Homeಮುಖಪುಟಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಸಿ-ವೋಟರ್ ಪ್ರಕಾರ, ಕಳೆದ ವರ್ಷ ಮೋದಿಯವರ ಆಡಳಿತವನ್ನು 65% ಜನ “ತುಂಬಾ ತೃಪ್ತಿಕಾರಕವಾಗಿದೆ” ಎಂದಿದ್ದರು. ಅದು ಈಗ ಕೇವಲ 37% ಗೆ ಕುಸಿತ ಕಂಡಿದೆ.

- Advertisement -
- Advertisement -

ಭಾರತೀಯ ಸರ್ವೆ ಏಜೆನ್ಸಿ ಸಿ-ವೋಟರ್ ಮತ್ತು ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್‌ ಸಮೀಕ್ಷೆಯಲ್ಲಿ ಭಾರತದಲ್ಲಿ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಿರುವುದು ಕಂಡುಬಂದಿದೆ. ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗಾಗಿ ಜಗತ್ತಿನ ಸಾಂಕ್ರಾಮಿಕ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಮೋದಿಯವರ ವಿರುದ್ದದ ಅಲೆಯೂ ಏರುತ್ತಲಿದೆ.

2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಆದರೆ ಕೋವಿಡ್ ಮೊದಲ ಮತ್ತು ಎರಡನೇ ಅಲೆಗೆ ಸಿಕ್ಕಿ ಭಾರತ ನರಳುತ್ತಿರುವ ಸಂದರ್ಭದಲ್ಲಿ ಮೋದಿ ವಿರುದ್ಧ ಅಲೆ ತೀವ್ರವಾಗಿದೆ.

ಭಾರತೀಯ ಸಂಸ್ಥೆ ಸಿ-ವೋಟರ್ ಪ್ರಕಾರ, ಕೇವಲ 37% ರಷ್ಟು ಜನರು ಮೋದಿಯವರ ಆಡಳಿತವನ್ನು “ತುಂಬಾ ತೃಪ್ತಿಕಾರಕವಾಗಿದೆ” ಎಂದು ಹೇಳಿದ್ದಾರೆ. ರಾಯಿಟರ್ಸ್ ಪ್ರಕಾರ, 2020 ರಲ್ಲಿ ದಾಖಲಾದ ಇದು 65% ಇದ್ದು, ಈಗ ಭಾರಿ ಕುಸಿತ ಕಂಡಿದೆ.

ಅಮೆರಿಕದ ಡಾಟಾ ಕಂಪನಿ ‘ಮಾರ್ನಿಂಗ್ ಕನ್ಸಲ್ಟ್’ ನಡೆಸುವ ವಿಶ್ವ ನಾಯಕರ ಅಪ್ರುವಲ್ ರೇಟಿಂಗ್ ಟ್ರಾಕಿಂಗ್ ಪ್ರಕಾರ ಪ್ರಧಾನ ಮಂತ್ರಿ ಮೋದಿಯವರ ಜನಪ್ರಿಯತೆ  ಮೇ ಮೂರನೇ ವಾರ ಶೇಕಡಾ 63 ಕ್ಕೆ ಇಳಿದಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇದು ಶೇಕಡಾ 74 ಇತ್ತು. ಅಂದರೆ ಆಗಸ್ಟ್ 2019 ರಿಂದ ಏಜೆನ್ಸಿಯು ರೇಟಿಂಗ್ ಅನ್ನು ಪ್ರಕಟಿಸಲು ಪ್ರಾರಂಭಿಸಿದ ನಂತರದಲ್ಲಿ ಮೋದಿಯವರ ಜನಪ್ರಿಯತೆ ಮೊದಲ ಬಾರಿಗೆ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ.

ಅದೇ ರೀತಿಯಲ್ಲಿ ಟ್ರ್ಯಾಕರ್ ಅನ್ನು ಪ್ರಾರಂಭಿಸಿದಾಗಿನಿಂದ ನರೇಂದ್ರ ಮೋದಿಯವರಿಗೆ ಅಸಮ್ಮತಿ ರೇಟಿಂಗ್ ಅತ್ಯುನ್ನತ ಮಟ್ಟಕ್ಕೆ ಏರಿದೆ. ಮಾರ್ಚ್ ಆರಂಭದಲ್ಲಿ ಶೇಕಡಾ 20 ಇದ್ದ ಮೋದಿ ವಿರೋಧಿ ಅಲೆ ಮೇ ಮೂರನೇ ವಾರಕ್ಕೆ ಶೇಕಡಾ 31 ಕ್ಕೆ ಏರಿದೆ.

ಉಳಿದ ವಿಶ್ವ ನಾಯಕರಿಗೆ ಹೋಲಿಸಿದರೆ ನರೇಂದ್ರ ಮೋದಿಯವರ ಜನಪ್ರಿಯತೆ ಈಗಲೂ ಹೆಚ್ಚಿಗೆಯೇ ಇದೆ. ಆದರೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಅವರು ಅನುಸರಿಸಿದ ಕ್ರಮಗಳಿಂದ ತೀವ್ರ ಟೀಕೆಗೆ ಒಳಗಾದ ಅವರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಕುಸಿಯಲು ಆರಂಭಿಸಿದೆ.

“ಪ್ರಧಾನ ಮಂತ್ರಿ ತಮ್ಮ ವೃತ್ತಿಜೀವನದ ಅತಿದೊಡ್ಡ ರಾಜಕೀಯ ಸವಾಲನ್ನು ಎದುರಿಸುತ್ತಿದ್ದಾರೆ” ಎಂದು ಸಿ-ವೋಟರ್ ಸಂಸ್ಥಾಪಕ ಯಶ್ವಂತ್ ದೇಶ್ಮುಖ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಆದರೂ, ಮೋದಿಯವರ ಅಪ್ರುವಲ್ ರೇಟಿಂಗ್‌ಗಳ ಕುಸಿತದ ಹೊರತಾಗಿಯೂ, ಅವರು ರಾಜಕೀಯದಲ್ಲಿ ಭಾರತದ ಅತ್ಯಂತ ಜನಪ್ರಿಯ ಮುಖವಾಗಿ ಉಳಿದಿದ್ದಾರೆ ಎಂದು ಸಿವೋಟರ್ ಡೇಟಾ ತೋರಿಸಿದೆ.

ಫೆಬ್ರವರಿಯಲ್ಲಿ ಅವರು ನಾವು ಕೋವಿಡ್‌ ಅನ್ನು ಮಣಿಸಿದ್ದೇವೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಉದ್ಘರಿಸಿದ್ದು ಮತ್ತು ತಜ್ಞರ ಎಚ್ಚರಿಕೆಯನ್ನು ಕಡೆಗಣಿಸಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಪ್ರಧಾನಿ ಮೋದಿಯವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಮಾರ್ಚ್ ಅಂತ್ಯದಿಂದ ಆರಂಭಗೊಂಡ ಕೋವಿಡ್ ಎರಡನೇ ಅಲೆ ಭಾರತಕ್ಕೆ ತೀವ್ರ ಆಘಾತ ನೀಡಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು, ಆಮ್ಲಜನಕ, ಔಷಧಿಗಳ ಕೊರತೆ ತೀವ್ರವಾಗಿ ಬಾಧಿಸಿದೆ. ಶ್ಮಶಾನದಲ್ಲಿ ಶವಸಂಸ್ಕಾರಕ್ಕೂ ಉದ್ದನೆಯ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಕೋವಿಡ್‌ ಅಲೆಯನ್ನು ಕಡೆಗಣಿಸಿದ್ದರ ಪರಿಣಾಮವಾಗಿ ಗೋಚರಿಸುತ್ತಿದೆ.

ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೊ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸರ್ಕಾರಿ ನಾಯಕರ ಅಪ್ರುವಲ್ ರೇಟಿಂಗ್ ಅನ್ನು ಟ್ರ್ಯಾಕ್ ಮಾಡುತ್ತಿದೆ. ವಾರಕ್ಕೊಮ್ಮೆ ಈ ಪುಟವು ಎಲ್ಲಾ 13 ದೇಶಗಳ ಇತ್ತೀಚಿನ ಡೇಟಾವನ್ನು ಅಪ್ಡೇಟ್ ಮಾಡುತ್ತದೆ. ಇದು ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಚಲನಶಾಸ್ತ್ರದ ಬಗ್ಗೆ ನೈಜ ಒಳನೋಟವನ್ನು ನೀಡುತ್ತದೆ. ಅಪ್ರುವಲ್ ರೇಟಿಂಗ್‌ಗಳು ಪ್ರತಿ ದೇಶದ ವಯಸ್ಕ ನಿವಾಸಿಗಳ ಏಳು ದಿನಗಳ ಅಭಿಪ್ರಾಯಗಳ ಸರಾಸರಿಯನ್ನು ಆಧರಿಸಿವೆ, ಮತ್ತು ಮಾದರಿಗಳ ಗಾತ್ರಗಳು ದೇಶಕ್ಕೆ ಅನುಗುಣವಾಗಿ ಬದಲಾಗುತ್ತವೆ.


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...

‘ಅದು ಪೊಲೀಸರೇ ನಡೆಸಿದ ಪೂರ್ವ ಯೋಜಿತ ಕೃತ್ಯ’: ಸಂಭಾಲ್ ಹಿಂಸಾಚಾರ ನ್ಯಾಯಾಂಗ ಆಯೋಗದ ವರದಿ ತಿರಸ್ಕರಿಸಿದ ಸಂಸದ ಜಿಯಾ-ಉರ್-ರೆಹಮಾನ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ಆಯೋಗದ ವರದಿಯನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಘಟನೆಯಲ್ಲಿ ನಾಲ್ವರು...

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...