Homeಮುಖಪುಟಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ

ಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ

ಬೆಂಗಳೂರಿನಲ್ಲಿ ಆಗಸ್ಟ್ 11 ರಂದು ನಡೆದ ಹಿಂಸಾಚಾರದಲ್ಲಿ ಪೊಲೀಸ್ ತೆಗೆದುಕೊಂಡ ಕ್ರಮಗಳ ಕುರಿತು ವರದಿ ಮಾಡುವಾಗ ಇಂಡಿಯಾ ಟುಡೆ, ದಿ ನ್ಯೂಸ್ ಮಿನಿಟ್ ಮತ್ತು ಸುವರ್ಣ ನ್ಯೂಸ್‌ನ ಐದು ಪತ್ರಕರ್ತರ ಮೇಲೆ ಬೆಂಗಳೂರು ಪೊಲೀಸರು ಹಲ್ಲೆ ನಡೆಸಿದ್ದಾರೆ.

- Advertisement -
- Advertisement -

ದೇಶದಲ್ಲಿ ಪತ್ರಕರ್ತರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ, ಹಲವಾರು ಪತ್ರಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ. ಹಲ್ಲೆ ತಡೆಗೆ ಆಗ್ರಹಿಸಿ ಆನ್‌ಲೈನ್ ಅಭಿಯಾನವನ್ನು ಆರಂಭಿಸಿದ್ದಾರೆ.

ಕಳೆದ ವಾರವೊಂದರಲ್ಲೆ ಎರಡು ಪ್ರತ್ಯೇಕ ಘಟನೆಗಳಲ್ಲಿ ಎಂಟು ಪತ್ರಕರ್ತರು ತಮ್ಮ ಕೆಲಸ ನಿರ್ವಹಿಸುವಾಗ ಹಲ್ಲೆಗೊಳಗಾಗಿದ್ದಾರೆ. ದೆಹಲಿ ಮೂಲದ ಕಾರವಾನ್ ನಿಯತಕಾಲಿಕೆಗೆ ಸೇರಿದ ಶಾಹಿದ್ ತಂತ್ರ, ಪ್ರಬ್ಜಿತ್ ಸಿಂಗ್ ಮತ್ತು ಮಹಿಳಾ ಪತ್ರಕರ್ತರ ಮೇಲೆ ಈಶಾನ್ಯ ದೆಹಲಿಯಲ್ಲಿ ಜನಸಮೂಹವೊಂದು ಹಲ್ಲೆ ನಡೆಸಿದೆ.

ಬೆಂಗಳೂರಿನಲ್ಲಿ ಆಗಸ್ಟ್ 11 ರಂದು ನಡೆದ ಹಿಂಸಾಚಾರದಲ್ಲಿ ಪೊಲೀಸ್ ತೆಗೆದುಕೊಂಡ ಕ್ರಮಗಳ ಕುರಿತು ವರದಿ ಮಾಡುವಾಗ ಇಂಡಿಯಾ ಟುಡೆ, ದಿ ನ್ಯೂಸ್ ಮಿನಿಟ್ ಮತ್ತು ಸುವರ್ಣ ನ್ಯೂಸ್‌ನ ಐದು ಪತ್ರಕರ್ತರ ಮೇಲೆ ಬೆಂಗಳೂರು ಪೊಲೀಸರು ಹಲ್ಲೆ ನಡೆಸಿದ್ದಾರೆ.

ದೈಹಿಕ ಹಲ್ಲೆಯಿಂದ ಆರಂಭವಾಗಿ ಸುಳ್ಳು ಕೇಸ್‌ ಹಾಕುವವರೆಗೆ ಪತ್ರಕರ್ತರು ಕೆಲಸ ನಿರ್ವಹಿಸುವಾಗ ನಾನಾ ರೀತಿಯ ತೊಂದರೆಗಳನ್ನು ಎದರಿಸುತ್ತಿದ್ದಾರೆ. ಕಳೆದ ವರ್ಷದಲ್ಲಿ ಈ ದಾಳಿಗಳು ನಾಟಕೀಯವೆಂಬಂತೆ ಹೆಚ್ಚಾಗಿವೆ. ಅದರಲ್ಲೂ ವಿಶೇಷವಾಗಿ ದೆಹಲಿ ಗಲಭೆಗಳು ಮತ್ತು ಕೊರೊನಾ ಸಾಂಕ್ರಾಮಿಕದಿಂದ ವಿಧಿಸಲಾದ ಲಾಕ್‌ಡೌನ್‌ನಲ್ಲಿನ ಸರ್ಕಾರದ ನ್ಯೂನತೆಗಳ ಬಗ್ಗೆ ವರದಿ ಮಾಡುತ್ತಿರುವವರ ಮೇಲೆ ಹಲ್ಲೆ, ದಾಳಿ ನಡೆಯುತ್ತಲೇ ಇದೆ ಎಂಬ ಆರೋಪ ಕೇಳಿಬಂದಿದೆ.

ಕಾಶ್ಮೀರ ಮತ್ತು ಛತ್ತೀಸ್‌ಗಢದ ಸಂಘರ್ಷ ಪ್ರದೇಶಗಳಲ್ಲಿನ ಪತ್ರಕರ್ತರನ್ನು ನಿಯಮಿತವಾಗಿ ಬೆದರಿಸಲಾಗುತ್ತಿದ್ದು, ಪ್ರಶ್ನಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಹಾಗಾಗಿ ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯಲು ಮತ್ತು ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡುವ ವಾತವಾರಣಕ್ಕೆ ಆಗ್ರಹಿಸಿ ಈ ಆನ್‌ಲೈನ್ ಅಭಿಯಾನ ಆರಂಭವಾಗಿದೆ.

ಹಲವಾರು ಪತ್ರಕರ್ತರು ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸುತ್ತಿದ್ದಂತೆ, #StopMediaLockdown ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್, “ಉದ್ದೇಶಪೂರ್ವಕ ದಾಳಿ, ಸುಳ್ಳು ಪ್ರಕರಣಗಳು, ಪೊಲೀಸ್ ಹಿಂಸಾಚಾರವನ್ನು ನಿಲ್ಲಿಸಿ” ಎಂದು ಟ್ವೀಟ್ ಮಾಡಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮವೊಂದಕ್ಕೆ ಹಾಜರಾಗುವ ಯೋಗಿ ಆದಿತ್ಯನಾಥ್ ಸರ್ಕಾರದ ಕ್ರಮಗಳ ಕುರಿತು ವರದಿಯನ್ನು ಪ್ರಕಟಿಸಿದ್ದಕ್ಕಾಗಿ ದಿ ವೈರ್ ಮತ್ತು ವರದರಾಜನ್ ವಿರುದ್ಧ ಎರಡು ಎಫ್‌ಐಆರ್ ದಾಖಲಿಸಲಾಗಿದೆ.

ಸ್ಕ್ರಾಲ್‌ನ ಸಂಪಾದಕ ನರೇಶ್ ಫರ್ನಾಂಡಿಸ್ “ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿನಿಧಿಸುವ ಕ್ಷೇತ್ರವಾದ ವಾರಣಾಸಿಯ ನಿವಾಸಿಗಳು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ವರದಿ ಮಾಡಿದ್ದಕ್ಕಾಗಿ ವೆಬ್‌ಸೈಟ್‌ನ ಕಾರ್ಯನಿರ್ವಾಹಕ ಸಂಪಾದಕ ಸುಪ್ರಿಯಾ ಶರ್ಮಾ ಅವರನ್ನು ಇತ್ತೀಚೆಗೆ ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಹಲ್ಲೆಯಾಗಿದೆ ದೂರಲಾಗಿದೆ.

ಬಿಜೆಪಿ ನೇತೃತ್ವದ ರಾಜ್ಯಗಳಿಂದ ಹೆಚ್ಚಿನ ಹಿಂಸಾಚಾರ ಮತ್ತು ಪೊಲೀಸರ ಮಿತಿಮೀರಿದ ಪ್ರಕರಣಗಳು ವರದಿಯಾಗಿವೆ. ಇತರ ರಾಜ್ಯಗಳಲ್ಲಿಯೂ ಸಹ, ಪೊಲೀಸರು ವರದಿಗಾರರ ವಿರುದ್ಧ, ವಿಶೇಷವಾಗಿ ಸಾಂಕ್ರಾಮಿಕ ರೋಗದ ಬಗ್ಗೆ ವರದಿ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಕೊರೊನಾ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸಲು ಮತ್ತು ಸೋಂಕಿತ ಜನರಿಗೆ ಸೂಕ್ತವಾದ ವೈದ್ಯಕೀಯ ವ್ಯವಸ್ಥೆಗಳನ್ನು ಮಾಡಲು ರಾಜ್ಯ ಸರ್ಕಾರದ ವೈಫಲ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ಮಹಾರಾಷ್ಟ್ರದ ಪ್ರಾದೇಶಿಕ ಪತ್ರಿಕೆಗಳ ಕನಿಷ್ಠ 15 ವರದಿಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕನಿಷ್ಠ ಎರಡು ನಿದರ್ಶನಗಳಲ್ಲಿ ವರದಿಗಾರರನ್ನು ಜೈಲಿಗೆ ಕಳುಹಿಸಲಾಗಿದೆ.


ಇದನ್ನೂ ಓದಿ: ಪತ್ರಕರ್ತರ ಬಂಧನ: ಯೋಗಿಯ ಉತ್ತರಪ್ರದೇಶ ಸರ್ಕಾರಕ್ಕೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...