Homeಮುಖಪುಟಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಸಿ-ವೋಟರ್ ಪ್ರಕಾರ, ಕಳೆದ ವರ್ಷ ಮೋದಿಯವರ ಆಡಳಿತವನ್ನು 65% ಜನ “ತುಂಬಾ ತೃಪ್ತಿಕಾರಕವಾಗಿದೆ” ಎಂದಿದ್ದರು. ಅದು ಈಗ ಕೇವಲ 37% ಗೆ ಕುಸಿತ ಕಂಡಿದೆ.

- Advertisement -
- Advertisement -

ಭಾರತೀಯ ಸರ್ವೆ ಏಜೆನ್ಸಿ ಸಿ-ವೋಟರ್ ಮತ್ತು ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್‌ ಸಮೀಕ್ಷೆಯಲ್ಲಿ ಭಾರತದಲ್ಲಿ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಿರುವುದು ಕಂಡುಬಂದಿದೆ. ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗಾಗಿ ಜಗತ್ತಿನ ಸಾಂಕ್ರಾಮಿಕ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಮೋದಿಯವರ ವಿರುದ್ದದ ಅಲೆಯೂ ಏರುತ್ತಲಿದೆ.

2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಆದರೆ ಕೋವಿಡ್ ಮೊದಲ ಮತ್ತು ಎರಡನೇ ಅಲೆಗೆ ಸಿಕ್ಕಿ ಭಾರತ ನರಳುತ್ತಿರುವ ಸಂದರ್ಭದಲ್ಲಿ ಮೋದಿ ವಿರುದ್ಧ ಅಲೆ ತೀವ್ರವಾಗಿದೆ.

ಭಾರತೀಯ ಸಂಸ್ಥೆ ಸಿ-ವೋಟರ್ ಪ್ರಕಾರ, ಕೇವಲ 37% ರಷ್ಟು ಜನರು ಮೋದಿಯವರ ಆಡಳಿತವನ್ನು “ತುಂಬಾ ತೃಪ್ತಿಕಾರಕವಾಗಿದೆ” ಎಂದು ಹೇಳಿದ್ದಾರೆ. ರಾಯಿಟರ್ಸ್ ಪ್ರಕಾರ, 2020 ರಲ್ಲಿ ದಾಖಲಾದ ಇದು 65% ಇದ್ದು, ಈಗ ಭಾರಿ ಕುಸಿತ ಕಂಡಿದೆ.

ಅಮೆರಿಕದ ಡಾಟಾ ಕಂಪನಿ ‘ಮಾರ್ನಿಂಗ್ ಕನ್ಸಲ್ಟ್’ ನಡೆಸುವ ವಿಶ್ವ ನಾಯಕರ ಅಪ್ರುವಲ್ ರೇಟಿಂಗ್ ಟ್ರಾಕಿಂಗ್ ಪ್ರಕಾರ ಪ್ರಧಾನ ಮಂತ್ರಿ ಮೋದಿಯವರ ಜನಪ್ರಿಯತೆ  ಮೇ ಮೂರನೇ ವಾರ ಶೇಕಡಾ 63 ಕ್ಕೆ ಇಳಿದಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇದು ಶೇಕಡಾ 74 ಇತ್ತು. ಅಂದರೆ ಆಗಸ್ಟ್ 2019 ರಿಂದ ಏಜೆನ್ಸಿಯು ರೇಟಿಂಗ್ ಅನ್ನು ಪ್ರಕಟಿಸಲು ಪ್ರಾರಂಭಿಸಿದ ನಂತರದಲ್ಲಿ ಮೋದಿಯವರ ಜನಪ್ರಿಯತೆ ಮೊದಲ ಬಾರಿಗೆ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ.

ಅದೇ ರೀತಿಯಲ್ಲಿ ಟ್ರ್ಯಾಕರ್ ಅನ್ನು ಪ್ರಾರಂಭಿಸಿದಾಗಿನಿಂದ ನರೇಂದ್ರ ಮೋದಿಯವರಿಗೆ ಅಸಮ್ಮತಿ ರೇಟಿಂಗ್ ಅತ್ಯುನ್ನತ ಮಟ್ಟಕ್ಕೆ ಏರಿದೆ. ಮಾರ್ಚ್ ಆರಂಭದಲ್ಲಿ ಶೇಕಡಾ 20 ಇದ್ದ ಮೋದಿ ವಿರೋಧಿ ಅಲೆ ಮೇ ಮೂರನೇ ವಾರಕ್ಕೆ ಶೇಕಡಾ 31 ಕ್ಕೆ ಏರಿದೆ.

ಉಳಿದ ವಿಶ್ವ ನಾಯಕರಿಗೆ ಹೋಲಿಸಿದರೆ ನರೇಂದ್ರ ಮೋದಿಯವರ ಜನಪ್ರಿಯತೆ ಈಗಲೂ ಹೆಚ್ಚಿಗೆಯೇ ಇದೆ. ಆದರೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಅವರು ಅನುಸರಿಸಿದ ಕ್ರಮಗಳಿಂದ ತೀವ್ರ ಟೀಕೆಗೆ ಒಳಗಾದ ಅವರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಕುಸಿಯಲು ಆರಂಭಿಸಿದೆ.

“ಪ್ರಧಾನ ಮಂತ್ರಿ ತಮ್ಮ ವೃತ್ತಿಜೀವನದ ಅತಿದೊಡ್ಡ ರಾಜಕೀಯ ಸವಾಲನ್ನು ಎದುರಿಸುತ್ತಿದ್ದಾರೆ” ಎಂದು ಸಿ-ವೋಟರ್ ಸಂಸ್ಥಾಪಕ ಯಶ್ವಂತ್ ದೇಶ್ಮುಖ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಆದರೂ, ಮೋದಿಯವರ ಅಪ್ರುವಲ್ ರೇಟಿಂಗ್‌ಗಳ ಕುಸಿತದ ಹೊರತಾಗಿಯೂ, ಅವರು ರಾಜಕೀಯದಲ್ಲಿ ಭಾರತದ ಅತ್ಯಂತ ಜನಪ್ರಿಯ ಮುಖವಾಗಿ ಉಳಿದಿದ್ದಾರೆ ಎಂದು ಸಿವೋಟರ್ ಡೇಟಾ ತೋರಿಸಿದೆ.

ಫೆಬ್ರವರಿಯಲ್ಲಿ ಅವರು ನಾವು ಕೋವಿಡ್‌ ಅನ್ನು ಮಣಿಸಿದ್ದೇವೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಉದ್ಘರಿಸಿದ್ದು ಮತ್ತು ತಜ್ಞರ ಎಚ್ಚರಿಕೆಯನ್ನು ಕಡೆಗಣಿಸಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಪ್ರಧಾನಿ ಮೋದಿಯವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಮಾರ್ಚ್ ಅಂತ್ಯದಿಂದ ಆರಂಭಗೊಂಡ ಕೋವಿಡ್ ಎರಡನೇ ಅಲೆ ಭಾರತಕ್ಕೆ ತೀವ್ರ ಆಘಾತ ನೀಡಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು, ಆಮ್ಲಜನಕ, ಔಷಧಿಗಳ ಕೊರತೆ ತೀವ್ರವಾಗಿ ಬಾಧಿಸಿದೆ. ಶ್ಮಶಾನದಲ್ಲಿ ಶವಸಂಸ್ಕಾರಕ್ಕೂ ಉದ್ದನೆಯ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಕೋವಿಡ್‌ ಅಲೆಯನ್ನು ಕಡೆಗಣಿಸಿದ್ದರ ಪರಿಣಾಮವಾಗಿ ಗೋಚರಿಸುತ್ತಿದೆ.

ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೊ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸರ್ಕಾರಿ ನಾಯಕರ ಅಪ್ರುವಲ್ ರೇಟಿಂಗ್ ಅನ್ನು ಟ್ರ್ಯಾಕ್ ಮಾಡುತ್ತಿದೆ. ವಾರಕ್ಕೊಮ್ಮೆ ಈ ಪುಟವು ಎಲ್ಲಾ 13 ದೇಶಗಳ ಇತ್ತೀಚಿನ ಡೇಟಾವನ್ನು ಅಪ್ಡೇಟ್ ಮಾಡುತ್ತದೆ. ಇದು ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಚಲನಶಾಸ್ತ್ರದ ಬಗ್ಗೆ ನೈಜ ಒಳನೋಟವನ್ನು ನೀಡುತ್ತದೆ. ಅಪ್ರುವಲ್ ರೇಟಿಂಗ್‌ಗಳು ಪ್ರತಿ ದೇಶದ ವಯಸ್ಕ ನಿವಾಸಿಗಳ ಏಳು ದಿನಗಳ ಅಭಿಪ್ರಾಯಗಳ ಸರಾಸರಿಯನ್ನು ಆಧರಿಸಿವೆ, ಮತ್ತು ಮಾದರಿಗಳ ಗಾತ್ರಗಳು ದೇಶಕ್ಕೆ ಅನುಗುಣವಾಗಿ ಬದಲಾಗುತ್ತವೆ.


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...