Homeಮುಖಪುಟಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಸಿ-ವೋಟರ್ ಪ್ರಕಾರ, ಕಳೆದ ವರ್ಷ ಮೋದಿಯವರ ಆಡಳಿತವನ್ನು 65% ಜನ “ತುಂಬಾ ತೃಪ್ತಿಕಾರಕವಾಗಿದೆ” ಎಂದಿದ್ದರು. ಅದು ಈಗ ಕೇವಲ 37% ಗೆ ಕುಸಿತ ಕಂಡಿದೆ.

- Advertisement -
- Advertisement -

ಭಾರತೀಯ ಸರ್ವೆ ಏಜೆನ್ಸಿ ಸಿ-ವೋಟರ್ ಮತ್ತು ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್‌ ಸಮೀಕ್ಷೆಯಲ್ಲಿ ಭಾರತದಲ್ಲಿ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಿರುವುದು ಕಂಡುಬಂದಿದೆ. ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗಾಗಿ ಜಗತ್ತಿನ ಸಾಂಕ್ರಾಮಿಕ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಮೋದಿಯವರ ವಿರುದ್ದದ ಅಲೆಯೂ ಏರುತ್ತಲಿದೆ.

2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಆದರೆ ಕೋವಿಡ್ ಮೊದಲ ಮತ್ತು ಎರಡನೇ ಅಲೆಗೆ ಸಿಕ್ಕಿ ಭಾರತ ನರಳುತ್ತಿರುವ ಸಂದರ್ಭದಲ್ಲಿ ಮೋದಿ ವಿರುದ್ಧ ಅಲೆ ತೀವ್ರವಾಗಿದೆ.

ಭಾರತೀಯ ಸಂಸ್ಥೆ ಸಿ-ವೋಟರ್ ಪ್ರಕಾರ, ಕೇವಲ 37% ರಷ್ಟು ಜನರು ಮೋದಿಯವರ ಆಡಳಿತವನ್ನು “ತುಂಬಾ ತೃಪ್ತಿಕಾರಕವಾಗಿದೆ” ಎಂದು ಹೇಳಿದ್ದಾರೆ. ರಾಯಿಟರ್ಸ್ ಪ್ರಕಾರ, 2020 ರಲ್ಲಿ ದಾಖಲಾದ ಇದು 65% ಇದ್ದು, ಈಗ ಭಾರಿ ಕುಸಿತ ಕಂಡಿದೆ.

ಅಮೆರಿಕದ ಡಾಟಾ ಕಂಪನಿ ‘ಮಾರ್ನಿಂಗ್ ಕನ್ಸಲ್ಟ್’ ನಡೆಸುವ ವಿಶ್ವ ನಾಯಕರ ಅಪ್ರುವಲ್ ರೇಟಿಂಗ್ ಟ್ರಾಕಿಂಗ್ ಪ್ರಕಾರ ಪ್ರಧಾನ ಮಂತ್ರಿ ಮೋದಿಯವರ ಜನಪ್ರಿಯತೆ  ಮೇ ಮೂರನೇ ವಾರ ಶೇಕಡಾ 63 ಕ್ಕೆ ಇಳಿದಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇದು ಶೇಕಡಾ 74 ಇತ್ತು. ಅಂದರೆ ಆಗಸ್ಟ್ 2019 ರಿಂದ ಏಜೆನ್ಸಿಯು ರೇಟಿಂಗ್ ಅನ್ನು ಪ್ರಕಟಿಸಲು ಪ್ರಾರಂಭಿಸಿದ ನಂತರದಲ್ಲಿ ಮೋದಿಯವರ ಜನಪ್ರಿಯತೆ ಮೊದಲ ಬಾರಿಗೆ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ.

ಅದೇ ರೀತಿಯಲ್ಲಿ ಟ್ರ್ಯಾಕರ್ ಅನ್ನು ಪ್ರಾರಂಭಿಸಿದಾಗಿನಿಂದ ನರೇಂದ್ರ ಮೋದಿಯವರಿಗೆ ಅಸಮ್ಮತಿ ರೇಟಿಂಗ್ ಅತ್ಯುನ್ನತ ಮಟ್ಟಕ್ಕೆ ಏರಿದೆ. ಮಾರ್ಚ್ ಆರಂಭದಲ್ಲಿ ಶೇಕಡಾ 20 ಇದ್ದ ಮೋದಿ ವಿರೋಧಿ ಅಲೆ ಮೇ ಮೂರನೇ ವಾರಕ್ಕೆ ಶೇಕಡಾ 31 ಕ್ಕೆ ಏರಿದೆ.

ಉಳಿದ ವಿಶ್ವ ನಾಯಕರಿಗೆ ಹೋಲಿಸಿದರೆ ನರೇಂದ್ರ ಮೋದಿಯವರ ಜನಪ್ರಿಯತೆ ಈಗಲೂ ಹೆಚ್ಚಿಗೆಯೇ ಇದೆ. ಆದರೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಅವರು ಅನುಸರಿಸಿದ ಕ್ರಮಗಳಿಂದ ತೀವ್ರ ಟೀಕೆಗೆ ಒಳಗಾದ ಅವರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಕುಸಿಯಲು ಆರಂಭಿಸಿದೆ.

“ಪ್ರಧಾನ ಮಂತ್ರಿ ತಮ್ಮ ವೃತ್ತಿಜೀವನದ ಅತಿದೊಡ್ಡ ರಾಜಕೀಯ ಸವಾಲನ್ನು ಎದುರಿಸುತ್ತಿದ್ದಾರೆ” ಎಂದು ಸಿ-ವೋಟರ್ ಸಂಸ್ಥಾಪಕ ಯಶ್ವಂತ್ ದೇಶ್ಮುಖ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಆದರೂ, ಮೋದಿಯವರ ಅಪ್ರುವಲ್ ರೇಟಿಂಗ್‌ಗಳ ಕುಸಿತದ ಹೊರತಾಗಿಯೂ, ಅವರು ರಾಜಕೀಯದಲ್ಲಿ ಭಾರತದ ಅತ್ಯಂತ ಜನಪ್ರಿಯ ಮುಖವಾಗಿ ಉಳಿದಿದ್ದಾರೆ ಎಂದು ಸಿವೋಟರ್ ಡೇಟಾ ತೋರಿಸಿದೆ.

ಫೆಬ್ರವರಿಯಲ್ಲಿ ಅವರು ನಾವು ಕೋವಿಡ್‌ ಅನ್ನು ಮಣಿಸಿದ್ದೇವೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಉದ್ಘರಿಸಿದ್ದು ಮತ್ತು ತಜ್ಞರ ಎಚ್ಚರಿಕೆಯನ್ನು ಕಡೆಗಣಿಸಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಪ್ರಧಾನಿ ಮೋದಿಯವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಮಾರ್ಚ್ ಅಂತ್ಯದಿಂದ ಆರಂಭಗೊಂಡ ಕೋವಿಡ್ ಎರಡನೇ ಅಲೆ ಭಾರತಕ್ಕೆ ತೀವ್ರ ಆಘಾತ ನೀಡಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು, ಆಮ್ಲಜನಕ, ಔಷಧಿಗಳ ಕೊರತೆ ತೀವ್ರವಾಗಿ ಬಾಧಿಸಿದೆ. ಶ್ಮಶಾನದಲ್ಲಿ ಶವಸಂಸ್ಕಾರಕ್ಕೂ ಉದ್ದನೆಯ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಕೋವಿಡ್‌ ಅಲೆಯನ್ನು ಕಡೆಗಣಿಸಿದ್ದರ ಪರಿಣಾಮವಾಗಿ ಗೋಚರಿಸುತ್ತಿದೆ.

ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೊ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸರ್ಕಾರಿ ನಾಯಕರ ಅಪ್ರುವಲ್ ರೇಟಿಂಗ್ ಅನ್ನು ಟ್ರ್ಯಾಕ್ ಮಾಡುತ್ತಿದೆ. ವಾರಕ್ಕೊಮ್ಮೆ ಈ ಪುಟವು ಎಲ್ಲಾ 13 ದೇಶಗಳ ಇತ್ತೀಚಿನ ಡೇಟಾವನ್ನು ಅಪ್ಡೇಟ್ ಮಾಡುತ್ತದೆ. ಇದು ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಚಲನಶಾಸ್ತ್ರದ ಬಗ್ಗೆ ನೈಜ ಒಳನೋಟವನ್ನು ನೀಡುತ್ತದೆ. ಅಪ್ರುವಲ್ ರೇಟಿಂಗ್‌ಗಳು ಪ್ರತಿ ದೇಶದ ವಯಸ್ಕ ನಿವಾಸಿಗಳ ಏಳು ದಿನಗಳ ಅಭಿಪ್ರಾಯಗಳ ಸರಾಸರಿಯನ್ನು ಆಧರಿಸಿವೆ, ಮತ್ತು ಮಾದರಿಗಳ ಗಾತ್ರಗಳು ದೇಶಕ್ಕೆ ಅನುಗುಣವಾಗಿ ಬದಲಾಗುತ್ತವೆ.


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...