Homeಮುಖಪುಟಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಸಿ-ವೋಟರ್ ಪ್ರಕಾರ, ಕಳೆದ ವರ್ಷ ಮೋದಿಯವರ ಆಡಳಿತವನ್ನು 65% ಜನ “ತುಂಬಾ ತೃಪ್ತಿಕಾರಕವಾಗಿದೆ” ಎಂದಿದ್ದರು. ಅದು ಈಗ ಕೇವಲ 37% ಗೆ ಕುಸಿತ ಕಂಡಿದೆ.

- Advertisement -
- Advertisement -

ಭಾರತೀಯ ಸರ್ವೆ ಏಜೆನ್ಸಿ ಸಿ-ವೋಟರ್ ಮತ್ತು ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್‌ ಸಮೀಕ್ಷೆಯಲ್ಲಿ ಭಾರತದಲ್ಲಿ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಿರುವುದು ಕಂಡುಬಂದಿದೆ. ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗಾಗಿ ಜಗತ್ತಿನ ಸಾಂಕ್ರಾಮಿಕ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಮೋದಿಯವರ ವಿರುದ್ದದ ಅಲೆಯೂ ಏರುತ್ತಲಿದೆ.

2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಆದರೆ ಕೋವಿಡ್ ಮೊದಲ ಮತ್ತು ಎರಡನೇ ಅಲೆಗೆ ಸಿಕ್ಕಿ ಭಾರತ ನರಳುತ್ತಿರುವ ಸಂದರ್ಭದಲ್ಲಿ ಮೋದಿ ವಿರುದ್ಧ ಅಲೆ ತೀವ್ರವಾಗಿದೆ.

ಭಾರತೀಯ ಸಂಸ್ಥೆ ಸಿ-ವೋಟರ್ ಪ್ರಕಾರ, ಕೇವಲ 37% ರಷ್ಟು ಜನರು ಮೋದಿಯವರ ಆಡಳಿತವನ್ನು “ತುಂಬಾ ತೃಪ್ತಿಕಾರಕವಾಗಿದೆ” ಎಂದು ಹೇಳಿದ್ದಾರೆ. ರಾಯಿಟರ್ಸ್ ಪ್ರಕಾರ, 2020 ರಲ್ಲಿ ದಾಖಲಾದ ಇದು 65% ಇದ್ದು, ಈಗ ಭಾರಿ ಕುಸಿತ ಕಂಡಿದೆ.

ಅಮೆರಿಕದ ಡಾಟಾ ಕಂಪನಿ ‘ಮಾರ್ನಿಂಗ್ ಕನ್ಸಲ್ಟ್’ ನಡೆಸುವ ವಿಶ್ವ ನಾಯಕರ ಅಪ್ರುವಲ್ ರೇಟಿಂಗ್ ಟ್ರಾಕಿಂಗ್ ಪ್ರಕಾರ ಪ್ರಧಾನ ಮಂತ್ರಿ ಮೋದಿಯವರ ಜನಪ್ರಿಯತೆ  ಮೇ ಮೂರನೇ ವಾರ ಶೇಕಡಾ 63 ಕ್ಕೆ ಇಳಿದಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇದು ಶೇಕಡಾ 74 ಇತ್ತು. ಅಂದರೆ ಆಗಸ್ಟ್ 2019 ರಿಂದ ಏಜೆನ್ಸಿಯು ರೇಟಿಂಗ್ ಅನ್ನು ಪ್ರಕಟಿಸಲು ಪ್ರಾರಂಭಿಸಿದ ನಂತರದಲ್ಲಿ ಮೋದಿಯವರ ಜನಪ್ರಿಯತೆ ಮೊದಲ ಬಾರಿಗೆ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ.

ಅದೇ ರೀತಿಯಲ್ಲಿ ಟ್ರ್ಯಾಕರ್ ಅನ್ನು ಪ್ರಾರಂಭಿಸಿದಾಗಿನಿಂದ ನರೇಂದ್ರ ಮೋದಿಯವರಿಗೆ ಅಸಮ್ಮತಿ ರೇಟಿಂಗ್ ಅತ್ಯುನ್ನತ ಮಟ್ಟಕ್ಕೆ ಏರಿದೆ. ಮಾರ್ಚ್ ಆರಂಭದಲ್ಲಿ ಶೇಕಡಾ 20 ಇದ್ದ ಮೋದಿ ವಿರೋಧಿ ಅಲೆ ಮೇ ಮೂರನೇ ವಾರಕ್ಕೆ ಶೇಕಡಾ 31 ಕ್ಕೆ ಏರಿದೆ.

ಉಳಿದ ವಿಶ್ವ ನಾಯಕರಿಗೆ ಹೋಲಿಸಿದರೆ ನರೇಂದ್ರ ಮೋದಿಯವರ ಜನಪ್ರಿಯತೆ ಈಗಲೂ ಹೆಚ್ಚಿಗೆಯೇ ಇದೆ. ಆದರೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಅವರು ಅನುಸರಿಸಿದ ಕ್ರಮಗಳಿಂದ ತೀವ್ರ ಟೀಕೆಗೆ ಒಳಗಾದ ಅವರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಕುಸಿಯಲು ಆರಂಭಿಸಿದೆ.

“ಪ್ರಧಾನ ಮಂತ್ರಿ ತಮ್ಮ ವೃತ್ತಿಜೀವನದ ಅತಿದೊಡ್ಡ ರಾಜಕೀಯ ಸವಾಲನ್ನು ಎದುರಿಸುತ್ತಿದ್ದಾರೆ” ಎಂದು ಸಿ-ವೋಟರ್ ಸಂಸ್ಥಾಪಕ ಯಶ್ವಂತ್ ದೇಶ್ಮುಖ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಆದರೂ, ಮೋದಿಯವರ ಅಪ್ರುವಲ್ ರೇಟಿಂಗ್‌ಗಳ ಕುಸಿತದ ಹೊರತಾಗಿಯೂ, ಅವರು ರಾಜಕೀಯದಲ್ಲಿ ಭಾರತದ ಅತ್ಯಂತ ಜನಪ್ರಿಯ ಮುಖವಾಗಿ ಉಳಿದಿದ್ದಾರೆ ಎಂದು ಸಿವೋಟರ್ ಡೇಟಾ ತೋರಿಸಿದೆ.

ಫೆಬ್ರವರಿಯಲ್ಲಿ ಅವರು ನಾವು ಕೋವಿಡ್‌ ಅನ್ನು ಮಣಿಸಿದ್ದೇವೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಉದ್ಘರಿಸಿದ್ದು ಮತ್ತು ತಜ್ಞರ ಎಚ್ಚರಿಕೆಯನ್ನು ಕಡೆಗಣಿಸಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಪ್ರಧಾನಿ ಮೋದಿಯವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಮಾರ್ಚ್ ಅಂತ್ಯದಿಂದ ಆರಂಭಗೊಂಡ ಕೋವಿಡ್ ಎರಡನೇ ಅಲೆ ಭಾರತಕ್ಕೆ ತೀವ್ರ ಆಘಾತ ನೀಡಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು, ಆಮ್ಲಜನಕ, ಔಷಧಿಗಳ ಕೊರತೆ ತೀವ್ರವಾಗಿ ಬಾಧಿಸಿದೆ. ಶ್ಮಶಾನದಲ್ಲಿ ಶವಸಂಸ್ಕಾರಕ್ಕೂ ಉದ್ದನೆಯ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಕೋವಿಡ್‌ ಅಲೆಯನ್ನು ಕಡೆಗಣಿಸಿದ್ದರ ಪರಿಣಾಮವಾಗಿ ಗೋಚರಿಸುತ್ತಿದೆ.

ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೊ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸರ್ಕಾರಿ ನಾಯಕರ ಅಪ್ರುವಲ್ ರೇಟಿಂಗ್ ಅನ್ನು ಟ್ರ್ಯಾಕ್ ಮಾಡುತ್ತಿದೆ. ವಾರಕ್ಕೊಮ್ಮೆ ಈ ಪುಟವು ಎಲ್ಲಾ 13 ದೇಶಗಳ ಇತ್ತೀಚಿನ ಡೇಟಾವನ್ನು ಅಪ್ಡೇಟ್ ಮಾಡುತ್ತದೆ. ಇದು ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಚಲನಶಾಸ್ತ್ರದ ಬಗ್ಗೆ ನೈಜ ಒಳನೋಟವನ್ನು ನೀಡುತ್ತದೆ. ಅಪ್ರುವಲ್ ರೇಟಿಂಗ್‌ಗಳು ಪ್ರತಿ ದೇಶದ ವಯಸ್ಕ ನಿವಾಸಿಗಳ ಏಳು ದಿನಗಳ ಅಭಿಪ್ರಾಯಗಳ ಸರಾಸರಿಯನ್ನು ಆಧರಿಸಿವೆ, ಮತ್ತು ಮಾದರಿಗಳ ಗಾತ್ರಗಳು ದೇಶಕ್ಕೆ ಅನುಗುಣವಾಗಿ ಬದಲಾಗುತ್ತವೆ.


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...