Homeಮುಖಪುಟಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಸಿ-ವೋಟರ್ ಪ್ರಕಾರ, ಕಳೆದ ವರ್ಷ ಮೋದಿಯವರ ಆಡಳಿತವನ್ನು 65% ಜನ “ತುಂಬಾ ತೃಪ್ತಿಕಾರಕವಾಗಿದೆ” ಎಂದಿದ್ದರು. ಅದು ಈಗ ಕೇವಲ 37% ಗೆ ಕುಸಿತ ಕಂಡಿದೆ.

- Advertisement -
- Advertisement -

ಭಾರತೀಯ ಸರ್ವೆ ಏಜೆನ್ಸಿ ಸಿ-ವೋಟರ್ ಮತ್ತು ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್‌ ಸಮೀಕ್ಷೆಯಲ್ಲಿ ಭಾರತದಲ್ಲಿ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಿರುವುದು ಕಂಡುಬಂದಿದೆ. ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗಾಗಿ ಜಗತ್ತಿನ ಸಾಂಕ್ರಾಮಿಕ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಮೋದಿಯವರ ವಿರುದ್ದದ ಅಲೆಯೂ ಏರುತ್ತಲಿದೆ.

2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಆದರೆ ಕೋವಿಡ್ ಮೊದಲ ಮತ್ತು ಎರಡನೇ ಅಲೆಗೆ ಸಿಕ್ಕಿ ಭಾರತ ನರಳುತ್ತಿರುವ ಸಂದರ್ಭದಲ್ಲಿ ಮೋದಿ ವಿರುದ್ಧ ಅಲೆ ತೀವ್ರವಾಗಿದೆ.

ಭಾರತೀಯ ಸಂಸ್ಥೆ ಸಿ-ವೋಟರ್ ಪ್ರಕಾರ, ಕೇವಲ 37% ರಷ್ಟು ಜನರು ಮೋದಿಯವರ ಆಡಳಿತವನ್ನು “ತುಂಬಾ ತೃಪ್ತಿಕಾರಕವಾಗಿದೆ” ಎಂದು ಹೇಳಿದ್ದಾರೆ. ರಾಯಿಟರ್ಸ್ ಪ್ರಕಾರ, 2020 ರಲ್ಲಿ ದಾಖಲಾದ ಇದು 65% ಇದ್ದು, ಈಗ ಭಾರಿ ಕುಸಿತ ಕಂಡಿದೆ.

ಅಮೆರಿಕದ ಡಾಟಾ ಕಂಪನಿ ‘ಮಾರ್ನಿಂಗ್ ಕನ್ಸಲ್ಟ್’ ನಡೆಸುವ ವಿಶ್ವ ನಾಯಕರ ಅಪ್ರುವಲ್ ರೇಟಿಂಗ್ ಟ್ರಾಕಿಂಗ್ ಪ್ರಕಾರ ಪ್ರಧಾನ ಮಂತ್ರಿ ಮೋದಿಯವರ ಜನಪ್ರಿಯತೆ  ಮೇ ಮೂರನೇ ವಾರ ಶೇಕಡಾ 63 ಕ್ಕೆ ಇಳಿದಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇದು ಶೇಕಡಾ 74 ಇತ್ತು. ಅಂದರೆ ಆಗಸ್ಟ್ 2019 ರಿಂದ ಏಜೆನ್ಸಿಯು ರೇಟಿಂಗ್ ಅನ್ನು ಪ್ರಕಟಿಸಲು ಪ್ರಾರಂಭಿಸಿದ ನಂತರದಲ್ಲಿ ಮೋದಿಯವರ ಜನಪ್ರಿಯತೆ ಮೊದಲ ಬಾರಿಗೆ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ.

ಅದೇ ರೀತಿಯಲ್ಲಿ ಟ್ರ್ಯಾಕರ್ ಅನ್ನು ಪ್ರಾರಂಭಿಸಿದಾಗಿನಿಂದ ನರೇಂದ್ರ ಮೋದಿಯವರಿಗೆ ಅಸಮ್ಮತಿ ರೇಟಿಂಗ್ ಅತ್ಯುನ್ನತ ಮಟ್ಟಕ್ಕೆ ಏರಿದೆ. ಮಾರ್ಚ್ ಆರಂಭದಲ್ಲಿ ಶೇಕಡಾ 20 ಇದ್ದ ಮೋದಿ ವಿರೋಧಿ ಅಲೆ ಮೇ ಮೂರನೇ ವಾರಕ್ಕೆ ಶೇಕಡಾ 31 ಕ್ಕೆ ಏರಿದೆ.

ಉಳಿದ ವಿಶ್ವ ನಾಯಕರಿಗೆ ಹೋಲಿಸಿದರೆ ನರೇಂದ್ರ ಮೋದಿಯವರ ಜನಪ್ರಿಯತೆ ಈಗಲೂ ಹೆಚ್ಚಿಗೆಯೇ ಇದೆ. ಆದರೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಅವರು ಅನುಸರಿಸಿದ ಕ್ರಮಗಳಿಂದ ತೀವ್ರ ಟೀಕೆಗೆ ಒಳಗಾದ ಅವರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಕುಸಿಯಲು ಆರಂಭಿಸಿದೆ.

“ಪ್ರಧಾನ ಮಂತ್ರಿ ತಮ್ಮ ವೃತ್ತಿಜೀವನದ ಅತಿದೊಡ್ಡ ರಾಜಕೀಯ ಸವಾಲನ್ನು ಎದುರಿಸುತ್ತಿದ್ದಾರೆ” ಎಂದು ಸಿ-ವೋಟರ್ ಸಂಸ್ಥಾಪಕ ಯಶ್ವಂತ್ ದೇಶ್ಮುಖ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಆದರೂ, ಮೋದಿಯವರ ಅಪ್ರುವಲ್ ರೇಟಿಂಗ್‌ಗಳ ಕುಸಿತದ ಹೊರತಾಗಿಯೂ, ಅವರು ರಾಜಕೀಯದಲ್ಲಿ ಭಾರತದ ಅತ್ಯಂತ ಜನಪ್ರಿಯ ಮುಖವಾಗಿ ಉಳಿದಿದ್ದಾರೆ ಎಂದು ಸಿವೋಟರ್ ಡೇಟಾ ತೋರಿಸಿದೆ.

ಫೆಬ್ರವರಿಯಲ್ಲಿ ಅವರು ನಾವು ಕೋವಿಡ್‌ ಅನ್ನು ಮಣಿಸಿದ್ದೇವೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಉದ್ಘರಿಸಿದ್ದು ಮತ್ತು ತಜ್ಞರ ಎಚ್ಚರಿಕೆಯನ್ನು ಕಡೆಗಣಿಸಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಪ್ರಧಾನಿ ಮೋದಿಯವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಮಾರ್ಚ್ ಅಂತ್ಯದಿಂದ ಆರಂಭಗೊಂಡ ಕೋವಿಡ್ ಎರಡನೇ ಅಲೆ ಭಾರತಕ್ಕೆ ತೀವ್ರ ಆಘಾತ ನೀಡಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು, ಆಮ್ಲಜನಕ, ಔಷಧಿಗಳ ಕೊರತೆ ತೀವ್ರವಾಗಿ ಬಾಧಿಸಿದೆ. ಶ್ಮಶಾನದಲ್ಲಿ ಶವಸಂಸ್ಕಾರಕ್ಕೂ ಉದ್ದನೆಯ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಕೋವಿಡ್‌ ಅಲೆಯನ್ನು ಕಡೆಗಣಿಸಿದ್ದರ ಪರಿಣಾಮವಾಗಿ ಗೋಚರಿಸುತ್ತಿದೆ.

ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೊ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸರ್ಕಾರಿ ನಾಯಕರ ಅಪ್ರುವಲ್ ರೇಟಿಂಗ್ ಅನ್ನು ಟ್ರ್ಯಾಕ್ ಮಾಡುತ್ತಿದೆ. ವಾರಕ್ಕೊಮ್ಮೆ ಈ ಪುಟವು ಎಲ್ಲಾ 13 ದೇಶಗಳ ಇತ್ತೀಚಿನ ಡೇಟಾವನ್ನು ಅಪ್ಡೇಟ್ ಮಾಡುತ್ತದೆ. ಇದು ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಚಲನಶಾಸ್ತ್ರದ ಬಗ್ಗೆ ನೈಜ ಒಳನೋಟವನ್ನು ನೀಡುತ್ತದೆ. ಅಪ್ರುವಲ್ ರೇಟಿಂಗ್‌ಗಳು ಪ್ರತಿ ದೇಶದ ವಯಸ್ಕ ನಿವಾಸಿಗಳ ಏಳು ದಿನಗಳ ಅಭಿಪ್ರಾಯಗಳ ಸರಾಸರಿಯನ್ನು ಆಧರಿಸಿವೆ, ಮತ್ತು ಮಾದರಿಗಳ ಗಾತ್ರಗಳು ದೇಶಕ್ಕೆ ಅನುಗುಣವಾಗಿ ಬದಲಾಗುತ್ತವೆ.


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...