನ ಐದು ಪತ್ರಕರ್ತರ ಮೇಲೆ ಬೆಂಗಳೂರು ಪೊಲೀಸರು ಹಲ್ಲೆ ನಡೆಸಿದ್ದಾರೆ.

ದೈಹಿಕ ಹಲ್ಲೆಯಿಂದ ಆರಂಭವಾಗಿ ಸುಳ್ಳು ಕೇಸ್‌ ಹಾಕುವವರೆಗೆ ಪತ್ರಕರ್ತರು ಕೆಲಸ ನಿರ್ವಹಿಸುವಾಗ ನಾನಾ ರೀತಿಯ ತೊಂದರೆಗಳನ್ನು ಎದರಿಸುತ್ತಿದ್ದಾರೆ. ಕಳೆದ ವರ್ಷದಲ್ಲಿ ಈ ದಾಳಿಗಳು ನಾಟಕೀಯವೆಂಬಂತೆ ಹೆಚ್ಚಾಗಿವೆ. ಅದರಲ್ಲೂ ವಿಶೇಷವಾಗಿ ದೆಹಲಿ ಗಲಭೆಗಳು ಮತ್ತು ಕೊರೊನಾ ಸಾಂಕ್ರಾಮಿಕದಿಂದ ವಿಧಿಸಲಾದ ಲಾಕ್‌ಡೌನ್‌ನಲ್ಲಿನ ಸರ್ಕಾರದ ನ್ಯೂನತೆಗಳ ಬಗ್ಗೆ ವರದಿ ಮಾಡುತ್ತಿರುವವರ ಮೇಲೆ ಹಲ್ಲೆ, ದಾಳಿ ನಡೆಯುತ್ತಲೇ ಇದೆ ಎಂಬ ಆರೋಪ ಕೇಳಿಬಂದಿದೆ.

ಕಾಶ್ಮೀರ ಮತ್ತು ಛತ್ತೀಸ್‌ಗಢದ ಸಂಘರ್ಷ ಪ್ರದೇಶಗಳಲ್ಲಿನ ಪತ್ರಕರ್ತರನ್ನು ನಿಯಮಿತವಾಗಿ ಬೆದರಿಸಲಾಗುತ್ತಿದ್ದು, ಪ್ರಶ್ನಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಹಾಗಾಗಿ ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯಲು ಮತ್ತು ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡುವ ವಾತವಾರಣಕ್ಕೆ ಆಗ್ರಹಿಸಿ ಈ ಆನ್‌ಲೈನ್ ಅಭಿಯಾನ ಆರಂಭವಾಗಿದೆ.

ಹಲವಾರು ಪತ್ರಕರ್ತರು ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸುತ್ತಿದ್ದಂತೆ, #StopMediaLockdown ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್, “ಉದ್ದೇಶಪೂರ್ವಕ ದಾಳಿ, ಸುಳ್ಳು ಪ್ರಕರಣಗಳು, ಪೊಲೀಸ್ ಹಿಂಸಾಚಾರವನ್ನು ನಿಲ್ಲಿಸಿ” ಎಂದು ಟ್ವೀಟ್ ಮಾಡಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮವೊಂದಕ್ಕೆ ಹಾಜರಾಗುವ ಯೋಗಿ ಆದಿತ್ಯನಾಥ್ ಸರ್ಕಾರದ ಕ್ರಮಗಳ ಕುರಿತು ವರದಿಯನ್ನು ಪ್ರಕಟಿಸಿದ್ದಕ್ಕಾಗಿ ದಿ ವೈರ್ ಮತ್ತು ವರದರಾಜನ್ ವಿರುದ್ಧ ಎರಡು ಎಫ್‌ಐಆರ್ ದಾಖಲಿಸಲಾಗಿದೆ.

ಸ್ಕ್ರಾಲ್‌ನ ಸಂಪಾದಕ ನರೇಶ್ ಫರ್ನಾಂಡಿಸ್ “ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿನಿಧಿಸುವ ಕ್ಷೇತ್ರವಾದ ವಾರಣಾಸಿಯ ನಿವಾಸಿಗಳು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ವರದಿ ಮಾಡಿದ್ದಕ್ಕಾಗಿ ವೆಬ್‌ಸೈಟ್‌ನ ಕಾರ್ಯನಿರ್ವಾಹಕ ಸಂಪಾದಕ ಸುಪ್ರಿಯಾ ಶರ್ಮಾ ಅವರನ್ನು ಇತ್ತೀಚೆಗೆ ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಹಲ್ಲೆಯಾಗಿದೆ ದೂರಲಾಗಿದೆ.

ಬಿಜೆಪಿ ನೇತೃತ್ವದ ರಾಜ್ಯಗಳಿಂದ ಹೆಚ್ಚಿನ ಹಿಂಸಾಚಾರ ಮತ್ತು ಪೊಲೀಸರ ಮಿತಿಮೀರಿದ ಪ್ರಕರಣಗಳು ವರದಿಯಾಗಿವೆ. ಇತರ ರಾಜ್ಯಗಳಲ್ಲಿಯೂ ಸಹ, ಪೊಲೀಸರು ವರದಿಗಾರರ ವಿರುದ್ಧ, ವಿಶೇಷವಾಗಿ ಸಾಂಕ್ರಾಮಿಕ ರೋಗದ ಬಗ್ಗೆ ವರದಿ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಕೊರೊನಾ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸಲು ಮತ್ತು ಸೋಂಕಿತ ಜನರಿಗೆ ಸೂಕ್ತವಾದ ವೈದ್ಯಕೀಯ ವ್ಯವಸ್ಥೆಗಳನ್ನು ಮಾಡಲು ರಾಜ್ಯ ಸರ್ಕಾರದ ವೈಫಲ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ಮಹಾರಾಷ್ಟ್ರದ ಪ್ರಾದೇಶಿಕ ಪತ್ರಿಕೆಗಳ ಕನಿಷ್ಠ 15 ವರದಿಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕನಿಷ್ಠ ಎರಡು ನಿದರ್ಶನಗಳಲ್ಲಿ ವರದಿಗಾರರನ್ನು ಜೈಲಿಗೆ ಕಳುಹಿಸಲಾಗಿದೆ.


ಇದನ್ನೂ ಓದಿ: ಪತ್ರಕರ್ತರ ಬಂಧನ: ಯೋಗಿಯ ಉತ್ತರಪ್ರದೇಶ ಸರ್ಕಾರಕ್ಕೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...