Homeಮುಖಪುಟಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಸಿ-ವೋಟರ್ ಪ್ರಕಾರ, ಕಳೆದ ವರ್ಷ ಮೋದಿಯವರ ಆಡಳಿತವನ್ನು 65% ಜನ “ತುಂಬಾ ತೃಪ್ತಿಕಾರಕವಾಗಿದೆ” ಎಂದಿದ್ದರು. ಅದು ಈಗ ಕೇವಲ 37% ಗೆ ಕುಸಿತ ಕಂಡಿದೆ.

- Advertisement -
- Advertisement -

ಭಾರತೀಯ ಸರ್ವೆ ಏಜೆನ್ಸಿ ಸಿ-ವೋಟರ್ ಮತ್ತು ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್‌ ಸಮೀಕ್ಷೆಯಲ್ಲಿ ಭಾರತದಲ್ಲಿ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಿರುವುದು ಕಂಡುಬಂದಿದೆ. ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗಾಗಿ ಜಗತ್ತಿನ ಸಾಂಕ್ರಾಮಿಕ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಮೋದಿಯವರ ವಿರುದ್ದದ ಅಲೆಯೂ ಏರುತ್ತಲಿದೆ.

2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಆದರೆ ಕೋವಿಡ್ ಮೊದಲ ಮತ್ತು ಎರಡನೇ ಅಲೆಗೆ ಸಿಕ್ಕಿ ಭಾರತ ನರಳುತ್ತಿರುವ ಸಂದರ್ಭದಲ್ಲಿ ಮೋದಿ ವಿರುದ್ಧ ಅಲೆ ತೀವ್ರವಾಗಿದೆ.

ಭಾರತೀಯ ಸಂಸ್ಥೆ ಸಿ-ವೋಟರ್ ಪ್ರಕಾರ, ಕೇವಲ 37% ರಷ್ಟು ಜನರು ಮೋದಿಯವರ ಆಡಳಿತವನ್ನು “ತುಂಬಾ ತೃಪ್ತಿಕಾರಕವಾಗಿದೆ” ಎಂದು ಹೇಳಿದ್ದಾರೆ. ರಾಯಿಟರ್ಸ್ ಪ್ರಕಾರ, 2020 ರಲ್ಲಿ ದಾಖಲಾದ ಇದು 65% ಇದ್ದು, ಈಗ ಭಾರಿ ಕುಸಿತ ಕಂಡಿದೆ.

ಅಮೆರಿಕದ ಡಾಟಾ ಕಂಪನಿ ‘ಮಾರ್ನಿಂಗ್ ಕನ್ಸಲ್ಟ್’ ನಡೆಸುವ ವಿಶ್ವ ನಾಯಕರ ಅಪ್ರುವಲ್ ರೇಟಿಂಗ್ ಟ್ರಾಕಿಂಗ್ ಪ್ರಕಾರ ಪ್ರಧಾನ ಮಂತ್ರಿ ಮೋದಿಯವರ ಜನಪ್ರಿಯತೆ  ಮೇ ಮೂರನೇ ವಾರ ಶೇಕಡಾ 63 ಕ್ಕೆ ಇಳಿದಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇದು ಶೇಕಡಾ 74 ಇತ್ತು. ಅಂದರೆ ಆಗಸ್ಟ್ 2019 ರಿಂದ ಏಜೆನ್ಸಿಯು ರೇಟಿಂಗ್ ಅನ್ನು ಪ್ರಕಟಿಸಲು ಪ್ರಾರಂಭಿಸಿದ ನಂತರದಲ್ಲಿ ಮೋದಿಯವರ ಜನಪ್ರಿಯತೆ ಮೊದಲ ಬಾರಿಗೆ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ.

ಅದೇ ರೀತಿಯಲ್ಲಿ ಟ್ರ್ಯಾಕರ್ ಅನ್ನು ಪ್ರಾರಂಭಿಸಿದಾಗಿನಿಂದ ನರೇಂದ್ರ ಮೋದಿಯವರಿಗೆ ಅಸಮ್ಮತಿ ರೇಟಿಂಗ್ ಅತ್ಯುನ್ನತ ಮಟ್ಟಕ್ಕೆ ಏರಿದೆ. ಮಾರ್ಚ್ ಆರಂಭದಲ್ಲಿ ಶೇಕಡಾ 20 ಇದ್ದ ಮೋದಿ ವಿರೋಧಿ ಅಲೆ ಮೇ ಮೂರನೇ ವಾರಕ್ಕೆ ಶೇಕಡಾ 31 ಕ್ಕೆ ಏರಿದೆ.

ಉಳಿದ ವಿಶ್ವ ನಾಯಕರಿಗೆ ಹೋಲಿಸಿದರೆ ನರೇಂದ್ರ ಮೋದಿಯವರ ಜನಪ್ರಿಯತೆ ಈಗಲೂ ಹೆಚ್ಚಿಗೆಯೇ ಇದೆ. ಆದರೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಅವರು ಅನುಸರಿಸಿದ ಕ್ರಮಗಳಿಂದ ತೀವ್ರ ಟೀಕೆಗೆ ಒಳಗಾದ ಅವರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಕುಸಿಯಲು ಆರಂಭಿಸಿದೆ.

“ಪ್ರಧಾನ ಮಂತ್ರಿ ತಮ್ಮ ವೃತ್ತಿಜೀವನದ ಅತಿದೊಡ್ಡ ರಾಜಕೀಯ ಸವಾಲನ್ನು ಎದುರಿಸುತ್ತಿದ್ದಾರೆ” ಎಂದು ಸಿ-ವೋಟರ್ ಸಂಸ್ಥಾಪಕ ಯಶ್ವಂತ್ ದೇಶ್ಮುಖ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಆದರೂ, ಮೋದಿಯವರ ಅಪ್ರುವಲ್ ರೇಟಿಂಗ್‌ಗಳ ಕುಸಿತದ ಹೊರತಾಗಿಯೂ, ಅವರು ರಾಜಕೀಯದಲ್ಲಿ ಭಾರತದ ಅತ್ಯಂತ ಜನಪ್ರಿಯ ಮುಖವಾಗಿ ಉಳಿದಿದ್ದಾರೆ ಎಂದು ಸಿವೋಟರ್ ಡೇಟಾ ತೋರಿಸಿದೆ.

ಫೆಬ್ರವರಿಯಲ್ಲಿ ಅವರು ನಾವು ಕೋವಿಡ್‌ ಅನ್ನು ಮಣಿಸಿದ್ದೇವೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಉದ್ಘರಿಸಿದ್ದು ಮತ್ತು ತಜ್ಞರ ಎಚ್ಚರಿಕೆಯನ್ನು ಕಡೆಗಣಿಸಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಪ್ರಧಾನಿ ಮೋದಿಯವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಮಾರ್ಚ್ ಅಂತ್ಯದಿಂದ ಆರಂಭಗೊಂಡ ಕೋವಿಡ್ ಎರಡನೇ ಅಲೆ ಭಾರತಕ್ಕೆ ತೀವ್ರ ಆಘಾತ ನೀಡಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು, ಆಮ್ಲಜನಕ, ಔಷಧಿಗಳ ಕೊರತೆ ತೀವ್ರವಾಗಿ ಬಾಧಿಸಿದೆ. ಶ್ಮಶಾನದಲ್ಲಿ ಶವಸಂಸ್ಕಾರಕ್ಕೂ ಉದ್ದನೆಯ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಕೋವಿಡ್‌ ಅಲೆಯನ್ನು ಕಡೆಗಣಿಸಿದ್ದರ ಪರಿಣಾಮವಾಗಿ ಗೋಚರಿಸುತ್ತಿದೆ.

ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೊ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸರ್ಕಾರಿ ನಾಯಕರ ಅಪ್ರುವಲ್ ರೇಟಿಂಗ್ ಅನ್ನು ಟ್ರ್ಯಾಕ್ ಮಾಡುತ್ತಿದೆ. ವಾರಕ್ಕೊಮ್ಮೆ ಈ ಪುಟವು ಎಲ್ಲಾ 13 ದೇಶಗಳ ಇತ್ತೀಚಿನ ಡೇಟಾವನ್ನು ಅಪ್ಡೇಟ್ ಮಾಡುತ್ತದೆ. ಇದು ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಚಲನಶಾಸ್ತ್ರದ ಬಗ್ಗೆ ನೈಜ ಒಳನೋಟವನ್ನು ನೀಡುತ್ತದೆ. ಅಪ್ರುವಲ್ ರೇಟಿಂಗ್‌ಗಳು ಪ್ರತಿ ದೇಶದ ವಯಸ್ಕ ನಿವಾಸಿಗಳ ಏಳು ದಿನಗಳ ಅಭಿಪ್ರಾಯಗಳ ಸರಾಸರಿಯನ್ನು ಆಧರಿಸಿವೆ, ಮತ್ತು ಮಾದರಿಗಳ ಗಾತ್ರಗಳು ದೇಶಕ್ಕೆ ಅನುಗುಣವಾಗಿ ಬದಲಾಗುತ್ತವೆ.


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ರದ್ದು: ಹೈಕೋರ್ಟ್‌ನಿಂದ ಮರುನೇಮಕಕ್ಕೆ ಆದೇಶ

ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಅಮಾನತು ಆದೇಶವನ್ನು ಪ್ರಶ್ನಿಸಿ ಶಿವಶಂಕರಪ್ಪ...

ಗೋಡ್ಸೆ ಹೊಗಳಿಕೆ, ದಲಿತದ್ವೇಷ, ಸ್ತ್ರೀದ್ವೇಷ ಮತ್ತು ಮುಸ್ಲಿಂ ದ್ವೇಷ: ತೀವ್ರ ಪರಿಶೀಲನೆಯಲ್ಲಿರುವ ಬಿಜೆಪಿಯ ಹೊಸ ಸಾಮಾಜಿಕ ಮಾಧ್ಯಮ ತಂಡದ ವಿರುದ್ಧ ಜನಾಕ್ರೋಶ

ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ ಹಳೆಯ ಪೋಸ್ಟ್‌ಗಳು, ಇಸ್ಲಾಮೋಫೋಬಿಕ್ ಹಾಗೂ ಜನಾಂಗೀಯ ಹತ್ಯೆಯ ಹೇಳಿಕೆಗಳು, ದಲಿತ ಹಾಗೂ ಮೀಸಲಾತಿ ವಿರೋಧಿ ಮಾತುಗಳು ಮತ್ತು ಮಹಿಳೆಯರ ವಿರುದ್ಧ ಬಳಸಿರುವ ಸ್ತ್ರೀದ್ವೇಷದ ಭಾಷೆಯ ಕಾರಣಕ್ಕಾಗಿ...

‘ಮಹಾತ್ಮ ಗಾಂಧಿ – ವಾಜಪೇಯಿ ಹಾಡಿದ್ದನ್ನೇ ನಾವು ಹಾಡಿದ್ದೇವೆ..’; ವಂದೇ ಮಾತರಂ ವಿವಾದದ ಕುರಿತು ಖರ್ಗೆ ಸ್ಪಷ್ಟನೆ

ಪಕ್ಷದ ಪ್ರಧಾನ ಕಚೇರಿಯಲ್ಲಿ ವಂದೇ ಮಾತರಂ ಹಾಡಿದ ಬಗ್ಗೆ ನಡೆಯುತ್ತಿರುವ ವಿವಾದದ ನಡುವೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್...

ದೆಹಲಿ ಪೊಲೀಸರಿಂದ AAP ಶಾಸಕನ ಅಪಹರಣ?: ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ತುರ್ತು ವಿಚಾರಣೆಗೆ ಅಸ್ತು!

AAP ಶಾಸಕ ಕುಲ್ದೀಪ್ ಕುಮಾರ್ ಅವರನ್ನು ಅವರ ಮನೆಯಿಂದ ಅಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ (Habeas Corpus) ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ಒಪ್ಪಿಗೆ...

ಅದಾನಿ-ಎಲ್‌ಐಸಿ ತನಿಖಾ ವರದಿ: ಪತ್ರಕರ್ತ ರವಿ ನಾಯರ್ ಮನೆಗಳ ಮೇಲೆ ಗುಜರಾತ್ ಪೊಲೀಸರ ದಾಳಿ, ಡಿಜಿಟಲ್ ಉಪಕರಣಗಳ ವಶ

ಅದಾನಿ ಸಮೂಹ ಹಾಗೂ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ (ಎಲ್‌ಐಸಿ) ನಡುವಿನ ಹೂಡಿಕೆ ವ್ಯವಹಾರಕ್ಕೆ ಸಂಬಂಧಿಸಿದಂತೆ ವಾಷಿಂಗ್ಟನ್ ಪೋಸ್ಟ್‌ನಲ್ಲಿ ತನಿಖಾ ವರದಿ ಪ್ರಕಟಿಸಿದ್ದ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರ ದೆಹಲಿ ಮತ್ತು ಕೇರಳದಲ್ಲಿರುವ...

ಗುಜರಾತ್ | ನಕಲಿ ಸರ್ಕಾರಿ ಕಚೇರಿಗಳನ್ನು ಸ್ಥಾಪಿಸಿ ಸರ್ಕಾರದ ಅನುದಾನ ಲೂಟಿ; ಬೃಹತ್ ಹಗರಣ ಬಯಲು

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನೀರಾವರಿ ಮತ್ತು ಜಲಸಂಪನ್ಮೂಲ ಇಲಾಖೆಯ ಹೆಸರಿನಲ್ಲಿ 6 ನಕಲಿ ಸರ್ಕಾರಿ ಕಚೇರಿಗಳನ್ನು ಸೃಷ್ಟಿಸಿ, ಕೋಟ್ಯಂತರ ರೂಪಾಯಿ ಸರ್ಕಾರಿ ಅನುದಾನವನ್ನು ಲೂಟಿ ಮಾಡಿರುವುದು ಪತ್ತೆಯಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ...

ಎನ್‌ಎಎಲ್‌ಎಸ್‌ಎಆರ್‌ ಘಟಿಕೋತ್ಸವದ ಆಹ್ವಾನವನ್ನು ನಾನು ಸ್ವೀಕರಿಸಿರಲೇ ಇಲ್ಲ: ಸಿಜೆಐ ಸೂರ್ಯ ಕಾಂತ್

ಎನ್‌ಎಎಲ್‌ಎಸ್‌ಎಆರ್‌ ಕಾನೂನು ವಿಶ್ವವಿದ್ಯಾಲಯದ ಮುಂಬರುವ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ನಾನು ಎಂದಿಗೂ ಒಪ್ಪಿಗೆ ನೀಡಿರಲಿಲ್ಲ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ವಿರೋಧದ ನಡುವೆಯೂ...

ಎರಡು ವರ್ಷಗಳ ವಿಳಂಬದ ನಂತರ ಹಣಕಾಸು ವರದಿ ಬಿಡುಗಡೆ ಮಾಡಿದ ಪಿಎಂ ಕೇರ್ಸ್

ಎರಡು ವರ್ಷಗಳ ವಿಳಂಬದ ನಂತರ ಪಿಎಂ ಕೇರ್ಸ್ ನಿಧಿಯು ತನ್ನ 2023-24 ಮತ್ತು 2024-25ರ ಹಣಕಾಸು ವರ್ಷಗಳ ಆಡಿಟ್ ವರದಿಗಳನ್ನು (ಲೆಕ್ಕಪರಿಶೋಧನಾ ವರದಿ) ಆಗಸ್ಟ್ 17ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. ಪಿಎಂ...

ಭಾರತ ಚುನಾವಣಾ ವ್ಯವಸ್ಥೆಯನ್ನು ಹೊಗಳಿದ ಟ್ರಂಪ್: ಜ್ಞಾನೇಶ್ ಕುಮಾರ್ ಜೊತೆಗೆ EVMಅನ್ನು ತೆಗೆದುಕೊಂಡು ಹೋಗಿ ಎಂದು ಕಾಲೆಳೆದ ಕಾಂಗ್ರೆಸ್

ಭಾರತದ ಚುನಾವಣಾ ವ್ಯವಸ್ಥೆ ಹಾಗೂ ಮತದಾರರ ಫೋಟೋ ಗುರುತಿನ ಚೀಟಿ (Voter ID) ಕಡ್ಡಾಯ ನಿಯಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯನ್ನು ಇಟ್ಟುಕೊಂಡು...

ಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ತ್ರಿಪುರ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಿರುದ್ಧ ಪ್ರಕರಣ ದಾಖಲು: ಬಿಜೆಪಿಯ ಕೀಳು ಮಟ್ಟದ ರಾಜಕೀಯ ಎಂದ ಸಿಪಿಐ(ಎಂ)

ತ್ರಿಪುರದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪಾಲಿಟ್‌ಬ್ಯೂರೋ ಹಿರಿಯ ಸದಸ್ಯ ಮಾಣಿಕ್ ಸರ್ಕಾರ್ ಅವರು ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯೊಂದರಲ್ಲಿ ನೀಡಿದ್ದ ಹೇಳಿಕೆಯನ್ನು ಆಧರಿಸಿ, ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ...