Homeಮುಖಪುಟಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ

ಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ

ಬೆಂಗಳೂರಿನಲ್ಲಿ ಆಗಸ್ಟ್ 11 ರಂದು ನಡೆದ ಹಿಂಸಾಚಾರದಲ್ಲಿ ಪೊಲೀಸ್ ತೆಗೆದುಕೊಂಡ ಕ್ರಮಗಳ ಕುರಿತು ವರದಿ ಮಾಡುವಾಗ ಇಂಡಿಯಾ ಟುಡೆ, ದಿ ನ್ಯೂಸ್ ಮಿನಿಟ್ ಮತ್ತು ಸುವರ್ಣ ನ್ಯೂಸ್‌ನ ಐದು ಪತ್ರಕರ್ತರ ಮೇಲೆ ಬೆಂಗಳೂರು ಪೊಲೀಸರು ಹಲ್ಲೆ ನಡೆಸಿದ್ದಾರೆ.

- Advertisement -
- Advertisement -

ದೇಶದಲ್ಲಿ ಪತ್ರಕರ್ತರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ, ಹಲವಾರು ಪತ್ರಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ. ಹಲ್ಲೆ ತಡೆಗೆ ಆಗ್ರಹಿಸಿ ಆನ್‌ಲೈನ್ ಅಭಿಯಾನವನ್ನು ಆರಂಭಿಸಿದ್ದಾರೆ.

ಕಳೆದ ವಾರವೊಂದರಲ್ಲೆ ಎರಡು ಪ್ರತ್ಯೇಕ ಘಟನೆಗಳಲ್ಲಿ ಎಂಟು ಪತ್ರಕರ್ತರು ತಮ್ಮ ಕೆಲಸ ನಿರ್ವಹಿಸುವಾಗ ಹಲ್ಲೆಗೊಳಗಾಗಿದ್ದಾರೆ. ದೆಹಲಿ ಮೂಲದ ಕಾರವಾನ್ ನಿಯತಕಾಲಿಕೆಗೆ ಸೇರಿದ ಶಾಹಿದ್ ತಂತ್ರ, ಪ್ರಬ್ಜಿತ್ ಸಿಂಗ್ ಮತ್ತು ಮಹಿಳಾ ಪತ್ರಕರ್ತರ ಮೇಲೆ ಈಶಾನ್ಯ ದೆಹಲಿಯಲ್ಲಿ ಜನಸಮೂಹವೊಂದು ಹಲ್ಲೆ ನಡೆಸಿದೆ.

ಬೆಂಗಳೂರಿನಲ್ಲಿ ಆಗಸ್ಟ್ 11 ರಂದು ನಡೆದ ಹಿಂಸಾಚಾರದಲ್ಲಿ ಪೊಲೀಸ್ ತೆಗೆದುಕೊಂಡ ಕ್ರಮಗಳ ಕುರಿತು ವರದಿ ಮಾಡುವಾಗ ಇಂಡಿಯಾ ಟುಡೆ, ದಿ ನ್ಯೂಸ್ ಮಿನಿಟ್ ಮತ್ತು ಸುವರ್ಣ ನ್ಯೂಸ್‌ನ ಐದು ಪತ್ರಕರ್ತರ ಮೇಲೆ ಬೆಂಗಳೂರು ಪೊಲೀಸರು ಹಲ್ಲೆ ನಡೆಸಿದ್ದಾರೆ.

ದೈಹಿಕ ಹಲ್ಲೆಯಿಂದ ಆರಂಭವಾಗಿ ಸುಳ್ಳು ಕೇಸ್‌ ಹಾಕುವವರೆಗೆ ಪತ್ರಕರ್ತರು ಕೆಲಸ ನಿರ್ವಹಿಸುವಾಗ ನಾನಾ ರೀತಿಯ ತೊಂದರೆಗಳನ್ನು ಎದರಿಸುತ್ತಿದ್ದಾರೆ. ಕಳೆದ ವರ್ಷದಲ್ಲಿ ಈ ದಾಳಿಗಳು ನಾಟಕೀಯವೆಂಬಂತೆ ಹೆಚ್ಚಾಗಿವೆ. ಅದರಲ್ಲೂ ವಿಶೇಷವಾಗಿ ದೆಹಲಿ ಗಲಭೆಗಳು ಮತ್ತು ಕೊರೊನಾ ಸಾಂಕ್ರಾಮಿಕದಿಂದ ವಿಧಿಸಲಾದ ಲಾಕ್‌ಡೌನ್‌ನಲ್ಲಿನ ಸರ್ಕಾರದ ನ್ಯೂನತೆಗಳ ಬಗ್ಗೆ ವರದಿ ಮಾಡುತ್ತಿರುವವರ ಮೇಲೆ ಹಲ್ಲೆ, ದಾಳಿ ನಡೆಯುತ್ತಲೇ ಇದೆ ಎಂಬ ಆರೋಪ ಕೇಳಿಬಂದಿದೆ.

ಕಾಶ್ಮೀರ ಮತ್ತು ಛತ್ತೀಸ್‌ಗಢದ ಸಂಘರ್ಷ ಪ್ರದೇಶಗಳಲ್ಲಿನ ಪತ್ರಕರ್ತರನ್ನು ನಿಯಮಿತವಾಗಿ ಬೆದರಿಸಲಾಗುತ್ತಿದ್ದು, ಪ್ರಶ್ನಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಹಾಗಾಗಿ ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯಲು ಮತ್ತು ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡುವ ವಾತವಾರಣಕ್ಕೆ ಆಗ್ರಹಿಸಿ ಈ ಆನ್‌ಲೈನ್ ಅಭಿಯಾನ ಆರಂಭವಾಗಿದೆ.

ಹಲವಾರು ಪತ್ರಕರ್ತರು ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸುತ್ತಿದ್ದಂತೆ, #StopMediaLockdown ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್, “ಉದ್ದೇಶಪೂರ್ವಕ ದಾಳಿ, ಸುಳ್ಳು ಪ್ರಕರಣಗಳು, ಪೊಲೀಸ್ ಹಿಂಸಾಚಾರವನ್ನು ನಿಲ್ಲಿಸಿ” ಎಂದು ಟ್ವೀಟ್ ಮಾಡಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮವೊಂದಕ್ಕೆ ಹಾಜರಾಗುವ ಯೋಗಿ ಆದಿತ್ಯನಾಥ್ ಸರ್ಕಾರದ ಕ್ರಮಗಳ ಕುರಿತು ವರದಿಯನ್ನು ಪ್ರಕಟಿಸಿದ್ದಕ್ಕಾಗಿ ದಿ ವೈರ್ ಮತ್ತು ವರದರಾಜನ್ ವಿರುದ್ಧ ಎರಡು ಎಫ್‌ಐಆರ್ ದಾಖಲಿಸಲಾಗಿದೆ.

ಸ್ಕ್ರಾಲ್‌ನ ಸಂಪಾದಕ ನರೇಶ್ ಫರ್ನಾಂಡಿಸ್ “ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿನಿಧಿಸುವ ಕ್ಷೇತ್ರವಾದ ವಾರಣಾಸಿಯ ನಿವಾಸಿಗಳು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ವರದಿ ಮಾಡಿದ್ದಕ್ಕಾಗಿ ವೆಬ್‌ಸೈಟ್‌ನ ಕಾರ್ಯನಿರ್ವಾಹಕ ಸಂಪಾದಕ ಸುಪ್ರಿಯಾ ಶರ್ಮಾ ಅವರನ್ನು ಇತ್ತೀಚೆಗೆ ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಹಲ್ಲೆಯಾಗಿದೆ ದೂರಲಾಗಿದೆ.

ಬಿಜೆಪಿ ನೇತೃತ್ವದ ರಾಜ್ಯಗಳಿಂದ ಹೆಚ್ಚಿನ ಹಿಂಸಾಚಾರ ಮತ್ತು ಪೊಲೀಸರ ಮಿತಿಮೀರಿದ ಪ್ರಕರಣಗಳು ವರದಿಯಾಗಿವೆ. ಇತರ ರಾಜ್ಯಗಳಲ್ಲಿಯೂ ಸಹ, ಪೊಲೀಸರು ವರದಿಗಾರರ ವಿರುದ್ಧ, ವಿಶೇಷವಾಗಿ ಸಾಂಕ್ರಾಮಿಕ ರೋಗದ ಬಗ್ಗೆ ವರದಿ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಕೊರೊನಾ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸಲು ಮತ್ತು ಸೋಂಕಿತ ಜನರಿಗೆ ಸೂಕ್ತವಾದ ವೈದ್ಯಕೀಯ ವ್ಯವಸ್ಥೆಗಳನ್ನು ಮಾಡಲು ರಾಜ್ಯ ಸರ್ಕಾರದ ವೈಫಲ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ಮಹಾರಾಷ್ಟ್ರದ ಪ್ರಾದೇಶಿಕ ಪತ್ರಿಕೆಗಳ ಕನಿಷ್ಠ 15 ವರದಿಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕನಿಷ್ಠ ಎರಡು ನಿದರ್ಶನಗಳಲ್ಲಿ ವರದಿಗಾರರನ್ನು ಜೈಲಿಗೆ ಕಳುಹಿಸಲಾಗಿದೆ.


ಇದನ್ನೂ ಓದಿ: ಪತ್ರಕರ್ತರ ಬಂಧನ: ಯೋಗಿಯ ಉತ್ತರಪ್ರದೇಶ ಸರ್ಕಾರಕ್ಕೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...