Homeಮುಖಪುಟಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಸಿ-ವೋಟರ್ ಪ್ರಕಾರ, ಕಳೆದ ವರ್ಷ ಮೋದಿಯವರ ಆಡಳಿತವನ್ನು 65% ಜನ “ತುಂಬಾ ತೃಪ್ತಿಕಾರಕವಾಗಿದೆ” ಎಂದಿದ್ದರು. ಅದು ಈಗ ಕೇವಲ 37% ಗೆ ಕುಸಿತ ಕಂಡಿದೆ.

- Advertisement -
- Advertisement -

ಭಾರತೀಯ ಸರ್ವೆ ಏಜೆನ್ಸಿ ಸಿ-ವೋಟರ್ ಮತ್ತು ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್‌ ಸಮೀಕ್ಷೆಯಲ್ಲಿ ಭಾರತದಲ್ಲಿ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಿರುವುದು ಕಂಡುಬಂದಿದೆ. ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗಾಗಿ ಜಗತ್ತಿನ ಸಾಂಕ್ರಾಮಿಕ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಮೋದಿಯವರ ವಿರುದ್ದದ ಅಲೆಯೂ ಏರುತ್ತಲಿದೆ.

2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಆದರೆ ಕೋವಿಡ್ ಮೊದಲ ಮತ್ತು ಎರಡನೇ ಅಲೆಗೆ ಸಿಕ್ಕಿ ಭಾರತ ನರಳುತ್ತಿರುವ ಸಂದರ್ಭದಲ್ಲಿ ಮೋದಿ ವಿರುದ್ಧ ಅಲೆ ತೀವ್ರವಾಗಿದೆ.

ಭಾರತೀಯ ಸಂಸ್ಥೆ ಸಿ-ವೋಟರ್ ಪ್ರಕಾರ, ಕೇವಲ 37% ರಷ್ಟು ಜನರು ಮೋದಿಯವರ ಆಡಳಿತವನ್ನು “ತುಂಬಾ ತೃಪ್ತಿಕಾರಕವಾಗಿದೆ” ಎಂದು ಹೇಳಿದ್ದಾರೆ. ರಾಯಿಟರ್ಸ್ ಪ್ರಕಾರ, 2020 ರಲ್ಲಿ ದಾಖಲಾದ ಇದು 65% ಇದ್ದು, ಈಗ ಭಾರಿ ಕುಸಿತ ಕಂಡಿದೆ.

ಅಮೆರಿಕದ ಡಾಟಾ ಕಂಪನಿ ‘ಮಾರ್ನಿಂಗ್ ಕನ್ಸಲ್ಟ್’ ನಡೆಸುವ ವಿಶ್ವ ನಾಯಕರ ಅಪ್ರುವಲ್ ರೇಟಿಂಗ್ ಟ್ರಾಕಿಂಗ್ ಪ್ರಕಾರ ಪ್ರಧಾನ ಮಂತ್ರಿ ಮೋದಿಯವರ ಜನಪ್ರಿಯತೆ  ಮೇ ಮೂರನೇ ವಾರ ಶೇಕಡಾ 63 ಕ್ಕೆ ಇಳಿದಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇದು ಶೇಕಡಾ 74 ಇತ್ತು. ಅಂದರೆ ಆಗಸ್ಟ್ 2019 ರಿಂದ ಏಜೆನ್ಸಿಯು ರೇಟಿಂಗ್ ಅನ್ನು ಪ್ರಕಟಿಸಲು ಪ್ರಾರಂಭಿಸಿದ ನಂತರದಲ್ಲಿ ಮೋದಿಯವರ ಜನಪ್ರಿಯತೆ ಮೊದಲ ಬಾರಿಗೆ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ.

ಅದೇ ರೀತಿಯಲ್ಲಿ ಟ್ರ್ಯಾಕರ್ ಅನ್ನು ಪ್ರಾರಂಭಿಸಿದಾಗಿನಿಂದ ನರೇಂದ್ರ ಮೋದಿಯವರಿಗೆ ಅಸಮ್ಮತಿ ರೇಟಿಂಗ್ ಅತ್ಯುನ್ನತ ಮಟ್ಟಕ್ಕೆ ಏರಿದೆ. ಮಾರ್ಚ್ ಆರಂಭದಲ್ಲಿ ಶೇಕಡಾ 20 ಇದ್ದ ಮೋದಿ ವಿರೋಧಿ ಅಲೆ ಮೇ ಮೂರನೇ ವಾರಕ್ಕೆ ಶೇಕಡಾ 31 ಕ್ಕೆ ಏರಿದೆ.

ಉಳಿದ ವಿಶ್ವ ನಾಯಕರಿಗೆ ಹೋಲಿಸಿದರೆ ನರೇಂದ್ರ ಮೋದಿಯವರ ಜನಪ್ರಿಯತೆ ಈಗಲೂ ಹೆಚ್ಚಿಗೆಯೇ ಇದೆ. ಆದರೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಅವರು ಅನುಸರಿಸಿದ ಕ್ರಮಗಳಿಂದ ತೀವ್ರ ಟೀಕೆಗೆ ಒಳಗಾದ ಅವರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಕುಸಿಯಲು ಆರಂಭಿಸಿದೆ.

“ಪ್ರಧಾನ ಮಂತ್ರಿ ತಮ್ಮ ವೃತ್ತಿಜೀವನದ ಅತಿದೊಡ್ಡ ರಾಜಕೀಯ ಸವಾಲನ್ನು ಎದುರಿಸುತ್ತಿದ್ದಾರೆ” ಎಂದು ಸಿ-ವೋಟರ್ ಸಂಸ್ಥಾಪಕ ಯಶ್ವಂತ್ ದೇಶ್ಮುಖ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಆದರೂ, ಮೋದಿಯವರ ಅಪ್ರುವಲ್ ರೇಟಿಂಗ್‌ಗಳ ಕುಸಿತದ ಹೊರತಾಗಿಯೂ, ಅವರು ರಾಜಕೀಯದಲ್ಲಿ ಭಾರತದ ಅತ್ಯಂತ ಜನಪ್ರಿಯ ಮುಖವಾಗಿ ಉಳಿದಿದ್ದಾರೆ ಎಂದು ಸಿವೋಟರ್ ಡೇಟಾ ತೋರಿಸಿದೆ.

ಫೆಬ್ರವರಿಯಲ್ಲಿ ಅವರು ನಾವು ಕೋವಿಡ್‌ ಅನ್ನು ಮಣಿಸಿದ್ದೇವೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಉದ್ಘರಿಸಿದ್ದು ಮತ್ತು ತಜ್ಞರ ಎಚ್ಚರಿಕೆಯನ್ನು ಕಡೆಗಣಿಸಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಪ್ರಧಾನಿ ಮೋದಿಯವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಮಾರ್ಚ್ ಅಂತ್ಯದಿಂದ ಆರಂಭಗೊಂಡ ಕೋವಿಡ್ ಎರಡನೇ ಅಲೆ ಭಾರತಕ್ಕೆ ತೀವ್ರ ಆಘಾತ ನೀಡಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು, ಆಮ್ಲಜನಕ, ಔಷಧಿಗಳ ಕೊರತೆ ತೀವ್ರವಾಗಿ ಬಾಧಿಸಿದೆ. ಶ್ಮಶಾನದಲ್ಲಿ ಶವಸಂಸ್ಕಾರಕ್ಕೂ ಉದ್ದನೆಯ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಕೋವಿಡ್‌ ಅಲೆಯನ್ನು ಕಡೆಗಣಿಸಿದ್ದರ ಪರಿಣಾಮವಾಗಿ ಗೋಚರಿಸುತ್ತಿದೆ.

ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೊ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸರ್ಕಾರಿ ನಾಯಕರ ಅಪ್ರುವಲ್ ರೇಟಿಂಗ್ ಅನ್ನು ಟ್ರ್ಯಾಕ್ ಮಾಡುತ್ತಿದೆ. ವಾರಕ್ಕೊಮ್ಮೆ ಈ ಪುಟವು ಎಲ್ಲಾ 13 ದೇಶಗಳ ಇತ್ತೀಚಿನ ಡೇಟಾವನ್ನು ಅಪ್ಡೇಟ್ ಮಾಡುತ್ತದೆ. ಇದು ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಚಲನಶಾಸ್ತ್ರದ ಬಗ್ಗೆ ನೈಜ ಒಳನೋಟವನ್ನು ನೀಡುತ್ತದೆ. ಅಪ್ರುವಲ್ ರೇಟಿಂಗ್‌ಗಳು ಪ್ರತಿ ದೇಶದ ವಯಸ್ಕ ನಿವಾಸಿಗಳ ಏಳು ದಿನಗಳ ಅಭಿಪ್ರಾಯಗಳ ಸರಾಸರಿಯನ್ನು ಆಧರಿಸಿವೆ, ಮತ್ತು ಮಾದರಿಗಳ ಗಾತ್ರಗಳು ದೇಶಕ್ಕೆ ಅನುಗುಣವಾಗಿ ಬದಲಾಗುತ್ತವೆ.


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...