Homeಮುಖಪುಟಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಸಿ-ವೋಟರ್ ಪ್ರಕಾರ, ಕಳೆದ ವರ್ಷ ಮೋದಿಯವರ ಆಡಳಿತವನ್ನು 65% ಜನ “ತುಂಬಾ ತೃಪ್ತಿಕಾರಕವಾಗಿದೆ” ಎಂದಿದ್ದರು. ಅದು ಈಗ ಕೇವಲ 37% ಗೆ ಕುಸಿತ ಕಂಡಿದೆ.

- Advertisement -
- Advertisement -

ಭಾರತೀಯ ಸರ್ವೆ ಏಜೆನ್ಸಿ ಸಿ-ವೋಟರ್ ಮತ್ತು ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್‌ ಸಮೀಕ್ಷೆಯಲ್ಲಿ ಭಾರತದಲ್ಲಿ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಿರುವುದು ಕಂಡುಬಂದಿದೆ. ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗಾಗಿ ಜಗತ್ತಿನ ಸಾಂಕ್ರಾಮಿಕ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಮೋದಿಯವರ ವಿರುದ್ದದ ಅಲೆಯೂ ಏರುತ್ತಲಿದೆ.

2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಆದರೆ ಕೋವಿಡ್ ಮೊದಲ ಮತ್ತು ಎರಡನೇ ಅಲೆಗೆ ಸಿಕ್ಕಿ ಭಾರತ ನರಳುತ್ತಿರುವ ಸಂದರ್ಭದಲ್ಲಿ ಮೋದಿ ವಿರುದ್ಧ ಅಲೆ ತೀವ್ರವಾಗಿದೆ.

ಭಾರತೀಯ ಸಂಸ್ಥೆ ಸಿ-ವೋಟರ್ ಪ್ರಕಾರ, ಕೇವಲ 37% ರಷ್ಟು ಜನರು ಮೋದಿಯವರ ಆಡಳಿತವನ್ನು “ತುಂಬಾ ತೃಪ್ತಿಕಾರಕವಾಗಿದೆ” ಎಂದು ಹೇಳಿದ್ದಾರೆ. ರಾಯಿಟರ್ಸ್ ಪ್ರಕಾರ, 2020 ರಲ್ಲಿ ದಾಖಲಾದ ಇದು 65% ಇದ್ದು, ಈಗ ಭಾರಿ ಕುಸಿತ ಕಂಡಿದೆ.

ಅಮೆರಿಕದ ಡಾಟಾ ಕಂಪನಿ ‘ಮಾರ್ನಿಂಗ್ ಕನ್ಸಲ್ಟ್’ ನಡೆಸುವ ವಿಶ್ವ ನಾಯಕರ ಅಪ್ರುವಲ್ ರೇಟಿಂಗ್ ಟ್ರಾಕಿಂಗ್ ಪ್ರಕಾರ ಪ್ರಧಾನ ಮಂತ್ರಿ ಮೋದಿಯವರ ಜನಪ್ರಿಯತೆ  ಮೇ ಮೂರನೇ ವಾರ ಶೇಕಡಾ 63 ಕ್ಕೆ ಇಳಿದಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇದು ಶೇಕಡಾ 74 ಇತ್ತು. ಅಂದರೆ ಆಗಸ್ಟ್ 2019 ರಿಂದ ಏಜೆನ್ಸಿಯು ರೇಟಿಂಗ್ ಅನ್ನು ಪ್ರಕಟಿಸಲು ಪ್ರಾರಂಭಿಸಿದ ನಂತರದಲ್ಲಿ ಮೋದಿಯವರ ಜನಪ್ರಿಯತೆ ಮೊದಲ ಬಾರಿಗೆ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ.

ಅದೇ ರೀತಿಯಲ್ಲಿ ಟ್ರ್ಯಾಕರ್ ಅನ್ನು ಪ್ರಾರಂಭಿಸಿದಾಗಿನಿಂದ ನರೇಂದ್ರ ಮೋದಿಯವರಿಗೆ ಅಸಮ್ಮತಿ ರೇಟಿಂಗ್ ಅತ್ಯುನ್ನತ ಮಟ್ಟಕ್ಕೆ ಏರಿದೆ. ಮಾರ್ಚ್ ಆರಂಭದಲ್ಲಿ ಶೇಕಡಾ 20 ಇದ್ದ ಮೋದಿ ವಿರೋಧಿ ಅಲೆ ಮೇ ಮೂರನೇ ವಾರಕ್ಕೆ ಶೇಕಡಾ 31 ಕ್ಕೆ ಏರಿದೆ.

ಉಳಿದ ವಿಶ್ವ ನಾಯಕರಿಗೆ ಹೋಲಿಸಿದರೆ ನರೇಂದ್ರ ಮೋದಿಯವರ ಜನಪ್ರಿಯತೆ ಈಗಲೂ ಹೆಚ್ಚಿಗೆಯೇ ಇದೆ. ಆದರೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಅವರು ಅನುಸರಿಸಿದ ಕ್ರಮಗಳಿಂದ ತೀವ್ರ ಟೀಕೆಗೆ ಒಳಗಾದ ಅವರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಕುಸಿಯಲು ಆರಂಭಿಸಿದೆ.

“ಪ್ರಧಾನ ಮಂತ್ರಿ ತಮ್ಮ ವೃತ್ತಿಜೀವನದ ಅತಿದೊಡ್ಡ ರಾಜಕೀಯ ಸವಾಲನ್ನು ಎದುರಿಸುತ್ತಿದ್ದಾರೆ” ಎಂದು ಸಿ-ವೋಟರ್ ಸಂಸ್ಥಾಪಕ ಯಶ್ವಂತ್ ದೇಶ್ಮುಖ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಆದರೂ, ಮೋದಿಯವರ ಅಪ್ರುವಲ್ ರೇಟಿಂಗ್‌ಗಳ ಕುಸಿತದ ಹೊರತಾಗಿಯೂ, ಅವರು ರಾಜಕೀಯದಲ್ಲಿ ಭಾರತದ ಅತ್ಯಂತ ಜನಪ್ರಿಯ ಮುಖವಾಗಿ ಉಳಿದಿದ್ದಾರೆ ಎಂದು ಸಿವೋಟರ್ ಡೇಟಾ ತೋರಿಸಿದೆ.

ಫೆಬ್ರವರಿಯಲ್ಲಿ ಅವರು ನಾವು ಕೋವಿಡ್‌ ಅನ್ನು ಮಣಿಸಿದ್ದೇವೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಉದ್ಘರಿಸಿದ್ದು ಮತ್ತು ತಜ್ಞರ ಎಚ್ಚರಿಕೆಯನ್ನು ಕಡೆಗಣಿಸಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಪ್ರಧಾನಿ ಮೋದಿಯವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಮಾರ್ಚ್ ಅಂತ್ಯದಿಂದ ಆರಂಭಗೊಂಡ ಕೋವಿಡ್ ಎರಡನೇ ಅಲೆ ಭಾರತಕ್ಕೆ ತೀವ್ರ ಆಘಾತ ನೀಡಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು, ಆಮ್ಲಜನಕ, ಔಷಧಿಗಳ ಕೊರತೆ ತೀವ್ರವಾಗಿ ಬಾಧಿಸಿದೆ. ಶ್ಮಶಾನದಲ್ಲಿ ಶವಸಂಸ್ಕಾರಕ್ಕೂ ಉದ್ದನೆಯ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಕೋವಿಡ್‌ ಅಲೆಯನ್ನು ಕಡೆಗಣಿಸಿದ್ದರ ಪರಿಣಾಮವಾಗಿ ಗೋಚರಿಸುತ್ತಿದೆ.

ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೊ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸರ್ಕಾರಿ ನಾಯಕರ ಅಪ್ರುವಲ್ ರೇಟಿಂಗ್ ಅನ್ನು ಟ್ರ್ಯಾಕ್ ಮಾಡುತ್ತಿದೆ. ವಾರಕ್ಕೊಮ್ಮೆ ಈ ಪುಟವು ಎಲ್ಲಾ 13 ದೇಶಗಳ ಇತ್ತೀಚಿನ ಡೇಟಾವನ್ನು ಅಪ್ಡೇಟ್ ಮಾಡುತ್ತದೆ. ಇದು ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಚಲನಶಾಸ್ತ್ರದ ಬಗ್ಗೆ ನೈಜ ಒಳನೋಟವನ್ನು ನೀಡುತ್ತದೆ. ಅಪ್ರುವಲ್ ರೇಟಿಂಗ್‌ಗಳು ಪ್ರತಿ ದೇಶದ ವಯಸ್ಕ ನಿವಾಸಿಗಳ ಏಳು ದಿನಗಳ ಅಭಿಪ್ರಾಯಗಳ ಸರಾಸರಿಯನ್ನು ಆಧರಿಸಿವೆ, ಮತ್ತು ಮಾದರಿಗಳ ಗಾತ್ರಗಳು ದೇಶಕ್ಕೆ ಅನುಗುಣವಾಗಿ ಬದಲಾಗುತ್ತವೆ.


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...